Homeಮುಖಪುಟಆತ್ಮಹತ್ಯೆಗೆ ಪ್ರಚೋದನೆ: ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ವಿರುದ್ದ FIR

ಆತ್ಮಹತ್ಯೆಗೆ ಪ್ರಚೋದನೆ: ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ವಿರುದ್ದ FIR

- Advertisement -
- Advertisement -

38 ವರ್ಷದ ವ್ಯಕ್ತಿಯೊಬ್ಬರ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪದ ಮೇಲೆ ನಾಗ್ಪುರದ ಮೂವರು ಪೊಲೀಸರು ಮತ್ತು ತಾಯಿ-ಮಗಳು ಜೋಡಿ ಸೇರಿದಂತೆ ಆರು ಜನರ ವಿರುದ್ಧ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿಗಳು ಸಂತ್ರಸ್ತ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದು, ಇದರಿಂದಾಗಿ ವ್ಯಕ್ತಿಯು ಕಳೆದ ತಿಂಗಳು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸಚಿನ್ ಸಾಬಲ್ ಎಂದು ಗುರುತಿಸಲ್ಪಟ್ಟಿದ್ದು, ಅವರು ಮುಂಬಯಿಯಲ್ಲಿ ಮಕ್ಕಳ ಕಲ್ಯಾಣ ಯೋಜನಾ ಅಧಿಕಾರಿಯಾಗಿ ಕೆಲಸ ಮಾಡುತ್ತಾ, ಥಾಣೆ ಜಿಲ್ಲೆಯ ಅಂಬರ್ನಾಥ್‌ನಲ್ಲಿ ವಾಸಿಸುತ್ತಿದ್ದರು” ಎಂದು ಅಂಬರ್ನಾಥದ ಶಿವಾಜಿ ನಗರ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಗೆ ಮತ ನೀಡದಂತೆ ಮದುವೆ ಮನೆಗಳಲ್ಲಿಯೂ ಅಭಿಯಾನ: #NoVoteToBJP ಟ್ವಿಟರ್ ಟ್ರೆಂಡ್

ನಾಗ್ಪುರದ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್ಮೆಂಟ್ ಸರ್ವೀಸಸ್ (ಐಸಿಡಿಎಸ್) ನಲ್ಲಿ ಕೆಲಸ ಮಾಡುತ್ತಿದ್ದ ನೀತಾ ಖೇಡ್ಕರ್‌ ಎಂಬವರು ಸಚಿನ್‌ ಅವರೊಂದಿಗೆ ಸ್ನೇಹ ಸಂಪಾದಿಸಿದ್ದರು. ನಂತರ ತನ್ನ ಪತಿ ತೀರಿಕೊಂಡಿದ್ದು ತನ್ನನ್ನು ಮದುವೆಯಾಗು ಎಂದು ಸಚಿನ್ ಅವರೊಂದಿಗೆ ಕೇಳಿಕೊಂಡಿದ್ದರು ಎನ್ನಲಾಗಿದೆ.

ಆದರೆ ಸಚಿನ್‌ಗೆ ಇದರಲ್ಲಿ ಆಸಕ್ತಿಯಿಲ್ಲ ಎಂದು ತಿಳಿಯುತ್ತಿದ್ದಂತೆ ತನ್ನ ಗಂಡನ ಆತ್ಮಹತ್ಯೆಯ ಪ್ರಕರಣದಲ್ಲಿ ಅವರನ್ನೂ ಸೇರಿಸಿಕೊಳ್ಳುವುದಾಗಿ ಮಹಿಳೆ ಬೆದರಿಕೆ ಹಾಕಿದ್ದರು. ಡಿಸೆಂಬರ್ 2020 ಮತ್ತು ಫೆಬ್ರವರಿ 2021 ರ ನಡುವೆ ಅವರು ಈ ಬಗ್ಗೆ ಕಿರುಕುಳ ನೀಡುತ್ತಿದ್ದರು ಎಂದು ಅಧಿಕಾರಿ ಹೇಳಿದ್ದಾರೆ.

ಕೆಲವು ದಿನಗಳ ನಂತರ, ನಾಗ್ಪುರದ ಯಶೋಧರ ನಗರ ಪೊಲೀಸ್ ಠಾಣೆಯ ಕೆಲವು ಸಿಬ್ಬಂದಿಗಳು ಸಚಿನ್ ಅವರನ್ನು ವಿಚಾರಣೆಗೆ ಕರೆಯಲು ಪ್ರಾರಂಭಿಸಿದ್ದು, ಖೇಡ್ಕರ್ ಅವರ ಪತಿಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದವರು ಅಧಿಕಾರದಲ್ಲಿದ್ದೇನು ಪ್ರಯೋಜನ?-ಎಚ್‌.ಡಿ.ಕುಮಾರಸ್ವಾಮಿ

ಸಚಿನ್ ಸಹೋದರ ನೀಡಿದ ದೂರಿನ ಪ್ರಕಾರ, ಈ ಪೊಲೀಸರು ಆತನ ವಿರುದ್ಧ ಯಾವುದೇ ಪ್ರಕರಣ ದಾಖಲಿಸದೆ ಇರಲು 9.50 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು.

“ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲಿಂಗ್‌ನಿಂದಾಗಿ, ಫೆಬ್ರವರಿ 18 ರಂದು ಅಂಬರ್ನಾಥದಲ್ಲಿರುವ ತನ್ನ ನಿವಾಸದಲ್ಲಿ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್, ತನ್ನ ಸಹೋದರನಿಗೆ ಕಳುಹಿಸಿದ ಇ-ಮೇಲ್‌ನಲ್ಲಿ ತನಗೆ ಒದಗಿ ಬಂದ ಕಷ್ಟಗಳ ಬಗ್ಗೆ ವಿವರಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ.

ಅದರಂತೆ ಮಾರ್ಚ್ 10 ರಂದು ಮಹಿಳೆ, ಅವರ ಮಗಳು, ಸಹೋದರ ಹಾಗೂ ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಓರ್ವ ಸಬ್‌ಇನ್ಸ್‌ಪೆಕ್ಟರ್ ಸೇರಿದಂತೆ ಒಟ್ಟು ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ಯಾವುದೇ ಬಂಧನ ನಡೆದಿಲ್ಲ ಮತ್ತು ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕನ್ನಡದ ಫಲಕಗಳಿಗೆ ಮಸಿ: ಎಂಇಎಸ್, ಶಿವಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...