Homeಅಂತರಾಷ್ಟ್ರೀಯ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

- Advertisement -
- Advertisement -

ಬಿಜೆಪಿಯ ಇಬ್ಬರು ನಾಯಕರು ಪ್ರವಾದಿ ಮೊಹಮ್ಮದ್‌ ಅವರನ್ನು ಅವಹೇಳನ ಮಾಡಿರುವ ಬಗ್ಗೆ ಈಗಾಗಗಲೇ ವಿಶ್ವದ ಹಲವು ಮುಸ್ಲಿಂ ರಾಷ್ಟ್ರಗಳು ಖಂಡಿಸಿದ್ದು, ತೀವ್ರ ಪ್ರತಿಭಟನೆಯನ್ನು ದಾಖಲಿಸಿತ್ತು. ಇದೀಗ ಅಮೇರಿಕಾ ಕೂಡಾ ಧಾರ್ಮಿಕ ವ್ಯಕ್ತಿಗೆ ಮಾಡಿರುವ ಅವಮಾನವನ್ನು ಗುರುವಾರ ಖಂಡಿಸಿದೆ.

“ಇಬ್ಬರು ಬಿಜೆಪಿ ಪದಾಧಿಕಾರಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ಆ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷವಾಯಿತು” ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ಕಾಳಜಿಗಳ ಕುರಿತು ಹಿರಿಯ ಹಂತಗಳಲ್ಲಿ ಭಾರತೀಯ ಸರ್ಕಾರದೊಂದಿಗೆ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇವೆ. ಮಾನವ ಹಕ್ಕುಗಳ ಗೌರವವನ್ನು ಉತ್ತೇಜಿಸಲು ನಾವು ಭಾರತವನ್ನು ಪ್ರೋತ್ಸಾಹಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ಅವಹೇಳನಕ್ಕೆ ವಿರೋಧ: ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಪಕ್ಷವಾದ ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಮೇ 26 ರಂದು ಪ್ರವಾದಿ ಮುಹಮ್ಮದ್ ಅವರ ಕುರಿತು ಟಿವಿ ಚರ್ಚೆಯಲ್ಲಿ ಮಾಡಿದ ಅವಹೇಳನ ಇಸ್ಲಾಮಿಕ್ ಪ್ರಪಂಚದಾದ್ಯಂತ ಭಾರಿ ಪ್ರತಿಭಟನೆಯನ್ನು ಹುಟ್ಟು ಹಾಕಿತ್ತು.

ಈ ಹೇಳಿಕೆಗಳು ಸಾಮಾನ್ಯವಾಗಿ ಭಾರತದೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವ ಶ್ರೀಮಂತ ಅರಬ್ ದೇಶಗಳಲ್ಲಿ ರಾಜತಾಂತ್ರಿಕ ಪ್ರತಿಭಟನೆಗೆ ಕಾರಣವಾಗಿತ್ತು. ಬಾಂಗ್ಲಾದೇಶದಲ್ಲಿ ಕೂಡಾ ಪ್ರತಿಭಟನಾಕಾರರು ಭಾರತದ ನಿಕಟ ಮಿತ್ರರಾದ ಪ್ರಧಾನಿ ಶೇಖ್ ಹಸೀನಾ ಅವರಿಂದ ಔಪಚಾರಿಕ ಖಂಡನೆಗೆ ಒತ್ತಾಯಿಸಿದ್ದಾರೆ.

ಇದರ ನಂತರ ಮುಜುಗರವನ್ನು ತಪ್ಪಿಸಲು ಬಿಜೆಪಿಯು, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ಅವರನ್ನು ಅಮಾನತು ಮಾಡಿದ್ದು, ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಹೊರಹಾಕಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

1990 ರ ದಶಕದ ಉತ್ತರಾರ್ಧದಿಂದ ಅಮೇರಿಕಾವು ಭಾರತದೊಂದಿಗೆ ಬಾಂಧವ್ಯವನ್ನು ಗಾಢವಾಗಿಸಲು ಪ್ರಯತ್ನಿಸುತ್ತಿದೆ. ಪ್ರಪಂಚದ ಎರಡು ದೊಡ್ಡ ಪ್ರಜಾಪ್ರಭುತ್ವಗಳಾದ ಭಾರತ ಮತ್ತು ಅಮೆರಿಕ ವಿಶೇಷವಾಗಿ ಚೀನಾದ ವಿರುದ್ಧ ಸಾಮಾನ್ಯ ಹಿತಾಸಕ್ತಿಗಳನ್ನು ಹೊಂದಿವೆ ಎಂದು ನಂಬಲಾಗಿದೆ. ಆದರೂ, ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸುವ ನೀತಿಗಳ ವಿರುದ್ಧ ಅಮೆರಿಕಾವು ಹಲವಾರು ಬಾರಿ ಮಾತನಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...