Homeಅಂತರಾಷ್ಟ್ರೀಯ‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

‘ಬಿಜೆಪಿ ಪದಾಧಿಕಾರಿಗಳ ಆಕ್ಷೇಪಾರ್ಹ ಹೇಳಿಕೆಗೆ ವಿರೋಧವಿದೆ’: ಪ್ರವಾದಿ ನಿಂದನೆಯನ್ನು ಖಂಡಿಸಿದ ಅಮೆರಿಕ

- Advertisement -
- Advertisement -

ಬಿಜೆಪಿಯ ಇಬ್ಬರು ನಾಯಕರು ಪ್ರವಾದಿ ಮೊಹಮ್ಮದ್‌ ಅವರನ್ನು ಅವಹೇಳನ ಮಾಡಿರುವ ಬಗ್ಗೆ ಈಗಾಗಗಲೇ ವಿಶ್ವದ ಹಲವು ಮುಸ್ಲಿಂ ರಾಷ್ಟ್ರಗಳು ಖಂಡಿಸಿದ್ದು, ತೀವ್ರ ಪ್ರತಿಭಟನೆಯನ್ನು ದಾಖಲಿಸಿತ್ತು. ಇದೀಗ ಅಮೇರಿಕಾ ಕೂಡಾ ಧಾರ್ಮಿಕ ವ್ಯಕ್ತಿಗೆ ಮಾಡಿರುವ ಅವಮಾನವನ್ನು ಗುರುವಾರ ಖಂಡಿಸಿದೆ.

“ಇಬ್ಬರು ಬಿಜೆಪಿ ಪದಾಧಿಕಾರಿಗಳು ಮಾಡಿದ ಆಕ್ಷೇಪಾರ್ಹ ಹೇಳಿಕೆಗಳನ್ನು ನಾವು ಖಂಡಿಸುತ್ತೇವೆ. ಪಕ್ಷವು ಆ ಹೇಳಿಕೆಗಳನ್ನು ಸಾರ್ವಜನಿಕವಾಗಿ ಖಂಡಿಸುವುದನ್ನು ನೋಡಿ ನಮಗೆ ಸಂತೋಷವಾಯಿತು” ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನಾವು ಧಾರ್ಮಿಕ ಅಥವಾ ನಂಬಿಕೆಯ ಸ್ವಾತಂತ್ರ್ಯ ಸೇರಿದಂತೆ ಮಾನವ ಹಕ್ಕುಗಳ ಕಾಳಜಿಗಳ ಕುರಿತು ಹಿರಿಯ ಹಂತಗಳಲ್ಲಿ ಭಾರತೀಯ ಸರ್ಕಾರದೊಂದಿಗೆ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇವೆ. ಮಾನವ ಹಕ್ಕುಗಳ ಗೌರವವನ್ನು ಉತ್ತೇಜಿಸಲು ನಾವು ಭಾರತವನ್ನು ಪ್ರೋತ್ಸಾಹಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ಅವಹೇಳನಕ್ಕೆ ವಿರೋಧ: ರಾಜಸ್ಥಾನದ ಬಿಜೆಪಿ ಕೌನ್ಸಿಲರ್ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ಪಕ್ಷವಾದ ಬಿಜೆಪಿಯ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ ಅವರು ಮೇ 26 ರಂದು ಪ್ರವಾದಿ ಮುಹಮ್ಮದ್ ಅವರ ಕುರಿತು ಟಿವಿ ಚರ್ಚೆಯಲ್ಲಿ ಮಾಡಿದ ಅವಹೇಳನ ಇಸ್ಲಾಮಿಕ್ ಪ್ರಪಂಚದಾದ್ಯಂತ ಭಾರಿ ಪ್ರತಿಭಟನೆಯನ್ನು ಹುಟ್ಟು ಹಾಕಿತ್ತು.

ಈ ಹೇಳಿಕೆಗಳು ಸಾಮಾನ್ಯವಾಗಿ ಭಾರತದೊಂದಿಗೆ ನಿಕಟ ಸಂಬಂಧವನ್ನು ಹೊಂದಿರುವ ಶ್ರೀಮಂತ ಅರಬ್ ದೇಶಗಳಲ್ಲಿ ರಾಜತಾಂತ್ರಿಕ ಪ್ರತಿಭಟನೆಗೆ ಕಾರಣವಾಗಿತ್ತು. ಬಾಂಗ್ಲಾದೇಶದಲ್ಲಿ ಕೂಡಾ ಪ್ರತಿಭಟನಾಕಾರರು ಭಾರತದ ನಿಕಟ ಮಿತ್ರರಾದ ಪ್ರಧಾನಿ ಶೇಖ್ ಹಸೀನಾ ಅವರಿಂದ ಔಪಚಾರಿಕ ಖಂಡನೆಗೆ ಒತ್ತಾಯಿಸಿದ್ದಾರೆ.

ಇದರ ನಂತರ ಮುಜುಗರವನ್ನು ತಪ್ಪಿಸಲು ಬಿಜೆಪಿಯು, ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್‌ ಶರ್ಮಾ ಅವರನ್ನು ಅಮಾನತು ಮಾಡಿದ್ದು, ನವೀನ್ ಕುಮಾರ್ ಜಿಂದಾಲ್ ಅವರನ್ನು ಬಿಜೆಪಿ ಹೊರಹಾಕಿದೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾಗೆ ಕೋಲ್ಕತ್ತಾ ಪೊಲೀಸರ ಸಮನ್ಸ್

1990 ರ ದಶಕದ ಉತ್ತರಾರ್ಧದಿಂದ ಅಮೇರಿಕಾವು ಭಾರತದೊಂದಿಗೆ ಬಾಂಧವ್ಯವನ್ನು ಗಾಢವಾಗಿಸಲು ಪ್ರಯತ್ನಿಸುತ್ತಿದೆ. ಪ್ರಪಂಚದ ಎರಡು ದೊಡ್ಡ ಪ್ರಜಾಪ್ರಭುತ್ವಗಳಾದ ಭಾರತ ಮತ್ತು ಅಮೆರಿಕ ವಿಶೇಷವಾಗಿ ಚೀನಾದ ವಿರುದ್ಧ ಸಾಮಾನ್ಯ ಹಿತಾಸಕ್ತಿಗಳನ್ನು ಹೊಂದಿವೆ ಎಂದು ನಂಬಲಾಗಿದೆ. ಆದರೂ, ಭಾರತದಲ್ಲಿ ಮುಸ್ಲಿಮರನ್ನು ಗುರಿಯಾಗಿಸುವ ನೀತಿಗಳ ವಿರುದ್ಧ ಅಮೆರಿಕಾವು ಹಲವಾರು ಬಾರಿ ಮಾತನಾಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...