Homeಮುಖಪುಟಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.

- Advertisement -
- Advertisement -

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತ ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.

ಮೂಲ: ಹರ್ಷ್ ಮಂದರ್ ಮತ್ತು ಅಮಿತಾಂಶು

ಭಾವಾನುವಾದ: ನಿಖಿಲ್ ಕೋಲ್ಪೆ

ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯ ಜನರನ್ನು- ಮುಖ್ಯವಾಗಿ ಮುಸ್ಲಿಮರನ್ನು- ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಪಿಎ) ವಿರೋಧಿ ಪ್ರತಿಭಟನೆಗಳು ಮತ್ತು ಇತ್ತೀಚಿನ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಭಾರತದ ಕರಾಳ ಲಾಕ್‌ಡೌನ್ ನೆರಳಿನ ಅಡಿಯಲ್ಲಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ದಿಲ್ಲಿ ಪೊಲೀಸ್ ಇಲಾಖೆ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿರದ ಕೆಲಸಗಳಲ್ಲಿ ವ್ಯಸ್ತವಾಗಿದೆ.

ಅದರ ಘನ ಕಾರ್ಯಗಳಲ್ಲಿ- ಕಚೇರಿ ಮತ್ತು ಮನೆಗಳಿಗೆ ಬೀಗಮುದ್ರೆ ಜಡಿಯುವುದು, ಫೋನ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವುದು, ದೊಡ್ಡ ಸಂಖ್ಯೆಯಲ್ಲಿ ಜನರನ್ನು ಬಂಧಿಸುವುದು ಸೇರಿದೆ. ಕೊರೋನ ವೈರಸ್ ಹರಡದಂತೆ ತಡೆಯಲು ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸರಕಾರಗಳಿಗೆ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಇದು ನಡೆಯುತ್ತಿದೆ ಎಂಬುದು ಬೇರೆಯೇ ಕತೆಯನ್ನು ಹೇಳುತ್ತದೆ.

ಬಂಧಿತರ ವಿರುದ್ಧ ಹೇರಲಾಗುತ್ತಿರುವ ಆರೋಪಗಳೆಂದರೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದುದು ಮತ್ತು ಈಶಾನ್ಯ ದಿಲ್ಲಿಯ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನಡೆದ 1947ರ ದೇಶ ವಿಭಜನೆಯ ಬಳಿಕದ ಅತ್ಯಂತ ಭೀಕರ ಹಿಂದೂ- ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಿದ್ದು ಅಥವಾ ಭಾಗವಹಿಸಿದ್ದು.

ಗೃಹ ಸಚಿವಾಲಯದ ಆದೇಶ

ಲಾಕ್‌ಡೌನ್ ಬಳಿಕದ ಸ್ವಲ್ಪ ಮಟ್ಟಿನ ಹಿಂಜರಿಕೆಯ ನಂತರ ಏಕಾಏಕಿಯಾಗಿ ಏರಿದ ಈ ಬಂಧನ ಹಿಂದೆ ಕೇಂದ್ರ ಗೃಹ ಸಚಿವಾಲಯವು ದಿಲ್ಲಿ ಕ್ರೈಂ ಬ್ರಾಂಚಿಗೆ ನೀಡಿದ ಆದೇಶ ಇದೆಯೆಂದು ವರದಿಯಾಗಿದೆ.

ಮಾರ್ಚ್ 22ರಿಂದ ಎಪ್ರಿಲ್ ಮಧ್ಯಭಾಗದ ತನಕ ಈಶಾನ್ಯ ದಿಲ್ಲಿಯ ಗಲಭೆಪೀಡಿತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ 25ರಿಂದ 30 ಮಂದಿಯನ್ನು ಬಂಧಿಸಲಾಗಿದೆ ಎಂದು “ದಿ ಹಿಂದೂ” ವರದಿ ಮಾಡಿದೆ. “ಇಂಡಿಯನ್ ಎಕ್ಸ್‌ಪ್ರೆಸ್” ಪ್ರಕಾರ 802 ಬಂಧನಗಳು ನಡೆದಿದ್ದು, ಇವುಗಳಲ್ಲಿ ಕನಿಷ್ಟ 50 ಲಾಕ್‌ಡೌನ್ ಅವಧಿಯಲ್ಲಿ ನಡೆದಂತವುಗಳು. ಆದರೆ, ಕೆಲವು ವರದಿಗಳು ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳುತ್ತವೆ. ಅವುಗಳ ಪ್ರಕಾರ ದಿನಕ್ಕೆಆರರಿಂದ ಏಳು ಬಂಧನಗಳು ನಡೆಯುತ್ತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಮಾಧ್ಯಮ ಮತ್ತು ಕಾನೂನು ಸೇವೆಗಳ ಮೆಲೆ ಹೊರಿಸಲಾಗಿರುವ ತೀವ್ರತರವಾದ ನಿರ್ಬಂಧಗಳಿಂದಾಗಿ ನಿರ್ದಿಷ್ಟ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಅಸಾಧ್ಯವಾಗಿದೆ.

ಈ ಪ್ರದೇಶಗಳ ಮುಸ್ಲಿಮರನ್ನು ಗುರಿಪಡಿಸಲಾಗುತ್ತಿದ್ದು, ಯುವ ನಾಯಕ ಉಮರ್ ಖಾಲಿದ್, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ನಾಯಕರಾದ ಮೀರಾನ್ ಹೈದರ್, ಗರ್ಭಿಣಿಯಾಗಿರುವ ಸಫೂರಾ ಝರ್ಗಾರ್ ಸಹಿತ ಯುವಕರ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊರಿಸಲಾಗುತ್ತಿದೆ. ಅವರ ವಿರುದ್ಧ ಕರಾಳವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಕೇಸು ದಾಖಲಿಸಲಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ)ನ ಎಡಪಂಥೀಯ ನಾಯಕಿ ಕನ್ವಲ್ಜಿತ್ ಕೌರ್ ಅವರ ಮನೆಗೆ ದಾಳಿ ನಡೆಸಿ ಅವರ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಭಿನ್ನಮತ, ದಮನಕ್ಕೆ ಕೇಂದ್ರ ಸರಕಾರದಿಂದ, ಕೋವಿಡ್- 19 ಅಸ್ತ್ರ ಬಳಕೆ

ಈ ಯದ್ವಾತದ್ವಾ ಬಂಧನಗಳನ್ನು ವಿರೋಧಿಸಿ ದಿಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ದಿಲ್ಲಿ ಪೊಲೀಸ್ ಕಮೀಷನರ್‌ಗೆ ಪತ್ರ ಬರೆದಿದ್ದರು. ಆದರೆ ಪೊಲೀಸರು ಅವರ ಮೇಲೆಯೇ ಪಿಡುಗು ಹರಡುವಿಕೆ ಕುರಿತು ನೀಡಿದ ಹೇಳಿಕೆಯನ್ನು ಹಿಡಿದುಕೊಂಡು ರಾಷ್ಟ್ರದ್ರೋಹದ ಕೇಸು ದಾಖಲಿಸಿದ್ದಾರೆ.

ಕಾನೂನು ಸೇವೆಗಳಿಗೆ ಕತ್ತರಿ

ಪೊಲೀಸರು ತಮ್ಮ ಬಂಧನ ಸತ್ರವನ್ನು ಹೆಚ್ಚಿಸಿರುವಂತೆಯೇ ಲಾಕ್‌ಡೌನ್ ಅಡಿಯಲ್ಲಿ ಅನುಮತಿಸಲಾಗಿರುವ ಅಗತ್ಯ ಸೇವೆಗಳಲ್ಲಿ ಕಾನೂನು ಸೇವೆಗಳನ್ನು ಸೇರಿಸದೇ ಇರುವುದು ಗಮನಾರ್ಹ. ಇದರ ಅರ್ಥವೆಂದರೆ, ಆರೋಪಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ದಮನವಾಗಿದೆ. ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗುತ್ತಿದ್ದು, ಬಂಧಿತರ ಕುಟುಂಬಗಳಿಗೆ ಎಫ್‌ಐಆರ್ ಪ್ರತಿಗಳನ್ನೂ ನೀಡಲಾಗುತ್ತಿಲ್ಲ. ಮೇಲಾಗಿ ಅವರೆಲ್ಲಾ ಕೂಲಿ ಕಾರ್ಮಿಕರು ಅಥವಾ ಚಿಕ್ಕ ವ್ಯಾಪಾರಿ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಲಾಕ್‌ಡೌನ್‌ನಿಂದ ಆದಾಯ ಸಂಪೂರ್ಣ ನಿಂತುಹೋಗಿ, ಕಾನೂನು ಸೇವೆಯನ್ನೂ ಪಡೆಯಲಾಗದೆ ಇನ್ನಷ್ಟು ಭಯಭೀತರಾಗಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಮಾನವಹಕ್ಕು ಹೋರಾಟಗಾರರಿಗೂ ಪೊಲೀಸ್ ಕಾರ್ಯಾಚರಣೆಗಳ ಬಲಿಪಶುಗಳನ್ನು ಭೇಟಿಯಾಗಲು ಅವಕಾಶವಿಲ್ಲವಾದುದರಿಂದ ಭಯ ಮತ್ತು ಗೌಪ್ಯದ ಪರದೆಯಿಂದೀಚೆಗೆ ಸ್ವಲ್ಪವೇ ಮಾಧ್ಯಮ ಸುದ್ದಿಗಳು ಹೊರಗೆ ಬರುತ್ತಿವೆ.

ಈ ಆರೋಗ್ಯ ತುರ್ತುಸ್ಥಿತಿಯಲ್ಲಿ ನ್ಯಾಯವೇ ಅಗತ್ಯ ಸೇವೆಯಾಗದೇ ಇರುವುದರಿಂದ, “ಕಾನೂನಿನ ಎದುರು ಸಮಾನತೆ“ಯ ತತ್ವವೇ ಲಾಕ್‌ಡೌನ್‌ನಲ್ಲಿದೆ.

ಕಾನೂನು ಪ್ರಕಾರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ 24 ಗಂಟೆಗಳ ಒಳಗಾಗಿ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಬೇಕು. ಆದರೆ, ಇದನ್ನು ಗಾಳಿಗೆ ತೂರಿರುವ ಪೊಲೀಸರು, ನೇರವಾಗಿ ಜೈಲಿನ ಒಳಗೆಯೇ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸುತ್ತಿದ್ದಾರೆ. ಲಾಕ್‌ಡೌನ್ ನೆಪದಲ್ಲಿ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿದೆ. ಕೆಳಗಿನ ನ್ಯಾಯಾಲಯಗಳಲ್ಲಿ ವಿಡಿಯೋ ವಿಚಾರಣೆಯ ಸೌಲಭ್ಯವೂ ಇಲ್ಲವಾದುದರಿಂದ ಬಂಧಿತರು ಜಾಮೀನಿನ ಅವಕಾಶವಿಲ್ಲದೆ ಜೈಲುಪಾಲಾಗಬೇಕಾಗುತ್ತಿದೆ.

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತವನ್ನು ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.


ಓದಿ: ಮೇ 16(ಇಂದು) ನ್ಯಾಯದ ದಿನ: ಡಾ. ಆನಂದ್ ತೇಲ್ತುಂಬ್ಡೆ ಪರ ದನಿ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...