Homeಮುಖಪುಟಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.

- Advertisement -
- Advertisement -

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತ ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.

ಮೂಲ: ಹರ್ಷ್ ಮಂದರ್ ಮತ್ತು ಅಮಿತಾಂಶು

ಭಾವಾನುವಾದ: ನಿಖಿಲ್ ಕೋಲ್ಪೆ

ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯ ಜನರನ್ನು- ಮುಖ್ಯವಾಗಿ ಮುಸ್ಲಿಮರನ್ನು- ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಪಿಎ) ವಿರೋಧಿ ಪ್ರತಿಭಟನೆಗಳು ಮತ್ತು ಇತ್ತೀಚಿನ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಭಾರತದ ಕರಾಳ ಲಾಕ್‌ಡೌನ್ ನೆರಳಿನ ಅಡಿಯಲ್ಲಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ದಿಲ್ಲಿ ಪೊಲೀಸ್ ಇಲಾಖೆ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿರದ ಕೆಲಸಗಳಲ್ಲಿ ವ್ಯಸ್ತವಾಗಿದೆ.

ಅದರ ಘನ ಕಾರ್ಯಗಳಲ್ಲಿ- ಕಚೇರಿ ಮತ್ತು ಮನೆಗಳಿಗೆ ಬೀಗಮುದ್ರೆ ಜಡಿಯುವುದು, ಫೋನ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವುದು, ದೊಡ್ಡ ಸಂಖ್ಯೆಯಲ್ಲಿ ಜನರನ್ನು ಬಂಧಿಸುವುದು ಸೇರಿದೆ. ಕೊರೋನ ವೈರಸ್ ಹರಡದಂತೆ ತಡೆಯಲು ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸರಕಾರಗಳಿಗೆ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಇದು ನಡೆಯುತ್ತಿದೆ ಎಂಬುದು ಬೇರೆಯೇ ಕತೆಯನ್ನು ಹೇಳುತ್ತದೆ.

ಬಂಧಿತರ ವಿರುದ್ಧ ಹೇರಲಾಗುತ್ತಿರುವ ಆರೋಪಗಳೆಂದರೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದುದು ಮತ್ತು ಈಶಾನ್ಯ ದಿಲ್ಲಿಯ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನಡೆದ 1947ರ ದೇಶ ವಿಭಜನೆಯ ಬಳಿಕದ ಅತ್ಯಂತ ಭೀಕರ ಹಿಂದೂ- ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಿದ್ದು ಅಥವಾ ಭಾಗವಹಿಸಿದ್ದು.

ಗೃಹ ಸಚಿವಾಲಯದ ಆದೇಶ

ಲಾಕ್‌ಡೌನ್ ಬಳಿಕದ ಸ್ವಲ್ಪ ಮಟ್ಟಿನ ಹಿಂಜರಿಕೆಯ ನಂತರ ಏಕಾಏಕಿಯಾಗಿ ಏರಿದ ಈ ಬಂಧನ ಹಿಂದೆ ಕೇಂದ್ರ ಗೃಹ ಸಚಿವಾಲಯವು ದಿಲ್ಲಿ ಕ್ರೈಂ ಬ್ರಾಂಚಿಗೆ ನೀಡಿದ ಆದೇಶ ಇದೆಯೆಂದು ವರದಿಯಾಗಿದೆ.

ಮಾರ್ಚ್ 22ರಿಂದ ಎಪ್ರಿಲ್ ಮಧ್ಯಭಾಗದ ತನಕ ಈಶಾನ್ಯ ದಿಲ್ಲಿಯ ಗಲಭೆಪೀಡಿತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ 25ರಿಂದ 30 ಮಂದಿಯನ್ನು ಬಂಧಿಸಲಾಗಿದೆ ಎಂದು “ದಿ ಹಿಂದೂ” ವರದಿ ಮಾಡಿದೆ. “ಇಂಡಿಯನ್ ಎಕ್ಸ್‌ಪ್ರೆಸ್” ಪ್ರಕಾರ 802 ಬಂಧನಗಳು ನಡೆದಿದ್ದು, ಇವುಗಳಲ್ಲಿ ಕನಿಷ್ಟ 50 ಲಾಕ್‌ಡೌನ್ ಅವಧಿಯಲ್ಲಿ ನಡೆದಂತವುಗಳು. ಆದರೆ, ಕೆಲವು ವರದಿಗಳು ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳುತ್ತವೆ. ಅವುಗಳ ಪ್ರಕಾರ ದಿನಕ್ಕೆಆರರಿಂದ ಏಳು ಬಂಧನಗಳು ನಡೆಯುತ್ತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಮಾಧ್ಯಮ ಮತ್ತು ಕಾನೂನು ಸೇವೆಗಳ ಮೆಲೆ ಹೊರಿಸಲಾಗಿರುವ ತೀವ್ರತರವಾದ ನಿರ್ಬಂಧಗಳಿಂದಾಗಿ ನಿರ್ದಿಷ್ಟ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಅಸಾಧ್ಯವಾಗಿದೆ.

ಈ ಪ್ರದೇಶಗಳ ಮುಸ್ಲಿಮರನ್ನು ಗುರಿಪಡಿಸಲಾಗುತ್ತಿದ್ದು, ಯುವ ನಾಯಕ ಉಮರ್ ಖಾಲಿದ್, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ನಾಯಕರಾದ ಮೀರಾನ್ ಹೈದರ್, ಗರ್ಭಿಣಿಯಾಗಿರುವ ಸಫೂರಾ ಝರ್ಗಾರ್ ಸಹಿತ ಯುವಕರ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊರಿಸಲಾಗುತ್ತಿದೆ. ಅವರ ವಿರುದ್ಧ ಕರಾಳವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಕೇಸು ದಾಖಲಿಸಲಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ)ನ ಎಡಪಂಥೀಯ ನಾಯಕಿ ಕನ್ವಲ್ಜಿತ್ ಕೌರ್ ಅವರ ಮನೆಗೆ ದಾಳಿ ನಡೆಸಿ ಅವರ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಭಿನ್ನಮತ, ದಮನಕ್ಕೆ ಕೇಂದ್ರ ಸರಕಾರದಿಂದ, ಕೋವಿಡ್- 19 ಅಸ್ತ್ರ ಬಳಕೆ

ಈ ಯದ್ವಾತದ್ವಾ ಬಂಧನಗಳನ್ನು ವಿರೋಧಿಸಿ ದಿಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ದಿಲ್ಲಿ ಪೊಲೀಸ್ ಕಮೀಷನರ್‌ಗೆ ಪತ್ರ ಬರೆದಿದ್ದರು. ಆದರೆ ಪೊಲೀಸರು ಅವರ ಮೇಲೆಯೇ ಪಿಡುಗು ಹರಡುವಿಕೆ ಕುರಿತು ನೀಡಿದ ಹೇಳಿಕೆಯನ್ನು ಹಿಡಿದುಕೊಂಡು ರಾಷ್ಟ್ರದ್ರೋಹದ ಕೇಸು ದಾಖಲಿಸಿದ್ದಾರೆ.

ಕಾನೂನು ಸೇವೆಗಳಿಗೆ ಕತ್ತರಿ

ಪೊಲೀಸರು ತಮ್ಮ ಬಂಧನ ಸತ್ರವನ್ನು ಹೆಚ್ಚಿಸಿರುವಂತೆಯೇ ಲಾಕ್‌ಡೌನ್ ಅಡಿಯಲ್ಲಿ ಅನುಮತಿಸಲಾಗಿರುವ ಅಗತ್ಯ ಸೇವೆಗಳಲ್ಲಿ ಕಾನೂನು ಸೇವೆಗಳನ್ನು ಸೇರಿಸದೇ ಇರುವುದು ಗಮನಾರ್ಹ. ಇದರ ಅರ್ಥವೆಂದರೆ, ಆರೋಪಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ದಮನವಾಗಿದೆ. ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗುತ್ತಿದ್ದು, ಬಂಧಿತರ ಕುಟುಂಬಗಳಿಗೆ ಎಫ್‌ಐಆರ್ ಪ್ರತಿಗಳನ್ನೂ ನೀಡಲಾಗುತ್ತಿಲ್ಲ. ಮೇಲಾಗಿ ಅವರೆಲ್ಲಾ ಕೂಲಿ ಕಾರ್ಮಿಕರು ಅಥವಾ ಚಿಕ್ಕ ವ್ಯಾಪಾರಿ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಲಾಕ್‌ಡೌನ್‌ನಿಂದ ಆದಾಯ ಸಂಪೂರ್ಣ ನಿಂತುಹೋಗಿ, ಕಾನೂನು ಸೇವೆಯನ್ನೂ ಪಡೆಯಲಾಗದೆ ಇನ್ನಷ್ಟು ಭಯಭೀತರಾಗಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಮಾನವಹಕ್ಕು ಹೋರಾಟಗಾರರಿಗೂ ಪೊಲೀಸ್ ಕಾರ್ಯಾಚರಣೆಗಳ ಬಲಿಪಶುಗಳನ್ನು ಭೇಟಿಯಾಗಲು ಅವಕಾಶವಿಲ್ಲವಾದುದರಿಂದ ಭಯ ಮತ್ತು ಗೌಪ್ಯದ ಪರದೆಯಿಂದೀಚೆಗೆ ಸ್ವಲ್ಪವೇ ಮಾಧ್ಯಮ ಸುದ್ದಿಗಳು ಹೊರಗೆ ಬರುತ್ತಿವೆ.

ಈ ಆರೋಗ್ಯ ತುರ್ತುಸ್ಥಿತಿಯಲ್ಲಿ ನ್ಯಾಯವೇ ಅಗತ್ಯ ಸೇವೆಯಾಗದೇ ಇರುವುದರಿಂದ, “ಕಾನೂನಿನ ಎದುರು ಸಮಾನತೆ“ಯ ತತ್ವವೇ ಲಾಕ್‌ಡೌನ್‌ನಲ್ಲಿದೆ.

ಕಾನೂನು ಪ್ರಕಾರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ 24 ಗಂಟೆಗಳ ಒಳಗಾಗಿ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಬೇಕು. ಆದರೆ, ಇದನ್ನು ಗಾಳಿಗೆ ತೂರಿರುವ ಪೊಲೀಸರು, ನೇರವಾಗಿ ಜೈಲಿನ ಒಳಗೆಯೇ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸುತ್ತಿದ್ದಾರೆ. ಲಾಕ್‌ಡೌನ್ ನೆಪದಲ್ಲಿ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿದೆ. ಕೆಳಗಿನ ನ್ಯಾಯಾಲಯಗಳಲ್ಲಿ ವಿಡಿಯೋ ವಿಚಾರಣೆಯ ಸೌಲಭ್ಯವೂ ಇಲ್ಲವಾದುದರಿಂದ ಬಂಧಿತರು ಜಾಮೀನಿನ ಅವಕಾಶವಿಲ್ಲದೆ ಜೈಲುಪಾಲಾಗಬೇಕಾಗುತ್ತಿದೆ.

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತವನ್ನು ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.


ಓದಿ: ಮೇ 16(ಇಂದು) ನ್ಯಾಯದ ದಿನ: ಡಾ. ಆನಂದ್ ತೇಲ್ತುಂಬ್ಡೆ ಪರ ದನಿ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...