Homeಮುಖಪುಟಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.

- Advertisement -
- Advertisement -

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತ ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.

ಮೂಲ: ಹರ್ಷ್ ಮಂದರ್ ಮತ್ತು ಅಮಿತಾಂಶು

ಭಾವಾನುವಾದ: ನಿಖಿಲ್ ಕೋಲ್ಪೆ

ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯ ಜನರನ್ನು- ಮುಖ್ಯವಾಗಿ ಮುಸ್ಲಿಮರನ್ನು- ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಪಿಎ) ವಿರೋಧಿ ಪ್ರತಿಭಟನೆಗಳು ಮತ್ತು ಇತ್ತೀಚಿನ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಭಾರತದ ಕರಾಳ ಲಾಕ್‌ಡೌನ್ ನೆರಳಿನ ಅಡಿಯಲ್ಲಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ದಿಲ್ಲಿ ಪೊಲೀಸ್ ಇಲಾಖೆ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿರದ ಕೆಲಸಗಳಲ್ಲಿ ವ್ಯಸ್ತವಾಗಿದೆ.

ಅದರ ಘನ ಕಾರ್ಯಗಳಲ್ಲಿ- ಕಚೇರಿ ಮತ್ತು ಮನೆಗಳಿಗೆ ಬೀಗಮುದ್ರೆ ಜಡಿಯುವುದು, ಫೋನ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವುದು, ದೊಡ್ಡ ಸಂಖ್ಯೆಯಲ್ಲಿ ಜನರನ್ನು ಬಂಧಿಸುವುದು ಸೇರಿದೆ. ಕೊರೋನ ವೈರಸ್ ಹರಡದಂತೆ ತಡೆಯಲು ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸರಕಾರಗಳಿಗೆ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಇದು ನಡೆಯುತ್ತಿದೆ ಎಂಬುದು ಬೇರೆಯೇ ಕತೆಯನ್ನು ಹೇಳುತ್ತದೆ.

ಬಂಧಿತರ ವಿರುದ್ಧ ಹೇರಲಾಗುತ್ತಿರುವ ಆರೋಪಗಳೆಂದರೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದುದು ಮತ್ತು ಈಶಾನ್ಯ ದಿಲ್ಲಿಯ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನಡೆದ 1947ರ ದೇಶ ವಿಭಜನೆಯ ಬಳಿಕದ ಅತ್ಯಂತ ಭೀಕರ ಹಿಂದೂ- ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಿದ್ದು ಅಥವಾ ಭಾಗವಹಿಸಿದ್ದು.

ಗೃಹ ಸಚಿವಾಲಯದ ಆದೇಶ

ಲಾಕ್‌ಡೌನ್ ಬಳಿಕದ ಸ್ವಲ್ಪ ಮಟ್ಟಿನ ಹಿಂಜರಿಕೆಯ ನಂತರ ಏಕಾಏಕಿಯಾಗಿ ಏರಿದ ಈ ಬಂಧನ ಹಿಂದೆ ಕೇಂದ್ರ ಗೃಹ ಸಚಿವಾಲಯವು ದಿಲ್ಲಿ ಕ್ರೈಂ ಬ್ರಾಂಚಿಗೆ ನೀಡಿದ ಆದೇಶ ಇದೆಯೆಂದು ವರದಿಯಾಗಿದೆ.

ಮಾರ್ಚ್ 22ರಿಂದ ಎಪ್ರಿಲ್ ಮಧ್ಯಭಾಗದ ತನಕ ಈಶಾನ್ಯ ದಿಲ್ಲಿಯ ಗಲಭೆಪೀಡಿತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ 25ರಿಂದ 30 ಮಂದಿಯನ್ನು ಬಂಧಿಸಲಾಗಿದೆ ಎಂದು “ದಿ ಹಿಂದೂ” ವರದಿ ಮಾಡಿದೆ. “ಇಂಡಿಯನ್ ಎಕ್ಸ್‌ಪ್ರೆಸ್” ಪ್ರಕಾರ 802 ಬಂಧನಗಳು ನಡೆದಿದ್ದು, ಇವುಗಳಲ್ಲಿ ಕನಿಷ್ಟ 50 ಲಾಕ್‌ಡೌನ್ ಅವಧಿಯಲ್ಲಿ ನಡೆದಂತವುಗಳು. ಆದರೆ, ಕೆಲವು ವರದಿಗಳು ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳುತ್ತವೆ. ಅವುಗಳ ಪ್ರಕಾರ ದಿನಕ್ಕೆಆರರಿಂದ ಏಳು ಬಂಧನಗಳು ನಡೆಯುತ್ತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಮಾಧ್ಯಮ ಮತ್ತು ಕಾನೂನು ಸೇವೆಗಳ ಮೆಲೆ ಹೊರಿಸಲಾಗಿರುವ ತೀವ್ರತರವಾದ ನಿರ್ಬಂಧಗಳಿಂದಾಗಿ ನಿರ್ದಿಷ್ಟ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಅಸಾಧ್ಯವಾಗಿದೆ.

ಈ ಪ್ರದೇಶಗಳ ಮುಸ್ಲಿಮರನ್ನು ಗುರಿಪಡಿಸಲಾಗುತ್ತಿದ್ದು, ಯುವ ನಾಯಕ ಉಮರ್ ಖಾಲಿದ್, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ನಾಯಕರಾದ ಮೀರಾನ್ ಹೈದರ್, ಗರ್ಭಿಣಿಯಾಗಿರುವ ಸಫೂರಾ ಝರ್ಗಾರ್ ಸಹಿತ ಯುವಕರ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊರಿಸಲಾಗುತ್ತಿದೆ. ಅವರ ವಿರುದ್ಧ ಕರಾಳವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಕೇಸು ದಾಖಲಿಸಲಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ)ನ ಎಡಪಂಥೀಯ ನಾಯಕಿ ಕನ್ವಲ್ಜಿತ್ ಕೌರ್ ಅವರ ಮನೆಗೆ ದಾಳಿ ನಡೆಸಿ ಅವರ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಭಿನ್ನಮತ, ದಮನಕ್ಕೆ ಕೇಂದ್ರ ಸರಕಾರದಿಂದ, ಕೋವಿಡ್- 19 ಅಸ್ತ್ರ ಬಳಕೆ

ಈ ಯದ್ವಾತದ್ವಾ ಬಂಧನಗಳನ್ನು ವಿರೋಧಿಸಿ ದಿಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ದಿಲ್ಲಿ ಪೊಲೀಸ್ ಕಮೀಷನರ್‌ಗೆ ಪತ್ರ ಬರೆದಿದ್ದರು. ಆದರೆ ಪೊಲೀಸರು ಅವರ ಮೇಲೆಯೇ ಪಿಡುಗು ಹರಡುವಿಕೆ ಕುರಿತು ನೀಡಿದ ಹೇಳಿಕೆಯನ್ನು ಹಿಡಿದುಕೊಂಡು ರಾಷ್ಟ್ರದ್ರೋಹದ ಕೇಸು ದಾಖಲಿಸಿದ್ದಾರೆ.

ಕಾನೂನು ಸೇವೆಗಳಿಗೆ ಕತ್ತರಿ

ಪೊಲೀಸರು ತಮ್ಮ ಬಂಧನ ಸತ್ರವನ್ನು ಹೆಚ್ಚಿಸಿರುವಂತೆಯೇ ಲಾಕ್‌ಡೌನ್ ಅಡಿಯಲ್ಲಿ ಅನುಮತಿಸಲಾಗಿರುವ ಅಗತ್ಯ ಸೇವೆಗಳಲ್ಲಿ ಕಾನೂನು ಸೇವೆಗಳನ್ನು ಸೇರಿಸದೇ ಇರುವುದು ಗಮನಾರ್ಹ. ಇದರ ಅರ್ಥವೆಂದರೆ, ಆರೋಪಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ದಮನವಾಗಿದೆ. ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗುತ್ತಿದ್ದು, ಬಂಧಿತರ ಕುಟುಂಬಗಳಿಗೆ ಎಫ್‌ಐಆರ್ ಪ್ರತಿಗಳನ್ನೂ ನೀಡಲಾಗುತ್ತಿಲ್ಲ. ಮೇಲಾಗಿ ಅವರೆಲ್ಲಾ ಕೂಲಿ ಕಾರ್ಮಿಕರು ಅಥವಾ ಚಿಕ್ಕ ವ್ಯಾಪಾರಿ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಲಾಕ್‌ಡೌನ್‌ನಿಂದ ಆದಾಯ ಸಂಪೂರ್ಣ ನಿಂತುಹೋಗಿ, ಕಾನೂನು ಸೇವೆಯನ್ನೂ ಪಡೆಯಲಾಗದೆ ಇನ್ನಷ್ಟು ಭಯಭೀತರಾಗಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಮಾನವಹಕ್ಕು ಹೋರಾಟಗಾರರಿಗೂ ಪೊಲೀಸ್ ಕಾರ್ಯಾಚರಣೆಗಳ ಬಲಿಪಶುಗಳನ್ನು ಭೇಟಿಯಾಗಲು ಅವಕಾಶವಿಲ್ಲವಾದುದರಿಂದ ಭಯ ಮತ್ತು ಗೌಪ್ಯದ ಪರದೆಯಿಂದೀಚೆಗೆ ಸ್ವಲ್ಪವೇ ಮಾಧ್ಯಮ ಸುದ್ದಿಗಳು ಹೊರಗೆ ಬರುತ್ತಿವೆ.

ಈ ಆರೋಗ್ಯ ತುರ್ತುಸ್ಥಿತಿಯಲ್ಲಿ ನ್ಯಾಯವೇ ಅಗತ್ಯ ಸೇವೆಯಾಗದೇ ಇರುವುದರಿಂದ, “ಕಾನೂನಿನ ಎದುರು ಸಮಾನತೆ“ಯ ತತ್ವವೇ ಲಾಕ್‌ಡೌನ್‌ನಲ್ಲಿದೆ.

ಕಾನೂನು ಪ್ರಕಾರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ 24 ಗಂಟೆಗಳ ಒಳಗಾಗಿ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಬೇಕು. ಆದರೆ, ಇದನ್ನು ಗಾಳಿಗೆ ತೂರಿರುವ ಪೊಲೀಸರು, ನೇರವಾಗಿ ಜೈಲಿನ ಒಳಗೆಯೇ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸುತ್ತಿದ್ದಾರೆ. ಲಾಕ್‌ಡೌನ್ ನೆಪದಲ್ಲಿ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿದೆ. ಕೆಳಗಿನ ನ್ಯಾಯಾಲಯಗಳಲ್ಲಿ ವಿಡಿಯೋ ವಿಚಾರಣೆಯ ಸೌಲಭ್ಯವೂ ಇಲ್ಲವಾದುದರಿಂದ ಬಂಧಿತರು ಜಾಮೀನಿನ ಅವಕಾಶವಿಲ್ಲದೆ ಜೈಲುಪಾಲಾಗಬೇಕಾಗುತ್ತಿದೆ.

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತವನ್ನು ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.


ಓದಿ: ಮೇ 16(ಇಂದು) ನ್ಯಾಯದ ದಿನ: ಡಾ. ಆನಂದ್ ತೇಲ್ತುಂಬ್ಡೆ ಪರ ದನಿ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...