Homeಮುಖಪುಟಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.

- Advertisement -
- Advertisement -

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತ ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.

ಮೂಲ: ಹರ್ಷ್ ಮಂದರ್ ಮತ್ತು ಅಮಿತಾಂಶು

ಭಾವಾನುವಾದ: ನಿಖಿಲ್ ಕೋಲ್ಪೆ

ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯ ಜನರನ್ನು- ಮುಖ್ಯವಾಗಿ ಮುಸ್ಲಿಮರನ್ನು- ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಪಿಎ) ವಿರೋಧಿ ಪ್ರತಿಭಟನೆಗಳು ಮತ್ತು ಇತ್ತೀಚಿನ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಭಾರತದ ಕರಾಳ ಲಾಕ್‌ಡೌನ್ ನೆರಳಿನ ಅಡಿಯಲ್ಲಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ದಿಲ್ಲಿ ಪೊಲೀಸ್ ಇಲಾಖೆ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿರದ ಕೆಲಸಗಳಲ್ಲಿ ವ್ಯಸ್ತವಾಗಿದೆ.

ಅದರ ಘನ ಕಾರ್ಯಗಳಲ್ಲಿ- ಕಚೇರಿ ಮತ್ತು ಮನೆಗಳಿಗೆ ಬೀಗಮುದ್ರೆ ಜಡಿಯುವುದು, ಫೋನ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವುದು, ದೊಡ್ಡ ಸಂಖ್ಯೆಯಲ್ಲಿ ಜನರನ್ನು ಬಂಧಿಸುವುದು ಸೇರಿದೆ. ಕೊರೋನ ವೈರಸ್ ಹರಡದಂತೆ ತಡೆಯಲು ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸರಕಾರಗಳಿಗೆ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಇದು ನಡೆಯುತ್ತಿದೆ ಎಂಬುದು ಬೇರೆಯೇ ಕತೆಯನ್ನು ಹೇಳುತ್ತದೆ.

ಬಂಧಿತರ ವಿರುದ್ಧ ಹೇರಲಾಗುತ್ತಿರುವ ಆರೋಪಗಳೆಂದರೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದುದು ಮತ್ತು ಈಶಾನ್ಯ ದಿಲ್ಲಿಯ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನಡೆದ 1947ರ ದೇಶ ವಿಭಜನೆಯ ಬಳಿಕದ ಅತ್ಯಂತ ಭೀಕರ ಹಿಂದೂ- ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಿದ್ದು ಅಥವಾ ಭಾಗವಹಿಸಿದ್ದು.

ಗೃಹ ಸಚಿವಾಲಯದ ಆದೇಶ

ಲಾಕ್‌ಡೌನ್ ಬಳಿಕದ ಸ್ವಲ್ಪ ಮಟ್ಟಿನ ಹಿಂಜರಿಕೆಯ ನಂತರ ಏಕಾಏಕಿಯಾಗಿ ಏರಿದ ಈ ಬಂಧನ ಹಿಂದೆ ಕೇಂದ್ರ ಗೃಹ ಸಚಿವಾಲಯವು ದಿಲ್ಲಿ ಕ್ರೈಂ ಬ್ರಾಂಚಿಗೆ ನೀಡಿದ ಆದೇಶ ಇದೆಯೆಂದು ವರದಿಯಾಗಿದೆ.

ಮಾರ್ಚ್ 22ರಿಂದ ಎಪ್ರಿಲ್ ಮಧ್ಯಭಾಗದ ತನಕ ಈಶಾನ್ಯ ದಿಲ್ಲಿಯ ಗಲಭೆಪೀಡಿತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ 25ರಿಂದ 30 ಮಂದಿಯನ್ನು ಬಂಧಿಸಲಾಗಿದೆ ಎಂದು “ದಿ ಹಿಂದೂ” ವರದಿ ಮಾಡಿದೆ. “ಇಂಡಿಯನ್ ಎಕ್ಸ್‌ಪ್ರೆಸ್” ಪ್ರಕಾರ 802 ಬಂಧನಗಳು ನಡೆದಿದ್ದು, ಇವುಗಳಲ್ಲಿ ಕನಿಷ್ಟ 50 ಲಾಕ್‌ಡೌನ್ ಅವಧಿಯಲ್ಲಿ ನಡೆದಂತವುಗಳು. ಆದರೆ, ಕೆಲವು ವರದಿಗಳು ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳುತ್ತವೆ. ಅವುಗಳ ಪ್ರಕಾರ ದಿನಕ್ಕೆಆರರಿಂದ ಏಳು ಬಂಧನಗಳು ನಡೆಯುತ್ತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಮಾಧ್ಯಮ ಮತ್ತು ಕಾನೂನು ಸೇವೆಗಳ ಮೆಲೆ ಹೊರಿಸಲಾಗಿರುವ ತೀವ್ರತರವಾದ ನಿರ್ಬಂಧಗಳಿಂದಾಗಿ ನಿರ್ದಿಷ್ಟ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಅಸಾಧ್ಯವಾಗಿದೆ.

ಈ ಪ್ರದೇಶಗಳ ಮುಸ್ಲಿಮರನ್ನು ಗುರಿಪಡಿಸಲಾಗುತ್ತಿದ್ದು, ಯುವ ನಾಯಕ ಉಮರ್ ಖಾಲಿದ್, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ನಾಯಕರಾದ ಮೀರಾನ್ ಹೈದರ್, ಗರ್ಭಿಣಿಯಾಗಿರುವ ಸಫೂರಾ ಝರ್ಗಾರ್ ಸಹಿತ ಯುವಕರ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊರಿಸಲಾಗುತ್ತಿದೆ. ಅವರ ವಿರುದ್ಧ ಕರಾಳವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಕೇಸು ದಾಖಲಿಸಲಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ)ನ ಎಡಪಂಥೀಯ ನಾಯಕಿ ಕನ್ವಲ್ಜಿತ್ ಕೌರ್ ಅವರ ಮನೆಗೆ ದಾಳಿ ನಡೆಸಿ ಅವರ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಭಿನ್ನಮತ, ದಮನಕ್ಕೆ ಕೇಂದ್ರ ಸರಕಾರದಿಂದ, ಕೋವಿಡ್- 19 ಅಸ್ತ್ರ ಬಳಕೆ

ಈ ಯದ್ವಾತದ್ವಾ ಬಂಧನಗಳನ್ನು ವಿರೋಧಿಸಿ ದಿಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ದಿಲ್ಲಿ ಪೊಲೀಸ್ ಕಮೀಷನರ್‌ಗೆ ಪತ್ರ ಬರೆದಿದ್ದರು. ಆದರೆ ಪೊಲೀಸರು ಅವರ ಮೇಲೆಯೇ ಪಿಡುಗು ಹರಡುವಿಕೆ ಕುರಿತು ನೀಡಿದ ಹೇಳಿಕೆಯನ್ನು ಹಿಡಿದುಕೊಂಡು ರಾಷ್ಟ್ರದ್ರೋಹದ ಕೇಸು ದಾಖಲಿಸಿದ್ದಾರೆ.

ಕಾನೂನು ಸೇವೆಗಳಿಗೆ ಕತ್ತರಿ

ಪೊಲೀಸರು ತಮ್ಮ ಬಂಧನ ಸತ್ರವನ್ನು ಹೆಚ್ಚಿಸಿರುವಂತೆಯೇ ಲಾಕ್‌ಡೌನ್ ಅಡಿಯಲ್ಲಿ ಅನುಮತಿಸಲಾಗಿರುವ ಅಗತ್ಯ ಸೇವೆಗಳಲ್ಲಿ ಕಾನೂನು ಸೇವೆಗಳನ್ನು ಸೇರಿಸದೇ ಇರುವುದು ಗಮನಾರ್ಹ. ಇದರ ಅರ್ಥವೆಂದರೆ, ಆರೋಪಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ದಮನವಾಗಿದೆ. ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗುತ್ತಿದ್ದು, ಬಂಧಿತರ ಕುಟುಂಬಗಳಿಗೆ ಎಫ್‌ಐಆರ್ ಪ್ರತಿಗಳನ್ನೂ ನೀಡಲಾಗುತ್ತಿಲ್ಲ. ಮೇಲಾಗಿ ಅವರೆಲ್ಲಾ ಕೂಲಿ ಕಾರ್ಮಿಕರು ಅಥವಾ ಚಿಕ್ಕ ವ್ಯಾಪಾರಿ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಲಾಕ್‌ಡೌನ್‌ನಿಂದ ಆದಾಯ ಸಂಪೂರ್ಣ ನಿಂತುಹೋಗಿ, ಕಾನೂನು ಸೇವೆಯನ್ನೂ ಪಡೆಯಲಾಗದೆ ಇನ್ನಷ್ಟು ಭಯಭೀತರಾಗಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಮಾನವಹಕ್ಕು ಹೋರಾಟಗಾರರಿಗೂ ಪೊಲೀಸ್ ಕಾರ್ಯಾಚರಣೆಗಳ ಬಲಿಪಶುಗಳನ್ನು ಭೇಟಿಯಾಗಲು ಅವಕಾಶವಿಲ್ಲವಾದುದರಿಂದ ಭಯ ಮತ್ತು ಗೌಪ್ಯದ ಪರದೆಯಿಂದೀಚೆಗೆ ಸ್ವಲ್ಪವೇ ಮಾಧ್ಯಮ ಸುದ್ದಿಗಳು ಹೊರಗೆ ಬರುತ್ತಿವೆ.

ಈ ಆರೋಗ್ಯ ತುರ್ತುಸ್ಥಿತಿಯಲ್ಲಿ ನ್ಯಾಯವೇ ಅಗತ್ಯ ಸೇವೆಯಾಗದೇ ಇರುವುದರಿಂದ, “ಕಾನೂನಿನ ಎದುರು ಸಮಾನತೆ“ಯ ತತ್ವವೇ ಲಾಕ್‌ಡೌನ್‌ನಲ್ಲಿದೆ.

ಕಾನೂನು ಪ್ರಕಾರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ 24 ಗಂಟೆಗಳ ಒಳಗಾಗಿ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಬೇಕು. ಆದರೆ, ಇದನ್ನು ಗಾಳಿಗೆ ತೂರಿರುವ ಪೊಲೀಸರು, ನೇರವಾಗಿ ಜೈಲಿನ ಒಳಗೆಯೇ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸುತ್ತಿದ್ದಾರೆ. ಲಾಕ್‌ಡೌನ್ ನೆಪದಲ್ಲಿ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿದೆ. ಕೆಳಗಿನ ನ್ಯಾಯಾಲಯಗಳಲ್ಲಿ ವಿಡಿಯೋ ವಿಚಾರಣೆಯ ಸೌಲಭ್ಯವೂ ಇಲ್ಲವಾದುದರಿಂದ ಬಂಧಿತರು ಜಾಮೀನಿನ ಅವಕಾಶವಿಲ್ಲದೆ ಜೈಲುಪಾಲಾಗಬೇಕಾಗುತ್ತಿದೆ.

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತವನ್ನು ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.


ಓದಿ: ಮೇ 16(ಇಂದು) ನ್ಯಾಯದ ದಿನ: ಡಾ. ಆನಂದ್ ತೇಲ್ತುಂಬ್ಡೆ ಪರ ದನಿ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...