Homeಮುಖಪುಟಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.

- Advertisement -
- Advertisement -

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತ ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.

ಮೂಲ: ಹರ್ಷ್ ಮಂದರ್ ಮತ್ತು ಅಮಿತಾಂಶು

ಭಾವಾನುವಾದ: ನಿಖಿಲ್ ಕೋಲ್ಪೆ

ದಿಲ್ಲಿಯಲ್ಲಿ ದೊಡ್ಡ ಸಂಖ್ಯೆಯ ಜನರನ್ನು- ಮುಖ್ಯವಾಗಿ ಮುಸ್ಲಿಮರನ್ನು- ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಪಿಎ) ವಿರೋಧಿ ಪ್ರತಿಭಟನೆಗಳು ಮತ್ತು ಇತ್ತೀಚಿನ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಭಾರತದ ಕರಾಳ ಲಾಕ್‌ಡೌನ್ ನೆರಳಿನ ಅಡಿಯಲ್ಲಿ ಕೇಂದ್ರ ಸರಕಾರದ ನಿಯಂತ್ರಣದಲ್ಲಿರುವ ದಿಲ್ಲಿ ಪೊಲೀಸ್ ಇಲಾಖೆ ಕೋವಿಡ್-19 ಪಿಡುಗಿನ ನಿಯಂತ್ರಣಕ್ಕೆ ಯಾವುದೇ ರೀತಿಯಲ್ಲಿ ಸಂಬಂಧಿಸಿರದ ಕೆಲಸಗಳಲ್ಲಿ ವ್ಯಸ್ತವಾಗಿದೆ.

ಅದರ ಘನ ಕಾರ್ಯಗಳಲ್ಲಿ- ಕಚೇರಿ ಮತ್ತು ಮನೆಗಳಿಗೆ ಬೀಗಮುದ್ರೆ ಜಡಿಯುವುದು, ಫೋನ್ ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳುವುದು, ದೊಡ್ಡ ಸಂಖ್ಯೆಯಲ್ಲಿ ಜನರನ್ನು ಬಂಧಿಸುವುದು ಸೇರಿದೆ. ಕೊರೋನ ವೈರಸ್ ಹರಡದಂತೆ ತಡೆಯಲು ಜೈಲುಗಳಲ್ಲಿ ದಟ್ಟಣೆಯನ್ನು ಕಡಿಮೆ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸರಕಾರಗಳಿಗೆ ನೀಡಿರುವ ನಿರ್ದೇಶನಕ್ಕೆ ವ್ಯತಿರಿಕ್ತವಾಗಿ ಇದು ನಡೆಯುತ್ತಿದೆ ಎಂಬುದು ಬೇರೆಯೇ ಕತೆಯನ್ನು ಹೇಳುತ್ತದೆ.

ಬಂಧಿತರ ವಿರುದ್ಧ ಹೇರಲಾಗುತ್ತಿರುವ ಆರೋಪಗಳೆಂದರೆ, ಸಿಎಎ, ಎನ್‌ಆರ್‌ಸಿ ಮತ್ತು ಎನ್‌ಪಿಆರ್ ವಿರೋಧಿ ಪ್ರತಿಭಟನೆಗಳಲ್ಲಿ ಭಾಗವಹಿಸಿದುದು ಮತ್ತು ಈಶಾನ್ಯ ದಿಲ್ಲಿಯ ಕಾರ್ಮಿಕರ ವಸತಿ ಪ್ರದೇಶಗಳಲ್ಲಿ ನಡೆದ 1947ರ ದೇಶ ವಿಭಜನೆಯ ಬಳಿಕದ ಅತ್ಯಂತ ಭೀಕರ ಹಿಂದೂ- ಮುಸ್ಲಿಂ ಗಲಭೆಗಳನ್ನು ಪ್ರಚೋದಿಸಿದ್ದು ಅಥವಾ ಭಾಗವಹಿಸಿದ್ದು.

ಗೃಹ ಸಚಿವಾಲಯದ ಆದೇಶ

ಲಾಕ್‌ಡೌನ್ ಬಳಿಕದ ಸ್ವಲ್ಪ ಮಟ್ಟಿನ ಹಿಂಜರಿಕೆಯ ನಂತರ ಏಕಾಏಕಿಯಾಗಿ ಏರಿದ ಈ ಬಂಧನ ಹಿಂದೆ ಕೇಂದ್ರ ಗೃಹ ಸಚಿವಾಲಯವು ದಿಲ್ಲಿ ಕ್ರೈಂ ಬ್ರಾಂಚಿಗೆ ನೀಡಿದ ಆದೇಶ ಇದೆಯೆಂದು ವರದಿಯಾಗಿದೆ.

ಮಾರ್ಚ್ 22ರಿಂದ ಎಪ್ರಿಲ್ ಮಧ್ಯಭಾಗದ ತನಕ ಈಶಾನ್ಯ ದಿಲ್ಲಿಯ ಗಲಭೆಪೀಡಿತ ಮುಸ್ಲಿಂ ಬಾಹುಳ್ಯದ ಪ್ರದೇಶಗಳಲ್ಲಿ 25ರಿಂದ 30 ಮಂದಿಯನ್ನು ಬಂಧಿಸಲಾಗಿದೆ ಎಂದು “ದಿ ಹಿಂದೂ” ವರದಿ ಮಾಡಿದೆ. “ಇಂಡಿಯನ್ ಎಕ್ಸ್‌ಪ್ರೆಸ್” ಪ್ರಕಾರ 802 ಬಂಧನಗಳು ನಡೆದಿದ್ದು, ಇವುಗಳಲ್ಲಿ ಕನಿಷ್ಟ 50 ಲಾಕ್‌ಡೌನ್ ಅವಧಿಯಲ್ಲಿ ನಡೆದಂತವುಗಳು. ಆದರೆ, ಕೆಲವು ವರದಿಗಳು ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ ಎಂದು ಹೇಳುತ್ತವೆ. ಅವುಗಳ ಪ್ರಕಾರ ದಿನಕ್ಕೆಆರರಿಂದ ಏಳು ಬಂಧನಗಳು ನಡೆಯುತ್ತಿದ್ದು, ಲಾಕ್‌ಡೌನ್ ಅವಧಿಯಲ್ಲಿ ಮಾಧ್ಯಮ ಮತ್ತು ಕಾನೂನು ಸೇವೆಗಳ ಮೆಲೆ ಹೊರಿಸಲಾಗಿರುವ ತೀವ್ರತರವಾದ ನಿರ್ಬಂಧಗಳಿಂದಾಗಿ ನಿರ್ದಿಷ್ಟ ಸಂಖ್ಯೆಯನ್ನು ಖಚಿತಪಡಿಸಿಕೊಳ್ಳಲು ಅಸಾಧ್ಯವಾಗಿದೆ.

ಈ ಪ್ರದೇಶಗಳ ಮುಸ್ಲಿಮರನ್ನು ಗುರಿಪಡಿಸಲಾಗುತ್ತಿದ್ದು, ಯುವ ನಾಯಕ ಉಮರ್ ಖಾಲಿದ್, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿದ್ಯಾರ್ಥಿ ನಾಯಕರಾದ ಮೀರಾನ್ ಹೈದರ್, ಗರ್ಭಿಣಿಯಾಗಿರುವ ಸಫೂರಾ ಝರ್ಗಾರ್ ಸಹಿತ ಯುವಕರ ಮೇಲೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಹೊರಿಸಲಾಗುತ್ತಿದೆ. ಅವರ ವಿರುದ್ಧ ಕರಾಳವಾದ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ (ಯುಎಪಿಎ) ಅನ್ವಯ ಕೇಸು ದಾಖಲಿಸಲಾಗಿದೆ. ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ)ನ ಎಡಪಂಥೀಯ ನಾಯಕಿ ಕನ್ವಲ್ಜಿತ್ ಕೌರ್ ಅವರ ಮನೆಗೆ ದಾಳಿ ನಡೆಸಿ ಅವರ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

ಭಿನ್ನಮತ, ದಮನಕ್ಕೆ ಕೇಂದ್ರ ಸರಕಾರದಿಂದ, ಕೋವಿಡ್- 19 ಅಸ್ತ್ರ ಬಳಕೆ

ಈ ಯದ್ವಾತದ್ವಾ ಬಂಧನಗಳನ್ನು ವಿರೋಧಿಸಿ ದಿಲ್ಲಿ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರು ದಿಲ್ಲಿ ಪೊಲೀಸ್ ಕಮೀಷನರ್‌ಗೆ ಪತ್ರ ಬರೆದಿದ್ದರು. ಆದರೆ ಪೊಲೀಸರು ಅವರ ಮೇಲೆಯೇ ಪಿಡುಗು ಹರಡುವಿಕೆ ಕುರಿತು ನೀಡಿದ ಹೇಳಿಕೆಯನ್ನು ಹಿಡಿದುಕೊಂಡು ರಾಷ್ಟ್ರದ್ರೋಹದ ಕೇಸು ದಾಖಲಿಸಿದ್ದಾರೆ.

ಕಾನೂನು ಸೇವೆಗಳಿಗೆ ಕತ್ತರಿ

ಪೊಲೀಸರು ತಮ್ಮ ಬಂಧನ ಸತ್ರವನ್ನು ಹೆಚ್ಚಿಸಿರುವಂತೆಯೇ ಲಾಕ್‌ಡೌನ್ ಅಡಿಯಲ್ಲಿ ಅನುಮತಿಸಲಾಗಿರುವ ಅಗತ್ಯ ಸೇವೆಗಳಲ್ಲಿ ಕಾನೂನು ಸೇವೆಗಳನ್ನು ಸೇರಿಸದೇ ಇರುವುದು ಗಮನಾರ್ಹ. ಇದರ ಅರ್ಥವೆಂದರೆ, ಆರೋಪಿತ ವ್ಯಕ್ತಿಗಳ ಮೂಲಭೂತ ಹಕ್ಕುಗಳ ದಮನವಾಗಿದೆ. ಎಲ್ಲಾ ರೀತಿಯ ಕಾನೂನು ಪ್ರಕ್ರಿಯೆಗಳನ್ನು ಉಲ್ಲಂಘಿಸಲಾಗುತ್ತಿದ್ದು, ಬಂಧಿತರ ಕುಟುಂಬಗಳಿಗೆ ಎಫ್‌ಐಆರ್ ಪ್ರತಿಗಳನ್ನೂ ನೀಡಲಾಗುತ್ತಿಲ್ಲ. ಮೇಲಾಗಿ ಅವರೆಲ್ಲಾ ಕೂಲಿ ಕಾರ್ಮಿಕರು ಅಥವಾ ಚಿಕ್ಕ ವ್ಯಾಪಾರಿ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ ಲಾಕ್‌ಡೌನ್‌ನಿಂದ ಆದಾಯ ಸಂಪೂರ್ಣ ನಿಂತುಹೋಗಿ, ಕಾನೂನು ಸೇವೆಯನ್ನೂ ಪಡೆಯಲಾಗದೆ ಇನ್ನಷ್ಟು ಭಯಭೀತರಾಗಿದ್ದಾರೆ.

ಪತ್ರಕರ್ತರು, ವಕೀಲರು ಮತ್ತು ಮಾನವಹಕ್ಕು ಹೋರಾಟಗಾರರಿಗೂ ಪೊಲೀಸ್ ಕಾರ್ಯಾಚರಣೆಗಳ ಬಲಿಪಶುಗಳನ್ನು ಭೇಟಿಯಾಗಲು ಅವಕಾಶವಿಲ್ಲವಾದುದರಿಂದ ಭಯ ಮತ್ತು ಗೌಪ್ಯದ ಪರದೆಯಿಂದೀಚೆಗೆ ಸ್ವಲ್ಪವೇ ಮಾಧ್ಯಮ ಸುದ್ದಿಗಳು ಹೊರಗೆ ಬರುತ್ತಿವೆ.

ಈ ಆರೋಗ್ಯ ತುರ್ತುಸ್ಥಿತಿಯಲ್ಲಿ ನ್ಯಾಯವೇ ಅಗತ್ಯ ಸೇವೆಯಾಗದೇ ಇರುವುದರಿಂದ, “ಕಾನೂನಿನ ಎದುರು ಸಮಾನತೆ“ಯ ತತ್ವವೇ ಲಾಕ್‌ಡೌನ್‌ನಲ್ಲಿದೆ.

ಕಾನೂನು ಪ್ರಕಾರ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡ 24 ಗಂಟೆಗಳ ಒಳಗಾಗಿ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸಬೇಕು. ಆದರೆ, ಇದನ್ನು ಗಾಳಿಗೆ ತೂರಿರುವ ಪೊಲೀಸರು, ನೇರವಾಗಿ ಜೈಲಿನ ಒಳಗೆಯೇ ಮ್ಯಾಜಿಸ್ಟ್ರೇಟರ ಮುಂದೆ ಹಾಜರುಪಡಿಸುತ್ತಿದ್ದಾರೆ. ಲಾಕ್‌ಡೌನ್ ನೆಪದಲ್ಲಿ ವಕೀಲರಿಗೂ ವಿಚಾರಣೆಯಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿದೆ. ಕೆಳಗಿನ ನ್ಯಾಯಾಲಯಗಳಲ್ಲಿ ವಿಡಿಯೋ ವಿಚಾರಣೆಯ ಸೌಲಭ್ಯವೂ ಇಲ್ಲವಾದುದರಿಂದ ಬಂಧಿತರು ಜಾಮೀನಿನ ಅವಕಾಶವಿಲ್ಲದೆ ಜೈಲುಪಾಲಾಗಬೇಕಾಗುತ್ತಿದೆ.

ಸರಕಾರವು ಈ ಪಿಡುಗಿನ ನೆಪದಲ್ಲಿ ಭಿನ್ನಮತವನ್ನು ಅಡಗಿಸಲು ಯತ್ನಿಸುತ್ತಿದೆ ಮತ್ತು ಭಾರತದ ಪೌರತ್ವ ಕಾಯಿದೆ ತಿದ್ದುಪಡಿ ವಿರುದ್ಧ  ಹೋರಾಟವೇ ದೇಶದ್ರೋಹದ ಕೆಲಸವೆಂಬ ಮಿಥ್ಯೆಯನ್ನು ಸೃಷ್ಟಿಸಲು ಯತ್ನಿಸುತ್ತಿದೆ. ಇದನ್ನು ಈಗಲೇ ನಿಲ್ಲಿಸದಿದ್ದಲ್ಲಿ ಪ್ರಜಾಪ್ರಭುತ್ವ ಮತ್ತು ಈ ಪಿಡುಗಿನ ವಿರುದ್ಧ ಹೋರಾಟಗಳೆರಡೂ ದಯನೀಯವಾಗಿ ದುರ್ಬಲಗೊಳ್ಳುವುದು ಖಂಡಿತ.


ಓದಿ: ಮೇ 16(ಇಂದು) ನ್ಯಾಯದ ದಿನ: ಡಾ. ಆನಂದ್ ತೇಲ್ತುಂಬ್ಡೆ ಪರ ದನಿ


ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...