Homeಮುಖಪುಟಉತ್ತರಾಖಂಡ ಹಿಮಪ್ರವಾಹ-ಇನ್ನೂ ಮುಂದುವರಿದ ರಕ್ಷಣಾ ಕಾರ್ಯ; 26 ಮೃತದೇಹ ಪತ್ತೆ

ಉತ್ತರಾಖಂಡ ಹಿಮಪ್ರವಾಹ-ಇನ್ನೂ ಮುಂದುವರಿದ ರಕ್ಷಣಾ ಕಾರ್ಯ; 26 ಮೃತದೇಹ ಪತ್ತೆ

- Advertisement -
- Advertisement -

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಪ್ರವಾಹದಲ್ಲಿ ನಾಪತ್ತೆಯಾದವರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಪ್ರವಾಹ ಉಂಟಾಗಿ 24 ಗಂಟೆಗಳು ಕಳೆದರೂ ಐಟಿಬಿಪಿ, ಎನ್‌ಡಿಆರ್‌ಎಫ್ ಮತ್ತು ಸೇನಾ ಸಿಬ್ಬಂದಿಗಳು ಇನ್ನೂ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕಾಣೆಯಾದವರಲ್ಲಿ ಹೆಚ್ಚಾಗಿ ವಿದ್ಯುತ್ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ವರದಿಯಾಗಿದೆ.

ರಾಜ್ಯ ಎಮೆಜೆನ್ಸಿ ಕಂಟ್ರೋಲ್ ರೂಮ್ ಪ್ರಕಾರ, ಎನ್‌ಟಿಪಿಸಿಯ ತಪೋವನ್ ವಿಷ್ಣುಗಡ್ ಜಲ ವಿದ್ಯುತ್ ಯೋಜನೆ ಮತ್ತು ಖಾಸಗಿ ಒಡೆತನದ ಋಷಿಗಂಗಾ ವಿದ್ಯುತ್ ಯೋಜನೆಯ ಯೋಜನಾ ಸ್ಥಳಗಳಲ್ಲಿ ಈವರೆಗೆ 26 ಮೃತ ಶರೀರಗಳು ಪತ್ತೆಯಾಗಿದೆ.

ಎನ್‌ಟಿಪಿಸಿಯ ತಪೋವನ್ ಸ್ಥಳದಲ್ಲಿ 1,900 ಮೀಟರ್ ಉದ್ದದ ಸುರಂಗದ ಸುತ್ತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಅಲ್ಲಿ ಕನಿಷ್ಠ 35 ಜನರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉತ್ತರಾಖಂಡ: ಹಿಮನದಿಯಲ್ಲಿ ಭಾರಿ ಹಿಮ ಪ್ರವಾಹ, 150 ಜನರು ನಾಪತ್ತೆ

“ಜನರು ಸುರಂಗದ ಒಳಗೆ ಇನ್ನೂ ಜೀವಂತವಾಗಿರುವ ಎಲ್ಲ ಅವಕಾಶಗಳಿವೆ. ಇದು ಉದ್ದವಾದ ಸುರಂಗವಾಗಿರುವುದರಿಂದ, ಸಾಕಷ್ಟು ಆಮ್ಲಜನಕವು ಅಲ್ಲಿ ಇರುವ ಸಾಧ್ಯತೆಯಿದೆ. ಈ ಸುರಂಗದ ಒಂದು ಸಣ್ಣ ಮಾರ್ಗ ಕಂಡುಕೊಂಡರೂ, ನಾವು ಕೊಳವೆಗಳ ಮೂಲಕ ಸುರಂಗಕ್ಕೆ ಆಮ್ಲಜನಕವನ್ನು ತುಂಬುತ್ತೇವೆ” ಎಂದು ಐಟಿಬಿಪಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಈಗಾಗಲೆ ತಪೋವನ್ ಸುರಂಗದಲ್ಲಿ 130 ಮೀಟರ್‌ವರೆಗೂ ತಲುಪಿದ್ದೇವೆ ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್‌ ತಿಳಿಸಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡ ಹಿಮ ಪ್ರವಾಹ: ಸುರಂಗದಲ್ಲಿ ಸಿಕ್ಕಿಬಿದ್ದ 12 ಜನರ ರಕ್ಷಣೆ

“ನಿನ್ನೆ ತನಕ ನಾವು ಸುರಂಗದ 80 ಮೀಟರ್ ದೂರ ಹೋಗಿದ್ದೇವೆ. ಸೋಮವಾರ ಸಂಜೆ ವೇಳೆಗೆ ಇನ್ನೂ 50 ಮೀಟರ್ ದೂರ ತಲುಪಿದ್ದೇವೆ. ಇಡೀ ರಾತ್ರಿ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಲ್ಲಿ ಬಹಳಷ್ಟು ಕೆಸರು ತುಂಬಿದ್ದು ಅದನ್ನು ತೆಗೆಯಬೇಕಾಗಿದೆ. ಸಶಸ್ತ್ರ ಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಎಲ್ಲರೂ ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ” ಎಂದು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸುತ್ತಿರುವ ಭಾರತೀಯ ರಿಸರ್ವ್ ಬೆಟಾಲಿಯನ್‌ನ ಕಮಾಂಡೆಂಟ್ ಮಂಜುನಾಥ್ ಎಸ್ ಆರ್ ಹೇಳಿಕೆಯನ್ನು ಪತ್ರಿಗೆ ಉಲ್ಲೇಖಿಸಿದೆ.

ತಪೋವನ್‌‌ ಎನ್‌ಟಿಪಿಸಿ ಯೋಜನಾ ಸ್ಥಳದಲ್ಲಿ ಕೆಲಸ ಮಾಡುವ ಹೆಚ್ಚಿನ ಕಾರ್ಮಿಕರನ್ನು ಖಾಸಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ವಿಪತ್ತು ಪರಿಹಾರ ಅಧಿಕಾರಿ ತಿಳಿಸಿದ್ದಾರೆ. “ಕಂಪನಿಯು ನಮಗೆ ನೀಡಿರುವ ಮಾಹಿತಿಯ ಆಧಾರದಲ್ಲಿ ಮೇಲೆ, ಸುರಂಗದಲ್ಲಿ ಸುಮಾರು 35 ಜನರು ಸಿಲುಕಿಕೊಂಡಿದ್ದಾರೆ. ಇದಲ್ಲದೆ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದ ಜನರು ಸುರಂಗದಲ್ಲಿ ಸಿಲುಕಿಕೊಂಡಿರಬಹುದು” ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...