Homeಮುಖಪುಟಉತ್ತರಾಖಂಡ ಹಿಮಪ್ರವಾಹ-ಇನ್ನೂ ಮುಂದುವರಿದ ರಕ್ಷಣಾ ಕಾರ್ಯ; 26 ಮೃತದೇಹ ಪತ್ತೆ

ಉತ್ತರಾಖಂಡ ಹಿಮಪ್ರವಾಹ-ಇನ್ನೂ ಮುಂದುವರಿದ ರಕ್ಷಣಾ ಕಾರ್ಯ; 26 ಮೃತದೇಹ ಪತ್ತೆ

- Advertisement -
- Advertisement -

ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಹಿಮ ಪ್ರವಾಹದಲ್ಲಿ ನಾಪತ್ತೆಯಾದವರ ಸಂಖ್ಯೆ 170 ಕ್ಕೆ ಏರಿಕೆಯಾಗಿದೆ. ಪ್ರವಾಹ ಉಂಟಾಗಿ 24 ಗಂಟೆಗಳು ಕಳೆದರೂ ಐಟಿಬಿಪಿ, ಎನ್‌ಡಿಆರ್‌ಎಫ್ ಮತ್ತು ಸೇನಾ ಸಿಬ್ಬಂದಿಗಳು ಇನ್ನೂ ರಕ್ಷಣಾಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕಾಣೆಯಾದವರಲ್ಲಿ ಹೆಚ್ಚಾಗಿ ವಿದ್ಯುತ್ ಯೋಜನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ವರದಿಯಾಗಿದೆ.

ರಾಜ್ಯ ಎಮೆಜೆನ್ಸಿ ಕಂಟ್ರೋಲ್ ರೂಮ್ ಪ್ರಕಾರ, ಎನ್‌ಟಿಪಿಸಿಯ ತಪೋವನ್ ವಿಷ್ಣುಗಡ್ ಜಲ ವಿದ್ಯುತ್ ಯೋಜನೆ ಮತ್ತು ಖಾಸಗಿ ಒಡೆತನದ ಋಷಿಗಂಗಾ ವಿದ್ಯುತ್ ಯೋಜನೆಯ ಯೋಜನಾ ಸ್ಥಳಗಳಲ್ಲಿ ಈವರೆಗೆ 26 ಮೃತ ಶರೀರಗಳು ಪತ್ತೆಯಾಗಿದೆ.

ಎನ್‌ಟಿಪಿಸಿಯ ತಪೋವನ್ ಸ್ಥಳದಲ್ಲಿ 1,900 ಮೀಟರ್ ಉದ್ದದ ಸುರಂಗದ ಸುತ್ತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ಅಲ್ಲಿ ಕನಿಷ್ಠ 35 ಜನರು ಸಿಕ್ಕಿಬಿದ್ದಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಉತ್ತರಾಖಂಡ: ಹಿಮನದಿಯಲ್ಲಿ ಭಾರಿ ಹಿಮ ಪ್ರವಾಹ, 150 ಜನರು ನಾಪತ್ತೆ

“ಜನರು ಸುರಂಗದ ಒಳಗೆ ಇನ್ನೂ ಜೀವಂತವಾಗಿರುವ ಎಲ್ಲ ಅವಕಾಶಗಳಿವೆ. ಇದು ಉದ್ದವಾದ ಸುರಂಗವಾಗಿರುವುದರಿಂದ, ಸಾಕಷ್ಟು ಆಮ್ಲಜನಕವು ಅಲ್ಲಿ ಇರುವ ಸಾಧ್ಯತೆಯಿದೆ. ಈ ಸುರಂಗದ ಒಂದು ಸಣ್ಣ ಮಾರ್ಗ ಕಂಡುಕೊಂಡರೂ, ನಾವು ಕೊಳವೆಗಳ ಮೂಲಕ ಸುರಂಗಕ್ಕೆ ಆಮ್ಲಜನಕವನ್ನು ತುಂಬುತ್ತೇವೆ” ಎಂದು ಐಟಿಬಿಪಿ ಅಧಿಕಾರಿಯೊಬ್ಬರ ಹೇಳಿಕೆಯನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌‌ಪ್ರೆಸ್ ವರದಿ ಮಾಡಿದೆ.

ಈಗಾಗಲೆ ತಪೋವನ್ ಸುರಂಗದಲ್ಲಿ 130 ಮೀಟರ್‌ವರೆಗೂ ತಲುಪಿದ್ದೇವೆ ಎಂದು ಉತ್ತರಾಖಂಡದ ಡಿಜಿಪಿ ಅಶೋಕ್ ಕುಮಾರ್‌ ತಿಳಿಸಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಉತ್ತರಾಖಂಡ ಹಿಮ ಪ್ರವಾಹ: ಸುರಂಗದಲ್ಲಿ ಸಿಕ್ಕಿಬಿದ್ದ 12 ಜನರ ರಕ್ಷಣೆ

“ನಿನ್ನೆ ತನಕ ನಾವು ಸುರಂಗದ 80 ಮೀಟರ್ ದೂರ ಹೋಗಿದ್ದೇವೆ. ಸೋಮವಾರ ಸಂಜೆ ವೇಳೆಗೆ ಇನ್ನೂ 50 ಮೀಟರ್ ದೂರ ತಲುಪಿದ್ದೇವೆ. ಇಡೀ ರಾತ್ರಿ ಕಾರ್ಯಾಚರಣೆ ಮುಂದುವರಿಯುತ್ತಿದೆ. ಅಲ್ಲಿ ಬಹಳಷ್ಟು ಕೆಸರು ತುಂಬಿದ್ದು ಅದನ್ನು ತೆಗೆಯಬೇಕಾಗಿದೆ. ಸಶಸ್ತ್ರ ಪಡೆ, ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಪೊಲೀಸರು ಎಲ್ಲರೂ ಸಮನ್ವಯದಿಂದ ಕೆಲಸ ಮಾಡುತ್ತಿದ್ದಾರೆ” ಎಂದು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಸಂಘಟಿಸುತ್ತಿರುವ ಭಾರತೀಯ ರಿಸರ್ವ್ ಬೆಟಾಲಿಯನ್‌ನ ಕಮಾಂಡೆಂಟ್ ಮಂಜುನಾಥ್ ಎಸ್ ಆರ್ ಹೇಳಿಕೆಯನ್ನು ಪತ್ರಿಗೆ ಉಲ್ಲೇಖಿಸಿದೆ.

ತಪೋವನ್‌‌ ಎನ್‌ಟಿಪಿಸಿ ಯೋಜನಾ ಸ್ಥಳದಲ್ಲಿ ಕೆಲಸ ಮಾಡುವ ಹೆಚ್ಚಿನ ಕಾರ್ಮಿಕರನ್ನು ಖಾಸಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜ್ಯ ವಿಪತ್ತು ಪರಿಹಾರ ಅಧಿಕಾರಿ ತಿಳಿಸಿದ್ದಾರೆ. “ಕಂಪನಿಯು ನಮಗೆ ನೀಡಿರುವ ಮಾಹಿತಿಯ ಆಧಾರದಲ್ಲಿ ಮೇಲೆ, ಸುರಂಗದಲ್ಲಿ ಸುಮಾರು 35 ಜನರು ಸಿಲುಕಿಕೊಂಡಿದ್ದಾರೆ. ಇದಲ್ಲದೆ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದ ಜನರು ಸುರಂಗದಲ್ಲಿ ಸಿಲುಕಿಕೊಂಡಿರಬಹುದು” ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕನ ಮುಖಕ್ಕೆ ಮಸಿ ಬಳಿದವರಿಗೆ 1 ಲಕ್ಷ ಬಹುಮಾನ ಘೋಷಿಸಿದ ಕಾಂಗ್ರೆಸ್ ನಾಯಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...