Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...