Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...