Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...