Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...