Homeದಲಿತ್ ಫೈಲ್ಸ್ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

ದಲಿತರು ಕುಡಿಯುವ ನೀರಿನಲ್ಲಿ ಮಲ ಬೆರೆಸಿದ ಪ್ರಕರಣ: ಸಂತ್ರಸ್ತರಿಗೆ ಪೊಲೀಸರಿಂದ ಬೆದರಿಕೆ- ಪ.ರಂಜಿತ್ ಆರೋಪ

- Advertisement -
- Advertisement -

“ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ದುಷ್ಕರ್ಮಿಗಳು ಮಲವನ್ನು ಬೆರೆಸಿದ್ದಾರೆ ಎಂದು ಕಳೆದ ತಿಂಗಳು ದೂರು ನೀಡಿದ್ದ ವೆಂಗವಾಯಲ್ ಗ್ರಾಮಸ್ಥರಿಗೆ ಪುದುಕ್ಕೋಟೈ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ” ಎಂದು ಖ್ಯಾತ ಸಿನಿಮಾ ನಿರ್ದೇಶಕ ಪ.ರಂಜಿತ್‌ ಶುಕ್ರವಾರ ಆರೋಪಿಸಿದ್ದಾರೆ.

“ಈ ಅಪರಾಧ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಪೊಲೀಸರು ಒತ್ತಾಯಿಸುತ್ತಿದ್ದಾರೆ. ಈ ಅಪರಾಧದ ಹಿಂದೆ ಸಂತ್ರಸ್ತರೇ ಇರುವುದಾಗಿ ಪೊಲೀಸರು ಆರೋಪಿಸುತ್ತಿದ್ದಾರೆ” ಎಂದು ರಂಜಿತ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಮನಿತ ಸಮುದಾಯಗಳ ಪರವಾಗಿ ಸಿನಿಮಾಗಳನ್ನು ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುವ ಮೂಲಕ ದಲಿತ ಅಸ್ಮಿತೆಗೆ ಒತ್ತು ನೀಡಿರುವ ಅಂಬೇಡ್ಕರ್‌ವಾದಿ ರಂಜಿತ್‌, “ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ” ಎಂದಿದ್ದಾರೆ.

“ಸಾಮಾಜಿಕ ಅನ್ಯಾಯ ಇನ್ನೂ ಮುಂದುವರಿದಿದೆ. ಪುದುಕ್ಕೋಟೈನ ವೆಂಗವಯಲ್ ಗ್ರಾಮದಲ್ಲಿ ಮನುಷ್ಯರ ಮಲವನ್ನು ಬೆರೆಸಿದ ಪ್ರಕರಣದಲ್ಲಿ ದುಷ್ಕರ್ಮಿಗಳನ್ನು ಗುರುತಿಸಲು ಪ್ರಯತ್ನಿಸದೆ ತಮಿಳುನಾಡು ಪೊಲೀಸ್ ಇಲಾಖೆಯು ತನಿಖೆಯ ಹೆಸರಿನಲ್ಲಿ ಸಂತ್ರಸ್ತರನ್ನೇ ಟಾರ್ಗೆಟ್ ಮಾಡುತ್ತಿದೆ. ಈ ಕೃತ್ಯವನ್ನು ಒಪ್ಪಿಕೊಳ್ಳುವಂತೆ ಸಂತ್ರಸ್ತರಿಗೆ ಬೆದರಿಕೆ ಹಾಕಲಾಗುತ್ತಿದೆ. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

“ದಲಿತರೇ ಹೆಚ್ಚಾಗಿರುವ ಗ್ರಾಮದ ನಿವಾಸಿಗಳನ್ನು ಭೇಟಿಯಾಗಿ ಘಟನೆಯ ಹಿನ್ನೆಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಶಾಸಕರು ಮತ್ತು ಆದಿ ದ್ರಾವಿಡ ಕಲ್ಯಾಣ ಸಚಿವರಿಗೆ ಧೈರ್ಯವಿಲ್ಲ” ಎಂದು ಅವರು ಟೀಕಿಸಿದ್ದಾರೆ.

ಕಳೆದ ಡಿಸೆಂಬರ್‌ನಲ್ಲಿ ಕೆಲವು ಮಕ್ಕಳು ಅಸ್ವಸ್ಥತೆ ಅನುಭವಿಸಿದ ನಂತರ ಅನ್ನವಾಸಲ್ ಬ್ಲಾಕ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳನ್ನು ಪರೀಕ್ಷಿಸಿದ ವೈದ್ಯರು ಗ್ರಾಮಕ್ಕೆ ಪೂರೈಕೆಯಾಗುವ ನೀರು ಕಲುಷಿತವಾಗಿದೆಯೇ ಎಂದು ಪರಿಶೀಲಿಸುವಂತೆ ಅವರ ಪೋಷಕರಿಗೆ ತಿಳಿಸಿದರು. ಆಗ ನೀರಿನಲ್ಲಿ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಟ್ಯಾಂಕ್‌ ಪರಿಶೀಲಿಸಿದಾಗ ಅದರಲ್ಲಿ ಮಲಮೂತ್ರ ಪತ್ತೆಯಾಗಿತ್ತು.

ಈ ಘಟನೆಯು ಆಕ್ರೋಶಕ್ಕೆ ಕಾರಣವಾಯಿತು. ಜಿಲ್ಲಾಧಿಕಾರಿ ಕವಿತಾ ರಾಮು ಮತ್ತು ಎಸ್ಪಿ ವಂದಿತಾ ಪಾಂಡೆ ಅವರು ಪ್ರಕರಣದ ಕುರಿತು ಗಮನ ಹರಿಸಿದ ನಂತರ ಐಪಿಸಿ ಸೆಕ್ಷನ್ 277 (ಯಾವುದೇ ಸಾರ್ವಜನಿಕ ಟ್ಯಾಂಕ್‌ ಅಥವಾ ಜಲಾಶಯದ ನೀರನ್ನು ಕಲುಷಿತಗೊಳಿಸುವುದು), 328 (ಅಪರಾಧದ ಉದ್ದೇಶದೊಂದಿಗೆ ವಿಷವನ್ನು ಬಳಸುವ ಮೂಲಕ ನೋವುಂಟು ಮಾಡುವುದು) ಮತ್ತು ಎಸ್‌ಸಿ/ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಕಿಡಿಗೇಡಿಗಳನ್ನು ಶೀಘ್ರದಲ್ಲೇ ಹಿಡಿಯಲಾಗುವುದು ಎಂದು ಅಧಿಕಾರಿಗಳು ಗ್ರಾಮಸ್ಥರಿಗೆ ತಿಳಿಸಿದ್ದರು.

ಇದನ್ನೂ ಓದಿರಿ: ಭಾರತದ ವಿಜ್ಞಾನ ಕ್ಷೇತ್ರದಲ್ಲಿ ದಲಿತರಿಗಿಲ್ಲ ಹೆಚ್ಚಿನ ಪ್ರಾತಿನಿಧ್ಯ: ‘ನೇಚರ್‌’ ವರದಿ

ಎರಡು ದಿನಗಳ ಹಿಂದೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಸದನದಲ್ಲಿ ಮಾತನಾಡುತ್ತಾ, “ರಾಜ್ಯವು ಕೋಮು ವಿಭಜಕ ಮತ್ತು ಸಮಾಜ ವಿರೋಧಿ ಶಕ್ತಿಗಳನ್ನು ಗಟ್ಟಿಯಾಗಿ ಎದುರಿಸಲಿದೆ” ಎಂದು ಹೇಳಿದ್ದರು. ಘಟನೆಯ ಕುರಿತು ಶಾಸಕರು ವಿಶೇಷ ಗಮನ ಸೆಳೆದಾಗ ಪ್ರತಿಕ್ರಿಯಿಸಿದ ಸ್ಟಾಲಿನ್, “ರಾಜ್ಯದಲ್ಲಿ ಜಾತಿ ಆಧಾರಿತ ತಾರತಮ್ಯ ಮತ್ತು ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ ಎಂಬುದನ್ನು ಈ ಘಟನೆ ಸೂಚಿಸುತ್ತದೆ. ವಿಶೇಷ ತಂಡವು ಪ್ರಕರಣದ ತನಿಖೆ ನಡೆಸುತ್ತಿದೆ. ಇದುವರೆಗೆ 70 ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ” ಎಂದು ಹೇಳಿದ್ದರು.

“7 ಲಕ್ಷ ರೂ. ವೆಚ್ಚದಲ್ಲಿ ಹೊಸ ಓವರ್‌ಹೆಡ್‌ ಟ್ಯಾಂಕ್‌ ನಿರ್ಮಿಸಲು ಕ್ರಮಕೈಗೊಳ್ಳಲಾಗಿದೆ. 2 ಲಕ್ಷ ರೂ.ವೆಚ್ಚದಲ್ಲಿ ಗ್ರಾಮದ ಎಲ್ಲಾ 32 ಮನೆಗಳಿಗೆ ಹೊಸ ಕುಡಿಯುವ ನೀರಿನ ಪೈಪ್ ಸಂಪರ್ಕವನ್ನು ನೀಡಲಾಗುವುದು. ನೈರ್ಮಲ್ಯ ನಿರೀಕ್ಷಕರ ಮೇಲ್ವಿಚಾರಣೆಯಲ್ಲಿ ದಿನಕ್ಕೆ ಎರಡು ಬಾರಿ ಟ್ರಕ್‌ಗಳನ್ನು ಬಳಸಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ” ಎಂದು ಮುಖ್ಯಮಂತ್ರಿ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...