Homeಮುಖಪುಟಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

- Advertisement -
- Advertisement -

ಈ ರೈತ ಚಳವಳಿ ಮೂರು ಕೃಷಿ ಕಾಯಿದೆಗಳ ರದ್ಧತಿಗಷ್ಟೇ ಸೀಮಿತವಲ್ಲ. ಇದು ಸಂಸದೀಯ, ಪ್ರಜಾಸತ್ತಾತ್ಮಕ ಸಂವಾದವನ್ನು ಪುನರ್‌ ಸ್ಥಾಪಿಸುವ ಚಳವಳಿಯಾಗುತ್ತಿದೆ.

ಗಣ ರಾಜ್ಯ ಸ್ಥಾಪನೆಯಾದಾಗ ರಾಜಶಾಹಿ, ಪಾಳೆಗಾರಿ ಆಳುವಿಕೆಯಿಂದ ಮುಕ್ತವಾಗಿ ನಮ್ಮನ್ನು ಆಳುವವರನ್ನು ನಾವೇ ಆರಿಸುವ ಬಡವ- ಬಲ್ಲಿದ; ದಲಿತ, ಆದಿವಾಸಿ, ಮಹಿಳೆ; ಭೂಮಿ ಹೊಂದಿದವನು- ಭೂರಹಿತ ; ಹೀಗೆ ಎಲ್ಲರೂ ಈ ಆಯ್ಕೆಯ ಯಜ್ಞದಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಲುದಾರರಾದರು. ಈ ರೋಮಾಂಚನವೇ ಭಾರತದ ಪ್ರಜಾಸತ್ತೆಯನ್ನು ಇಂದೂ ಉಳಿಸಿದೆ.

ಆದರೆ ಕಳೆದ 70 ವರ್ಷಗಳಲ್ಲಿ ಜನತೆಗೆ ಅನುಭವಕ್ಕೆ ಬಂದ ಸಂಗತಿ ಎಂದರೆ ಆಳುವವರನ್ನೇನೋ ಬದಲಾಯಿಸಬಹುದು. ಆದರೆ ಆಡಳಿತವನ್ನು ನಿರ್ದೇಶಿಸುವುದು ಹೇಗೆ? ಆಳುವವರನ್ನು ನಿಜಾರ್ಥದ ಜನಸೇವಕರನ್ನಾಗಿ ಮಾಡುವುದು ಹೇಗೆ?
ಆಡಳಿತದ ಪ್ರಕ್ರಿಯೆಯಲ್ಲಿ ಜನರ ಅಭಿಪ್ರಾಯಕ್ಕೆ ಮನ್ನಣೆ ದೊರಕುವುದು ಹೇಗೆ? ಸರಕಾರವೊಂದು ಜನರ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಈಡೇರಿಸುವ ಯಂತ್ರವಾಗುವುದು ಹೇಗೆ?

ಈ ವೈಫಲ್ಯವೇ ತೀವ್ರ ಹತಾಶೆ ಮತ್ತು ಸಿನಿಕತನವನ್ನು ಹುಟ್ಟು ಹಾಕಿದೆ. “ಜಾತಿ, ಹಣ, ಹೆಂಡ, ಧರ್ಮ ರಾಜಕಾರಣದ ಪ್ರಭಾವಕ್ಕೆ ಒಳಗಾಗಿ ಮತ ಹಾಕುತ್ತಾರೆ. ಗೆದ್ದ ಮೇಲೆ ಈ ಜನ ಪ್ರತಿನಿಧಿಗಳನ್ನು ಹಿಡಿಯಲೂ ಸಾಧ್ಯವಾಗುವುದಿಲ್ಲ; ಕಡಿವಾಣ ಹಾಕಲೂ ಸಾಧ್ಯವಾಗುತ್ತಿಲ್ಲ. ಏನಿದ್ದರೂ ಮುಂದಿನ ಚುನಾವಣೆಗೆ ಕಾಯಬೇಕು. ಆಗಲೂ ಅಷ್ಟೇ. ಇವನ ಬದಲು ಇವನ ತದ್ರೂಪಿ ಅದೇ ಸ್ಥಾನವನ್ನು ಆಕ್ರಮಿಸುತ್ತಾನೆ.”
ಈ ಗೋಳು ತೀವ್ರವಾಗಿದೆ.

ಚುನಾವಣಾ ನಂತರದ ಆಡಳಿತ ಪ್ರಕ್ರಿಯೆಯಲ್ಲಿ – ಅಂದರೆ, ಸರಕಾರದ ಪ್ರತೀ ಹೆಜ್ಜೆ ಗತಿ, ನಿರ್ಧಾರಗಳು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ನಾವು ಪ್ರತಿಕ್ರಿಯಿಸುತ್ತಲೇ ಇಲ್ಲ.

ಈ ಜಡತ್ವವೇ ಸರಕಾರಗಳು ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕಾರಣವಾಗಿದೆ. ಬಹುತೇಕ ಎಲ್ಲಾ ಪಕ್ಷಗಳೂ ಒಂದೇ ಮೂಸೆಯಲ್ಲಿ ತಯಾರಾದ ವಿವಿಧ ಬಣ್ಣಗಳ ರಾಕ್ಷಸ ಗೊಂಬೆಗಳಂತಿವೆ.

ಭಾಜಪ ಕಾರ್ಪೋರೇಟ್‌ ಮತ್ತು ಕೋಮು ರಾಜಕಾರಣದ ಪ್ರಳಯಾಂತಕ ಮಿಶ್ರಣದ ಮೂಲಕ ಸಂವಿಧಾನ ಮತ್ತು ಅದರ ಆಶಯಗಳನ್ನು ನಿರ್ಲಜ್ಜ, ನಿರ್ಲಕ್ಷ್ಯದ ಮೂಲಕ ಹೊಸಕಿ ಹಾಕುತ್ತಿದ್ದರೆ, ಪ್ರಾದೇಶಿಕ ಪಕ್ಷಗಳು ಪಾಳೇಗಾರಿಕೆ ಗುಣ ಮತ್ತು ಜಾಗತೀಕರಣದ ಆರ್ಥಿಕತೆಯ ದಳ್ಳಾಳಿ ವರ್ತನೆಯನ್ನು ಕಣಕಣದಲ್ಲಿ ತುಂಬಿಕೊಂಡಿವೆ.

ಇಂಥಾ ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

ಟ್ರಾಕ್ಟರ್‌ ದೊಡ್ಡ ರೈತರ ಸಂಕೇತವಾಗಿತ್ತು; ನಿಜ. ಆದರೆ ಇಂದು ಅದು ಹೋರಾಟದ ಮುಂಚೂಣಿಯಲ್ಲಿರುವ ರೈತರ ಸಂಕೇತವಾಗಿದೆ.

ಈ ಹಿಂದೆ ಕೋಟೆಯ ದಿಡ್ಡಿ ಬಾಗಿಲು ಮುರಿಯಲು ಆನೆಗಳನ್ನು ಬಳಸುವುದಿತ್ತು. ಆದಾದ ಮೇಲೆ ಕಾಲಾಳುಗಳು ಯುದ್ಧ ಮಾಡುತ್ತಿದ್ದರು.

ಈ ಬಗ್ಗೆ ಬರುವ ಟೀಕೆ , ಗಾಸಿಪ್ಪುಗಳು ಆಳುವವರು ಎದೆಗುಂದಿರುವುದರ ಸಂಕೇತ. ಈ ಹೋರಾಟದಲ್ಲಿ ಗೆಲುವು ನಿಶ್ಚಿತ. ಯಾಕೆಂದರೆ ಮೂಲತಃ ಸರಕಾರ ಆಳದಲ್ಲಿ ಜನಸಾಮಾನ್ಯರ, ರೈತರ ಬಾಳುವೆಯನ್ನು ಛಿದ್ರಗೊಳಿಸಿ ತನ್ನ ಕಾರ್ಪೋರೇಟ್‌ ಗೆಣೆಕಾರರ ವಹಿವಾಟಿಗೆ ಅನುಕೂಲ ಮಾಡಿಕೊಡುತ್ತಿರುವುದು ಪ್ರತೀ ಆಡಳಿತಾತ್ಮಕ ನಿರ್ಧಾರಗಳಲ್ಲಿ ಕಾಣುತ್ತಿದೆ.

ಈ ಹೋರಾಟದ ಗೆಲುವು ಇಷ್ಟು ಬಲವಿಲ್ಲದ ಸಮುದಾಯಗಳ ಹೋರಾಟಗಳಿಗೆ ನಾಂದಿಯಾಗಲಿ
ಸಂವಿಧಾನದ ಪೀಠಿಕೆಯನ್ನು ಮತ್ತು ನಿರ್ದೇಶಕ ತತ್ವಗಳನ್ನು ಮೋದಿ ಸರಕಾರದ ಎದುರು ಇಟ್ಟರೆ ಒಂದೊಂದು ಹೆಜ್ಜೆಯಲ್ಲೂ ಈ ಸರಕಾರದ ಸಂವಿಧಾನ ವಿರೋಧಿ ನಡೆ ನಿಚ್ಚಳವಾಗಿ ತೋರುತ್ತದೆ. ಸಂವಿಧಾನ ವಿರೋಧೀ ಆಂದರೆ ಜನರ ಆಶೋತ್ತರಗಳ ವಿರೋಧಿ. ಅಂದರೆ ಜನ ವಿರೋಧಿ.

ಆದ್ದರಿಂದಲೇ ಈ ರೈತ ಹೋರಾಟ ನಮ್ಮ ನೆಲಮೂಲದ ಎಲ್ಲರ ಆಶೋತ್ತರಗಳ ಪ್ರತಿರೋಧದ ಪ್ರತಿರೂಪ. ಸಂವಿಧಾನವೇ ಇಲ್ಲಿ ಜಂಗಮ ರೂಪ ತಾಳಿದೆ.

  • ಕೆ.ಪಿ ಸುರೇಶ್, ಚಿಂತಕರು, ಬರಹಗಾರರು.

ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...