Homeಮುಖಪುಟಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

- Advertisement -
- Advertisement -

ಈ ರೈತ ಚಳವಳಿ ಮೂರು ಕೃಷಿ ಕಾಯಿದೆಗಳ ರದ್ಧತಿಗಷ್ಟೇ ಸೀಮಿತವಲ್ಲ. ಇದು ಸಂಸದೀಯ, ಪ್ರಜಾಸತ್ತಾತ್ಮಕ ಸಂವಾದವನ್ನು ಪುನರ್‌ ಸ್ಥಾಪಿಸುವ ಚಳವಳಿಯಾಗುತ್ತಿದೆ.

ಗಣ ರಾಜ್ಯ ಸ್ಥಾಪನೆಯಾದಾಗ ರಾಜಶಾಹಿ, ಪಾಳೆಗಾರಿ ಆಳುವಿಕೆಯಿಂದ ಮುಕ್ತವಾಗಿ ನಮ್ಮನ್ನು ಆಳುವವರನ್ನು ನಾವೇ ಆರಿಸುವ ಬಡವ- ಬಲ್ಲಿದ; ದಲಿತ, ಆದಿವಾಸಿ, ಮಹಿಳೆ; ಭೂಮಿ ಹೊಂದಿದವನು- ಭೂರಹಿತ ; ಹೀಗೆ ಎಲ್ಲರೂ ಈ ಆಯ್ಕೆಯ ಯಜ್ಞದಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಲುದಾರರಾದರು. ಈ ರೋಮಾಂಚನವೇ ಭಾರತದ ಪ್ರಜಾಸತ್ತೆಯನ್ನು ಇಂದೂ ಉಳಿಸಿದೆ.

ಆದರೆ ಕಳೆದ 70 ವರ್ಷಗಳಲ್ಲಿ ಜನತೆಗೆ ಅನುಭವಕ್ಕೆ ಬಂದ ಸಂಗತಿ ಎಂದರೆ ಆಳುವವರನ್ನೇನೋ ಬದಲಾಯಿಸಬಹುದು. ಆದರೆ ಆಡಳಿತವನ್ನು ನಿರ್ದೇಶಿಸುವುದು ಹೇಗೆ? ಆಳುವವರನ್ನು ನಿಜಾರ್ಥದ ಜನಸೇವಕರನ್ನಾಗಿ ಮಾಡುವುದು ಹೇಗೆ?
ಆಡಳಿತದ ಪ್ರಕ್ರಿಯೆಯಲ್ಲಿ ಜನರ ಅಭಿಪ್ರಾಯಕ್ಕೆ ಮನ್ನಣೆ ದೊರಕುವುದು ಹೇಗೆ? ಸರಕಾರವೊಂದು ಜನರ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಈಡೇರಿಸುವ ಯಂತ್ರವಾಗುವುದು ಹೇಗೆ?

ಈ ವೈಫಲ್ಯವೇ ತೀವ್ರ ಹತಾಶೆ ಮತ್ತು ಸಿನಿಕತನವನ್ನು ಹುಟ್ಟು ಹಾಕಿದೆ. “ಜಾತಿ, ಹಣ, ಹೆಂಡ, ಧರ್ಮ ರಾಜಕಾರಣದ ಪ್ರಭಾವಕ್ಕೆ ಒಳಗಾಗಿ ಮತ ಹಾಕುತ್ತಾರೆ. ಗೆದ್ದ ಮೇಲೆ ಈ ಜನ ಪ್ರತಿನಿಧಿಗಳನ್ನು ಹಿಡಿಯಲೂ ಸಾಧ್ಯವಾಗುವುದಿಲ್ಲ; ಕಡಿವಾಣ ಹಾಕಲೂ ಸಾಧ್ಯವಾಗುತ್ತಿಲ್ಲ. ಏನಿದ್ದರೂ ಮುಂದಿನ ಚುನಾವಣೆಗೆ ಕಾಯಬೇಕು. ಆಗಲೂ ಅಷ್ಟೇ. ಇವನ ಬದಲು ಇವನ ತದ್ರೂಪಿ ಅದೇ ಸ್ಥಾನವನ್ನು ಆಕ್ರಮಿಸುತ್ತಾನೆ.”
ಈ ಗೋಳು ತೀವ್ರವಾಗಿದೆ.

ಚುನಾವಣಾ ನಂತರದ ಆಡಳಿತ ಪ್ರಕ್ರಿಯೆಯಲ್ಲಿ – ಅಂದರೆ, ಸರಕಾರದ ಪ್ರತೀ ಹೆಜ್ಜೆ ಗತಿ, ನಿರ್ಧಾರಗಳು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ನಾವು ಪ್ರತಿಕ್ರಿಯಿಸುತ್ತಲೇ ಇಲ್ಲ.

ಈ ಜಡತ್ವವೇ ಸರಕಾರಗಳು ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕಾರಣವಾಗಿದೆ. ಬಹುತೇಕ ಎಲ್ಲಾ ಪಕ್ಷಗಳೂ ಒಂದೇ ಮೂಸೆಯಲ್ಲಿ ತಯಾರಾದ ವಿವಿಧ ಬಣ್ಣಗಳ ರಾಕ್ಷಸ ಗೊಂಬೆಗಳಂತಿವೆ.

ಭಾಜಪ ಕಾರ್ಪೋರೇಟ್‌ ಮತ್ತು ಕೋಮು ರಾಜಕಾರಣದ ಪ್ರಳಯಾಂತಕ ಮಿಶ್ರಣದ ಮೂಲಕ ಸಂವಿಧಾನ ಮತ್ತು ಅದರ ಆಶಯಗಳನ್ನು ನಿರ್ಲಜ್ಜ, ನಿರ್ಲಕ್ಷ್ಯದ ಮೂಲಕ ಹೊಸಕಿ ಹಾಕುತ್ತಿದ್ದರೆ, ಪ್ರಾದೇಶಿಕ ಪಕ್ಷಗಳು ಪಾಳೇಗಾರಿಕೆ ಗುಣ ಮತ್ತು ಜಾಗತೀಕರಣದ ಆರ್ಥಿಕತೆಯ ದಳ್ಳಾಳಿ ವರ್ತನೆಯನ್ನು ಕಣಕಣದಲ್ಲಿ ತುಂಬಿಕೊಂಡಿವೆ.

ಇಂಥಾ ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

ಟ್ರಾಕ್ಟರ್‌ ದೊಡ್ಡ ರೈತರ ಸಂಕೇತವಾಗಿತ್ತು; ನಿಜ. ಆದರೆ ಇಂದು ಅದು ಹೋರಾಟದ ಮುಂಚೂಣಿಯಲ್ಲಿರುವ ರೈತರ ಸಂಕೇತವಾಗಿದೆ.

ಈ ಹಿಂದೆ ಕೋಟೆಯ ದಿಡ್ಡಿ ಬಾಗಿಲು ಮುರಿಯಲು ಆನೆಗಳನ್ನು ಬಳಸುವುದಿತ್ತು. ಆದಾದ ಮೇಲೆ ಕಾಲಾಳುಗಳು ಯುದ್ಧ ಮಾಡುತ್ತಿದ್ದರು.

ಈ ಬಗ್ಗೆ ಬರುವ ಟೀಕೆ , ಗಾಸಿಪ್ಪುಗಳು ಆಳುವವರು ಎದೆಗುಂದಿರುವುದರ ಸಂಕೇತ. ಈ ಹೋರಾಟದಲ್ಲಿ ಗೆಲುವು ನಿಶ್ಚಿತ. ಯಾಕೆಂದರೆ ಮೂಲತಃ ಸರಕಾರ ಆಳದಲ್ಲಿ ಜನಸಾಮಾನ್ಯರ, ರೈತರ ಬಾಳುವೆಯನ್ನು ಛಿದ್ರಗೊಳಿಸಿ ತನ್ನ ಕಾರ್ಪೋರೇಟ್‌ ಗೆಣೆಕಾರರ ವಹಿವಾಟಿಗೆ ಅನುಕೂಲ ಮಾಡಿಕೊಡುತ್ತಿರುವುದು ಪ್ರತೀ ಆಡಳಿತಾತ್ಮಕ ನಿರ್ಧಾರಗಳಲ್ಲಿ ಕಾಣುತ್ತಿದೆ.

ಈ ಹೋರಾಟದ ಗೆಲುವು ಇಷ್ಟು ಬಲವಿಲ್ಲದ ಸಮುದಾಯಗಳ ಹೋರಾಟಗಳಿಗೆ ನಾಂದಿಯಾಗಲಿ
ಸಂವಿಧಾನದ ಪೀಠಿಕೆಯನ್ನು ಮತ್ತು ನಿರ್ದೇಶಕ ತತ್ವಗಳನ್ನು ಮೋದಿ ಸರಕಾರದ ಎದುರು ಇಟ್ಟರೆ ಒಂದೊಂದು ಹೆಜ್ಜೆಯಲ್ಲೂ ಈ ಸರಕಾರದ ಸಂವಿಧಾನ ವಿರೋಧಿ ನಡೆ ನಿಚ್ಚಳವಾಗಿ ತೋರುತ್ತದೆ. ಸಂವಿಧಾನ ವಿರೋಧೀ ಆಂದರೆ ಜನರ ಆಶೋತ್ತರಗಳ ವಿರೋಧಿ. ಅಂದರೆ ಜನ ವಿರೋಧಿ.

ಆದ್ದರಿಂದಲೇ ಈ ರೈತ ಹೋರಾಟ ನಮ್ಮ ನೆಲಮೂಲದ ಎಲ್ಲರ ಆಶೋತ್ತರಗಳ ಪ್ರತಿರೋಧದ ಪ್ರತಿರೂಪ. ಸಂವಿಧಾನವೇ ಇಲ್ಲಿ ಜಂಗಮ ರೂಪ ತಾಳಿದೆ.

  • ಕೆ.ಪಿ ಸುರೇಶ್, ಚಿಂತಕರು, ಬರಹಗಾರರು.

ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...