Homeಮುಖಪುಟಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

- Advertisement -
- Advertisement -

ಈ ರೈತ ಚಳವಳಿ ಮೂರು ಕೃಷಿ ಕಾಯಿದೆಗಳ ರದ್ಧತಿಗಷ್ಟೇ ಸೀಮಿತವಲ್ಲ. ಇದು ಸಂಸದೀಯ, ಪ್ರಜಾಸತ್ತಾತ್ಮಕ ಸಂವಾದವನ್ನು ಪುನರ್‌ ಸ್ಥಾಪಿಸುವ ಚಳವಳಿಯಾಗುತ್ತಿದೆ.

ಗಣ ರಾಜ್ಯ ಸ್ಥಾಪನೆಯಾದಾಗ ರಾಜಶಾಹಿ, ಪಾಳೆಗಾರಿ ಆಳುವಿಕೆಯಿಂದ ಮುಕ್ತವಾಗಿ ನಮ್ಮನ್ನು ಆಳುವವರನ್ನು ನಾವೇ ಆರಿಸುವ ಬಡವ- ಬಲ್ಲಿದ; ದಲಿತ, ಆದಿವಾಸಿ, ಮಹಿಳೆ; ಭೂಮಿ ಹೊಂದಿದವನು- ಭೂರಹಿತ ; ಹೀಗೆ ಎಲ್ಲರೂ ಈ ಆಯ್ಕೆಯ ಯಜ್ಞದಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಲುದಾರರಾದರು. ಈ ರೋಮಾಂಚನವೇ ಭಾರತದ ಪ್ರಜಾಸತ್ತೆಯನ್ನು ಇಂದೂ ಉಳಿಸಿದೆ.

ಆದರೆ ಕಳೆದ 70 ವರ್ಷಗಳಲ್ಲಿ ಜನತೆಗೆ ಅನುಭವಕ್ಕೆ ಬಂದ ಸಂಗತಿ ಎಂದರೆ ಆಳುವವರನ್ನೇನೋ ಬದಲಾಯಿಸಬಹುದು. ಆದರೆ ಆಡಳಿತವನ್ನು ನಿರ್ದೇಶಿಸುವುದು ಹೇಗೆ? ಆಳುವವರನ್ನು ನಿಜಾರ್ಥದ ಜನಸೇವಕರನ್ನಾಗಿ ಮಾಡುವುದು ಹೇಗೆ?
ಆಡಳಿತದ ಪ್ರಕ್ರಿಯೆಯಲ್ಲಿ ಜನರ ಅಭಿಪ್ರಾಯಕ್ಕೆ ಮನ್ನಣೆ ದೊರಕುವುದು ಹೇಗೆ? ಸರಕಾರವೊಂದು ಜನರ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಈಡೇರಿಸುವ ಯಂತ್ರವಾಗುವುದು ಹೇಗೆ?

ಈ ವೈಫಲ್ಯವೇ ತೀವ್ರ ಹತಾಶೆ ಮತ್ತು ಸಿನಿಕತನವನ್ನು ಹುಟ್ಟು ಹಾಕಿದೆ. “ಜಾತಿ, ಹಣ, ಹೆಂಡ, ಧರ್ಮ ರಾಜಕಾರಣದ ಪ್ರಭಾವಕ್ಕೆ ಒಳಗಾಗಿ ಮತ ಹಾಕುತ್ತಾರೆ. ಗೆದ್ದ ಮೇಲೆ ಈ ಜನ ಪ್ರತಿನಿಧಿಗಳನ್ನು ಹಿಡಿಯಲೂ ಸಾಧ್ಯವಾಗುವುದಿಲ್ಲ; ಕಡಿವಾಣ ಹಾಕಲೂ ಸಾಧ್ಯವಾಗುತ್ತಿಲ್ಲ. ಏನಿದ್ದರೂ ಮುಂದಿನ ಚುನಾವಣೆಗೆ ಕಾಯಬೇಕು. ಆಗಲೂ ಅಷ್ಟೇ. ಇವನ ಬದಲು ಇವನ ತದ್ರೂಪಿ ಅದೇ ಸ್ಥಾನವನ್ನು ಆಕ್ರಮಿಸುತ್ತಾನೆ.”
ಈ ಗೋಳು ತೀವ್ರವಾಗಿದೆ.

ಚುನಾವಣಾ ನಂತರದ ಆಡಳಿತ ಪ್ರಕ್ರಿಯೆಯಲ್ಲಿ – ಅಂದರೆ, ಸರಕಾರದ ಪ್ರತೀ ಹೆಜ್ಜೆ ಗತಿ, ನಿರ್ಧಾರಗಳು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ನಾವು ಪ್ರತಿಕ್ರಿಯಿಸುತ್ತಲೇ ಇಲ್ಲ.

ಈ ಜಡತ್ವವೇ ಸರಕಾರಗಳು ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕಾರಣವಾಗಿದೆ. ಬಹುತೇಕ ಎಲ್ಲಾ ಪಕ್ಷಗಳೂ ಒಂದೇ ಮೂಸೆಯಲ್ಲಿ ತಯಾರಾದ ವಿವಿಧ ಬಣ್ಣಗಳ ರಾಕ್ಷಸ ಗೊಂಬೆಗಳಂತಿವೆ.

ಭಾಜಪ ಕಾರ್ಪೋರೇಟ್‌ ಮತ್ತು ಕೋಮು ರಾಜಕಾರಣದ ಪ್ರಳಯಾಂತಕ ಮಿಶ್ರಣದ ಮೂಲಕ ಸಂವಿಧಾನ ಮತ್ತು ಅದರ ಆಶಯಗಳನ್ನು ನಿರ್ಲಜ್ಜ, ನಿರ್ಲಕ್ಷ್ಯದ ಮೂಲಕ ಹೊಸಕಿ ಹಾಕುತ್ತಿದ್ದರೆ, ಪ್ರಾದೇಶಿಕ ಪಕ್ಷಗಳು ಪಾಳೇಗಾರಿಕೆ ಗುಣ ಮತ್ತು ಜಾಗತೀಕರಣದ ಆರ್ಥಿಕತೆಯ ದಳ್ಳಾಳಿ ವರ್ತನೆಯನ್ನು ಕಣಕಣದಲ್ಲಿ ತುಂಬಿಕೊಂಡಿವೆ.

ಇಂಥಾ ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

ಟ್ರಾಕ್ಟರ್‌ ದೊಡ್ಡ ರೈತರ ಸಂಕೇತವಾಗಿತ್ತು; ನಿಜ. ಆದರೆ ಇಂದು ಅದು ಹೋರಾಟದ ಮುಂಚೂಣಿಯಲ್ಲಿರುವ ರೈತರ ಸಂಕೇತವಾಗಿದೆ.

ಈ ಹಿಂದೆ ಕೋಟೆಯ ದಿಡ್ಡಿ ಬಾಗಿಲು ಮುರಿಯಲು ಆನೆಗಳನ್ನು ಬಳಸುವುದಿತ್ತು. ಆದಾದ ಮೇಲೆ ಕಾಲಾಳುಗಳು ಯುದ್ಧ ಮಾಡುತ್ತಿದ್ದರು.

ಈ ಬಗ್ಗೆ ಬರುವ ಟೀಕೆ , ಗಾಸಿಪ್ಪುಗಳು ಆಳುವವರು ಎದೆಗುಂದಿರುವುದರ ಸಂಕೇತ. ಈ ಹೋರಾಟದಲ್ಲಿ ಗೆಲುವು ನಿಶ್ಚಿತ. ಯಾಕೆಂದರೆ ಮೂಲತಃ ಸರಕಾರ ಆಳದಲ್ಲಿ ಜನಸಾಮಾನ್ಯರ, ರೈತರ ಬಾಳುವೆಯನ್ನು ಛಿದ್ರಗೊಳಿಸಿ ತನ್ನ ಕಾರ್ಪೋರೇಟ್‌ ಗೆಣೆಕಾರರ ವಹಿವಾಟಿಗೆ ಅನುಕೂಲ ಮಾಡಿಕೊಡುತ್ತಿರುವುದು ಪ್ರತೀ ಆಡಳಿತಾತ್ಮಕ ನಿರ್ಧಾರಗಳಲ್ಲಿ ಕಾಣುತ್ತಿದೆ.

ಈ ಹೋರಾಟದ ಗೆಲುವು ಇಷ್ಟು ಬಲವಿಲ್ಲದ ಸಮುದಾಯಗಳ ಹೋರಾಟಗಳಿಗೆ ನಾಂದಿಯಾಗಲಿ
ಸಂವಿಧಾನದ ಪೀಠಿಕೆಯನ್ನು ಮತ್ತು ನಿರ್ದೇಶಕ ತತ್ವಗಳನ್ನು ಮೋದಿ ಸರಕಾರದ ಎದುರು ಇಟ್ಟರೆ ಒಂದೊಂದು ಹೆಜ್ಜೆಯಲ್ಲೂ ಈ ಸರಕಾರದ ಸಂವಿಧಾನ ವಿರೋಧಿ ನಡೆ ನಿಚ್ಚಳವಾಗಿ ತೋರುತ್ತದೆ. ಸಂವಿಧಾನ ವಿರೋಧೀ ಆಂದರೆ ಜನರ ಆಶೋತ್ತರಗಳ ವಿರೋಧಿ. ಅಂದರೆ ಜನ ವಿರೋಧಿ.

ಆದ್ದರಿಂದಲೇ ಈ ರೈತ ಹೋರಾಟ ನಮ್ಮ ನೆಲಮೂಲದ ಎಲ್ಲರ ಆಶೋತ್ತರಗಳ ಪ್ರತಿರೋಧದ ಪ್ರತಿರೂಪ. ಸಂವಿಧಾನವೇ ಇಲ್ಲಿ ಜಂಗಮ ರೂಪ ತಾಳಿದೆ.

  • ಕೆ.ಪಿ ಸುರೇಶ್, ಚಿಂತಕರು, ಬರಹಗಾರರು.

ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...