Homeಮುಖಪುಟಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

- Advertisement -
- Advertisement -

ಈ ರೈತ ಚಳವಳಿ ಮೂರು ಕೃಷಿ ಕಾಯಿದೆಗಳ ರದ್ಧತಿಗಷ್ಟೇ ಸೀಮಿತವಲ್ಲ. ಇದು ಸಂಸದೀಯ, ಪ್ರಜಾಸತ್ತಾತ್ಮಕ ಸಂವಾದವನ್ನು ಪುನರ್‌ ಸ್ಥಾಪಿಸುವ ಚಳವಳಿಯಾಗುತ್ತಿದೆ.

ಗಣ ರಾಜ್ಯ ಸ್ಥಾಪನೆಯಾದಾಗ ರಾಜಶಾಹಿ, ಪಾಳೆಗಾರಿ ಆಳುವಿಕೆಯಿಂದ ಮುಕ್ತವಾಗಿ ನಮ್ಮನ್ನು ಆಳುವವರನ್ನು ನಾವೇ ಆರಿಸುವ ಬಡವ- ಬಲ್ಲಿದ; ದಲಿತ, ಆದಿವಾಸಿ, ಮಹಿಳೆ; ಭೂಮಿ ಹೊಂದಿದವನು- ಭೂರಹಿತ ; ಹೀಗೆ ಎಲ್ಲರೂ ಈ ಆಯ್ಕೆಯ ಯಜ್ಞದಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಲುದಾರರಾದರು. ಈ ರೋಮಾಂಚನವೇ ಭಾರತದ ಪ್ರಜಾಸತ್ತೆಯನ್ನು ಇಂದೂ ಉಳಿಸಿದೆ.

ಆದರೆ ಕಳೆದ 70 ವರ್ಷಗಳಲ್ಲಿ ಜನತೆಗೆ ಅನುಭವಕ್ಕೆ ಬಂದ ಸಂಗತಿ ಎಂದರೆ ಆಳುವವರನ್ನೇನೋ ಬದಲಾಯಿಸಬಹುದು. ಆದರೆ ಆಡಳಿತವನ್ನು ನಿರ್ದೇಶಿಸುವುದು ಹೇಗೆ? ಆಳುವವರನ್ನು ನಿಜಾರ್ಥದ ಜನಸೇವಕರನ್ನಾಗಿ ಮಾಡುವುದು ಹೇಗೆ?
ಆಡಳಿತದ ಪ್ರಕ್ರಿಯೆಯಲ್ಲಿ ಜನರ ಅಭಿಪ್ರಾಯಕ್ಕೆ ಮನ್ನಣೆ ದೊರಕುವುದು ಹೇಗೆ? ಸರಕಾರವೊಂದು ಜನರ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಈಡೇರಿಸುವ ಯಂತ್ರವಾಗುವುದು ಹೇಗೆ?

ಈ ವೈಫಲ್ಯವೇ ತೀವ್ರ ಹತಾಶೆ ಮತ್ತು ಸಿನಿಕತನವನ್ನು ಹುಟ್ಟು ಹಾಕಿದೆ. “ಜಾತಿ, ಹಣ, ಹೆಂಡ, ಧರ್ಮ ರಾಜಕಾರಣದ ಪ್ರಭಾವಕ್ಕೆ ಒಳಗಾಗಿ ಮತ ಹಾಕುತ್ತಾರೆ. ಗೆದ್ದ ಮೇಲೆ ಈ ಜನ ಪ್ರತಿನಿಧಿಗಳನ್ನು ಹಿಡಿಯಲೂ ಸಾಧ್ಯವಾಗುವುದಿಲ್ಲ; ಕಡಿವಾಣ ಹಾಕಲೂ ಸಾಧ್ಯವಾಗುತ್ತಿಲ್ಲ. ಏನಿದ್ದರೂ ಮುಂದಿನ ಚುನಾವಣೆಗೆ ಕಾಯಬೇಕು. ಆಗಲೂ ಅಷ್ಟೇ. ಇವನ ಬದಲು ಇವನ ತದ್ರೂಪಿ ಅದೇ ಸ್ಥಾನವನ್ನು ಆಕ್ರಮಿಸುತ್ತಾನೆ.”
ಈ ಗೋಳು ತೀವ್ರವಾಗಿದೆ.

ಚುನಾವಣಾ ನಂತರದ ಆಡಳಿತ ಪ್ರಕ್ರಿಯೆಯಲ್ಲಿ – ಅಂದರೆ, ಸರಕಾರದ ಪ್ರತೀ ಹೆಜ್ಜೆ ಗತಿ, ನಿರ್ಧಾರಗಳು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ನಾವು ಪ್ರತಿಕ್ರಿಯಿಸುತ್ತಲೇ ಇಲ್ಲ.

ಈ ಜಡತ್ವವೇ ಸರಕಾರಗಳು ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕಾರಣವಾಗಿದೆ. ಬಹುತೇಕ ಎಲ್ಲಾ ಪಕ್ಷಗಳೂ ಒಂದೇ ಮೂಸೆಯಲ್ಲಿ ತಯಾರಾದ ವಿವಿಧ ಬಣ್ಣಗಳ ರಾಕ್ಷಸ ಗೊಂಬೆಗಳಂತಿವೆ.

ಭಾಜಪ ಕಾರ್ಪೋರೇಟ್‌ ಮತ್ತು ಕೋಮು ರಾಜಕಾರಣದ ಪ್ರಳಯಾಂತಕ ಮಿಶ್ರಣದ ಮೂಲಕ ಸಂವಿಧಾನ ಮತ್ತು ಅದರ ಆಶಯಗಳನ್ನು ನಿರ್ಲಜ್ಜ, ನಿರ್ಲಕ್ಷ್ಯದ ಮೂಲಕ ಹೊಸಕಿ ಹಾಕುತ್ತಿದ್ದರೆ, ಪ್ರಾದೇಶಿಕ ಪಕ್ಷಗಳು ಪಾಳೇಗಾರಿಕೆ ಗುಣ ಮತ್ತು ಜಾಗತೀಕರಣದ ಆರ್ಥಿಕತೆಯ ದಳ್ಳಾಳಿ ವರ್ತನೆಯನ್ನು ಕಣಕಣದಲ್ಲಿ ತುಂಬಿಕೊಂಡಿವೆ.

ಇಂಥಾ ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

ಟ್ರಾಕ್ಟರ್‌ ದೊಡ್ಡ ರೈತರ ಸಂಕೇತವಾಗಿತ್ತು; ನಿಜ. ಆದರೆ ಇಂದು ಅದು ಹೋರಾಟದ ಮುಂಚೂಣಿಯಲ್ಲಿರುವ ರೈತರ ಸಂಕೇತವಾಗಿದೆ.

ಈ ಹಿಂದೆ ಕೋಟೆಯ ದಿಡ್ಡಿ ಬಾಗಿಲು ಮುರಿಯಲು ಆನೆಗಳನ್ನು ಬಳಸುವುದಿತ್ತು. ಆದಾದ ಮೇಲೆ ಕಾಲಾಳುಗಳು ಯುದ್ಧ ಮಾಡುತ್ತಿದ್ದರು.

ಈ ಬಗ್ಗೆ ಬರುವ ಟೀಕೆ , ಗಾಸಿಪ್ಪುಗಳು ಆಳುವವರು ಎದೆಗುಂದಿರುವುದರ ಸಂಕೇತ. ಈ ಹೋರಾಟದಲ್ಲಿ ಗೆಲುವು ನಿಶ್ಚಿತ. ಯಾಕೆಂದರೆ ಮೂಲತಃ ಸರಕಾರ ಆಳದಲ್ಲಿ ಜನಸಾಮಾನ್ಯರ, ರೈತರ ಬಾಳುವೆಯನ್ನು ಛಿದ್ರಗೊಳಿಸಿ ತನ್ನ ಕಾರ್ಪೋರೇಟ್‌ ಗೆಣೆಕಾರರ ವಹಿವಾಟಿಗೆ ಅನುಕೂಲ ಮಾಡಿಕೊಡುತ್ತಿರುವುದು ಪ್ರತೀ ಆಡಳಿತಾತ್ಮಕ ನಿರ್ಧಾರಗಳಲ್ಲಿ ಕಾಣುತ್ತಿದೆ.

ಈ ಹೋರಾಟದ ಗೆಲುವು ಇಷ್ಟು ಬಲವಿಲ್ಲದ ಸಮುದಾಯಗಳ ಹೋರಾಟಗಳಿಗೆ ನಾಂದಿಯಾಗಲಿ
ಸಂವಿಧಾನದ ಪೀಠಿಕೆಯನ್ನು ಮತ್ತು ನಿರ್ದೇಶಕ ತತ್ವಗಳನ್ನು ಮೋದಿ ಸರಕಾರದ ಎದುರು ಇಟ್ಟರೆ ಒಂದೊಂದು ಹೆಜ್ಜೆಯಲ್ಲೂ ಈ ಸರಕಾರದ ಸಂವಿಧಾನ ವಿರೋಧಿ ನಡೆ ನಿಚ್ಚಳವಾಗಿ ತೋರುತ್ತದೆ. ಸಂವಿಧಾನ ವಿರೋಧೀ ಆಂದರೆ ಜನರ ಆಶೋತ್ತರಗಳ ವಿರೋಧಿ. ಅಂದರೆ ಜನ ವಿರೋಧಿ.

ಆದ್ದರಿಂದಲೇ ಈ ರೈತ ಹೋರಾಟ ನಮ್ಮ ನೆಲಮೂಲದ ಎಲ್ಲರ ಆಶೋತ್ತರಗಳ ಪ್ರತಿರೋಧದ ಪ್ರತಿರೂಪ. ಸಂವಿಧಾನವೇ ಇಲ್ಲಿ ಜಂಗಮ ರೂಪ ತಾಳಿದೆ.

  • ಕೆ.ಪಿ ಸುರೇಶ್, ಚಿಂತಕರು, ಬರಹಗಾರರು.

ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...