Homeಮುಖಪುಟಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

- Advertisement -
- Advertisement -

ಈ ರೈತ ಚಳವಳಿ ಮೂರು ಕೃಷಿ ಕಾಯಿದೆಗಳ ರದ್ಧತಿಗಷ್ಟೇ ಸೀಮಿತವಲ್ಲ. ಇದು ಸಂಸದೀಯ, ಪ್ರಜಾಸತ್ತಾತ್ಮಕ ಸಂವಾದವನ್ನು ಪುನರ್‌ ಸ್ಥಾಪಿಸುವ ಚಳವಳಿಯಾಗುತ್ತಿದೆ.

ಗಣ ರಾಜ್ಯ ಸ್ಥಾಪನೆಯಾದಾಗ ರಾಜಶಾಹಿ, ಪಾಳೆಗಾರಿ ಆಳುವಿಕೆಯಿಂದ ಮುಕ್ತವಾಗಿ ನಮ್ಮನ್ನು ಆಳುವವರನ್ನು ನಾವೇ ಆರಿಸುವ ಬಡವ- ಬಲ್ಲಿದ; ದಲಿತ, ಆದಿವಾಸಿ, ಮಹಿಳೆ; ಭೂಮಿ ಹೊಂದಿದವನು- ಭೂರಹಿತ ; ಹೀಗೆ ಎಲ್ಲರೂ ಈ ಆಯ್ಕೆಯ ಯಜ್ಞದಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಲುದಾರರಾದರು. ಈ ರೋಮಾಂಚನವೇ ಭಾರತದ ಪ್ರಜಾಸತ್ತೆಯನ್ನು ಇಂದೂ ಉಳಿಸಿದೆ.

ಆದರೆ ಕಳೆದ 70 ವರ್ಷಗಳಲ್ಲಿ ಜನತೆಗೆ ಅನುಭವಕ್ಕೆ ಬಂದ ಸಂಗತಿ ಎಂದರೆ ಆಳುವವರನ್ನೇನೋ ಬದಲಾಯಿಸಬಹುದು. ಆದರೆ ಆಡಳಿತವನ್ನು ನಿರ್ದೇಶಿಸುವುದು ಹೇಗೆ? ಆಳುವವರನ್ನು ನಿಜಾರ್ಥದ ಜನಸೇವಕರನ್ನಾಗಿ ಮಾಡುವುದು ಹೇಗೆ?
ಆಡಳಿತದ ಪ್ರಕ್ರಿಯೆಯಲ್ಲಿ ಜನರ ಅಭಿಪ್ರಾಯಕ್ಕೆ ಮನ್ನಣೆ ದೊರಕುವುದು ಹೇಗೆ? ಸರಕಾರವೊಂದು ಜನರ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಈಡೇರಿಸುವ ಯಂತ್ರವಾಗುವುದು ಹೇಗೆ?

ಈ ವೈಫಲ್ಯವೇ ತೀವ್ರ ಹತಾಶೆ ಮತ್ತು ಸಿನಿಕತನವನ್ನು ಹುಟ್ಟು ಹಾಕಿದೆ. “ಜಾತಿ, ಹಣ, ಹೆಂಡ, ಧರ್ಮ ರಾಜಕಾರಣದ ಪ್ರಭಾವಕ್ಕೆ ಒಳಗಾಗಿ ಮತ ಹಾಕುತ್ತಾರೆ. ಗೆದ್ದ ಮೇಲೆ ಈ ಜನ ಪ್ರತಿನಿಧಿಗಳನ್ನು ಹಿಡಿಯಲೂ ಸಾಧ್ಯವಾಗುವುದಿಲ್ಲ; ಕಡಿವಾಣ ಹಾಕಲೂ ಸಾಧ್ಯವಾಗುತ್ತಿಲ್ಲ. ಏನಿದ್ದರೂ ಮುಂದಿನ ಚುನಾವಣೆಗೆ ಕಾಯಬೇಕು. ಆಗಲೂ ಅಷ್ಟೇ. ಇವನ ಬದಲು ಇವನ ತದ್ರೂಪಿ ಅದೇ ಸ್ಥಾನವನ್ನು ಆಕ್ರಮಿಸುತ್ತಾನೆ.”
ಈ ಗೋಳು ತೀವ್ರವಾಗಿದೆ.

ಚುನಾವಣಾ ನಂತರದ ಆಡಳಿತ ಪ್ರಕ್ರಿಯೆಯಲ್ಲಿ – ಅಂದರೆ, ಸರಕಾರದ ಪ್ರತೀ ಹೆಜ್ಜೆ ಗತಿ, ನಿರ್ಧಾರಗಳು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ನಾವು ಪ್ರತಿಕ್ರಿಯಿಸುತ್ತಲೇ ಇಲ್ಲ.

ಈ ಜಡತ್ವವೇ ಸರಕಾರಗಳು ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕಾರಣವಾಗಿದೆ. ಬಹುತೇಕ ಎಲ್ಲಾ ಪಕ್ಷಗಳೂ ಒಂದೇ ಮೂಸೆಯಲ್ಲಿ ತಯಾರಾದ ವಿವಿಧ ಬಣ್ಣಗಳ ರಾಕ್ಷಸ ಗೊಂಬೆಗಳಂತಿವೆ.

ಭಾಜಪ ಕಾರ್ಪೋರೇಟ್‌ ಮತ್ತು ಕೋಮು ರಾಜಕಾರಣದ ಪ್ರಳಯಾಂತಕ ಮಿಶ್ರಣದ ಮೂಲಕ ಸಂವಿಧಾನ ಮತ್ತು ಅದರ ಆಶಯಗಳನ್ನು ನಿರ್ಲಜ್ಜ, ನಿರ್ಲಕ್ಷ್ಯದ ಮೂಲಕ ಹೊಸಕಿ ಹಾಕುತ್ತಿದ್ದರೆ, ಪ್ರಾದೇಶಿಕ ಪಕ್ಷಗಳು ಪಾಳೇಗಾರಿಕೆ ಗುಣ ಮತ್ತು ಜಾಗತೀಕರಣದ ಆರ್ಥಿಕತೆಯ ದಳ್ಳಾಳಿ ವರ್ತನೆಯನ್ನು ಕಣಕಣದಲ್ಲಿ ತುಂಬಿಕೊಂಡಿವೆ.

ಇಂಥಾ ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

ಟ್ರಾಕ್ಟರ್‌ ದೊಡ್ಡ ರೈತರ ಸಂಕೇತವಾಗಿತ್ತು; ನಿಜ. ಆದರೆ ಇಂದು ಅದು ಹೋರಾಟದ ಮುಂಚೂಣಿಯಲ್ಲಿರುವ ರೈತರ ಸಂಕೇತವಾಗಿದೆ.

ಈ ಹಿಂದೆ ಕೋಟೆಯ ದಿಡ್ಡಿ ಬಾಗಿಲು ಮುರಿಯಲು ಆನೆಗಳನ್ನು ಬಳಸುವುದಿತ್ತು. ಆದಾದ ಮೇಲೆ ಕಾಲಾಳುಗಳು ಯುದ್ಧ ಮಾಡುತ್ತಿದ್ದರು.

ಈ ಬಗ್ಗೆ ಬರುವ ಟೀಕೆ , ಗಾಸಿಪ್ಪುಗಳು ಆಳುವವರು ಎದೆಗುಂದಿರುವುದರ ಸಂಕೇತ. ಈ ಹೋರಾಟದಲ್ಲಿ ಗೆಲುವು ನಿಶ್ಚಿತ. ಯಾಕೆಂದರೆ ಮೂಲತಃ ಸರಕಾರ ಆಳದಲ್ಲಿ ಜನಸಾಮಾನ್ಯರ, ರೈತರ ಬಾಳುವೆಯನ್ನು ಛಿದ್ರಗೊಳಿಸಿ ತನ್ನ ಕಾರ್ಪೋರೇಟ್‌ ಗೆಣೆಕಾರರ ವಹಿವಾಟಿಗೆ ಅನುಕೂಲ ಮಾಡಿಕೊಡುತ್ತಿರುವುದು ಪ್ರತೀ ಆಡಳಿತಾತ್ಮಕ ನಿರ್ಧಾರಗಳಲ್ಲಿ ಕಾಣುತ್ತಿದೆ.

ಈ ಹೋರಾಟದ ಗೆಲುವು ಇಷ್ಟು ಬಲವಿಲ್ಲದ ಸಮುದಾಯಗಳ ಹೋರಾಟಗಳಿಗೆ ನಾಂದಿಯಾಗಲಿ
ಸಂವಿಧಾನದ ಪೀಠಿಕೆಯನ್ನು ಮತ್ತು ನಿರ್ದೇಶಕ ತತ್ವಗಳನ್ನು ಮೋದಿ ಸರಕಾರದ ಎದುರು ಇಟ್ಟರೆ ಒಂದೊಂದು ಹೆಜ್ಜೆಯಲ್ಲೂ ಈ ಸರಕಾರದ ಸಂವಿಧಾನ ವಿರೋಧಿ ನಡೆ ನಿಚ್ಚಳವಾಗಿ ತೋರುತ್ತದೆ. ಸಂವಿಧಾನ ವಿರೋಧೀ ಆಂದರೆ ಜನರ ಆಶೋತ್ತರಗಳ ವಿರೋಧಿ. ಅಂದರೆ ಜನ ವಿರೋಧಿ.

ಆದ್ದರಿಂದಲೇ ಈ ರೈತ ಹೋರಾಟ ನಮ್ಮ ನೆಲಮೂಲದ ಎಲ್ಲರ ಆಶೋತ್ತರಗಳ ಪ್ರತಿರೋಧದ ಪ್ರತಿರೂಪ. ಸಂವಿಧಾನವೇ ಇಲ್ಲಿ ಜಂಗಮ ರೂಪ ತಾಳಿದೆ.

  • ಕೆ.ಪಿ ಸುರೇಶ್, ಚಿಂತಕರು, ಬರಹಗಾರರು.

ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...