Homeಮುಖಪುಟಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಈ ರೈತ ಹೋರಾಟಕ್ಕೆ ಗೆಲುವು ನಿಶ್ಚಿತ: ಇದು ಇತರ ಹೋರಾಟಗಳಿಗೆ ನಾಂದಿಯಾಗಲಿ

ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

- Advertisement -
- Advertisement -

ಈ ರೈತ ಚಳವಳಿ ಮೂರು ಕೃಷಿ ಕಾಯಿದೆಗಳ ರದ್ಧತಿಗಷ್ಟೇ ಸೀಮಿತವಲ್ಲ. ಇದು ಸಂಸದೀಯ, ಪ್ರಜಾಸತ್ತಾತ್ಮಕ ಸಂವಾದವನ್ನು ಪುನರ್‌ ಸ್ಥಾಪಿಸುವ ಚಳವಳಿಯಾಗುತ್ತಿದೆ.

ಗಣ ರಾಜ್ಯ ಸ್ಥಾಪನೆಯಾದಾಗ ರಾಜಶಾಹಿ, ಪಾಳೆಗಾರಿ ಆಳುವಿಕೆಯಿಂದ ಮುಕ್ತವಾಗಿ ನಮ್ಮನ್ನು ಆಳುವವರನ್ನು ನಾವೇ ಆರಿಸುವ ಬಡವ- ಬಲ್ಲಿದ; ದಲಿತ, ಆದಿವಾಸಿ, ಮಹಿಳೆ; ಭೂಮಿ ಹೊಂದಿದವನು- ಭೂರಹಿತ ; ಹೀಗೆ ಎಲ್ಲರೂ ಈ ಆಯ್ಕೆಯ ಯಜ್ಞದಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪಾಲುದಾರರಾದರು. ಈ ರೋಮಾಂಚನವೇ ಭಾರತದ ಪ್ರಜಾಸತ್ತೆಯನ್ನು ಇಂದೂ ಉಳಿಸಿದೆ.

ಆದರೆ ಕಳೆದ 70 ವರ್ಷಗಳಲ್ಲಿ ಜನತೆಗೆ ಅನುಭವಕ್ಕೆ ಬಂದ ಸಂಗತಿ ಎಂದರೆ ಆಳುವವರನ್ನೇನೋ ಬದಲಾಯಿಸಬಹುದು. ಆದರೆ ಆಡಳಿತವನ್ನು ನಿರ್ದೇಶಿಸುವುದು ಹೇಗೆ? ಆಳುವವರನ್ನು ನಿಜಾರ್ಥದ ಜನಸೇವಕರನ್ನಾಗಿ ಮಾಡುವುದು ಹೇಗೆ?
ಆಡಳಿತದ ಪ್ರಕ್ರಿಯೆಯಲ್ಲಿ ಜನರ ಅಭಿಪ್ರಾಯಕ್ಕೆ ಮನ್ನಣೆ ದೊರಕುವುದು ಹೇಗೆ? ಸರಕಾರವೊಂದು ಜನರ ಸಾಂವಿಧಾನಿಕ ಹಕ್ಕೊತ್ತಾಯಗಳನ್ನು ಈಡೇರಿಸುವ ಯಂತ್ರವಾಗುವುದು ಹೇಗೆ?

ಈ ವೈಫಲ್ಯವೇ ತೀವ್ರ ಹತಾಶೆ ಮತ್ತು ಸಿನಿಕತನವನ್ನು ಹುಟ್ಟು ಹಾಕಿದೆ. “ಜಾತಿ, ಹಣ, ಹೆಂಡ, ಧರ್ಮ ರಾಜಕಾರಣದ ಪ್ರಭಾವಕ್ಕೆ ಒಳಗಾಗಿ ಮತ ಹಾಕುತ್ತಾರೆ. ಗೆದ್ದ ಮೇಲೆ ಈ ಜನ ಪ್ರತಿನಿಧಿಗಳನ್ನು ಹಿಡಿಯಲೂ ಸಾಧ್ಯವಾಗುವುದಿಲ್ಲ; ಕಡಿವಾಣ ಹಾಕಲೂ ಸಾಧ್ಯವಾಗುತ್ತಿಲ್ಲ. ಏನಿದ್ದರೂ ಮುಂದಿನ ಚುನಾವಣೆಗೆ ಕಾಯಬೇಕು. ಆಗಲೂ ಅಷ್ಟೇ. ಇವನ ಬದಲು ಇವನ ತದ್ರೂಪಿ ಅದೇ ಸ್ಥಾನವನ್ನು ಆಕ್ರಮಿಸುತ್ತಾನೆ.”
ಈ ಗೋಳು ತೀವ್ರವಾಗಿದೆ.

ಚುನಾವಣಾ ನಂತರದ ಆಡಳಿತ ಪ್ರಕ್ರಿಯೆಯಲ್ಲಿ – ಅಂದರೆ, ಸರಕಾರದ ಪ್ರತೀ ಹೆಜ್ಜೆ ಗತಿ, ನಿರ್ಧಾರಗಳು ನಮ್ಮ ಮೇಲೆ ಪರಿಣಾಮ ಬೀರುತ್ತದೆ ಎಂಬ ಅರಿವಿನಿಂದ ನಾವು ಪ್ರತಿಕ್ರಿಯಿಸುತ್ತಲೇ ಇಲ್ಲ.

ಈ ಜಡತ್ವವೇ ಸರಕಾರಗಳು ಜನ ವಿರೋಧಿ ಕಾನೂನುಗಳನ್ನು ಜಾರಿಗೆ ತರಲು ಕಾರಣವಾಗಿದೆ. ಬಹುತೇಕ ಎಲ್ಲಾ ಪಕ್ಷಗಳೂ ಒಂದೇ ಮೂಸೆಯಲ್ಲಿ ತಯಾರಾದ ವಿವಿಧ ಬಣ್ಣಗಳ ರಾಕ್ಷಸ ಗೊಂಬೆಗಳಂತಿವೆ.

ಭಾಜಪ ಕಾರ್ಪೋರೇಟ್‌ ಮತ್ತು ಕೋಮು ರಾಜಕಾರಣದ ಪ್ರಳಯಾಂತಕ ಮಿಶ್ರಣದ ಮೂಲಕ ಸಂವಿಧಾನ ಮತ್ತು ಅದರ ಆಶಯಗಳನ್ನು ನಿರ್ಲಜ್ಜ, ನಿರ್ಲಕ್ಷ್ಯದ ಮೂಲಕ ಹೊಸಕಿ ಹಾಕುತ್ತಿದ್ದರೆ, ಪ್ರಾದೇಶಿಕ ಪಕ್ಷಗಳು ಪಾಳೇಗಾರಿಕೆ ಗುಣ ಮತ್ತು ಜಾಗತೀಕರಣದ ಆರ್ಥಿಕತೆಯ ದಳ್ಳಾಳಿ ವರ್ತನೆಯನ್ನು ಕಣಕಣದಲ್ಲಿ ತುಂಬಿಕೊಂಡಿವೆ.

ಇಂಥಾ ಸಂಕಟದ ದಿನಗಳಲ್ಲಿ ಪ್ರಸ್ತುತ ಮೈ ಕೊಡವಿ ಎದ್ದಿರುವ ರೈತ ಪ್ರತಿಭಟನೆ ಮತ್ತೆ ಸಾಂವಿಧಾನಿಕ, ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಗೌರವಿಸುವಂತೆ ಸರಕಾರವನ್ನು ಒತ್ತಾಯಿಸುತ್ತಿದೆ.

ಟ್ರಾಕ್ಟರ್‌ ದೊಡ್ಡ ರೈತರ ಸಂಕೇತವಾಗಿತ್ತು; ನಿಜ. ಆದರೆ ಇಂದು ಅದು ಹೋರಾಟದ ಮುಂಚೂಣಿಯಲ್ಲಿರುವ ರೈತರ ಸಂಕೇತವಾಗಿದೆ.

ಈ ಹಿಂದೆ ಕೋಟೆಯ ದಿಡ್ಡಿ ಬಾಗಿಲು ಮುರಿಯಲು ಆನೆಗಳನ್ನು ಬಳಸುವುದಿತ್ತು. ಆದಾದ ಮೇಲೆ ಕಾಲಾಳುಗಳು ಯುದ್ಧ ಮಾಡುತ್ತಿದ್ದರು.

ಈ ಬಗ್ಗೆ ಬರುವ ಟೀಕೆ , ಗಾಸಿಪ್ಪುಗಳು ಆಳುವವರು ಎದೆಗುಂದಿರುವುದರ ಸಂಕೇತ. ಈ ಹೋರಾಟದಲ್ಲಿ ಗೆಲುವು ನಿಶ್ಚಿತ. ಯಾಕೆಂದರೆ ಮೂಲತಃ ಸರಕಾರ ಆಳದಲ್ಲಿ ಜನಸಾಮಾನ್ಯರ, ರೈತರ ಬಾಳುವೆಯನ್ನು ಛಿದ್ರಗೊಳಿಸಿ ತನ್ನ ಕಾರ್ಪೋರೇಟ್‌ ಗೆಣೆಕಾರರ ವಹಿವಾಟಿಗೆ ಅನುಕೂಲ ಮಾಡಿಕೊಡುತ್ತಿರುವುದು ಪ್ರತೀ ಆಡಳಿತಾತ್ಮಕ ನಿರ್ಧಾರಗಳಲ್ಲಿ ಕಾಣುತ್ತಿದೆ.

ಈ ಹೋರಾಟದ ಗೆಲುವು ಇಷ್ಟು ಬಲವಿಲ್ಲದ ಸಮುದಾಯಗಳ ಹೋರಾಟಗಳಿಗೆ ನಾಂದಿಯಾಗಲಿ
ಸಂವಿಧಾನದ ಪೀಠಿಕೆಯನ್ನು ಮತ್ತು ನಿರ್ದೇಶಕ ತತ್ವಗಳನ್ನು ಮೋದಿ ಸರಕಾರದ ಎದುರು ಇಟ್ಟರೆ ಒಂದೊಂದು ಹೆಜ್ಜೆಯಲ್ಲೂ ಈ ಸರಕಾರದ ಸಂವಿಧಾನ ವಿರೋಧಿ ನಡೆ ನಿಚ್ಚಳವಾಗಿ ತೋರುತ್ತದೆ. ಸಂವಿಧಾನ ವಿರೋಧೀ ಆಂದರೆ ಜನರ ಆಶೋತ್ತರಗಳ ವಿರೋಧಿ. ಅಂದರೆ ಜನ ವಿರೋಧಿ.

ಆದ್ದರಿಂದಲೇ ಈ ರೈತ ಹೋರಾಟ ನಮ್ಮ ನೆಲಮೂಲದ ಎಲ್ಲರ ಆಶೋತ್ತರಗಳ ಪ್ರತಿರೋಧದ ಪ್ರತಿರೂಪ. ಸಂವಿಧಾನವೇ ಇಲ್ಲಿ ಜಂಗಮ ರೂಪ ತಾಳಿದೆ.

  • ಕೆ.ಪಿ ಸುರೇಶ್, ಚಿಂತಕರು, ಬರಹಗಾರರು.

ಇದನ್ನೂ ಓದಿ: ಬಜೆಟ್ ದಿನ ರೈತರಿಂದ ಪಾರ್ಲಿಮೆಂಟ್ ಚಲೋ : ಸಂಸತ್ತಿಗೆ ಪಾದಯಾತ್ರೆ ನಡೆಸಲು ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...