Homeಮುಖಪುಟರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

- Advertisement -
- Advertisement -

(ಇದು ಹೊಸ ಬರಹದಲ್ಲಿದೆ, ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

ನಿಜದ ಪ್ರಜಾಪ್ರಬುತ್ವ ಎಂಬುದು ನಿದಾನ ಪ್ರಕ್ರಿಯೆ. ಅದು ಎಡವುತ್ತದೆ, ತೆವಳುತ್ತದೆ, ಕುಂಟುತ್ತದೆ. ನೇರವಾಗಿ ಸಾಗುವುದು ಪ್ರಜಾಪ್ರಬುತ್ವ ಎನಿಸಿಕೊಳ್ಳುವುದಿಲ್ಲ.
ಪ್ರಜಾಪ್ರಬುತ್ವ ಸಮಾಜದಲ್ಲಿ (ಅದು ತನ್ನ ಮೌಲ್ಯ ಕಳೆದುಕೊಂಡಿದ್ದರೂ ಸಹ) ಒಂದು ಹೋರಾಟ ಮತ್ತೊಂದು ಹೋರಾಟಕ್ಕೆ ಇದು ಮಗದೊಂದಕ್ಕೆ ಸ್ಪೂರ್ತಿಯಾಗುತ್ತಾ ಹೋಗುತ್ತದೆ. ಇದು ಪ್ರಜಾಪ್ರಬುತ್ವದ ಅಡಿಪಾಯವನ್ನು ಶಿಥಿಲಗೊಳಿಸದಂತೆ ಕಾಪಾಡುತ್ತದೆ.

ಇತ್ತೀಚಿನ ಉದಾಹರಣೆ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಕೃಶಿ ಬಿಕ್ಕಟ್ಟಿಗೆ ಕಾರಣವಾದ ರಾಜ್ಯ ಸರಕಾರದ ನೀತಿಗಳ ವಿರುದ್ದ ರೂಪುಗೊಂಡ aikss (all india kisan sangharsh samiti) ಸಂಘಟನೆ.

ಮಾರ್ಚ್ 2018ರಲ್ಲಿ ಭೂರಹಿತ ಕೂಲಿ ಕಾರ್ಮಿಕರ ಹೋರಾಟ ಸಂಘಟಿಸಿದ್ದ aikssನ ಸಾವಿರಾರು ಕೂಲಿ ಕಾರ್ಮಿಕರು ನಾಸಿಕ್ ನಿಂದ ಮುಂಬೈವರೆಗಿನ 750 ಕಿ. ಮೀ. ನ ಆ ಆಭೂತಪೂರ್ವ ಕಾಲ್ನಡಿಗೆ ಹೊಸ ಇತಿಹಾಸವನ್ನೇ ಬರೆಯಿತು. ‘ಜನರಿಂದ ಜನರಿಗಾಗಿ’ ರೂಪುಗೊಂಡಿದ್ದ ಆ ಹೋರಾಟ ಫ್ಯಾಸಿಸ್ಟ್ ಕಾಲದಲ್ಲಿಯೂ ಸಹ ನೂರಾರು ನದಿಗಳು ಸೇರಿಕೊಳ್ಳುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿತು.

ನಾಸಿಕ್ ನಿಂದ ಮುಂಬೈವರೆಗಿನ ರೈತರ ಬಹುದೊಡ್ಡ ಪಾದಯಾತ್ರೆ

ಇದರಿಂದಾಗಿ ಸ್ಪೂರ್ತಿ ಪಡೆದ ದೆಹಲಿ ರೈತ ಹೋರಾಟ ಮತ್ತೊಂದು ಚಾರಿತ್ರಿಕ ಘಟನೆಯಾಗಿದೆ. ಇದು ಮುಂದಿನ ರಚನಾತ್ಮಕ ಸಂಘಟನೆಗೆ ಚಿಮ್ಮು ಹಲಗೆಯಾಗಿದೆ.
ಪ್ರಜಾಪ್ರಬುತ್ವದಲ್ಲಿ ‘ಹೋರಾಟ ಮತ್ತು ಸಂಘಟನೆ’ ಬಿತ್ತಿದ ಬೀಜಗಳನ್ನು ರಚನಾತ್ಮಕ ಕಾರ್ಯಯೋಜನೆಗಳು ಗಿಡವಾಗಿ ಬೆಳೆಸುತ್ತವೆ. ಅದು ಕೊಂಬೆಗಳಾಗಿ ಟಿಸಿಲೊಡೆಯುತ್ತದೆ. ಇದು ಪ್ರಜಾಪ್ರಬುತ್ವದ ಆತ್ಮದಂತೆ.

ಪ್ರತಿಕ್ರಿಯೆ ಮತ್ತು ಕ್ರಿಯಾತ್ಮಕ ಎರಡೂ ಪೂರಕವಾಗಿ ಸಂಘಟಿತವಾಗುವುದರಿಂದಲೇ ಪ್ರಜಾಪ್ರಬುತ್ವವು ಉಸಿರಾಡುತ್ತದೆ.

ಈ ಪ್ರಕ್ರಿಯೆ ಎಶ್ಚೇ ಹಿನ್ನಡೆ ಅನುಬವಿಸಿದರೂ ಸಹ ಇವೆರಡರ ಕಾರಣದಿಂದ ಕನಿಶ್ಟ ಅಬಿವ್ಯಕ್ತಿ ಸ್ವಾತಂತ್ರ್ಯವಂತೂ ಖಾತರಿಯಾಗಿರುತ್ತದೆ. ಇಂದು ಬೀದಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವಶ್ಟು ಸ್ವಾತಂತ್ರವಿದೆ ಎಂದರೆ ಅದಕ್ಕೆ ಈ ಹೋರಾಟಗಳು ಕಾರಣ. ಇದರ ಮೇಲೆ ಮುಂದಿನ ಬವಿಶ್ಯವನ್ನು ಕಟ್ಟಬೇಕಿರುವುದು ಪ್ರಜ್ಞಾವಂತರ ಜವಬ್ದಾರಿ.

ಪ್ರಜಾಪ್ರಬುತ್ವದ ಈ ಆಯಾಮಗಳು, ಕೈ ದೀವಿಗೆಗಳು ಮತ್ತು ಆದಾರಸ್ತಂಬಗಳು ಒಂದೆಡೆಯಾದರೆ ‘ಚುನಾವಣಾ ಪ್ರಜಾಪ್ರಬುತ್ವ’ ಮತ್ತೊಂದು ಮಗ್ಗಲು. ಅದಿಕಾರ ರಾಜಕಾರಣ ಮಹತ್ವದ ಕಾರಣಕ್ಕೆ ಇದರ ಗೆಲುವು ಸೋಲುಗಳು ಮುಖ್ಯವಾಗುತ್ತದೆ.

ಆದರೆ ಬಿಜೆಪಿಯಂತಹ ಸರ್ವಾದಿಕಾರಿ ಪಕ್ಷವು ಅದಿಕಾರದ ಹಿಂದೆ ಬಿದ್ದಾಗ ಮಿಕ್ಕಿದೆಲ್ಲವನ್ನು ಬಿಟ್ಟು ಕೇವಲ ಚುನಾವಣಾ ರಾಜಕಾರಣವನ್ನು ಪ್ರಜಾಪ್ರಬುತ್ವದ ಮೌಲ್ಯಮಾಪನವಾಗಿಸಿಬಿಡುತ್ತದೆ. ಇದೊಂದು ಬೋನು.

680 ರೈತರು ಪ್ರಾಣಬಿಟ್ಟರೂ ತಲೆ ಕೆಡಿಸಿಕೊಳ್ಳದ ಸರ್ವಾದಿಕಾರಿಗಳು ಚುನಾವಣೆಗೋಸ್ಕರ ನಿರ್ದಾರ ತೆಗೆದುಕೊಳ್ಳುವಂತಹ ಒತ್ತಡಕ್ಕೆ ಒಳಗಾಗುತ್ತಾರೆ.

ಆದರೆ ನಿರಂತರ ಹೋರಾಟಗಳು ಇಂತಹ ನಿರಂಕುಶ ಪ್ರಬುತ್ವವನ್ನು ಬಗ್ಗಿಸಿ ಚುನಾವಣಾ ಗಿಮಿಕ್ ಮಾಡುವ ಅನಿವಾರ್ಯತೆಯನ್ನು ಸೃಶ್ಟಿ ಮಾಡುತ್ತವೆ ಎಂಬುದೇ ಪ್ರಜಾಪ್ರಬುತ್ವದ ಹಿರಿಮೆ. ಇಲ್ಲಿ ದೆಹಲಿ ರೈತ ಹೋರಾಟದ ಗೆಲುವಿದೆ.

ಆದರೆ ಭಾರತದಂತಹ ದುರ್ಬಲ ಪ್ರಜಾಪ್ರಬುತ್ವದಲ್ಲಿ ಮುನ್ನಡೆಯು ಈ ರೀತಿಯ ಪ್ಯಾಕೇಜ್ ಗಳ ರೀತಿಯಿರುತ್ತದೆ.

ಪ್ರಜಾಪ್ರಬುತ್ವವು ಡೈನಮಿಕ್ ಆಗಿರುವಂತೆ ಎಚ್ಚರ ವಹಿಸುವುದು ನಮ್ಮ ಹೊಣೆಗಾರಿಕೆ. ಅದು ಎರಡು ಹೆಜ್ಜೆ ಮುಂದೆ, ಮೂರು ಹೆಜ್ಜೆ ಹಿಂದೆ ರೀತಿ ಆಗಿದ್ದರೂ ಪರವಾಗಿಲ್ಲ, ಚಲನಶೀಲವಾಗಿರಬೇಕು. ಇದನ್ನು ದೆಹಲಿ ರೈತ ಹೋರಾಟ ಸಾದಿಸಿದೆ

ನಾನು ಎಡ ಚಳುವಳಿಯಲ್ಲಿದ್ದಾಗ ನಾವೆಲ್ಲ ಹಾಡುತ್ತಿದ್ದ ಸಾಲುಗಳು ಈಗಲೂ ಬೀಜ ವಾಕ್ಯಗಳು

“ಎಲ್ಲಿಂದ ಬಂದಿರಿ ಎಂದು ಕೇಳುತೀರಿ ನೀವು
ಜನರ ನಡುವಿಂದ ಬಂದೆವು ಎಂದು ಹೇಳುತೇವೆ ನಾವು
ಎಲ್ಲಿಗೆ ಹೋಗುವಿರಿ ಎಂದು ಕೇಳುವಿರಿ ನೀವು
ಮರಳಿ ಜನರ ಬಳಿಗೆ ಎಂದು ಹೇಳುತೇವೆ ನಾವು”

  • ಶ್ರೀಪಾದ್ ಭಟ್

ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...