Homeಮುಖಪುಟರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

- Advertisement -
- Advertisement -

(ಇದು ಹೊಸ ಬರಹದಲ್ಲಿದೆ, ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

ನಿಜದ ಪ್ರಜಾಪ್ರಬುತ್ವ ಎಂಬುದು ನಿದಾನ ಪ್ರಕ್ರಿಯೆ. ಅದು ಎಡವುತ್ತದೆ, ತೆವಳುತ್ತದೆ, ಕುಂಟುತ್ತದೆ. ನೇರವಾಗಿ ಸಾಗುವುದು ಪ್ರಜಾಪ್ರಬುತ್ವ ಎನಿಸಿಕೊಳ್ಳುವುದಿಲ್ಲ.
ಪ್ರಜಾಪ್ರಬುತ್ವ ಸಮಾಜದಲ್ಲಿ (ಅದು ತನ್ನ ಮೌಲ್ಯ ಕಳೆದುಕೊಂಡಿದ್ದರೂ ಸಹ) ಒಂದು ಹೋರಾಟ ಮತ್ತೊಂದು ಹೋರಾಟಕ್ಕೆ ಇದು ಮಗದೊಂದಕ್ಕೆ ಸ್ಪೂರ್ತಿಯಾಗುತ್ತಾ ಹೋಗುತ್ತದೆ. ಇದು ಪ್ರಜಾಪ್ರಬುತ್ವದ ಅಡಿಪಾಯವನ್ನು ಶಿಥಿಲಗೊಳಿಸದಂತೆ ಕಾಪಾಡುತ್ತದೆ.

ಇತ್ತೀಚಿನ ಉದಾಹರಣೆ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಕೃಶಿ ಬಿಕ್ಕಟ್ಟಿಗೆ ಕಾರಣವಾದ ರಾಜ್ಯ ಸರಕಾರದ ನೀತಿಗಳ ವಿರುದ್ದ ರೂಪುಗೊಂಡ aikss (all india kisan sangharsh samiti) ಸಂಘಟನೆ.

ಮಾರ್ಚ್ 2018ರಲ್ಲಿ ಭೂರಹಿತ ಕೂಲಿ ಕಾರ್ಮಿಕರ ಹೋರಾಟ ಸಂಘಟಿಸಿದ್ದ aikssನ ಸಾವಿರಾರು ಕೂಲಿ ಕಾರ್ಮಿಕರು ನಾಸಿಕ್ ನಿಂದ ಮುಂಬೈವರೆಗಿನ 750 ಕಿ. ಮೀ. ನ ಆ ಆಭೂತಪೂರ್ವ ಕಾಲ್ನಡಿಗೆ ಹೊಸ ಇತಿಹಾಸವನ್ನೇ ಬರೆಯಿತು. ‘ಜನರಿಂದ ಜನರಿಗಾಗಿ’ ರೂಪುಗೊಂಡಿದ್ದ ಆ ಹೋರಾಟ ಫ್ಯಾಸಿಸ್ಟ್ ಕಾಲದಲ್ಲಿಯೂ ಸಹ ನೂರಾರು ನದಿಗಳು ಸೇರಿಕೊಳ್ಳುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿತು.

ನಾಸಿಕ್ ನಿಂದ ಮುಂಬೈವರೆಗಿನ ರೈತರ ಬಹುದೊಡ್ಡ ಪಾದಯಾತ್ರೆ

ಇದರಿಂದಾಗಿ ಸ್ಪೂರ್ತಿ ಪಡೆದ ದೆಹಲಿ ರೈತ ಹೋರಾಟ ಮತ್ತೊಂದು ಚಾರಿತ್ರಿಕ ಘಟನೆಯಾಗಿದೆ. ಇದು ಮುಂದಿನ ರಚನಾತ್ಮಕ ಸಂಘಟನೆಗೆ ಚಿಮ್ಮು ಹಲಗೆಯಾಗಿದೆ.
ಪ್ರಜಾಪ್ರಬುತ್ವದಲ್ಲಿ ‘ಹೋರಾಟ ಮತ್ತು ಸಂಘಟನೆ’ ಬಿತ್ತಿದ ಬೀಜಗಳನ್ನು ರಚನಾತ್ಮಕ ಕಾರ್ಯಯೋಜನೆಗಳು ಗಿಡವಾಗಿ ಬೆಳೆಸುತ್ತವೆ. ಅದು ಕೊಂಬೆಗಳಾಗಿ ಟಿಸಿಲೊಡೆಯುತ್ತದೆ. ಇದು ಪ್ರಜಾಪ್ರಬುತ್ವದ ಆತ್ಮದಂತೆ.

ಪ್ರತಿಕ್ರಿಯೆ ಮತ್ತು ಕ್ರಿಯಾತ್ಮಕ ಎರಡೂ ಪೂರಕವಾಗಿ ಸಂಘಟಿತವಾಗುವುದರಿಂದಲೇ ಪ್ರಜಾಪ್ರಬುತ್ವವು ಉಸಿರಾಡುತ್ತದೆ.

ಈ ಪ್ರಕ್ರಿಯೆ ಎಶ್ಚೇ ಹಿನ್ನಡೆ ಅನುಬವಿಸಿದರೂ ಸಹ ಇವೆರಡರ ಕಾರಣದಿಂದ ಕನಿಶ್ಟ ಅಬಿವ್ಯಕ್ತಿ ಸ್ವಾತಂತ್ರ್ಯವಂತೂ ಖಾತರಿಯಾಗಿರುತ್ತದೆ. ಇಂದು ಬೀದಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವಶ್ಟು ಸ್ವಾತಂತ್ರವಿದೆ ಎಂದರೆ ಅದಕ್ಕೆ ಈ ಹೋರಾಟಗಳು ಕಾರಣ. ಇದರ ಮೇಲೆ ಮುಂದಿನ ಬವಿಶ್ಯವನ್ನು ಕಟ್ಟಬೇಕಿರುವುದು ಪ್ರಜ್ಞಾವಂತರ ಜವಬ್ದಾರಿ.

ಪ್ರಜಾಪ್ರಬುತ್ವದ ಈ ಆಯಾಮಗಳು, ಕೈ ದೀವಿಗೆಗಳು ಮತ್ತು ಆದಾರಸ್ತಂಬಗಳು ಒಂದೆಡೆಯಾದರೆ ‘ಚುನಾವಣಾ ಪ್ರಜಾಪ್ರಬುತ್ವ’ ಮತ್ತೊಂದು ಮಗ್ಗಲು. ಅದಿಕಾರ ರಾಜಕಾರಣ ಮಹತ್ವದ ಕಾರಣಕ್ಕೆ ಇದರ ಗೆಲುವು ಸೋಲುಗಳು ಮುಖ್ಯವಾಗುತ್ತದೆ.

ಆದರೆ ಬಿಜೆಪಿಯಂತಹ ಸರ್ವಾದಿಕಾರಿ ಪಕ್ಷವು ಅದಿಕಾರದ ಹಿಂದೆ ಬಿದ್ದಾಗ ಮಿಕ್ಕಿದೆಲ್ಲವನ್ನು ಬಿಟ್ಟು ಕೇವಲ ಚುನಾವಣಾ ರಾಜಕಾರಣವನ್ನು ಪ್ರಜಾಪ್ರಬುತ್ವದ ಮೌಲ್ಯಮಾಪನವಾಗಿಸಿಬಿಡುತ್ತದೆ. ಇದೊಂದು ಬೋನು.

680 ರೈತರು ಪ್ರಾಣಬಿಟ್ಟರೂ ತಲೆ ಕೆಡಿಸಿಕೊಳ್ಳದ ಸರ್ವಾದಿಕಾರಿಗಳು ಚುನಾವಣೆಗೋಸ್ಕರ ನಿರ್ದಾರ ತೆಗೆದುಕೊಳ್ಳುವಂತಹ ಒತ್ತಡಕ್ಕೆ ಒಳಗಾಗುತ್ತಾರೆ.

ಆದರೆ ನಿರಂತರ ಹೋರಾಟಗಳು ಇಂತಹ ನಿರಂಕುಶ ಪ್ರಬುತ್ವವನ್ನು ಬಗ್ಗಿಸಿ ಚುನಾವಣಾ ಗಿಮಿಕ್ ಮಾಡುವ ಅನಿವಾರ್ಯತೆಯನ್ನು ಸೃಶ್ಟಿ ಮಾಡುತ್ತವೆ ಎಂಬುದೇ ಪ್ರಜಾಪ್ರಬುತ್ವದ ಹಿರಿಮೆ. ಇಲ್ಲಿ ದೆಹಲಿ ರೈತ ಹೋರಾಟದ ಗೆಲುವಿದೆ.

ಆದರೆ ಭಾರತದಂತಹ ದುರ್ಬಲ ಪ್ರಜಾಪ್ರಬುತ್ವದಲ್ಲಿ ಮುನ್ನಡೆಯು ಈ ರೀತಿಯ ಪ್ಯಾಕೇಜ್ ಗಳ ರೀತಿಯಿರುತ್ತದೆ.

ಪ್ರಜಾಪ್ರಬುತ್ವವು ಡೈನಮಿಕ್ ಆಗಿರುವಂತೆ ಎಚ್ಚರ ವಹಿಸುವುದು ನಮ್ಮ ಹೊಣೆಗಾರಿಕೆ. ಅದು ಎರಡು ಹೆಜ್ಜೆ ಮುಂದೆ, ಮೂರು ಹೆಜ್ಜೆ ಹಿಂದೆ ರೀತಿ ಆಗಿದ್ದರೂ ಪರವಾಗಿಲ್ಲ, ಚಲನಶೀಲವಾಗಿರಬೇಕು. ಇದನ್ನು ದೆಹಲಿ ರೈತ ಹೋರಾಟ ಸಾದಿಸಿದೆ

ನಾನು ಎಡ ಚಳುವಳಿಯಲ್ಲಿದ್ದಾಗ ನಾವೆಲ್ಲ ಹಾಡುತ್ತಿದ್ದ ಸಾಲುಗಳು ಈಗಲೂ ಬೀಜ ವಾಕ್ಯಗಳು

“ಎಲ್ಲಿಂದ ಬಂದಿರಿ ಎಂದು ಕೇಳುತೀರಿ ನೀವು
ಜನರ ನಡುವಿಂದ ಬಂದೆವು ಎಂದು ಹೇಳುತೇವೆ ನಾವು
ಎಲ್ಲಿಗೆ ಹೋಗುವಿರಿ ಎಂದು ಕೇಳುವಿರಿ ನೀವು
ಮರಳಿ ಜನರ ಬಳಿಗೆ ಎಂದು ಹೇಳುತೇವೆ ನಾವು”

  • ಶ್ರೀಪಾದ್ ಭಟ್

ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...