Homeಮುಖಪುಟರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

- Advertisement -
- Advertisement -

(ಇದು ಹೊಸ ಬರಹದಲ್ಲಿದೆ, ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

ನಿಜದ ಪ್ರಜಾಪ್ರಬುತ್ವ ಎಂಬುದು ನಿದಾನ ಪ್ರಕ್ರಿಯೆ. ಅದು ಎಡವುತ್ತದೆ, ತೆವಳುತ್ತದೆ, ಕುಂಟುತ್ತದೆ. ನೇರವಾಗಿ ಸಾಗುವುದು ಪ್ರಜಾಪ್ರಬುತ್ವ ಎನಿಸಿಕೊಳ್ಳುವುದಿಲ್ಲ.
ಪ್ರಜಾಪ್ರಬುತ್ವ ಸಮಾಜದಲ್ಲಿ (ಅದು ತನ್ನ ಮೌಲ್ಯ ಕಳೆದುಕೊಂಡಿದ್ದರೂ ಸಹ) ಒಂದು ಹೋರಾಟ ಮತ್ತೊಂದು ಹೋರಾಟಕ್ಕೆ ಇದು ಮಗದೊಂದಕ್ಕೆ ಸ್ಪೂರ್ತಿಯಾಗುತ್ತಾ ಹೋಗುತ್ತದೆ. ಇದು ಪ್ರಜಾಪ್ರಬುತ್ವದ ಅಡಿಪಾಯವನ್ನು ಶಿಥಿಲಗೊಳಿಸದಂತೆ ಕಾಪಾಡುತ್ತದೆ.

ಇತ್ತೀಚಿನ ಉದಾಹರಣೆ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಕೃಶಿ ಬಿಕ್ಕಟ್ಟಿಗೆ ಕಾರಣವಾದ ರಾಜ್ಯ ಸರಕಾರದ ನೀತಿಗಳ ವಿರುದ್ದ ರೂಪುಗೊಂಡ aikss (all india kisan sangharsh samiti) ಸಂಘಟನೆ.

ಮಾರ್ಚ್ 2018ರಲ್ಲಿ ಭೂರಹಿತ ಕೂಲಿ ಕಾರ್ಮಿಕರ ಹೋರಾಟ ಸಂಘಟಿಸಿದ್ದ aikssನ ಸಾವಿರಾರು ಕೂಲಿ ಕಾರ್ಮಿಕರು ನಾಸಿಕ್ ನಿಂದ ಮುಂಬೈವರೆಗಿನ 750 ಕಿ. ಮೀ. ನ ಆ ಆಭೂತಪೂರ್ವ ಕಾಲ್ನಡಿಗೆ ಹೊಸ ಇತಿಹಾಸವನ್ನೇ ಬರೆಯಿತು. ‘ಜನರಿಂದ ಜನರಿಗಾಗಿ’ ರೂಪುಗೊಂಡಿದ್ದ ಆ ಹೋರಾಟ ಫ್ಯಾಸಿಸ್ಟ್ ಕಾಲದಲ್ಲಿಯೂ ಸಹ ನೂರಾರು ನದಿಗಳು ಸೇರಿಕೊಳ್ಳುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿತು.

ನಾಸಿಕ್ ನಿಂದ ಮುಂಬೈವರೆಗಿನ ರೈತರ ಬಹುದೊಡ್ಡ ಪಾದಯಾತ್ರೆ

ಇದರಿಂದಾಗಿ ಸ್ಪೂರ್ತಿ ಪಡೆದ ದೆಹಲಿ ರೈತ ಹೋರಾಟ ಮತ್ತೊಂದು ಚಾರಿತ್ರಿಕ ಘಟನೆಯಾಗಿದೆ. ಇದು ಮುಂದಿನ ರಚನಾತ್ಮಕ ಸಂಘಟನೆಗೆ ಚಿಮ್ಮು ಹಲಗೆಯಾಗಿದೆ.
ಪ್ರಜಾಪ್ರಬುತ್ವದಲ್ಲಿ ‘ಹೋರಾಟ ಮತ್ತು ಸಂಘಟನೆ’ ಬಿತ್ತಿದ ಬೀಜಗಳನ್ನು ರಚನಾತ್ಮಕ ಕಾರ್ಯಯೋಜನೆಗಳು ಗಿಡವಾಗಿ ಬೆಳೆಸುತ್ತವೆ. ಅದು ಕೊಂಬೆಗಳಾಗಿ ಟಿಸಿಲೊಡೆಯುತ್ತದೆ. ಇದು ಪ್ರಜಾಪ್ರಬುತ್ವದ ಆತ್ಮದಂತೆ.

ಪ್ರತಿಕ್ರಿಯೆ ಮತ್ತು ಕ್ರಿಯಾತ್ಮಕ ಎರಡೂ ಪೂರಕವಾಗಿ ಸಂಘಟಿತವಾಗುವುದರಿಂದಲೇ ಪ್ರಜಾಪ್ರಬುತ್ವವು ಉಸಿರಾಡುತ್ತದೆ.

ಈ ಪ್ರಕ್ರಿಯೆ ಎಶ್ಚೇ ಹಿನ್ನಡೆ ಅನುಬವಿಸಿದರೂ ಸಹ ಇವೆರಡರ ಕಾರಣದಿಂದ ಕನಿಶ್ಟ ಅಬಿವ್ಯಕ್ತಿ ಸ್ವಾತಂತ್ರ್ಯವಂತೂ ಖಾತರಿಯಾಗಿರುತ್ತದೆ. ಇಂದು ಬೀದಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವಶ್ಟು ಸ್ವಾತಂತ್ರವಿದೆ ಎಂದರೆ ಅದಕ್ಕೆ ಈ ಹೋರಾಟಗಳು ಕಾರಣ. ಇದರ ಮೇಲೆ ಮುಂದಿನ ಬವಿಶ್ಯವನ್ನು ಕಟ್ಟಬೇಕಿರುವುದು ಪ್ರಜ್ಞಾವಂತರ ಜವಬ್ದಾರಿ.

ಪ್ರಜಾಪ್ರಬುತ್ವದ ಈ ಆಯಾಮಗಳು, ಕೈ ದೀವಿಗೆಗಳು ಮತ್ತು ಆದಾರಸ್ತಂಬಗಳು ಒಂದೆಡೆಯಾದರೆ ‘ಚುನಾವಣಾ ಪ್ರಜಾಪ್ರಬುತ್ವ’ ಮತ್ತೊಂದು ಮಗ್ಗಲು. ಅದಿಕಾರ ರಾಜಕಾರಣ ಮಹತ್ವದ ಕಾರಣಕ್ಕೆ ಇದರ ಗೆಲುವು ಸೋಲುಗಳು ಮುಖ್ಯವಾಗುತ್ತದೆ.

ಆದರೆ ಬಿಜೆಪಿಯಂತಹ ಸರ್ವಾದಿಕಾರಿ ಪಕ್ಷವು ಅದಿಕಾರದ ಹಿಂದೆ ಬಿದ್ದಾಗ ಮಿಕ್ಕಿದೆಲ್ಲವನ್ನು ಬಿಟ್ಟು ಕೇವಲ ಚುನಾವಣಾ ರಾಜಕಾರಣವನ್ನು ಪ್ರಜಾಪ್ರಬುತ್ವದ ಮೌಲ್ಯಮಾಪನವಾಗಿಸಿಬಿಡುತ್ತದೆ. ಇದೊಂದು ಬೋನು.

680 ರೈತರು ಪ್ರಾಣಬಿಟ್ಟರೂ ತಲೆ ಕೆಡಿಸಿಕೊಳ್ಳದ ಸರ್ವಾದಿಕಾರಿಗಳು ಚುನಾವಣೆಗೋಸ್ಕರ ನಿರ್ದಾರ ತೆಗೆದುಕೊಳ್ಳುವಂತಹ ಒತ್ತಡಕ್ಕೆ ಒಳಗಾಗುತ್ತಾರೆ.

ಆದರೆ ನಿರಂತರ ಹೋರಾಟಗಳು ಇಂತಹ ನಿರಂಕುಶ ಪ್ರಬುತ್ವವನ್ನು ಬಗ್ಗಿಸಿ ಚುನಾವಣಾ ಗಿಮಿಕ್ ಮಾಡುವ ಅನಿವಾರ್ಯತೆಯನ್ನು ಸೃಶ್ಟಿ ಮಾಡುತ್ತವೆ ಎಂಬುದೇ ಪ್ರಜಾಪ್ರಬುತ್ವದ ಹಿರಿಮೆ. ಇಲ್ಲಿ ದೆಹಲಿ ರೈತ ಹೋರಾಟದ ಗೆಲುವಿದೆ.

ಆದರೆ ಭಾರತದಂತಹ ದುರ್ಬಲ ಪ್ರಜಾಪ್ರಬುತ್ವದಲ್ಲಿ ಮುನ್ನಡೆಯು ಈ ರೀತಿಯ ಪ್ಯಾಕೇಜ್ ಗಳ ರೀತಿಯಿರುತ್ತದೆ.

ಪ್ರಜಾಪ್ರಬುತ್ವವು ಡೈನಮಿಕ್ ಆಗಿರುವಂತೆ ಎಚ್ಚರ ವಹಿಸುವುದು ನಮ್ಮ ಹೊಣೆಗಾರಿಕೆ. ಅದು ಎರಡು ಹೆಜ್ಜೆ ಮುಂದೆ, ಮೂರು ಹೆಜ್ಜೆ ಹಿಂದೆ ರೀತಿ ಆಗಿದ್ದರೂ ಪರವಾಗಿಲ್ಲ, ಚಲನಶೀಲವಾಗಿರಬೇಕು. ಇದನ್ನು ದೆಹಲಿ ರೈತ ಹೋರಾಟ ಸಾದಿಸಿದೆ

ನಾನು ಎಡ ಚಳುವಳಿಯಲ್ಲಿದ್ದಾಗ ನಾವೆಲ್ಲ ಹಾಡುತ್ತಿದ್ದ ಸಾಲುಗಳು ಈಗಲೂ ಬೀಜ ವಾಕ್ಯಗಳು

“ಎಲ್ಲಿಂದ ಬಂದಿರಿ ಎಂದು ಕೇಳುತೀರಿ ನೀವು
ಜನರ ನಡುವಿಂದ ಬಂದೆವು ಎಂದು ಹೇಳುತೇವೆ ನಾವು
ಎಲ್ಲಿಗೆ ಹೋಗುವಿರಿ ಎಂದು ಕೇಳುವಿರಿ ನೀವು
ಮರಳಿ ಜನರ ಬಳಿಗೆ ಎಂದು ಹೇಳುತೇವೆ ನಾವು”

  • ಶ್ರೀಪಾದ್ ಭಟ್

ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...