Homeಮುಖಪುಟರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

- Advertisement -
- Advertisement -

(ಇದು ಹೊಸ ಬರಹದಲ್ಲಿದೆ, ಮಹಾಪ್ರಾಣಗಳನ್ನು ನಿಯಮಿತವಾಗಿ ಬಳಸಲಾಗಿದೆ)

ನಿಜದ ಪ್ರಜಾಪ್ರಬುತ್ವ ಎಂಬುದು ನಿದಾನ ಪ್ರಕ್ರಿಯೆ. ಅದು ಎಡವುತ್ತದೆ, ತೆವಳುತ್ತದೆ, ಕುಂಟುತ್ತದೆ. ನೇರವಾಗಿ ಸಾಗುವುದು ಪ್ರಜಾಪ್ರಬುತ್ವ ಎನಿಸಿಕೊಳ್ಳುವುದಿಲ್ಲ.
ಪ್ರಜಾಪ್ರಬುತ್ವ ಸಮಾಜದಲ್ಲಿ (ಅದು ತನ್ನ ಮೌಲ್ಯ ಕಳೆದುಕೊಂಡಿದ್ದರೂ ಸಹ) ಒಂದು ಹೋರಾಟ ಮತ್ತೊಂದು ಹೋರಾಟಕ್ಕೆ ಇದು ಮಗದೊಂದಕ್ಕೆ ಸ್ಪೂರ್ತಿಯಾಗುತ್ತಾ ಹೋಗುತ್ತದೆ. ಇದು ಪ್ರಜಾಪ್ರಬುತ್ವದ ಅಡಿಪಾಯವನ್ನು ಶಿಥಿಲಗೊಳಿಸದಂತೆ ಕಾಪಾಡುತ್ತದೆ.

ಇತ್ತೀಚಿನ ಉದಾಹರಣೆ ನೋಡುವುದಾದರೆ ಮಹಾರಾಷ್ಟ್ರದಲ್ಲಿ ಕೃಶಿ ಬಿಕ್ಕಟ್ಟಿಗೆ ಕಾರಣವಾದ ರಾಜ್ಯ ಸರಕಾರದ ನೀತಿಗಳ ವಿರುದ್ದ ರೂಪುಗೊಂಡ aikss (all india kisan sangharsh samiti) ಸಂಘಟನೆ.

ಮಾರ್ಚ್ 2018ರಲ್ಲಿ ಭೂರಹಿತ ಕೂಲಿ ಕಾರ್ಮಿಕರ ಹೋರಾಟ ಸಂಘಟಿಸಿದ್ದ aikssನ ಸಾವಿರಾರು ಕೂಲಿ ಕಾರ್ಮಿಕರು ನಾಸಿಕ್ ನಿಂದ ಮುಂಬೈವರೆಗಿನ 750 ಕಿ. ಮೀ. ನ ಆ ಆಭೂತಪೂರ್ವ ಕಾಲ್ನಡಿಗೆ ಹೊಸ ಇತಿಹಾಸವನ್ನೇ ಬರೆಯಿತು. ‘ಜನರಿಂದ ಜನರಿಗಾಗಿ’ ರೂಪುಗೊಂಡಿದ್ದ ಆ ಹೋರಾಟ ಫ್ಯಾಸಿಸ್ಟ್ ಕಾಲದಲ್ಲಿಯೂ ಸಹ ನೂರಾರು ನದಿಗಳು ಸೇರಿಕೊಳ್ಳುವ ಅನೇಕ ಸಾಧ್ಯತೆಗಳನ್ನು ತೆರೆದಿಟ್ಟಿತು.

ನಾಸಿಕ್ ನಿಂದ ಮುಂಬೈವರೆಗಿನ ರೈತರ ಬಹುದೊಡ್ಡ ಪಾದಯಾತ್ರೆ

ಇದರಿಂದಾಗಿ ಸ್ಪೂರ್ತಿ ಪಡೆದ ದೆಹಲಿ ರೈತ ಹೋರಾಟ ಮತ್ತೊಂದು ಚಾರಿತ್ರಿಕ ಘಟನೆಯಾಗಿದೆ. ಇದು ಮುಂದಿನ ರಚನಾತ್ಮಕ ಸಂಘಟನೆಗೆ ಚಿಮ್ಮು ಹಲಗೆಯಾಗಿದೆ.
ಪ್ರಜಾಪ್ರಬುತ್ವದಲ್ಲಿ ‘ಹೋರಾಟ ಮತ್ತು ಸಂಘಟನೆ’ ಬಿತ್ತಿದ ಬೀಜಗಳನ್ನು ರಚನಾತ್ಮಕ ಕಾರ್ಯಯೋಜನೆಗಳು ಗಿಡವಾಗಿ ಬೆಳೆಸುತ್ತವೆ. ಅದು ಕೊಂಬೆಗಳಾಗಿ ಟಿಸಿಲೊಡೆಯುತ್ತದೆ. ಇದು ಪ್ರಜಾಪ್ರಬುತ್ವದ ಆತ್ಮದಂತೆ.

ಪ್ರತಿಕ್ರಿಯೆ ಮತ್ತು ಕ್ರಿಯಾತ್ಮಕ ಎರಡೂ ಪೂರಕವಾಗಿ ಸಂಘಟಿತವಾಗುವುದರಿಂದಲೇ ಪ್ರಜಾಪ್ರಬುತ್ವವು ಉಸಿರಾಡುತ್ತದೆ.

ಈ ಪ್ರಕ್ರಿಯೆ ಎಶ್ಚೇ ಹಿನ್ನಡೆ ಅನುಬವಿಸಿದರೂ ಸಹ ಇವೆರಡರ ಕಾರಣದಿಂದ ಕನಿಶ್ಟ ಅಬಿವ್ಯಕ್ತಿ ಸ್ವಾತಂತ್ರ್ಯವಂತೂ ಖಾತರಿಯಾಗಿರುತ್ತದೆ. ಇಂದು ಬೀದಿಗಳಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಮಾಡುವಶ್ಟು ಸ್ವಾತಂತ್ರವಿದೆ ಎಂದರೆ ಅದಕ್ಕೆ ಈ ಹೋರಾಟಗಳು ಕಾರಣ. ಇದರ ಮೇಲೆ ಮುಂದಿನ ಬವಿಶ್ಯವನ್ನು ಕಟ್ಟಬೇಕಿರುವುದು ಪ್ರಜ್ಞಾವಂತರ ಜವಬ್ದಾರಿ.

ಪ್ರಜಾಪ್ರಬುತ್ವದ ಈ ಆಯಾಮಗಳು, ಕೈ ದೀವಿಗೆಗಳು ಮತ್ತು ಆದಾರಸ್ತಂಬಗಳು ಒಂದೆಡೆಯಾದರೆ ‘ಚುನಾವಣಾ ಪ್ರಜಾಪ್ರಬುತ್ವ’ ಮತ್ತೊಂದು ಮಗ್ಗಲು. ಅದಿಕಾರ ರಾಜಕಾರಣ ಮಹತ್ವದ ಕಾರಣಕ್ಕೆ ಇದರ ಗೆಲುವು ಸೋಲುಗಳು ಮುಖ್ಯವಾಗುತ್ತದೆ.

ಆದರೆ ಬಿಜೆಪಿಯಂತಹ ಸರ್ವಾದಿಕಾರಿ ಪಕ್ಷವು ಅದಿಕಾರದ ಹಿಂದೆ ಬಿದ್ದಾಗ ಮಿಕ್ಕಿದೆಲ್ಲವನ್ನು ಬಿಟ್ಟು ಕೇವಲ ಚುನಾವಣಾ ರಾಜಕಾರಣವನ್ನು ಪ್ರಜಾಪ್ರಬುತ್ವದ ಮೌಲ್ಯಮಾಪನವಾಗಿಸಿಬಿಡುತ್ತದೆ. ಇದೊಂದು ಬೋನು.

680 ರೈತರು ಪ್ರಾಣಬಿಟ್ಟರೂ ತಲೆ ಕೆಡಿಸಿಕೊಳ್ಳದ ಸರ್ವಾದಿಕಾರಿಗಳು ಚುನಾವಣೆಗೋಸ್ಕರ ನಿರ್ದಾರ ತೆಗೆದುಕೊಳ್ಳುವಂತಹ ಒತ್ತಡಕ್ಕೆ ಒಳಗಾಗುತ್ತಾರೆ.

ಆದರೆ ನಿರಂತರ ಹೋರಾಟಗಳು ಇಂತಹ ನಿರಂಕುಶ ಪ್ರಬುತ್ವವನ್ನು ಬಗ್ಗಿಸಿ ಚುನಾವಣಾ ಗಿಮಿಕ್ ಮಾಡುವ ಅನಿವಾರ್ಯತೆಯನ್ನು ಸೃಶ್ಟಿ ಮಾಡುತ್ತವೆ ಎಂಬುದೇ ಪ್ರಜಾಪ್ರಬುತ್ವದ ಹಿರಿಮೆ. ಇಲ್ಲಿ ದೆಹಲಿ ರೈತ ಹೋರಾಟದ ಗೆಲುವಿದೆ.

ಆದರೆ ಭಾರತದಂತಹ ದುರ್ಬಲ ಪ್ರಜಾಪ್ರಬುತ್ವದಲ್ಲಿ ಮುನ್ನಡೆಯು ಈ ರೀತಿಯ ಪ್ಯಾಕೇಜ್ ಗಳ ರೀತಿಯಿರುತ್ತದೆ.

ಪ್ರಜಾಪ್ರಬುತ್ವವು ಡೈನಮಿಕ್ ಆಗಿರುವಂತೆ ಎಚ್ಚರ ವಹಿಸುವುದು ನಮ್ಮ ಹೊಣೆಗಾರಿಕೆ. ಅದು ಎರಡು ಹೆಜ್ಜೆ ಮುಂದೆ, ಮೂರು ಹೆಜ್ಜೆ ಹಿಂದೆ ರೀತಿ ಆಗಿದ್ದರೂ ಪರವಾಗಿಲ್ಲ, ಚಲನಶೀಲವಾಗಿರಬೇಕು. ಇದನ್ನು ದೆಹಲಿ ರೈತ ಹೋರಾಟ ಸಾದಿಸಿದೆ

ನಾನು ಎಡ ಚಳುವಳಿಯಲ್ಲಿದ್ದಾಗ ನಾವೆಲ್ಲ ಹಾಡುತ್ತಿದ್ದ ಸಾಲುಗಳು ಈಗಲೂ ಬೀಜ ವಾಕ್ಯಗಳು

“ಎಲ್ಲಿಂದ ಬಂದಿರಿ ಎಂದು ಕೇಳುತೀರಿ ನೀವು
ಜನರ ನಡುವಿಂದ ಬಂದೆವು ಎಂದು ಹೇಳುತೇವೆ ನಾವು
ಎಲ್ಲಿಗೆ ಹೋಗುವಿರಿ ಎಂದು ಕೇಳುವಿರಿ ನೀವು
ಮರಳಿ ಜನರ ಬಳಿಗೆ ಎಂದು ಹೇಳುತೇವೆ ನಾವು”

  • ಶ್ರೀಪಾದ್ ಭಟ್

ಇದನ್ನೂ ಓದಿ: ಮೊದಲು ನಿರ್ಲಕ್ಷಿಸುತ್ತಾರೆ, ನಂತರ ನಗುತ್ತಾರೆ, ಕುಸ್ತಿಗೆ ಬರುತ್ತಾರೆ, ನೀನು ಗೆಲ್ಲುತ್ತೀಯ: ರೈತ ಹೋರಾಟದ ಪಾಠ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...