Homeಕರ್ನಾಟಕಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

- Advertisement -
- Advertisement -

ಗ್ರಾಮದಲ್ಲಿ ಅನಧೀಕೃತವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಮತ್ತು ನಾಗರೀಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗ್ರಾಮದ ಅಂಚೆಚೋಮನಹಳ್ಳಿ ಗೇಟ್‌ ಬಳಿ ಕಳೆದ ವರ್ಷ ಅನಧೀಕೃತವಾಗಿ ‘ಚಂದನಾ ವೈನ್ಸ್‌ ಬಾರ್‌’ ತೆರೆಯಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ ಪತ್ರದಲ್ಲಿ ಆರೋಪಿಸಲಾಗಿದೆ.

ಬಾರ್‌ ಇರುವ ಸ್ಥಳವು ಕೃಷಿಭೂಮಿಯಾಗಿದ್ದು, ಕಮರ್ಶಿಯಲ್‌ ಸ್ಥಳವಲ್ಲ ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಪತ್ರದಲ್ಲಿ ಉಲ್ಲೇಖಿಸಿದ್ದು, ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಕೆರೆಸಂತೆ ಗ್ರಾಮ ಪಂಚಾಯತ್‌‌ನ 12 ಹಳ್ಳಿಗಳಲ್ಲಿ ಹೆಚ್ಚಿನ ಜನರು ಪರಿಶಿಷ್ಟ್‌ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದು, ಅದರಲ್ಲೂ ಅಂಚೆಚೋಮನಹಳ್ಳಿ ಪ್ರದೇಶದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರೇ ಹೆಚ್ಚು ವಾಸವಿದ್ದಾರೆ. ಈ ಬಾರ್‌‌ನಿಂದಾಗಿ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಸ್ತುತ ಬಾರ್‌ ಇರುವ ನೂರಿನ್ನೂರು ಮೀಟರ್‌ ಅಂತರದಲ್ಲಿ ಮೊರಾರ್ಜಿ ವಸತಿ ಶಾಲೆ ಕೂಡಾ ಇದ್ದು, ಇದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಪೋಷಕರಿಗೂ ತೊಂದರೆ ನೀಡುತ್ತದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದು, “ಕೆಳೆದ ತಿಂಗಳು, ಮದ್ಯಪಾನ ಮಾಡಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ಗ್ರಾಮಸ್ಥರು ಅಫಘಾತಕ್ಕೆ ಈಡಾಗಿ ಮೃತಪಟ್ಟಿದ್ದರು” ಎಂದು ಆರೋಪಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆರೆಸಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅಶ್ವಿನಿ ಅವರು, “ಕಳೆದ ಜುಲೈನಿಂದ ಮಹಿಳೆಯರು ಇಲ್ಲಿ ಮದ್ಯದ ಅಂಗಡಿ ಬೇಡ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ಯದ ಅಂಗಡಿ ಮಾಲಿಕರು ಅಂಗಡಿಗೆ ಬೇಕಾಗಿರುವ ಪರವಾನಗಿಯನ್ನು ಕೂಡಾ ಗ್ರಾಮ ಪಂಚಾಯತ್‌‌ನಿಂದ ಪಡೆದಿಲ್ಲ. ಪಂಚಾಯತ್‌ನ ಮಹಿಳಾ ಸದಸ್ಯರು ಸೇರಿದಂತೆ ಹಲವಾರು ಸದಸ್ಯರು ಮದ್ಯದ ಅಂಗಡಿ ವಿರುದ್ದ ಇದ್ದಾರೆ. ಹೀಗಾಗಿ ನಾವು ಗ್ರಾಮದ ಮಹಿಳೆಯರ ಪರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂ ಜೊತೆಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾತನಾಡಿ, “ಮದ್ಯದ ಅಂಗಡಿಯಿಂದಾಗಿ ಸ್ಥಳೀಯರಿಗೆ ಮತ್ತು ಪಕ್ಕವೆ ಇರುವ ಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಿದೆ. ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ. ಬಾರ್‌ ಅನ್ನು ಪ್ರಶ್ನಿಸಿ ಬಗ್ಗೆ ನಾವು ಸಂವಿಧಾನದ ಆರ್ಟಿಕಲ್ 47 ಅಡಿಯಲ್ಲಿ ಹೈಕೋರ್ಟ್‌‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್‌ 47 ಪ್ರಕಾರ, ಸಾರ್ವಜನಿಕರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಿಸುವುದು. ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ಪಾನೀಯಗಳು ಮತ್ತು ಮಾದಕವಸ್ತುಗಳ ನಿಷೇಧ ಮಾಡಲು ಸರ್ಕಾರವು ಪ್ರಯತ್ನಿಸಬೇಕಾಗಿದೆ.

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.

ಅಲ್ಲದೆ, ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಜೊತೆಗೆ ಅಬಕಾರಿ ಪರವಾನಗಿ ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...