Homeಕರ್ನಾಟಕಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

- Advertisement -
- Advertisement -

ಗ್ರಾಮದಲ್ಲಿ ಅನಧೀಕೃತವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಮತ್ತು ನಾಗರೀಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗ್ರಾಮದ ಅಂಚೆಚೋಮನಹಳ್ಳಿ ಗೇಟ್‌ ಬಳಿ ಕಳೆದ ವರ್ಷ ಅನಧೀಕೃತವಾಗಿ ‘ಚಂದನಾ ವೈನ್ಸ್‌ ಬಾರ್‌’ ತೆರೆಯಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ ಪತ್ರದಲ್ಲಿ ಆರೋಪಿಸಲಾಗಿದೆ.

ಬಾರ್‌ ಇರುವ ಸ್ಥಳವು ಕೃಷಿಭೂಮಿಯಾಗಿದ್ದು, ಕಮರ್ಶಿಯಲ್‌ ಸ್ಥಳವಲ್ಲ ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಪತ್ರದಲ್ಲಿ ಉಲ್ಲೇಖಿಸಿದ್ದು, ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಕೆರೆಸಂತೆ ಗ್ರಾಮ ಪಂಚಾಯತ್‌‌ನ 12 ಹಳ್ಳಿಗಳಲ್ಲಿ ಹೆಚ್ಚಿನ ಜನರು ಪರಿಶಿಷ್ಟ್‌ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದು, ಅದರಲ್ಲೂ ಅಂಚೆಚೋಮನಹಳ್ಳಿ ಪ್ರದೇಶದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರೇ ಹೆಚ್ಚು ವಾಸವಿದ್ದಾರೆ. ಈ ಬಾರ್‌‌ನಿಂದಾಗಿ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಸ್ತುತ ಬಾರ್‌ ಇರುವ ನೂರಿನ್ನೂರು ಮೀಟರ್‌ ಅಂತರದಲ್ಲಿ ಮೊರಾರ್ಜಿ ವಸತಿ ಶಾಲೆ ಕೂಡಾ ಇದ್ದು, ಇದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಪೋಷಕರಿಗೂ ತೊಂದರೆ ನೀಡುತ್ತದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದು, “ಕೆಳೆದ ತಿಂಗಳು, ಮದ್ಯಪಾನ ಮಾಡಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ಗ್ರಾಮಸ್ಥರು ಅಫಘಾತಕ್ಕೆ ಈಡಾಗಿ ಮೃತಪಟ್ಟಿದ್ದರು” ಎಂದು ಆರೋಪಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆರೆಸಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅಶ್ವಿನಿ ಅವರು, “ಕಳೆದ ಜುಲೈನಿಂದ ಮಹಿಳೆಯರು ಇಲ್ಲಿ ಮದ್ಯದ ಅಂಗಡಿ ಬೇಡ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ಯದ ಅಂಗಡಿ ಮಾಲಿಕರು ಅಂಗಡಿಗೆ ಬೇಕಾಗಿರುವ ಪರವಾನಗಿಯನ್ನು ಕೂಡಾ ಗ್ರಾಮ ಪಂಚಾಯತ್‌‌ನಿಂದ ಪಡೆದಿಲ್ಲ. ಪಂಚಾಯತ್‌ನ ಮಹಿಳಾ ಸದಸ್ಯರು ಸೇರಿದಂತೆ ಹಲವಾರು ಸದಸ್ಯರು ಮದ್ಯದ ಅಂಗಡಿ ವಿರುದ್ದ ಇದ್ದಾರೆ. ಹೀಗಾಗಿ ನಾವು ಗ್ರಾಮದ ಮಹಿಳೆಯರ ಪರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂ ಜೊತೆಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾತನಾಡಿ, “ಮದ್ಯದ ಅಂಗಡಿಯಿಂದಾಗಿ ಸ್ಥಳೀಯರಿಗೆ ಮತ್ತು ಪಕ್ಕವೆ ಇರುವ ಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಿದೆ. ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ. ಬಾರ್‌ ಅನ್ನು ಪ್ರಶ್ನಿಸಿ ಬಗ್ಗೆ ನಾವು ಸಂವಿಧಾನದ ಆರ್ಟಿಕಲ್ 47 ಅಡಿಯಲ್ಲಿ ಹೈಕೋರ್ಟ್‌‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್‌ 47 ಪ್ರಕಾರ, ಸಾರ್ವಜನಿಕರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಿಸುವುದು. ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ಪಾನೀಯಗಳು ಮತ್ತು ಮಾದಕವಸ್ತುಗಳ ನಿಷೇಧ ಮಾಡಲು ಸರ್ಕಾರವು ಪ್ರಯತ್ನಿಸಬೇಕಾಗಿದೆ.

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.

ಅಲ್ಲದೆ, ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಜೊತೆಗೆ ಅಬಕಾರಿ ಪರವಾನಗಿ ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...