Homeಕರ್ನಾಟಕಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿ ತೆರವುಗೊಳಿಸುವಂತೆ ಪ್ರಧಾನಮಂತ್ರಿಗೆ ಪತ್ರ ಬರೆದ ಚಿಕ್ಕಮಗಳೂರು ಜಿಲ್ಲೆಯ ಕೆರೆಸಂತೆ ಗ್ರಾಮಸ್ಥರು

ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

- Advertisement -
- Advertisement -

ಗ್ರಾಮದಲ್ಲಿ ಅನಧೀಕೃತವಾಗಿ ತೆರೆದಿರುವ ಮದ್ಯದ ಅಂಗಡಿಯನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಕೆರೆಸಂತೆ ಗ್ರಾಮಪಂಚಾಯತ್‌ನ ಅಧ್ಯಕ್ಷರು, ಸದಸ್ಯರು ಮತ್ತು ನಾಗರೀಕರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಗ್ರಾಮದ ಅಂಚೆಚೋಮನಹಳ್ಳಿ ಗೇಟ್‌ ಬಳಿ ಕಳೆದ ವರ್ಷ ಅನಧೀಕೃತವಾಗಿ ‘ಚಂದನಾ ವೈನ್ಸ್‌ ಬಾರ್‌’ ತೆರೆಯಲಾಗಿದ್ದು, ಇದರಿಂದಾಗಿ ಪ್ರದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗಿದೆ ಪತ್ರದಲ್ಲಿ ಆರೋಪಿಸಲಾಗಿದೆ.

ಬಾರ್‌ ಇರುವ ಸ್ಥಳವು ಕೃಷಿಭೂಮಿಯಾಗಿದ್ದು, ಕಮರ್ಶಿಯಲ್‌ ಸ್ಥಳವಲ್ಲ ಎಂದು ಗ್ರಾಮ ಪಂಚಾಯತ್‌ ಅಧ್ಯಕ್ಷರು ಪತ್ರದಲ್ಲಿ ಉಲ್ಲೇಖಿಸಿದ್ದು, ಮದ್ಯದ ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮದ್ಯದ ಅಂಗಡಿಗಳನ್ನು ತೆರೆಯುವ ಅವಿವೇಕದ ಕೆಲಸವನ್ನು ಸರ್ಕಾರ ಮಾಡಬಾರದು.

ಕೆರೆಸಂತೆ ಗ್ರಾಮ ಪಂಚಾಯತ್‌‌ನ 12 ಹಳ್ಳಿಗಳಲ್ಲಿ ಹೆಚ್ಚಿನ ಜನರು ಪರಿಶಿಷ್ಟ್‌ ಜಾತಿ ಮತ್ತು ಪಂಗಡಕ್ಕೆ ಸೇರಿದವರಾಗಿದ್ದು, ಅದರಲ್ಲೂ ಅಂಚೆಚೋಮನಹಳ್ಳಿ ಪ್ರದೇಶದಲ್ಲಿ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಜನರೇ ಹೆಚ್ಚು ವಾಸವಿದ್ದಾರೆ. ಈ ಬಾರ್‌‌ನಿಂದಾಗಿ ಅವರೆಲ್ಲರೂ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಪ್ರಸ್ತುತ ಬಾರ್‌ ಇರುವ ನೂರಿನ್ನೂರು ಮೀಟರ್‌ ಅಂತರದಲ್ಲಿ ಮೊರಾರ್ಜಿ ವಸತಿ ಶಾಲೆ ಕೂಡಾ ಇದ್ದು, ಇದು ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅವರ ಪೋಷಕರಿಗೂ ತೊಂದರೆ ನೀಡುತ್ತದೆ ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಹೇಳಿದ್ದು, “ಕೆಳೆದ ತಿಂಗಳು, ಮದ್ಯಪಾನ ಮಾಡಿ ರಸ್ತೆ ಬದಿಯಲ್ಲಿ ಮಲಗಿದ್ದ ಇಬ್ಬರು ಗ್ರಾಮಸ್ಥರು ಅಫಘಾತಕ್ಕೆ ಈಡಾಗಿ ಮೃತಪಟ್ಟಿದ್ದರು” ಎಂದು ಆರೋಪಿಸಲಾಗಿದೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಕೆರೆಸಂತೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಅಶ್ವಿನಿ ಅವರು, “ಕಳೆದ ಜುಲೈನಿಂದ ಮಹಿಳೆಯರು ಇಲ್ಲಿ ಮದ್ಯದ ಅಂಗಡಿ ಬೇಡ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ. ಮದ್ಯದ ಅಂಗಡಿ ಮಾಲಿಕರು ಅಂಗಡಿಗೆ ಬೇಕಾಗಿರುವ ಪರವಾನಗಿಯನ್ನು ಕೂಡಾ ಗ್ರಾಮ ಪಂಚಾಯತ್‌‌ನಿಂದ ಪಡೆದಿಲ್ಲ. ಪಂಚಾಯತ್‌ನ ಮಹಿಳಾ ಸದಸ್ಯರು ಸೇರಿದಂತೆ ಹಲವಾರು ಸದಸ್ಯರು ಮದ್ಯದ ಅಂಗಡಿ ವಿರುದ್ದ ಇದ್ದಾರೆ. ಹೀಗಾಗಿ ನಾವು ಗ್ರಾಮದ ಮಹಿಳೆಯರ ಪರವಾಗಿ ಪ್ರಧಾನ ಮಂತ್ರಿಗೆ ಪತ್ರ ಬರೆದಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಮಹಿಳೆಯರ ದಿಟ್ಟ ಹೋರಾಟಕ್ಕೆ ಜಯ: ಮದ್ಯದಂಗಡಿ ಸ್ಥಳಾಂತರಕ್ಕೆ ಆದೇಶ

ನಾನುಗೌರಿ.ಕಾಂ ಜೊತೆಗೆ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮಾತನಾಡಿ, “ಮದ್ಯದ ಅಂಗಡಿಯಿಂದಾಗಿ ಸ್ಥಳೀಯರಿಗೆ ಮತ್ತು ಪಕ್ಕವೆ ಇರುವ ಶಾಲೆಯ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ತೊಂದರೆಯಾಗಿದೆ. ಅಂಗಡಿಗೆ ಸ್ಥಳೀಯ ಗ್ರಾಮ ಪಂಚಾಯತ್‌ನಿಂದ ಪರವಾನಗಿ ಕೂಡಾ ಪಡೆದಿಲ್ಲ. ಬಾರ್‌ ಅನ್ನು ಪ್ರಶ್ನಿಸಿ ಬಗ್ಗೆ ನಾವು ಸಂವಿಧಾನದ ಆರ್ಟಿಕಲ್ 47 ಅಡಿಯಲ್ಲಿ ಹೈಕೋರ್ಟ್‌‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಭಾರತ ಸಂವಿಧಾನದ ಆರ್ಟಿಕಲ್‌ 47 ಪ್ರಕಾರ, ಸಾರ್ವಜನಿಕರ ಆರೋಗ್ಯ ಮತ್ತು ಜೀವನ ಮಟ್ಟ ಸುಧಾರಿಸುವುದು. ಆರೋಗ್ಯಕ್ಕೆ ಹಾನಿಯುಂಟುಮಾಡುವ ಮಾದಕ ಪಾನೀಯಗಳು ಮತ್ತು ಮಾದಕವಸ್ತುಗಳ ನಿಷೇಧ ಮಾಡಲು ಸರ್ಕಾರವು ಪ್ರಯತ್ನಿಸಬೇಕಾಗಿದೆ.

ಕರ್ನಾಟಕ ಅಬಕಾರಿ ಅಧಿನಿಯಮ, 1967 ರ ರೂಲ್‌ 5 ರ ಪ್ರಕಾರ ಶಾಲೆ, ಧಾರ್ಮಿಕ ಸ್ಥಳ, ಆಸ್ಪತ್ರೆ, ಎಸ್‌ಸಿ ಎಸ್‌ಎಸ್‌ಟಿ ಸಮುದಾಯದ ಜನವಸತಿಯಿಂದ 100 ಮಿ. ಅಂತರದಲ್ಲಿ ಮದ್ಯದಂಗಡಿಯನ್ನು ತೆರೆಯುವಂತಿಲ್ಲ. ಕರ್ನಾಟಕ ವೈನ್‌ ಮರ್ಚೆಂಟ್ಸ್‌ vs ಕರ್ನಾಟಕ ರಾಜ್ಯ ಪ್ರಕರಣದಲ್ಲಿ ಹೈಕೋರ್ಟ್ ಜನವಸತಿ, ಶಿಕ್ಷಣ ಸಂಸ್ಥೆಗಳು, ಆರೋಗ್ಯ ಸಂಸ್ಥೆ, ಧಾರ್ಮಿಕ ಸ್ಥಳದ ಸಮೀಪ ಮದ್ಯದಂಗಡಿಯನ್ನು ತೆರೆಯಬಾರದು ಎಂದು ಆದೇಶ ನೀಡಿದೆ.

ಅಲ್ಲದೆ, ಜನ ವಿರೋಧವಿದ್ದಾಗ 100 ಮೀ. ಎಂಬ ಸರ್ಕಾರಿ ಮಾನದಂಡಕ್ಕೆ ಕಟ್ಟು ಬಿದ್ದು ಮದ್ಯದಂಗಡಿ ತೆರೆಯುವುದು ಸೂಕ್ತವಲ್ಲ ಎಂದು ಕರ್ನಾಟಕ ಹೈಕೋರ್ಟ್‌ 1997 ರಲ್ಲಿ ಅಭಿಪ್ರಾಯ ಪಟ್ಟಿದೆ. ಜೊತೆಗೆ ಅಬಕಾರಿ ಪರವಾನಗಿ ನೀಡುವ ಮುನ್ನ 100 ಮೀ. ಅಂತರ ಎಂಬ ನಿಯಮ 5 ಕ್ಕೆ ಬದ್ಧರಾಗಿ ಜನಸಾಮಾನ್ಯರ ಸಾಮಾಜಿಕ ಸ್ಥಿತಿಗತಿಗಳನ್ನು ಕಡೆಗಣಿಸಬಾರದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿ:ಅಬಕಾರಿ ಇಲಾಖೆಯಿಂದ ಜನಾರೋಗ್ಯ ಕಡೆಗಣನೆ: ಮದ್ಯದಂಗಡಿ ತೆರವಿಗೆ ನೂರಾರು ಮಹಿಳೆಯರ ನಿರಂತರ ಧರಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...