Homeಕರ್ನಾಟಕಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ - 3,800 ಬಂದನ

ಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ – 3,800 ಬಂದನ

ಎಲ್ಲರ ಕನ್ನಡ ಚರ್‍ಚೆಯ ಬಾಗವಾಗಿ ಮಾಡಲಾಗಿರುವ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣಗಳ ಬಳಕೆಯನ್ನು ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಇಂದನ ಬೆಲೆಗಳ ಹೆಚ್ಚಳವನ್ನು ವಿರೋದಿಸಿ ಕಜಕಿಸ್ತಾನದಲ್ಲಿ ನಡೆದ ಪ್ರತಿಬಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಜಕಿಸ್ತಾನದ ಹಲವೆಡೆ ತುರ್‍ತುಪರಿಸ್ತಿತಿ ಜಾರಿಗೊಳಿಸಲಾಗಿದೆ.

ಪ್ರತಿಬಟನೆಯು ಸರ್ಕಾರಿ ವಿರೋದಿ ಗಲಬೆಯಾಗಿ ಮಾರ್‍ಪಟ್ಟಿದ್ದು, ಬಳಿಕ ನಡೆದ ಗರ್ಶಣೆಯಲ್ಲಿ 26 ಪ್ರತಿಬಟನಾಕಾರರು, ಪೊಲೀಸ್ ಮತ್ತು ಬದ್ರತಾ ಪಡೆಗಳ 18 ಜನರು ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ಬಂದೂಕಿನ ದಾಳಿ ಮತ್ತು ಸಾವುನೋವುಗಳ ಸಂಕ್ಯೆ ಇನ್ನೂ ಹೆಚ್ಚಿನದಾಗಿರಬಹುದು ಎಂದು ಹೇಳಲಾಗುತ್ತಿದೆ. 3,800ಕ್ಕೂ ಹೆಚ್ಚು ಜನರನ್ನು ಬಂದಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಗಟನೆಯಲ್ಲಿ ಒಬ್ಬ ಪೊಲೀಸ್ ಅದಿಕಾರಿಯ ಶಿರಚ್ಚೇದ ಮಾಡಿರುವುದಾಗಿಯೂ ವರದಿಯಾಗಿದೆ.

ಬುದವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ‌ಅದ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಬಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದರು. ಹಲವು ಸರಕಾರಿ ಕಚೇರಿಗಳಿಗೆ ಪ್ರತಿಬಟನಾಕಾರರು ಬೆಂಕಿ ಹಚ್ಚಿದ್ದರು.

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್‍ಬೆಕ್‌‌ ತಿಳಿಸಿದ್ದಾರೆ. ಕಜಕಿಸ್ತಾನ್‌ ಅದ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಬದಲ್ಲಿ ಪ್ರತಿಬಟನಾಕಾರರನ್ನು ಸಮಾದಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಟಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇಡೀ ದೇಶದಲ್ಲಿ ಎರಡು ವಾರಗಳ ಕಾಲ ತುರ್‍ತು ಪರಿಸ್ತಿತಿಯನ್ನು ಗೋಶಿಸಿದ್ದಾರೆ.

ದೇಶದ್ರೋಹ ಶಂಕೆಯ ಮೇಲೆ ಗುಪ್ತಚರ ಸಂಸ್ಥೆಯ ಮಾಜಿ ಮುಕ್ಯಸ್ತರನ್ನು ಬಂದಿಸಲಾಗಿದೆ. ರಾಶ್ಟ್ರೀಯ ಬದ್ರತಾ ಸಮಿತಿ (ಕೆಎನ್‌ಬಿ) ಮಾಜಿ ಮುಕ್ಯಸ್ತ ಕರೀಮ್ ಮಾಸಿಮೊವ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ತನಿಕೆಗೆ ಒಳಪಡಿಸಿದ ಬಳಿಕ ಅವರನ್ನು ಬಂದಿಸಿರುವುದಾಗಿ ಕೆಎನ್‌ಬಿ ಹೇಳಿದೆ.

“ದೇಶದ್ರೋಹ ಅಪರಾದ ಎಸಗಿರುವ ಶಂಕೆಯ ಮೇಲೆ, ಕೆಎನ್‌ಬಿಯ ಮಾಜಿ ಅದ್ಯಕ್ಷ ಕೆ.ಕೆ. ಮಾಸಿಮೊವ್ ಅವರನ್ನು ಬಂದಿಸಲಾಯಿತು. ಇತರರೊಂದಿಗೆ ಅವರನ್ನು ತಾತ್ಕಾಲಿಕ ಬಂದನದಲ್ಲಿ ಇರಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಹಿಂಸಾಚಾರದ ಬಳಿಕ ಶುಕ್ರವಾರ ಕಜಕಿಸ್ತಾನ್‌ನ ಪ್ರಮುಕ ನಗರಗಳ ಬೀದಿಗಳನ್ನು ಬದ್ರತಾ ಪಡೆಗಳು ಹಿಡಿತಕ್ಕೆ ತೆಗೆದುಕೊಂಡಿವೆ. ರಶ್ಯಾದ ಬೆಂಬಲಿತ ಅದ್ಯಕ್ಶ ಕಾಸಿಮ್-ಜೊಮಾರ್ಟ್ ಟೊಕಾಯೆವ್ ಅವರು ದೇಶಾದ್ಯಂತ ದಂಗೆಯನ್ನು ಹತ್ತಿಕ್ಕಲು ಸೇನೆಗೆ ಆದೇಶಿಸಿದ್ದಾರೆ. ಬಂದೂಕು ಜಳುಪಿಸಲು ಅವಕಾಶ ನೀಡಿದ್ದಾರೆ.

ಅಶಾಂತಿಯನ್ನು ಹತ್ತಿಕ್ಕಲು ಸೇನೆಯನ್ನು ಆಹ್ವಾನಿಸಿದ ನಂತರ ಕಜಕಿಸ್ತಾನದಲ್ಲಿ ರಶ್ಯಾದ ಪ್ರಬಾವವನ್ನು ಕಡಿಮೆ ಮಾಡುವುದು ಕಷ್ಟಕರವೆಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಶುಕ್ರವಾರ ಎಚ್ಚರಿಸಿದ್ದಾರೆ.

“ಇತ್ತೀಚಿನ ಇತಿಹಾಸದಲ್ಲಿ ಒಂದು ಪಾಟವಿದೆ. ಒಮ್ಮೆ ರಶ್ಯನ್ನರು ನಿಮ್ಮ ಮನೆಗೆ ಬಂದರೆ, ಅವರನ್ನು ಹೊರಗೆ ಕಳುಹಿಸುವುದು ತುಂಬಾ ಕಶ್ಟವಾಗುತ್ತದೆ” ಎಂದು ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...