Homeಕರ್ನಾಟಕಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ - 3,800 ಬಂದನ

ಕಜಕಿಸ್ತಾನ: ಇಂದನ ಬೆಲೆ ಏರಿಕೆ ವಿರೋದಿ ಹೋರಾಟ – 3,800 ಬಂದನ

ಎಲ್ಲರ ಕನ್ನಡ ಚರ್‍ಚೆಯ ಬಾಗವಾಗಿ ಮಾಡಲಾಗಿರುವ ಪ್ರಾಯೋಗಿಕ ವರದಿ ಇದಾಗಿದ್ದು, ಮಹಾಪ್ರಾಣಗಳ ಬಳಕೆಯನ್ನು ಕಡಿತಗೊಳಿಸಲಾಗಿದೆ.

- Advertisement -
- Advertisement -

(ಈ ವರದಿಯಲ್ಲಿ ಮಹಾಪ್ರಾಣ ಬಳಕೆ ಕಡಿತಗೊಳಿಸಲಾಗಿದೆ)

ಇಂದನ ಬೆಲೆಗಳ ಹೆಚ್ಚಳವನ್ನು ವಿರೋದಿಸಿ ಕಜಕಿಸ್ತಾನದಲ್ಲಿ ನಡೆದ ಪ್ರತಿಬಟನೆಗಳು ಹಿಂಸಾಚಾರಕ್ಕೆ ತಿರುಗಿದ ಬಳಿಕ ಕಜಕಿಸ್ತಾನದ ಹಲವೆಡೆ ತುರ್‍ತುಪರಿಸ್ತಿತಿ ಜಾರಿಗೊಳಿಸಲಾಗಿದೆ.

ಪ್ರತಿಬಟನೆಯು ಸರ್ಕಾರಿ ವಿರೋದಿ ಗಲಬೆಯಾಗಿ ಮಾರ್‍ಪಟ್ಟಿದ್ದು, ಬಳಿಕ ನಡೆದ ಗರ್ಶಣೆಯಲ್ಲಿ 26 ಪ್ರತಿಬಟನಾಕಾರರು, ಪೊಲೀಸ್ ಮತ್ತು ಬದ್ರತಾ ಪಡೆಗಳ 18 ಜನರು ಸಾವನ್ನಪ್ಪಿದ್ದಾರೆ ಎಂದು ಆಂತರಿಕ ಸಚಿವಾಲಯ ತಿಳಿಸಿದೆ.

ಬಂದೂಕಿನ ದಾಳಿ ಮತ್ತು ಸಾವುನೋವುಗಳ ಸಂಕ್ಯೆ ಇನ್ನೂ ಹೆಚ್ಚಿನದಾಗಿರಬಹುದು ಎಂದು ಹೇಳಲಾಗುತ್ತಿದೆ. 3,800ಕ್ಕೂ ಹೆಚ್ಚು ಜನರನ್ನು ಬಂದಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಗಟನೆಯಲ್ಲಿ ಒಬ್ಬ ಪೊಲೀಸ್ ಅದಿಕಾರಿಯ ಶಿರಚ್ಚೇದ ಮಾಡಿರುವುದಾಗಿಯೂ ವರದಿಯಾಗಿದೆ.

ಬುದವಾರದಂದು ದೇಶದ ಅತಿದೊಡ್ಡ ನಗರವಾದ ನೂರ್‌ ಸುಲ್ತಾನ್‌ನಲ್ಲಿರುವ ‌ಅದ್ಯಕ್ಷರ ನಿವಾಸ ಮತ್ತು ಅಲ್ಮಾಟಿಯ ಮೇಯರ್ ಕಚೇರಿಗೆ ನುಗ್ಗಿದ ಪ್ರತಿಬಟನಾಕಾರರು ರಾತ್ರಿಯಿಡೀ ಹಲವು ಕಟ್ಟಡಗಳಿಗೆ ದಾಳಿ ಮಾಡಲು ಪ್ರಯತ್ನಿಸಿದ್ದರು. ಹಲವು ಸರಕಾರಿ ಕಚೇರಿಗಳಿಗೆ ಪ್ರತಿಬಟನಾಕಾರರು ಬೆಂಕಿ ಹಚ್ಚಿದ್ದರು.

“ಡಜನ್‌ಗಟ್ಟಲೆ ದಾಳಿಕೋರರನ್ನು ಹತ್ಯೆ(liquidated) ಮಾಡಲಾಗಿದೆ” ಎಂದು ಪೊಲೀಸ್ ವಕ್ತಾರ ಸಲ್ತಾನಾತ್ ಅಜಿರ್‍ಬೆಕ್‌‌ ತಿಳಿಸಿದ್ದಾರೆ. ಕಜಕಿಸ್ತಾನ್‌ ಅದ್ಯಕ್ಷರಾದ ಕಸ್ಸೈಂ ಜೋಮಾರ್ಟ್ ಟೋಕಾಯೆವ್ ಆರಂಬದಲ್ಲಿ ಪ್ರತಿಬಟನಾಕಾರರನ್ನು ಸಮಾದಾನಪಡಿಸುವುದಕ್ಕೆ ಪ್ರಯತ್ನಿಸುತ್ತಿರುವಂತೆ ತೋರುತ್ತಿದ್ದರೂ, ನಂತರ ಅವರು ಅಶಾಂತಿಯನ್ನು ನಿಗ್ರಹಿಸಲು ಕಟಿಣ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಇಡೀ ದೇಶದಲ್ಲಿ ಎರಡು ವಾರಗಳ ಕಾಲ ತುರ್‍ತು ಪರಿಸ್ತಿತಿಯನ್ನು ಗೋಶಿಸಿದ್ದಾರೆ.

ದೇಶದ್ರೋಹ ಶಂಕೆಯ ಮೇಲೆ ಗುಪ್ತಚರ ಸಂಸ್ಥೆಯ ಮಾಜಿ ಮುಕ್ಯಸ್ತರನ್ನು ಬಂದಿಸಲಾಗಿದೆ. ರಾಶ್ಟ್ರೀಯ ಬದ್ರತಾ ಸಮಿತಿ (ಕೆಎನ್‌ಬಿ) ಮಾಜಿ ಮುಕ್ಯಸ್ತ ಕರೀಮ್ ಮಾಸಿಮೊವ್ ಅವರನ್ನು ದೇಶದ್ರೋಹದ ಆರೋಪದ ಮೇಲೆ ತನಿಕೆಗೆ ಒಳಪಡಿಸಿದ ಬಳಿಕ ಅವರನ್ನು ಬಂದಿಸಿರುವುದಾಗಿ ಕೆಎನ್‌ಬಿ ಹೇಳಿದೆ.

“ದೇಶದ್ರೋಹ ಅಪರಾದ ಎಸಗಿರುವ ಶಂಕೆಯ ಮೇಲೆ, ಕೆಎನ್‌ಬಿಯ ಮಾಜಿ ಅದ್ಯಕ್ಷ ಕೆ.ಕೆ. ಮಾಸಿಮೊವ್ ಅವರನ್ನು ಬಂದಿಸಲಾಯಿತು. ಇತರರೊಂದಿಗೆ ಅವರನ್ನು ತಾತ್ಕಾಲಿಕ ಬಂದನದಲ್ಲಿ ಇರಿಸಲಾಯಿತು” ಎಂದು ಹೇಳಿಕೆ ತಿಳಿಸಿದೆ.

ಹಿಂಸಾಚಾರದ ಬಳಿಕ ಶುಕ್ರವಾರ ಕಜಕಿಸ್ತಾನ್‌ನ ಪ್ರಮುಕ ನಗರಗಳ ಬೀದಿಗಳನ್ನು ಬದ್ರತಾ ಪಡೆಗಳು ಹಿಡಿತಕ್ಕೆ ತೆಗೆದುಕೊಂಡಿವೆ. ರಶ್ಯಾದ ಬೆಂಬಲಿತ ಅದ್ಯಕ್ಶ ಕಾಸಿಮ್-ಜೊಮಾರ್ಟ್ ಟೊಕಾಯೆವ್ ಅವರು ದೇಶಾದ್ಯಂತ ದಂಗೆಯನ್ನು ಹತ್ತಿಕ್ಕಲು ಸೇನೆಗೆ ಆದೇಶಿಸಿದ್ದಾರೆ. ಬಂದೂಕು ಜಳುಪಿಸಲು ಅವಕಾಶ ನೀಡಿದ್ದಾರೆ.

ಅಶಾಂತಿಯನ್ನು ಹತ್ತಿಕ್ಕಲು ಸೇನೆಯನ್ನು ಆಹ್ವಾನಿಸಿದ ನಂತರ ಕಜಕಿಸ್ತಾನದಲ್ಲಿ ರಶ್ಯಾದ ಪ್ರಬಾವವನ್ನು ಕಡಿಮೆ ಮಾಡುವುದು ಕಷ್ಟಕರವೆಂದು ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಶುಕ್ರವಾರ ಎಚ್ಚರಿಸಿದ್ದಾರೆ.

“ಇತ್ತೀಚಿನ ಇತಿಹಾಸದಲ್ಲಿ ಒಂದು ಪಾಟವಿದೆ. ಒಮ್ಮೆ ರಶ್ಯನ್ನರು ನಿಮ್ಮ ಮನೆಗೆ ಬಂದರೆ, ಅವರನ್ನು ಹೊರಗೆ ಕಳುಹಿಸುವುದು ತುಂಬಾ ಕಶ್ಟವಾಗುತ್ತದೆ” ಎಂದು ಬ್ಲಿಂಕೆನ್ ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...