Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...