Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...