Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...