Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ...

FACT CHECK : ಕಾಂಗ್ರೆಸ್‌ಗೆ ಮತ ಹಾಕಲು ವಿದೇಶದಿಂದ ಬರುವ ಮುಸ್ಲಿಮರಿಗೆ ಆರ್ಥಿಕ ನೆರವು ಘೋಷಣೆ ಮಾಡಿರುವ ವೈರಲ್ ಪತ್ರ ನಕಲಿ

- Advertisement -
- Advertisement -

ಅಸೋಸಿಯೇಷನ್ ​​ಆಫ್ ಸುನ್ನಿ ಮುಸ್ಲಿಂ (ಸುನ್ನಿ ಮುಸ್ಲಿಂ ಮಜ್ಲಿಸ್) ಎಂಬ ಸಂಘಟನೆಯೊಂದರ ಲೆಟರ್ ಹೆಡ್‌ನಲ್ಲಿ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಮೇ 7ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ತೆರಳುವ ದುಬೈನ ಮುಸ್ಲಿಮರಿಗೆ ಟಿಕೆಟ್ ಬುಕಿಂಗ್ ಮತ್ತು ಮುಂಗಡ ಬುಕ್ಕಿಂಗ್ ಟಿಕೆಟ್‌ನ ಸಂಪೂರ್ಣ ಹಣವನ್ನು ಈ ಸಂಘಟನೆ ನೀಡಲಿದೆ’ ಎಂದು ಪತ್ರದಲ್ಲಿ ಬರೆಯಲಾಗಿದೆ. ಏಪ್ರಿಲ್ 29ರ ದಿನಾಂಕದಲ್ಲಿ ಪತ್ರವನ್ನು ಮುದ್ರಿಸಲಾಗಿದೆ.

ಪತ್ರದಲ್ಲಿ ‘ಫ್ಯಾಸಿಸ್ಟ್ ಶಕ್ತಿಗಳನ್ನು ಸೋಲಿಸುವುದು ಮತ್ತು ಮುಸ್ಲಿಮರ ನಿಜವಾದ ಹಿತೈಷಿಯಾದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಈ ಸಹಾಯದ ಉದ್ದೇಶವಾಗಿದೆ’ ಎಂದು ಹೇಳಲಾಗಿದೆ. ಈ ಪತ್ರವನ್ನು ಹಂಚಿಕೊಂಡಿರುವ ಅನೇಕರು ‘ಕಾಂಗ್ರೆಸ್ ಪಕ್ಷಕ್ಕೆ ಅಂತಾರಾಷ್ಟ್ರೀಯ ಮುಸ್ಲಿಂ ಸಂಘಟನೆಗಳ ಬೆಂಬಲ ಸಿಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಅನೇಕ ಬಾರಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಂಚಿಕೊಂಡಿರುವ ಅರುಣ್ ಪುದೂರ್ ಎಂಬವರು ಮೇ 7ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಪೋಸ್ಟ್ ಮಾಡಿದ್ದರು. “ದುಬೈನ ಸುನ್ನಿ ಮುಸ್ಲಿಮರ ಸಂಘವು ಮತ್ತೆ ಕಾಂಗ್ರೆಸ್ ಸರ್ಕಾರ ರಚಿಸಲು ಕರ್ನಾಟಕದ ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ. ಆದರೆ, ಇಲ್ಲಿನ ಹಿಂದೂಗಳು ಈ ಬಿರು ಬೇಸಿಗೆಯಲ್ಲೂ ಮನೆಯಲ್ಲಿ ಹೊದ್ದು ಮಲಗಿದ್ದಾರೆ ಅಥವಾ ಮೌಲಾನಾ ಮೋದಿ ಹಿಂದೂಗಳಿಗೆ ಏನೂ ಮಾಡಿಲ್ಲ” ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಬರೆದುಕೊಂಡಿದ್ದರು.

“ಕರ್ನಾಟಕದ ಮುಸ್ಲಿಂ ಸಂಘಟನೆ ಸೌದಿ ಅರೇಬಿಯಾದಲ್ಲಿರುವ ಭಾರತೀಯ ಮುಸ್ಲಿಮರು ತಾಯ್ನಾಡಿಗೆ ಬಂದು ಕಾಂಗ್ರೆಸ್‌ಗೆ ಮತ ಹಾಕಲು ತಗಲುವ ಎಲ್ಲಾ ಖರ್ಚು ವೆಚ್ಚಗಳನ್ನು ಭರಿಸುತ್ತಿದೆ” ಎಂದು ‘ಇಂದು ಮಕ್ಕಳ್ ಕಚ್ಚಿ‘ ಎಂಬ ಎಕ್ಸ್‌ ಹ್ಯಾಂಡಲ್‌ನಲ್ಲಿ ವೈರಲ್ ಲೆಟರ್ ಹೆಡ್ ಪೋಸ್ಟ್ ಮಾಡಲಾಗಿತ್ತು.

ಅನೇಕ ಬಾರಿ ತಪ್ಪು ಮಾಹಿತಿಗಳನ್ನು ಹಂಚಿಕೊಂಡಿರುವ ಬಾಯ್ಡ್‌ ಅಂಡ (@AmitLeliSlayer)ಎಂಬ ಎಕ್ಸ್ ಖಾತೆಯಲ್ಲಿ ಮೇ 7, 2024ರಂದು ವೈರಲ್ ಪತ್ರವನ್ನು ಹಂಚಿಕೊಂಡು ‘ಕಾಂಗ್ರೆಸ್ ಅಂತಾರಾಷ್ಟ್ರೀಯ ಬೆಂಬಲ ಪಡೆಯುತ್ತಿದೆ’ ಎಂದು ಬರೆದುಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ವೈರಲ್ ಪತ್ರದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಹೆಸರನ್ನು ನೋಡಿ ಗೂಗಲ್‌ನಲ್ಲಿ ಅದರ ವಿಳಾಸ (#2-11TH STREET KHALID BIN WALEED ROAD PLOT NO. UMM HURAIR ONE DUBAI-UNITED ARAB EMIRATES)ಹುಡುಕಿದ್ದೇವೆ. ಈ ವೇಳೆ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ವಿಳಾಸವು ದುಬೈನಲ್ಲಿರುವ ಪಾಕಿಸ್ತಾನದ ಕಾನ್ಸುಲೇಟ್ ಜನರಲ್‌ನ ವೆಬ್‌ಸೈಟ್‌ನಲ್ಲಿ ಅವರ ಕಚೇರಿಯ ವಿಳಾಸವಾಗಿ ಇರುವುದು ಕಂಡು ಬಂದಿದೆ. ಇದರಿಂದ ಆ ವಿಳಾಸ ವೈರಲ್ ಪತ್ರದಲ್ಲಿರುವ ಸುನ್ನಿ ಮುಸ್ಲಿಂ ಸಂಘಟನೆಯದ್ದಲ್ಲ ಎಂದು ಗೊತ್ತಾಗಿದೆ. ಇದರ ಹೊರತಾಗಿ ವೈರಲ್ ಪತ್ರದಲ್ಲಿ ಉಲ್ಲೇಖಿಸಲಾದ ಸಂಘಟನೆಯ ಬಗ್ಗೆ ಅಂತರ್ಜಾಲದಲ್ಲಿ ಯಾವುದೇ ಮಾಹಿತಿ ಲಭ್ಯವಿಲ್ಲ.

ಪತ್ರದಲ್ಲಿ ಮೂರು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ನಾವು ಈ ಸಂಖ್ಯೆಗಳನ್ನು ಹುಡುಕಿದಾಗ, ಪತ್ರದಲ್ಲಿರುವ ಮೊದಲ ಸಂಖ್ಯೆ ದುಬೈ ಮೂಲದ ಕಾಫಿ ವಿತರಣಾ ಯಂತ್ರ ಉತ್ಪಾದನಾ ಕಂಪನಿಯಾದ ಡಾಲ್ಮೇರ್ ತನ್ನ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಮಾಡಿರುವುದು ಕಂಡು ಬಂದಿದೆ. ಅಂದರೆ, ಈ ಸಂಖ್ಯೆ ಯಾವುದೇ ಮುಸ್ಲಿಂ ಸಂಘಟನೆಗೆ ಸೇರಿಲ್ಲ ಎಂಬುವುದು ಇದರ ಖಚಿತವಾಗಿದೆ. “ಪತ್ರದಲ್ಲಿ ಉಲ್ಲೇಖಿಸಲಾದ ಉಳಿದ 2 ಮೊಬೈಲ್ ಸಂಖ್ಯೆಗಳನ್ನು ನಾವು ಸಂಪರ್ಕಿಸಿದ್ದೇವೆ, ನಮಗೆ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲ ಎಂದು ಅಲ್ಟ್‌ ನ್ಯೂಸ್ ಹಿಂದಿ ತಿಳಿಸಿದೆ.

ಲಭ್ಯವಿರುವ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಆದ ಮುಸ್ಲಿಂ ಸಂಘಟನೆಯ ಹೆಸರಿನ ಲೆಟರ್ ಹೆಡ್ ನಕಲಿ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK: ಮುಸ್ಲಿಮರ ಕಲ್ಯಾಣಕ್ಕಾಗಿ ದೇವಸ್ಥಾನಗಳ ಜಮೀನು ಮಾರುತ್ತೇವೆ ಎಂದು ತೆಲಂಗಾಣ ಸಿಎಂ ಹೇಳಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...