Homeಮುಖಪುಟಧ್ವನಿ ಇಲ್ಲದ ಹೆಣ್ಮಕ್ಕಳ ಧ್ವನಿಯಾಗಿದ್ದ ಗೀತಾ ನಾಗಭೂಷಣ...

ಧ್ವನಿ ಇಲ್ಲದ ಹೆಣ್ಮಕ್ಕಳ ಧ್ವನಿಯಾಗಿದ್ದ ಗೀತಾ ನಾಗಭೂಷಣ…

- Advertisement -
- Advertisement -

ಇತ್ತೀಚಿಗೆ ನಿಧನರಾದ ಹಿರಿಯ ಸಾಹಿತಿ ಗೀತಾ ನಾಗಭೂಷಣ ರವರಿಗೆ ನುಡಿ ನಮನ ಬರಹ.

ನನ್ನ ಶಾಲಾ ದಿನಗಳು ಅದು. ವಾರ್ಷಿಕ ರಜೆಯಲ್ಲಿ ಅಟ್ಟದ ಕಸ ಗುಡಿಸುವ ಅಭ್ಯಾಸ. ಪೊರಕೆ ಹಿಡಿದು ತಲೆಗೆ ಅಮ್ಮನ ಹಳೆ ಸೀರೆ ತುಂಡು ಬಿಗಿದು ಅಟ್ಟ ಹತ್ತಿದರೆ ಹಳೆ ಪತ್ರಿಕೆಗಳನ್ನೆಲ್ಲ ರಾಶಿ ಹಾಕಿಕೊಂಡು ಕಣ್ಣಾಡಿಸುತ್ತ ಓದಬೇಕೆನಿಸಿದ್ದನ್ನು ಎತ್ತಿಟ್ಟುಕೊಂಡು, ಉಳಿದದ್ದನ್ನೆಲ್ಲ ರದ್ದಿಗೆ ಹಾಕಲು ಜೋಡಿಸಿ ಬೀಂಜಲು ತೆಗೆದು ಧೂಳು ಹೊಡೆದು ಕೆಳಗಿಳಿಯುತ್ತಿದ್ದೆ. ಆ ದಿನಗಳಲ್ಲಿ ನಮ್ಮನೆಗೆ ತರಂಗ, ಮಂಗಳ ವಾರಪತ್ರಿಕೆ ತರಿಸುತ್ತಿದ್ದರು. ಧಾರಾವಾಹಿಗಳ ಕಾಲ. ಪತ್ರಿಕೆ ಬರುತ್ತಿದ್ದಂತೆ ಅಕ್ಕ, ಅಣ್ಣ ಇವರದೆಲ್ಲ ಸರದಿ ಮುಗಿಯದೆ ನನ್ನ ಕೈಗಂತು ಸಿಗುತ್ತಿರಲಿಲ್ಲ. ಸಿಕ್ಕಿದರೂ ಧಾರಾವಾಹಿ ಓದುವ ವಯಸ್ಸಲ್ಲ ಎಂಬ ನಂಬಿಕೆಯ ಹಿರಿಯರು. ಹಳೆಯದಾಗಿ ಅಟ್ಟ ಸೇರಿರುವುದನ್ನು ವರ್ಷದ ನಂತರ ಹೀಗೆ ಗುಡ್ಡೆ ಹಾಕಿಕೊಂಡು ಕುಕ್ಕರುಗಾಲಲ್ಲಿ ಕುಳಿತು ಪುಟ ತಿರುಗಿಸುತ್ತಿದ್ದಾಗ ಸಿಕಿದ್ದು “ಹಸಿ ಮಾಂಸ ಮತ್ತು ರಣ ಹದ್ದು”. ಒಂದಷ್ಟು ಸಾಲು ಓದುತ್ತಿದ್ದಂತೆ ಕಥೆ ಹೇಳುವ ರೀತಿ, ಭಾಷೆ, ವಸ್ತು ಎಲ್ಲವೂ ಹೊಸ ನಮೂನೆಯೇ. ದಕ್ಕಿಣಕನ್ನಡದ ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳಾದ ನಮಗೆ ನಮ್ಮ ಇನ್ನೊಂದು ತುದಿಯಲ್ಲಿ ಈ ರೀತಿಯ ಬದುಕಿದೆ, ಜನರಿದ್ದಾರೆ ಎಂಬ ಅರಿವೂ ಇಲ್ಲದಿರುವ ದಿನಗಳವು. ಅರ್ಥೈಸಿಕೊಳ್ಳಲು ಕಷ್ಟವಾದರೂ ಅರ್ಧದಲ್ಲೆ ಕೈ ಬಿಡಲಾಗುತ್ತಿರಲಿಲ್ಲ. ರಾತ್ರಿ ಮಲಗಿದಾಗಲೂ ಕಾಡುತ್ತಿತ್ತು. ಅಂದಿನಿಂದಲೇ ನಾನು ಕಾಣದ ಆ ಸೀಮೆ, ಭಾಷೆ, ಅಲ್ಲಿಯ ಜನ ನನ್ನೆದೆಯೊಳಗೆ ಕುಳಿತುಬಿಟ್ಟರು. ಮುಂದೆ ವಲಸೆಗಳು ಜಾಸ್ತಿಯಾಗಿ ಆ ಭಾಗದ ಮಂದಿ ಜಾಸ್ತಿ ಜಾಸ್ತಿ ಕಾಣಲು ಸಿಕ್ಕಿದಾಗ ಗೀತಾ ನಾಗಭೂಷಣರ ಕಥಾ ಪಾತ್ರಗಳು ಇವರೆಲ್ಲರೊಳಗೂ ಇರಬಹುದೆಂದು ತಡಕಾಡಿದ್ದೂ ಇದೆ. ಅವರನ್ನು ಮಾತಾಡಿಸುವ ಹಂಬಲ, ಅವರ ಊರಿನ ಬದುಕಿನ ಬಗ್ಗೆ ಕೇಳುವ, ಅವರ ಕಥೆಗಳಿಗೆ ಕಿವಿಯಾಗುತ್ತ ಅವರನ್ನು ಒಳಗಿಳಿಸಿಕೊಳ್ಳುವ ಪ್ರಯತ್ನಕ್ಕೂ ಮೂಲದಲ್ಲಿ ಇದೇ ಕಾರಣವಿರಬಹುದು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡದ ಮೊದಲ ಮಹಿಳೆ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಮೊದಲ ಮಹಿಳೆ – ಹಲವು ಮೊದಲುಗಳಿಗೆ ಭಾಜನರಾದ ಗೀತಾ ನಾಗಭೂಷಣ ಅಂದೊಡನೆ ನನ್ನ ಮೊದಲ ತಾಜಾ ಅನುಭವ ಇದು. ಯಾವತ್ತೂ ನಾನು ಗೀತಾ ನಾಗಭೂಷಣರನ್ನು ಮುಖತಃ ಕಾಣುವಂತಹ ಅವಕಾಶಗಳಿಗೆ ಎದುರಾದವಳಲ್ಲ. ಆದರೆ, ನನಗೆಂದೂ ಅದು ದೊಡ್ಡ ಮಟ್ಟಿನ ಕೊರತೆಯಾಗಿ ಕಾಡಲಿಲ್ಲ. ಅಕಾಡಮಿಕ್ ಆಗಿಯೂ ಸಾಹಿತ್ಯದ ವಿದ್ಯಾರ್ಥಿನಿ ಅಲ್ಲದ ನನಗೆ ನಾನಿದ್ದ ಪರಿಸರದಲ್ಲಿ ಅವರ ಬರಹಗಳು ಬಹುಕಾಲದವರೆಗೆ ಅಷ್ಟಾಗಿ ಓದಿಗೆ ದೊರೆಯಲಿಲ್ಲ. ಆದರೆ, ಅಂದಿನ ಆ ಓದು ನನ್ನೊಳಗೆ ಸಣ್ಣ ಕಿಡಿ ಹೊತ್ತಿಸಿ ಇಂದಿಗೂ ಬೆಚ್ಚಗಿರುವುದನ್ನು ಅಲ್ಲಗಳೆಯಲಾರೆ.

ತನ್ನ ಸಮಾಜವನ್ನು ಒಳ ವಿಮರ್ಶಗೆ ಒಡ್ಡಿ ಒರೆ ಹಚ್ಚಿ ಬರೆಯುವ ನಿಷ್ಪಕ್ಷಪಾತಿಯಾಗುವುದು ಸೃಜನಶೀಲ ಬರವಣಿಗೆಯ ದೊಡ್ಡ ಸವಾಲು. ಅದರಲ್ಲೂ ಬರಹಗಾರ್ತಿಯರಿಗಂತು ಇದು ಇಂದಿಗೂ ನುಂಗಲಾರದ ಉಗುಳಲಾರದ ತುತ್ತು. ಇದಕ್ಕೆ ಗೀತಾ ನಾಗಭೂಷಣರೂ ಹೊರತಲ್ಲವೆಂಬುದು ಮುಂದೆ ಒಂದಷ್ಟು ಅವರ ಬರಹಗಳು ಓದಿಗೆ ಸಿಕ್ಕಿದಾಗ ಅನಿಸಿತು. ಅವರ ಮೊದಮೊದಲ ಬರಹಗಳು ನಂತರದ ಬರಹಗಳಂತೆ ಕಾದ ಕಬ್ಬಿಣದ ಸರಳಾಗಿರಲಿಲ್ಲ. ತನ್ನ ಬದುಕಿನಲ್ಲಿ ಹೋರಾಡುತ್ತಲೇ ಅಕ್ಷರಗಳನ್ನು ಪಡೆದುಕೊಂಡರೂ, ಒಂದು ಸ್ಥಾನಮಾನ ಗಿಟ್ಟಿಸಿದರೂ ಆರಂಭದ ಬರವಣಿಗೆಯಲ್ಲಿ ಒಳ ಮನಸ್ಸಿನ ಕೋರಿಕೆಯಂತೆ ಬರೆಯಲು ಅವರಿಗೆ ಸಾಧ್ಯವಾಗಲಿಲ್ಲವೋ ಅಥವಾ ಇದು ತನ್ನ ದಾರಿಯಲ್ಲವೆಂದು ಗುರುತಿಸಿಕೊಂಡು ಒಳಮನದ ಬೇಡಿಕೆಗೆ ತೆರೆದುಕೊಳ್ಳಲು ಸಮಯ ಬೇಕಾಯಿತೋ. “ನನಗೆ ಧ್ವನಿ ಇದೆ. ಧ್ವನಿ ಇಲ್ಲದ ನನ್ನ ಹೆಣ್ಮಕ್ಕಳ, ನನ್ನ ನೆಲದ-ಜನರ ಉಮ್ಮಳವನ್ನು ನಾನು ಮುಸುಕಿಕ್ಕದೆ ಹೇಳಿ ತೀರುತ್ತೇನೆ” ಎಂದು ನಿರ್ಧರಿಸಿದ ಮೇಲೆ ಕೌಟುಂಬಿಕ ಸಂಘರ್ಷದಲ್ಲೂ ರಾಜಿಯಾಗದೆ ನಿಂತಿದ್ದು ಸ್ವ ಶಕ್ತಿಯ ಮೇಲೆ ಅವರಿಗಿದ್ದ ಆತ್ಮವಿಶ್ವಾಸವನ್ನು, ಅವರ ಆತ್ಮಬಲವನ್ನು ತೋರಿಸುತ್ತದೆ. ಹೀಗೆ ಬರೆಯಲು ತೊಡಗಿದಾಗ ಕೆಲವೊಮ್ಮೆ ಒಳಸಮಾಜದೊಂದಿಗೆ ಒಟ್ಟು ಸಮಾಜವನ್ನು ವಿಮರ್ಶಾ ಕಣ್ಣಿಂದ ನೋಡುವಾಗ ಒಳ ಸಮಾಜದ ಬಗ್ಗೆ ಪಕ್ಷಪಾತ, ಸಹಾನುಭೂತಿ ಕಳಚಿಕೊಳ್ಳಬೇಕಾಗುತ್ತಿದೆ. ಇದನ್ನು ದಾಟಿಕೊಳ್ಳುವುದೇ ಸವಾಲು. ನಿಜದಲ್ಲಿ ಲೇಖಕ ಅಥವಾ ಲೇಖಕಿ ದಾಟಿಕೊಂಡರೂ ಅದನ್ನು ಒಟ್ಟು ಸಮಾಜದ ಓದುಗರು ಗುರುತಿಸುವುದರಲ್ಲಿ ಸೋಲುವ ಸಾಧ್ಯತೆಗಳಿರುತ್ತವೆ. ಹಾಗೆಯೇ ಕೆಲವೊಮ್ಮೆ ಅತಿ ಎಂದೋ, ಪುನರಾವರ್ತನೆ ಎಂದೊ ಟೀಕೆಗೊಳಗಾಗುವುದೂ ಇದೆ. ಇದ್ಯಾವುದರಿಂದಲೂ ಗೀತಾನಾಗಭೂಷಣರು ಹೊರತಾಗಲಿಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ತಾನು ಹೇಳುತ್ತಿರುವ ಬದುಕಿನ ತೀವ್ರತೆ ಮನದಟ್ಟು ಮಾಡಿಸಲು ಈ ಪುನರಾವರ್ತನೆ ಅಥವಾ ಅತಿಗಳು ಸಹಕಾರಿಯಾಗುತ್ತವೆ. ಇತಿ-ಮಿತಿ ಹಾಗು ವ್ಯಾಪ್ತಿ-ಪ್ರಾಪ್ತಿಗಳ ನಡುವೆಯೇ ವರ್ತಮಾನದ ಕನ್ನಡ ಸಾಹಿತ್ಯದಲ್ಲಿ ಗೀತಾನಾಗಭೂಷಣರು ಉಳಿಸಿದ ಧ್ವನಿ, ಆತ್ಮದ ಧ್ವನಿಗಾಗಿ ತಮ್ಮ ಬದುಕನ್ನೇ ಪ್ರಯೋಗಕ್ಕೊಡ್ಡಿದ ಕಮಲಾದಾಸ್, ಮಹಾಶ್ವೇತಾದೇವಿ, ಇಂದಿರಾ ಗೋಸ್ವಾಮಿಯಂತವರನ್ನು ನೆನಪಿಸುತ್ತದೆ.

ಸಾಹಿತ್ಯವೆಂಬುದು ಆಯಾ ಕಾಲಘಟ್ಟದ ಸೃಜನಶೀಲ ಸಂಘರ್ಷವೆಂದ ಅವರ ಮಾತಿಗೆ ಪೂರಕವಾಗಿಯೇ “ಬದುಕು” ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆಯುವ ಸಮಯದಲ್ಲಿ ತನ್ನ ಸಾಹಿತ್ಯ ರಚನೆಯ ಬಗ್ಗೆ ಅವರಾಡಿದ ಮಾತುಗಳು ಹಾಗು 76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅದನ್ನವರು ನಿಭಾಯಿಸಿದ ರೀತಿ ಹಾಗು ಅವರೆತ್ತಿದ ಪ್ರಶ್ನೆಗಳೂ ಇದ್ದವು.

ಅಂದು ಗೀತಾನಾಗಭೂಷಣರ ಮೊದಲ ಓದಿನ ಅನುಭವಕ್ಕೆ ತೆರೆದುಕೊಳ್ಳುವಾಗ ಈ ಸಾಹಿತ್ಯದ ಮಣ್ಣಲ್ಲಿ ನನ್ನದೇ ಆದ ಪುಟ್ಟ ಉಳುಮೆ ಮಾಡುವ ಪ್ರಯತ್ನ ಮಾಡುತ್ತೇನೆಂದೂ ಕನಸೂ ಕಂಡವಳಲ್ಲ. ಇಂದು ಗೀತಾನಾಗಭೂಷಣ ನಮ್ಮಂತಹ ಕಂದಮ್ಮಗಳಿಗೆ ಒಳಮನದ ಮಾತಿನಂತೆ ಹೆಜ್ಜೆ ಇಡಲು ತಾಕತ್ ತುಂಬಿದ ಅವ್ವ ಅಂದರೆ ಉತ್ಪ್ರೇಕ್ಷೆ ಅಲ್ಲ. ಎಲ್ಲಾ ವಿಧದಲ್ಲೂ ಹುಳುಕುಗಳನ್ನು ಮುಚ್ಚಿಡುವ ಶಿಷ್ಟತೆಯ ಹಂಗು ಕಳಚಿಕೊಂಡು ಇದು ಹಾಗೆ ಮಾತ್ರ ಅಲ್ಲ ಹೀಗೂ ಇದೆ ನೋಡಿ ಎಂದು ಅವರು ತೆರೆದಿಟ್ಟ ಜಗತ್ತು, ನಾವು ನಮ್ಮ ನಮ್ಮೊಳಗಿನ ಜಗತ್ತು ನೋಡಿಕೊಳ್ಳುವುದನ್ನು ತುಸುವಾದರೂ ಕಲಿಸಿದೆ. ಕಲಿಸುತ್ತಿರುತ್ತದೆ..

  • ಅನುಪಮಾ ಪ್ರಸಾದ್ ರವರು ಲೇಖಕಿಯಾಗಿದ್ದು ಇತ್ತೀಚೆಗೆ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿ ಬರೆದಿದ್ದಾರೆ.

ಇದನ್ನು ಓದಿ: ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...