Homeಮುಖಪುಟಧ್ವನಿ ಇಲ್ಲದ ಹೆಣ್ಮಕ್ಕಳ ಧ್ವನಿಯಾಗಿದ್ದ ಗೀತಾ ನಾಗಭೂಷಣ...

ಧ್ವನಿ ಇಲ್ಲದ ಹೆಣ್ಮಕ್ಕಳ ಧ್ವನಿಯಾಗಿದ್ದ ಗೀತಾ ನಾಗಭೂಷಣ…

- Advertisement -
- Advertisement -

ಇತ್ತೀಚಿಗೆ ನಿಧನರಾದ ಹಿರಿಯ ಸಾಹಿತಿ ಗೀತಾ ನಾಗಭೂಷಣ ರವರಿಗೆ ನುಡಿ ನಮನ ಬರಹ.

ನನ್ನ ಶಾಲಾ ದಿನಗಳು ಅದು. ವಾರ್ಷಿಕ ರಜೆಯಲ್ಲಿ ಅಟ್ಟದ ಕಸ ಗುಡಿಸುವ ಅಭ್ಯಾಸ. ಪೊರಕೆ ಹಿಡಿದು ತಲೆಗೆ ಅಮ್ಮನ ಹಳೆ ಸೀರೆ ತುಂಡು ಬಿಗಿದು ಅಟ್ಟ ಹತ್ತಿದರೆ ಹಳೆ ಪತ್ರಿಕೆಗಳನ್ನೆಲ್ಲ ರಾಶಿ ಹಾಕಿಕೊಂಡು ಕಣ್ಣಾಡಿಸುತ್ತ ಓದಬೇಕೆನಿಸಿದ್ದನ್ನು ಎತ್ತಿಟ್ಟುಕೊಂಡು, ಉಳಿದದ್ದನ್ನೆಲ್ಲ ರದ್ದಿಗೆ ಹಾಕಲು ಜೋಡಿಸಿ ಬೀಂಜಲು ತೆಗೆದು ಧೂಳು ಹೊಡೆದು ಕೆಳಗಿಳಿಯುತ್ತಿದ್ದೆ. ಆ ದಿನಗಳಲ್ಲಿ ನಮ್ಮನೆಗೆ ತರಂಗ, ಮಂಗಳ ವಾರಪತ್ರಿಕೆ ತರಿಸುತ್ತಿದ್ದರು. ಧಾರಾವಾಹಿಗಳ ಕಾಲ. ಪತ್ರಿಕೆ ಬರುತ್ತಿದ್ದಂತೆ ಅಕ್ಕ, ಅಣ್ಣ ಇವರದೆಲ್ಲ ಸರದಿ ಮುಗಿಯದೆ ನನ್ನ ಕೈಗಂತು ಸಿಗುತ್ತಿರಲಿಲ್ಲ. ಸಿಕ್ಕಿದರೂ ಧಾರಾವಾಹಿ ಓದುವ ವಯಸ್ಸಲ್ಲ ಎಂಬ ನಂಬಿಕೆಯ ಹಿರಿಯರು. ಹಳೆಯದಾಗಿ ಅಟ್ಟ ಸೇರಿರುವುದನ್ನು ವರ್ಷದ ನಂತರ ಹೀಗೆ ಗುಡ್ಡೆ ಹಾಕಿಕೊಂಡು ಕುಕ್ಕರುಗಾಲಲ್ಲಿ ಕುಳಿತು ಪುಟ ತಿರುಗಿಸುತ್ತಿದ್ದಾಗ ಸಿಕಿದ್ದು “ಹಸಿ ಮಾಂಸ ಮತ್ತು ರಣ ಹದ್ದು”. ಒಂದಷ್ಟು ಸಾಲು ಓದುತ್ತಿದ್ದಂತೆ ಕಥೆ ಹೇಳುವ ರೀತಿ, ಭಾಷೆ, ವಸ್ತು ಎಲ್ಲವೂ ಹೊಸ ನಮೂನೆಯೇ. ದಕ್ಕಿಣಕನ್ನಡದ ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳಾದ ನಮಗೆ ನಮ್ಮ ಇನ್ನೊಂದು ತುದಿಯಲ್ಲಿ ಈ ರೀತಿಯ ಬದುಕಿದೆ, ಜನರಿದ್ದಾರೆ ಎಂಬ ಅರಿವೂ ಇಲ್ಲದಿರುವ ದಿನಗಳವು. ಅರ್ಥೈಸಿಕೊಳ್ಳಲು ಕಷ್ಟವಾದರೂ ಅರ್ಧದಲ್ಲೆ ಕೈ ಬಿಡಲಾಗುತ್ತಿರಲಿಲ್ಲ. ರಾತ್ರಿ ಮಲಗಿದಾಗಲೂ ಕಾಡುತ್ತಿತ್ತು. ಅಂದಿನಿಂದಲೇ ನಾನು ಕಾಣದ ಆ ಸೀಮೆ, ಭಾಷೆ, ಅಲ್ಲಿಯ ಜನ ನನ್ನೆದೆಯೊಳಗೆ ಕುಳಿತುಬಿಟ್ಟರು. ಮುಂದೆ ವಲಸೆಗಳು ಜಾಸ್ತಿಯಾಗಿ ಆ ಭಾಗದ ಮಂದಿ ಜಾಸ್ತಿ ಜಾಸ್ತಿ ಕಾಣಲು ಸಿಕ್ಕಿದಾಗ ಗೀತಾ ನಾಗಭೂಷಣರ ಕಥಾ ಪಾತ್ರಗಳು ಇವರೆಲ್ಲರೊಳಗೂ ಇರಬಹುದೆಂದು ತಡಕಾಡಿದ್ದೂ ಇದೆ. ಅವರನ್ನು ಮಾತಾಡಿಸುವ ಹಂಬಲ, ಅವರ ಊರಿನ ಬದುಕಿನ ಬಗ್ಗೆ ಕೇಳುವ, ಅವರ ಕಥೆಗಳಿಗೆ ಕಿವಿಯಾಗುತ್ತ ಅವರನ್ನು ಒಳಗಿಳಿಸಿಕೊಳ್ಳುವ ಪ್ರಯತ್ನಕ್ಕೂ ಮೂಲದಲ್ಲಿ ಇದೇ ಕಾರಣವಿರಬಹುದು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡದ ಮೊದಲ ಮಹಿಳೆ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಮೊದಲ ಮಹಿಳೆ – ಹಲವು ಮೊದಲುಗಳಿಗೆ ಭಾಜನರಾದ ಗೀತಾ ನಾಗಭೂಷಣ ಅಂದೊಡನೆ ನನ್ನ ಮೊದಲ ತಾಜಾ ಅನುಭವ ಇದು. ಯಾವತ್ತೂ ನಾನು ಗೀತಾ ನಾಗಭೂಷಣರನ್ನು ಮುಖತಃ ಕಾಣುವಂತಹ ಅವಕಾಶಗಳಿಗೆ ಎದುರಾದವಳಲ್ಲ. ಆದರೆ, ನನಗೆಂದೂ ಅದು ದೊಡ್ಡ ಮಟ್ಟಿನ ಕೊರತೆಯಾಗಿ ಕಾಡಲಿಲ್ಲ. ಅಕಾಡಮಿಕ್ ಆಗಿಯೂ ಸಾಹಿತ್ಯದ ವಿದ್ಯಾರ್ಥಿನಿ ಅಲ್ಲದ ನನಗೆ ನಾನಿದ್ದ ಪರಿಸರದಲ್ಲಿ ಅವರ ಬರಹಗಳು ಬಹುಕಾಲದವರೆಗೆ ಅಷ್ಟಾಗಿ ಓದಿಗೆ ದೊರೆಯಲಿಲ್ಲ. ಆದರೆ, ಅಂದಿನ ಆ ಓದು ನನ್ನೊಳಗೆ ಸಣ್ಣ ಕಿಡಿ ಹೊತ್ತಿಸಿ ಇಂದಿಗೂ ಬೆಚ್ಚಗಿರುವುದನ್ನು ಅಲ್ಲಗಳೆಯಲಾರೆ.

ತನ್ನ ಸಮಾಜವನ್ನು ಒಳ ವಿಮರ್ಶಗೆ ಒಡ್ಡಿ ಒರೆ ಹಚ್ಚಿ ಬರೆಯುವ ನಿಷ್ಪಕ್ಷಪಾತಿಯಾಗುವುದು ಸೃಜನಶೀಲ ಬರವಣಿಗೆಯ ದೊಡ್ಡ ಸವಾಲು. ಅದರಲ್ಲೂ ಬರಹಗಾರ್ತಿಯರಿಗಂತು ಇದು ಇಂದಿಗೂ ನುಂಗಲಾರದ ಉಗುಳಲಾರದ ತುತ್ತು. ಇದಕ್ಕೆ ಗೀತಾ ನಾಗಭೂಷಣರೂ ಹೊರತಲ್ಲವೆಂಬುದು ಮುಂದೆ ಒಂದಷ್ಟು ಅವರ ಬರಹಗಳು ಓದಿಗೆ ಸಿಕ್ಕಿದಾಗ ಅನಿಸಿತು. ಅವರ ಮೊದಮೊದಲ ಬರಹಗಳು ನಂತರದ ಬರಹಗಳಂತೆ ಕಾದ ಕಬ್ಬಿಣದ ಸರಳಾಗಿರಲಿಲ್ಲ. ತನ್ನ ಬದುಕಿನಲ್ಲಿ ಹೋರಾಡುತ್ತಲೇ ಅಕ್ಷರಗಳನ್ನು ಪಡೆದುಕೊಂಡರೂ, ಒಂದು ಸ್ಥಾನಮಾನ ಗಿಟ್ಟಿಸಿದರೂ ಆರಂಭದ ಬರವಣಿಗೆಯಲ್ಲಿ ಒಳ ಮನಸ್ಸಿನ ಕೋರಿಕೆಯಂತೆ ಬರೆಯಲು ಅವರಿಗೆ ಸಾಧ್ಯವಾಗಲಿಲ್ಲವೋ ಅಥವಾ ಇದು ತನ್ನ ದಾರಿಯಲ್ಲವೆಂದು ಗುರುತಿಸಿಕೊಂಡು ಒಳಮನದ ಬೇಡಿಕೆಗೆ ತೆರೆದುಕೊಳ್ಳಲು ಸಮಯ ಬೇಕಾಯಿತೋ. “ನನಗೆ ಧ್ವನಿ ಇದೆ. ಧ್ವನಿ ಇಲ್ಲದ ನನ್ನ ಹೆಣ್ಮಕ್ಕಳ, ನನ್ನ ನೆಲದ-ಜನರ ಉಮ್ಮಳವನ್ನು ನಾನು ಮುಸುಕಿಕ್ಕದೆ ಹೇಳಿ ತೀರುತ್ತೇನೆ” ಎಂದು ನಿರ್ಧರಿಸಿದ ಮೇಲೆ ಕೌಟುಂಬಿಕ ಸಂಘರ್ಷದಲ್ಲೂ ರಾಜಿಯಾಗದೆ ನಿಂತಿದ್ದು ಸ್ವ ಶಕ್ತಿಯ ಮೇಲೆ ಅವರಿಗಿದ್ದ ಆತ್ಮವಿಶ್ವಾಸವನ್ನು, ಅವರ ಆತ್ಮಬಲವನ್ನು ತೋರಿಸುತ್ತದೆ. ಹೀಗೆ ಬರೆಯಲು ತೊಡಗಿದಾಗ ಕೆಲವೊಮ್ಮೆ ಒಳಸಮಾಜದೊಂದಿಗೆ ಒಟ್ಟು ಸಮಾಜವನ್ನು ವಿಮರ್ಶಾ ಕಣ್ಣಿಂದ ನೋಡುವಾಗ ಒಳ ಸಮಾಜದ ಬಗ್ಗೆ ಪಕ್ಷಪಾತ, ಸಹಾನುಭೂತಿ ಕಳಚಿಕೊಳ್ಳಬೇಕಾಗುತ್ತಿದೆ. ಇದನ್ನು ದಾಟಿಕೊಳ್ಳುವುದೇ ಸವಾಲು. ನಿಜದಲ್ಲಿ ಲೇಖಕ ಅಥವಾ ಲೇಖಕಿ ದಾಟಿಕೊಂಡರೂ ಅದನ್ನು ಒಟ್ಟು ಸಮಾಜದ ಓದುಗರು ಗುರುತಿಸುವುದರಲ್ಲಿ ಸೋಲುವ ಸಾಧ್ಯತೆಗಳಿರುತ್ತವೆ. ಹಾಗೆಯೇ ಕೆಲವೊಮ್ಮೆ ಅತಿ ಎಂದೋ, ಪುನರಾವರ್ತನೆ ಎಂದೊ ಟೀಕೆಗೊಳಗಾಗುವುದೂ ಇದೆ. ಇದ್ಯಾವುದರಿಂದಲೂ ಗೀತಾನಾಗಭೂಷಣರು ಹೊರತಾಗಲಿಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ತಾನು ಹೇಳುತ್ತಿರುವ ಬದುಕಿನ ತೀವ್ರತೆ ಮನದಟ್ಟು ಮಾಡಿಸಲು ಈ ಪುನರಾವರ್ತನೆ ಅಥವಾ ಅತಿಗಳು ಸಹಕಾರಿಯಾಗುತ್ತವೆ. ಇತಿ-ಮಿತಿ ಹಾಗು ವ್ಯಾಪ್ತಿ-ಪ್ರಾಪ್ತಿಗಳ ನಡುವೆಯೇ ವರ್ತಮಾನದ ಕನ್ನಡ ಸಾಹಿತ್ಯದಲ್ಲಿ ಗೀತಾನಾಗಭೂಷಣರು ಉಳಿಸಿದ ಧ್ವನಿ, ಆತ್ಮದ ಧ್ವನಿಗಾಗಿ ತಮ್ಮ ಬದುಕನ್ನೇ ಪ್ರಯೋಗಕ್ಕೊಡ್ಡಿದ ಕಮಲಾದಾಸ್, ಮಹಾಶ್ವೇತಾದೇವಿ, ಇಂದಿರಾ ಗೋಸ್ವಾಮಿಯಂತವರನ್ನು ನೆನಪಿಸುತ್ತದೆ.

ಸಾಹಿತ್ಯವೆಂಬುದು ಆಯಾ ಕಾಲಘಟ್ಟದ ಸೃಜನಶೀಲ ಸಂಘರ್ಷವೆಂದ ಅವರ ಮಾತಿಗೆ ಪೂರಕವಾಗಿಯೇ “ಬದುಕು” ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆಯುವ ಸಮಯದಲ್ಲಿ ತನ್ನ ಸಾಹಿತ್ಯ ರಚನೆಯ ಬಗ್ಗೆ ಅವರಾಡಿದ ಮಾತುಗಳು ಹಾಗು 76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅದನ್ನವರು ನಿಭಾಯಿಸಿದ ರೀತಿ ಹಾಗು ಅವರೆತ್ತಿದ ಪ್ರಶ್ನೆಗಳೂ ಇದ್ದವು.

ಅಂದು ಗೀತಾನಾಗಭೂಷಣರ ಮೊದಲ ಓದಿನ ಅನುಭವಕ್ಕೆ ತೆರೆದುಕೊಳ್ಳುವಾಗ ಈ ಸಾಹಿತ್ಯದ ಮಣ್ಣಲ್ಲಿ ನನ್ನದೇ ಆದ ಪುಟ್ಟ ಉಳುಮೆ ಮಾಡುವ ಪ್ರಯತ್ನ ಮಾಡುತ್ತೇನೆಂದೂ ಕನಸೂ ಕಂಡವಳಲ್ಲ. ಇಂದು ಗೀತಾನಾಗಭೂಷಣ ನಮ್ಮಂತಹ ಕಂದಮ್ಮಗಳಿಗೆ ಒಳಮನದ ಮಾತಿನಂತೆ ಹೆಜ್ಜೆ ಇಡಲು ತಾಕತ್ ತುಂಬಿದ ಅವ್ವ ಅಂದರೆ ಉತ್ಪ್ರೇಕ್ಷೆ ಅಲ್ಲ. ಎಲ್ಲಾ ವಿಧದಲ್ಲೂ ಹುಳುಕುಗಳನ್ನು ಮುಚ್ಚಿಡುವ ಶಿಷ್ಟತೆಯ ಹಂಗು ಕಳಚಿಕೊಂಡು ಇದು ಹಾಗೆ ಮಾತ್ರ ಅಲ್ಲ ಹೀಗೂ ಇದೆ ನೋಡಿ ಎಂದು ಅವರು ತೆರೆದಿಟ್ಟ ಜಗತ್ತು, ನಾವು ನಮ್ಮ ನಮ್ಮೊಳಗಿನ ಜಗತ್ತು ನೋಡಿಕೊಳ್ಳುವುದನ್ನು ತುಸುವಾದರೂ ಕಲಿಸಿದೆ. ಕಲಿಸುತ್ತಿರುತ್ತದೆ..

  • ಅನುಪಮಾ ಪ್ರಸಾದ್ ರವರು ಲೇಖಕಿಯಾಗಿದ್ದು ಇತ್ತೀಚೆಗೆ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿ ಬರೆದಿದ್ದಾರೆ.

ಇದನ್ನು ಓದಿ: ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...