Homeಮುಖಪುಟಧ್ವನಿ ಇಲ್ಲದ ಹೆಣ್ಮಕ್ಕಳ ಧ್ವನಿಯಾಗಿದ್ದ ಗೀತಾ ನಾಗಭೂಷಣ...

ಧ್ವನಿ ಇಲ್ಲದ ಹೆಣ್ಮಕ್ಕಳ ಧ್ವನಿಯಾಗಿದ್ದ ಗೀತಾ ನಾಗಭೂಷಣ…

- Advertisement -
- Advertisement -

ಇತ್ತೀಚಿಗೆ ನಿಧನರಾದ ಹಿರಿಯ ಸಾಹಿತಿ ಗೀತಾ ನಾಗಭೂಷಣ ರವರಿಗೆ ನುಡಿ ನಮನ ಬರಹ.

ನನ್ನ ಶಾಲಾ ದಿನಗಳು ಅದು. ವಾರ್ಷಿಕ ರಜೆಯಲ್ಲಿ ಅಟ್ಟದ ಕಸ ಗುಡಿಸುವ ಅಭ್ಯಾಸ. ಪೊರಕೆ ಹಿಡಿದು ತಲೆಗೆ ಅಮ್ಮನ ಹಳೆ ಸೀರೆ ತುಂಡು ಬಿಗಿದು ಅಟ್ಟ ಹತ್ತಿದರೆ ಹಳೆ ಪತ್ರಿಕೆಗಳನ್ನೆಲ್ಲ ರಾಶಿ ಹಾಕಿಕೊಂಡು ಕಣ್ಣಾಡಿಸುತ್ತ ಓದಬೇಕೆನಿಸಿದ್ದನ್ನು ಎತ್ತಿಟ್ಟುಕೊಂಡು, ಉಳಿದದ್ದನ್ನೆಲ್ಲ ರದ್ದಿಗೆ ಹಾಕಲು ಜೋಡಿಸಿ ಬೀಂಜಲು ತೆಗೆದು ಧೂಳು ಹೊಡೆದು ಕೆಳಗಿಳಿಯುತ್ತಿದ್ದೆ. ಆ ದಿನಗಳಲ್ಲಿ ನಮ್ಮನೆಗೆ ತರಂಗ, ಮಂಗಳ ವಾರಪತ್ರಿಕೆ ತರಿಸುತ್ತಿದ್ದರು. ಧಾರಾವಾಹಿಗಳ ಕಾಲ. ಪತ್ರಿಕೆ ಬರುತ್ತಿದ್ದಂತೆ ಅಕ್ಕ, ಅಣ್ಣ ಇವರದೆಲ್ಲ ಸರದಿ ಮುಗಿಯದೆ ನನ್ನ ಕೈಗಂತು ಸಿಗುತ್ತಿರಲಿಲ್ಲ. ಸಿಕ್ಕಿದರೂ ಧಾರಾವಾಹಿ ಓದುವ ವಯಸ್ಸಲ್ಲ ಎಂಬ ನಂಬಿಕೆಯ ಹಿರಿಯರು. ಹಳೆಯದಾಗಿ ಅಟ್ಟ ಸೇರಿರುವುದನ್ನು ವರ್ಷದ ನಂತರ ಹೀಗೆ ಗುಡ್ಡೆ ಹಾಕಿಕೊಂಡು ಕುಕ್ಕರುಗಾಲಲ್ಲಿ ಕುಳಿತು ಪುಟ ತಿರುಗಿಸುತ್ತಿದ್ದಾಗ ಸಿಕಿದ್ದು “ಹಸಿ ಮಾಂಸ ಮತ್ತು ರಣ ಹದ್ದು”. ಒಂದಷ್ಟು ಸಾಲು ಓದುತ್ತಿದ್ದಂತೆ ಕಥೆ ಹೇಳುವ ರೀತಿ, ಭಾಷೆ, ವಸ್ತು ಎಲ್ಲವೂ ಹೊಸ ನಮೂನೆಯೇ. ದಕ್ಕಿಣಕನ್ನಡದ ಅದರಲ್ಲೂ ಗ್ರಾಮೀಣ ಭಾಗದ ಮಕ್ಕಳಾದ ನಮಗೆ ನಮ್ಮ ಇನ್ನೊಂದು ತುದಿಯಲ್ಲಿ ಈ ರೀತಿಯ ಬದುಕಿದೆ, ಜನರಿದ್ದಾರೆ ಎಂಬ ಅರಿವೂ ಇಲ್ಲದಿರುವ ದಿನಗಳವು. ಅರ್ಥೈಸಿಕೊಳ್ಳಲು ಕಷ್ಟವಾದರೂ ಅರ್ಧದಲ್ಲೆ ಕೈ ಬಿಡಲಾಗುತ್ತಿರಲಿಲ್ಲ. ರಾತ್ರಿ ಮಲಗಿದಾಗಲೂ ಕಾಡುತ್ತಿತ್ತು. ಅಂದಿನಿಂದಲೇ ನಾನು ಕಾಣದ ಆ ಸೀಮೆ, ಭಾಷೆ, ಅಲ್ಲಿಯ ಜನ ನನ್ನೆದೆಯೊಳಗೆ ಕುಳಿತುಬಿಟ್ಟರು. ಮುಂದೆ ವಲಸೆಗಳು ಜಾಸ್ತಿಯಾಗಿ ಆ ಭಾಗದ ಮಂದಿ ಜಾಸ್ತಿ ಜಾಸ್ತಿ ಕಾಣಲು ಸಿಕ್ಕಿದಾಗ ಗೀತಾ ನಾಗಭೂಷಣರ ಕಥಾ ಪಾತ್ರಗಳು ಇವರೆಲ್ಲರೊಳಗೂ ಇರಬಹುದೆಂದು ತಡಕಾಡಿದ್ದೂ ಇದೆ. ಅವರನ್ನು ಮಾತಾಡಿಸುವ ಹಂಬಲ, ಅವರ ಊರಿನ ಬದುಕಿನ ಬಗ್ಗೆ ಕೇಳುವ, ಅವರ ಕಥೆಗಳಿಗೆ ಕಿವಿಯಾಗುತ್ತ ಅವರನ್ನು ಒಳಗಿಳಿಸಿಕೊಳ್ಳುವ ಪ್ರಯತ್ನಕ್ಕೂ ಮೂಲದಲ್ಲಿ ಇದೇ ಕಾರಣವಿರಬಹುದು.

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡದ ಮೊದಲ ಮಹಿಳೆ, ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಮೊದಲ ಮಹಿಳೆ – ಹಲವು ಮೊದಲುಗಳಿಗೆ ಭಾಜನರಾದ ಗೀತಾ ನಾಗಭೂಷಣ ಅಂದೊಡನೆ ನನ್ನ ಮೊದಲ ತಾಜಾ ಅನುಭವ ಇದು. ಯಾವತ್ತೂ ನಾನು ಗೀತಾ ನಾಗಭೂಷಣರನ್ನು ಮುಖತಃ ಕಾಣುವಂತಹ ಅವಕಾಶಗಳಿಗೆ ಎದುರಾದವಳಲ್ಲ. ಆದರೆ, ನನಗೆಂದೂ ಅದು ದೊಡ್ಡ ಮಟ್ಟಿನ ಕೊರತೆಯಾಗಿ ಕಾಡಲಿಲ್ಲ. ಅಕಾಡಮಿಕ್ ಆಗಿಯೂ ಸಾಹಿತ್ಯದ ವಿದ್ಯಾರ್ಥಿನಿ ಅಲ್ಲದ ನನಗೆ ನಾನಿದ್ದ ಪರಿಸರದಲ್ಲಿ ಅವರ ಬರಹಗಳು ಬಹುಕಾಲದವರೆಗೆ ಅಷ್ಟಾಗಿ ಓದಿಗೆ ದೊರೆಯಲಿಲ್ಲ. ಆದರೆ, ಅಂದಿನ ಆ ಓದು ನನ್ನೊಳಗೆ ಸಣ್ಣ ಕಿಡಿ ಹೊತ್ತಿಸಿ ಇಂದಿಗೂ ಬೆಚ್ಚಗಿರುವುದನ್ನು ಅಲ್ಲಗಳೆಯಲಾರೆ.

ತನ್ನ ಸಮಾಜವನ್ನು ಒಳ ವಿಮರ್ಶಗೆ ಒಡ್ಡಿ ಒರೆ ಹಚ್ಚಿ ಬರೆಯುವ ನಿಷ್ಪಕ್ಷಪಾತಿಯಾಗುವುದು ಸೃಜನಶೀಲ ಬರವಣಿಗೆಯ ದೊಡ್ಡ ಸವಾಲು. ಅದರಲ್ಲೂ ಬರಹಗಾರ್ತಿಯರಿಗಂತು ಇದು ಇಂದಿಗೂ ನುಂಗಲಾರದ ಉಗುಳಲಾರದ ತುತ್ತು. ಇದಕ್ಕೆ ಗೀತಾ ನಾಗಭೂಷಣರೂ ಹೊರತಲ್ಲವೆಂಬುದು ಮುಂದೆ ಒಂದಷ್ಟು ಅವರ ಬರಹಗಳು ಓದಿಗೆ ಸಿಕ್ಕಿದಾಗ ಅನಿಸಿತು. ಅವರ ಮೊದಮೊದಲ ಬರಹಗಳು ನಂತರದ ಬರಹಗಳಂತೆ ಕಾದ ಕಬ್ಬಿಣದ ಸರಳಾಗಿರಲಿಲ್ಲ. ತನ್ನ ಬದುಕಿನಲ್ಲಿ ಹೋರಾಡುತ್ತಲೇ ಅಕ್ಷರಗಳನ್ನು ಪಡೆದುಕೊಂಡರೂ, ಒಂದು ಸ್ಥಾನಮಾನ ಗಿಟ್ಟಿಸಿದರೂ ಆರಂಭದ ಬರವಣಿಗೆಯಲ್ಲಿ ಒಳ ಮನಸ್ಸಿನ ಕೋರಿಕೆಯಂತೆ ಬರೆಯಲು ಅವರಿಗೆ ಸಾಧ್ಯವಾಗಲಿಲ್ಲವೋ ಅಥವಾ ಇದು ತನ್ನ ದಾರಿಯಲ್ಲವೆಂದು ಗುರುತಿಸಿಕೊಂಡು ಒಳಮನದ ಬೇಡಿಕೆಗೆ ತೆರೆದುಕೊಳ್ಳಲು ಸಮಯ ಬೇಕಾಯಿತೋ. “ನನಗೆ ಧ್ವನಿ ಇದೆ. ಧ್ವನಿ ಇಲ್ಲದ ನನ್ನ ಹೆಣ್ಮಕ್ಕಳ, ನನ್ನ ನೆಲದ-ಜನರ ಉಮ್ಮಳವನ್ನು ನಾನು ಮುಸುಕಿಕ್ಕದೆ ಹೇಳಿ ತೀರುತ್ತೇನೆ” ಎಂದು ನಿರ್ಧರಿಸಿದ ಮೇಲೆ ಕೌಟುಂಬಿಕ ಸಂಘರ್ಷದಲ್ಲೂ ರಾಜಿಯಾಗದೆ ನಿಂತಿದ್ದು ಸ್ವ ಶಕ್ತಿಯ ಮೇಲೆ ಅವರಿಗಿದ್ದ ಆತ್ಮವಿಶ್ವಾಸವನ್ನು, ಅವರ ಆತ್ಮಬಲವನ್ನು ತೋರಿಸುತ್ತದೆ. ಹೀಗೆ ಬರೆಯಲು ತೊಡಗಿದಾಗ ಕೆಲವೊಮ್ಮೆ ಒಳಸಮಾಜದೊಂದಿಗೆ ಒಟ್ಟು ಸಮಾಜವನ್ನು ವಿಮರ್ಶಾ ಕಣ್ಣಿಂದ ನೋಡುವಾಗ ಒಳ ಸಮಾಜದ ಬಗ್ಗೆ ಪಕ್ಷಪಾತ, ಸಹಾನುಭೂತಿ ಕಳಚಿಕೊಳ್ಳಬೇಕಾಗುತ್ತಿದೆ. ಇದನ್ನು ದಾಟಿಕೊಳ್ಳುವುದೇ ಸವಾಲು. ನಿಜದಲ್ಲಿ ಲೇಖಕ ಅಥವಾ ಲೇಖಕಿ ದಾಟಿಕೊಂಡರೂ ಅದನ್ನು ಒಟ್ಟು ಸಮಾಜದ ಓದುಗರು ಗುರುತಿಸುವುದರಲ್ಲಿ ಸೋಲುವ ಸಾಧ್ಯತೆಗಳಿರುತ್ತವೆ. ಹಾಗೆಯೇ ಕೆಲವೊಮ್ಮೆ ಅತಿ ಎಂದೋ, ಪುನರಾವರ್ತನೆ ಎಂದೊ ಟೀಕೆಗೊಳಗಾಗುವುದೂ ಇದೆ. ಇದ್ಯಾವುದರಿಂದಲೂ ಗೀತಾನಾಗಭೂಷಣರು ಹೊರತಾಗಲಿಲ್ಲ. ಆದರೆ, ಕೆಲವು ಸಂದರ್ಭಗಳಲ್ಲಿ ತಾನು ಹೇಳುತ್ತಿರುವ ಬದುಕಿನ ತೀವ್ರತೆ ಮನದಟ್ಟು ಮಾಡಿಸಲು ಈ ಪುನರಾವರ್ತನೆ ಅಥವಾ ಅತಿಗಳು ಸಹಕಾರಿಯಾಗುತ್ತವೆ. ಇತಿ-ಮಿತಿ ಹಾಗು ವ್ಯಾಪ್ತಿ-ಪ್ರಾಪ್ತಿಗಳ ನಡುವೆಯೇ ವರ್ತಮಾನದ ಕನ್ನಡ ಸಾಹಿತ್ಯದಲ್ಲಿ ಗೀತಾನಾಗಭೂಷಣರು ಉಳಿಸಿದ ಧ್ವನಿ, ಆತ್ಮದ ಧ್ವನಿಗಾಗಿ ತಮ್ಮ ಬದುಕನ್ನೇ ಪ್ರಯೋಗಕ್ಕೊಡ್ಡಿದ ಕಮಲಾದಾಸ್, ಮಹಾಶ್ವೇತಾದೇವಿ, ಇಂದಿರಾ ಗೋಸ್ವಾಮಿಯಂತವರನ್ನು ನೆನಪಿಸುತ್ತದೆ.

ಸಾಹಿತ್ಯವೆಂಬುದು ಆಯಾ ಕಾಲಘಟ್ಟದ ಸೃಜನಶೀಲ ಸಂಘರ್ಷವೆಂದ ಅವರ ಮಾತಿಗೆ ಪೂರಕವಾಗಿಯೇ “ಬದುಕು” ಕಾದಂಬರಿಗಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆಯುವ ಸಮಯದಲ್ಲಿ ತನ್ನ ಸಾಹಿತ್ಯ ರಚನೆಯ ಬಗ್ಗೆ ಅವರಾಡಿದ ಮಾತುಗಳು ಹಾಗು 76ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅದನ್ನವರು ನಿಭಾಯಿಸಿದ ರೀತಿ ಹಾಗು ಅವರೆತ್ತಿದ ಪ್ರಶ್ನೆಗಳೂ ಇದ್ದವು.

ಅಂದು ಗೀತಾನಾಗಭೂಷಣರ ಮೊದಲ ಓದಿನ ಅನುಭವಕ್ಕೆ ತೆರೆದುಕೊಳ್ಳುವಾಗ ಈ ಸಾಹಿತ್ಯದ ಮಣ್ಣಲ್ಲಿ ನನ್ನದೇ ಆದ ಪುಟ್ಟ ಉಳುಮೆ ಮಾಡುವ ಪ್ರಯತ್ನ ಮಾಡುತ್ತೇನೆಂದೂ ಕನಸೂ ಕಂಡವಳಲ್ಲ. ಇಂದು ಗೀತಾನಾಗಭೂಷಣ ನಮ್ಮಂತಹ ಕಂದಮ್ಮಗಳಿಗೆ ಒಳಮನದ ಮಾತಿನಂತೆ ಹೆಜ್ಜೆ ಇಡಲು ತಾಕತ್ ತುಂಬಿದ ಅವ್ವ ಅಂದರೆ ಉತ್ಪ್ರೇಕ್ಷೆ ಅಲ್ಲ. ಎಲ್ಲಾ ವಿಧದಲ್ಲೂ ಹುಳುಕುಗಳನ್ನು ಮುಚ್ಚಿಡುವ ಶಿಷ್ಟತೆಯ ಹಂಗು ಕಳಚಿಕೊಂಡು ಇದು ಹಾಗೆ ಮಾತ್ರ ಅಲ್ಲ ಹೀಗೂ ಇದೆ ನೋಡಿ ಎಂದು ಅವರು ತೆರೆದಿಟ್ಟ ಜಗತ್ತು, ನಾವು ನಮ್ಮ ನಮ್ಮೊಳಗಿನ ಜಗತ್ತು ನೋಡಿಕೊಳ್ಳುವುದನ್ನು ತುಸುವಾದರೂ ಕಲಿಸಿದೆ. ಕಲಿಸುತ್ತಿರುತ್ತದೆ..

  • ಅನುಪಮಾ ಪ್ರಸಾದ್ ರವರು ಲೇಖಕಿಯಾಗಿದ್ದು ಇತ್ತೀಚೆಗೆ ‘ಪಕ್ಕಿಹಳ್ಳದ ಹಾದಿಗುಂಟ’ ಕಾದಂಬರಿ ಬರೆದಿದ್ದಾರೆ.

ಇದನ್ನು ಓದಿ: ಗೀತಾ ನಾಗಭೂಷಣ ತಮ್ಮ ಪುಸ್ತಕಗಳ ಜೊತೆ ಸದಾ ಜೀವಂತವಾಗಿ ಇರುತ್ತಾರೆ: ಶ್ರದ್ಧಾಂಜಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...