Homeಅಂತರಾಷ್ಟ್ರೀಯಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ 'ದಿ ವಾಯ್ಸ್ ಆಫ್ ಹಿಂದ್ ರಜಬ್'

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

- Advertisement -
- Advertisement -

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ ‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಲನಚಿತ್ರವು 2026ರ ಆಸ್ಕರ್ (ಅಕಾಡೆಮಿ ಪ್ರಶಸ್ತಿ) ಪ್ರಶಸ್ತಿಗೆ ಅಧಿಕೃತವಾಗಿ ನಾಮನಿರ್ದೇಶನಗೊಂಡಿದೆ. 

ಅತ್ಯುತ್ತಮ ಅಂತಾರಾಷ್ಟ್ರೀಯ ಚಲನಚಿತ್ರ (Best International Feature Film) ವಿಭಾಗದಲ್ಲಿ ಟುನೀಶಿಯಾ ದೇಶದಿಂದ ಅಧಿಕೃತವಾಗಿ ಚಿತ್ರವು ಆಸ್ಕರ್‌ಗೆ ಪ್ರವೇಶ ಪಡೆದಿದೆ. ಈ ಚಿತ್ರವನ್ನು ಖ್ಯಾತ ಟುನೀಶಿಯನ್ ಚಲನಚಿತ್ರ ನಿರ್ದೇಶಕಿ ಕೌಥರ್ ಬೆನ್ ಹನಿಯಾ ಅವರು ನಿರ್ದೇಶಿಸಿದ್ದಾರೆ.

ಈ ವರ್ಷದ ಅಥವಾ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಪ್ರಧಾನ ಸಮಾರಂಭವು ಅಮೆರಿಕದ ಲಾಸ್ ಏಂಜಲೀಸ್‌ನ ಓವೇಶನ್ ಹಾಲಿವುಡ್‌ನಲ್ಲಿರುವ ಐತಿಹಾಸಿಕ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15, 2026 (ಭಾನುವಾರ) ರಂದು ನಡೆಯಲಿದೆ.

ಭಾರತೀಯ ವೀಕ್ಷಕರಿಗೆ ಸಮಯದ ವ್ಯತ್ಯಾಸದಿಂದಾಗಿ ಈ ಕಾರ್ಯಕ್ರಮವು ಮಾರ್ಚ್ 16, 2026 (ಸೋಮವಾರ) ರಂದು ಬೆಳಿಗ್ಗೆ 4.30ಕ್ಕೆ ನೇರ ಪ್ರಸಾರವಾಗಲಿದೆ.

ಖ್ಯಾತ ಹಾಸ್ಯನಟ ಮತ್ತು ದೂರದರ್ಶನ ನಿರೂಪಕ ಕೋನನ್ ಒ’ಬ್ರಿಯಾನ್ ಅವರು ಸತತ ಎರಡನೇ ಬಾರಿಗೆ ಸಮಾರಂಭವನ್ನು ನಡೆಸಿಕೊಡಲಿದ್ದಾರೆ.

ಈ ಬಾರಿಯ ಆಸ್ಕರ್ ರೇಸ್‌ನಲ್ಲಿ ‘ಸಿನರ್ಸ್ಚಿತ್ರವು ಗರಿಷ್ಠ 16 ನಾಮನಿರ್ದೇಶನಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದೆ.

‘ದಿ ವಾಯ್ಸ್ ಆಫ್ ಹಿಂದ್ ರಜಬ್‘ ಚಿತ್ರದ ನಿರ್ಮಾಪಕರು ಮತ್ತು ಬೆಂಬಲಿಗರು ಈ ಚಿತ್ರವು ಪ್ರಶಸ್ತಿ ಪಡೆಯುವ ದೊಡ್ಡ ಭರವಸೆಯಲ್ಲಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ.

ಹಿಂದ್ ರಜಬ್ ಗಾಝಾದ ಆರು ವರ್ಷದ ಫ್ಯಾಲೆಸ್ತೀನ್ ಬಾಲಕಿ. 2024ರ ಜನವರಿಯಲ್ಲಿ ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದ ಸಂದರ್ಭದಲ್ಲಿ ಈಕೆ ಜಗತ್ತಿನಾದ್ಯಂತ ಸುದ್ದಿಯಾಗಿದ್ದಳು.

ಜನವರಿ 29, 2024ರಂದು ಹಿಂದ್ ರಜಬ್ ತನ್ನ ಕುಟುಂಬದೊಂದಿಗೆ ಗಾಝಾ ನಗರದಿಂದ ಪಲಾಯನ ಮಾಡುವಾಗ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಇಸ್ರೇಲ್ ಸೇನೆ ಸುಮಾರು 300 ಸುತ್ತು ಗುಂಡುಗಳ ಭೀಕರ ದಾಳಿ ನಡೆಸಿತ್ತು.

ಇಸ್ರೇಲ್ ಸೇನೆಯ ದಾಳಿಯಿಂದ ಕಾರಿನಲ್ಲಿದ್ದ ಕುಟುಂಬದ ಇತರ ಆರು ಸದಸ್ಯರು ತಕ್ಷಣ ಮೃತಪಟ್ಟಾಗ, ಬಾಲಕಿ ಹಿಂದ್ ಮಾತ್ರ ಬದುಕುಳಿದಿದ್ದಳು. ಸುಮಾರು ಮೂರು ಗಂಟೆಗಳ ಕಾಲ ಆಕೆ ತನ್ನವರ ಶವಗಳ ನಡುವೆ ಕಾರಿನಲ್ಲಿ ಸಿಲುಕಿಕೊಂಡಿದ್ದಳು. ಈ ಸಂದರ್ಭದಲ್ಲಿ ಆಕೆ ಪ್ಯಾಲೆಸ್ತೀನ್ ರೆಡ್ ಕ್ರೆಸೆಂಟ್ ಸೊಸೈಟಿಗೆ (ಪಿಆರ್‌ಸಿಎಸ್‌) ಫೋನ್ ಮಾಡಿ ತನ್ನನ್ನು ರಕ್ಷಿಸುವಂತೆ ಅಳುತ್ತಾ ಬೇಡಿಕೊಂಡಿದ್ದಳು.

ಆಕೆಯನ್ನು ರಕ್ಷಿಸಲು ಹೋದ ಪಿಆರ್‌ಸಿಎಸ್‌ನ ಇಬ್ಬರು ಅರೆವೈದ್ಯಕೀಯ ಸಿಬ್ಬಂದಿ ಕೂಡಾ ದಾಳಿಯಲ್ಲಿ ಮೃತಪಟ್ಟಿದ್ದರು. ಸುಮಾರು 12 ದಿನಗಳ ನಂತರ ಹಿಂದ್ ರಜಬ್‌ಳ ಶವ ಗುಂಡಿನ ದಾಳಿಯಿಂದ ನಜ್ಜುಗುಜ್ಜಾಗಿದ್ದ ಕಾರಿನಲ್ಲಿ ಪತ್ತೆಯಾಗಿತ್ತು.

ಈ ಘಟನೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಕೊಲಂಬಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇಸ್ರೇಲ್ ಸೇನೆಯ ಆಕ್ರಮಣವನ್ನು ಪ್ರತಿಭಟಿಸಿ ತಮ್ಮ ಹ್ಯಾಮಿಲ್ಟನ್ ಹಾಲ್‌ಗೆ ‘ಹಿಂದ್ ಹಾಲ್’ ಎಂದು ಮರುನಾಮಕರಣ ಮಾಡಿದ್ದರು.

ಈಕೆಯ ಕಥೆಯನ್ನು ಆಧರಿಸಿದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಸೆಪ್ಟೆಂಬರ್ 3, 2025 ರಂದು ವೆನಿಸ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಆಗ ಪ್ರೇಕ್ಷಕರು ಸುಮಾರು 23 ನಿಮಿಷಗಳ ಕಾಲ ಎದ್ದು ನಿಂತು ಚಿತ್ರಕ್ಕೆ ಗೌರವ ಸೂಚಿಸಿದ್ದರು. ಈ ಮೂಲಕ ಚಿತ್ರ ದಾಖಲೆ ಬರೆದಿತ್ತು.

ಅಲ್ಲದೆ, ಅಲ್ಲಿ ಅದು ಗ್ರ್ಯಾಂಡ್ ಜ್ಯೂರಿ ಪ್ರಶಸ್ತಿ ಮತ್ತು ಇತರ ಆರು ಸಮಾನಾಂತರ ಬಹುಮಾನಗಳನ್ನು ಗೆದ್ದುಕೊಂಡಿತ್ತು. 2025ರ ಸೆಪ್ಟೆಂಬರ್ 10ರಂದು ಟುನೀಶಿಯಾದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಚಿತ್ರ, ನಂತರ ನವೆಂಬರ್ 26 ರಂದು ದಿ ಪಾರ್ಟಿ ಫಿಲ್ಮ್ ಸೇಲ್ಸ್‌ನಿಂದ ಫ್ರಾನ್ಸ್‌ನಲ್ಲಿ ಬಿಡುಗಡೆಗೊಂಡಿತ್ತು.

ಹಿಂದ್ ರಜಬ್ ಇಂದು ಗಾಝಾದ ನಾಗರಿಕರ, ವಿಶೇಷವಾಗಿ ಮಕ್ಕಳ ಸಂಕಷ್ಟದ ಸಂಕೇತವಾಗಿ ಗುರುತಿಸಲ್ಪಡುತ್ತಿದ್ದಾಳೆ.

2023ರಿಂದ 2025ರವರೆಗೆ ಇಸ್ರೇಲ್ ಗಾಝಾ ಮೇಲೆ ನಡೆಸಿದ ಆಕ್ರಮಣ ಮತ್ತು ನರಮೇಧದಲ್ಲಿ ಸುಮಾರು 75 ಸಾವಿರಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಈ ಪೈಕಿ 20 ಸಾವಿರ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಚಲನಚಿತ್ರವೊಂದಕ್ಕೆ ‘ಆಸ್ಕರ್ ಪ್ರಶಸ್ತಿ’ ಎಂಬುವುದು ವಿಶ್ವದ ಅತಿದೊಡ್ಡ ವೇದಿಕೆಗಳಲ್ಲಿ ಒಂದಾಗಿರುವುದರಿಂದ ಅದು ಅತ್ಯಂತ ಪ್ರಮುಖವಾಗಿದೆ ಎಂದು ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಒಡೆಸ್ಸಾ ರೇ ಲಾಸ್ ಏಂಜಲೀಸ್‌ನಿಂದ ದೂರವಾಣಿ ಮೂಲಕ ಮಾತನಾಡುತ್ತಾ ಹೇಳಿದ್ದಾರೆ. ಈ ಚಿತ್ರದ ಮುಖ್ಯ ಉದ್ದೇಶ ಸಾಧ್ಯವಾದಷ್ಟು ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರನ್ನು ತಲುಪುವುದಾಗಿದೆ. ಆಸ್ಕರ್ ವೇದಿಕೆಯು ಈ ಗುರಿಯನ್ನು ಜಾಗತಿಕ ಮಟ್ಟದಲ್ಲಿ ಸಾಧಿಸಲು ನೆರವಾಗುತ್ತದೆ ಎಂಬುವುದಾಗಿ ತಿಳಿಸಿದ್ದಾರೆ ಎಂದು ಅಲ್- ಜಝೀರಾ ವರದಿ ಉಲ್ಲೇಖಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...