Homeಕರ್ನಾಟಕಕಾರ್ಪೊರೇಟ್ ಜಗತ್ತಿನ ಸಂಪತ್ತು, ಬಿಗ್ ಬಾಸ್ ಹನುಮಂತು, ಟ್ರ್ಯಾಪ್ ಆದ ಕೆಲವು ಪ್ರಗತಿಪರ ಚಿಂತಕರು...

ಕಾರ್ಪೊರೇಟ್ ಜಗತ್ತಿನ ಸಂಪತ್ತು, ಬಿಗ್ ಬಾಸ್ ಹನುಮಂತು, ಟ್ರ್ಯಾಪ್ ಆದ ಕೆಲವು ಪ್ರಗತಿಪರ ಚಿಂತಕರು…

- Advertisement -
- Advertisement -

ಕಾರ್ಪೊರೇಟ್ ಜಗತ್ತಿನ ಸೂಕ್ಷ್ಮಗಳನ್ನು ಅರ್ಥ ಮಾಡಿಕೊಳ್ಳಲು ಅತ್ಯಂತ ಸಂವೇದನಾಶೀಲತೆ, ಚಲನಶೀಲತೆ, ಪ್ರಬುದ್ಧತೆ ಬೇಕಾಗುತ್ತದೆ. ಅವರುಗಳು ಅತ್ಯಂತ ನಾಜೂಕಾಗಿ ಇಡೀ ವ್ಯವಸ್ಥೆಯನ್ನು ಜನರ ಬೆಂಬಲದೊಂದಿಗೆ ಆಪೋಶನ ತೆಗೆದುಕೊಳ್ಳುತ್ತಾರೆ…

ಬಿಗ್ ಬಾಸ್ ಎಂಬ ಒಂದು ಕಾರ್ಯಕ್ರಮದ ಪರಿಕಲ್ಪನೆ ಮತ್ತು ವಿನ್ಯಾಸವೇ ಹುಚ್ಚುತನದ ಪರಮಾವಧಿ. ಮೌಲ್ಯಗಳ ಅಧ್ಹ:ಪತನ, ಮನರಂಜನೆಯ ಹೆಸರಿನ ಆರ್ಥಿಕ ದರೋಡೆ ಮತ್ತು ಸಾಮಾನ್ಯ ಜನರ ಮುಗ್ಧತೆ ಮತ್ತು ಮೂರ್ಖತನದ ದುರುಪಯೋಗ. ಅಂತಹ ಕಾರ್ಯಕ್ರಮದಲ್ಲಿ ಯಾರೇ ಭಾಗವಹಿಸಿದ್ದರೂ, ಯಾರೇ ಗೆದ್ದರೂ ಅಂತಹ ವ್ಯತ್ಯಾಸವೇನು ಆಗುವುದಿಲ್ಲ…..

ಗ್ರಾಮೀಣ ಭಾಗದ, ಮುಗ್ಧ ಮನಸ್ಸಿನ, ಅತ್ಯಂತ ತಳ ಸಮುದಾಯದ, ಬಡತನದಿಂದ ಬೆಳೆದು ಬಂದ ಕುರಿಗಾಹಿ ಹನುಮಂತು ಗೆದ್ದ ಮಾತ್ರಕ್ಕೆ ಇಡೀ ಕಾರ್ಯಕ್ರಮ ಸಾರ್ಥಕತೆ ಪಡೆಯಿತು. ಆತ ಗೆದ್ದಿದ್ದು ಈ ಸಮಾಜ ಬಹುದೊಡ್ಡ ಪರಿವರ್ತನೆಯ ಹಾದಿಯಲ್ಲಿದೆ. ಬಡವರೂ ಆ ಬೃಹತ್ ಜನಪ್ರಿಯತೆಯ ಮನರಂಜನಾ ಕಾರ್ಯಕ್ರಮವನ್ನು ಗೆಲ್ಲಬಹುದು ಮತ್ತು ನಗರದ ಕೃತಕ ಸ್ವಭಾವದ, ಮುಖವಾಡ ಮನಸ್ಥಿತಿಯ ಜನರನ್ನು ಮೀರಿ ಸಾರ್ವಜನಿಕ ಬೆಂಬಲದ ಆಧಾರದ ಮೇಲೆ ಹನುಮಂತು ಗೆಲುವು ಒಂದು ದೊಡ್ಡ ಸಾಮಾಜಿಕ ಕ್ರಾಂತಿ, ಬಂಡವಾಳ ಶಾಹಿ ವ್ಯವಸ್ಥೆ ಅಥವಾ ಶ್ರೀಮಂತರಿಗೆ ಕೊಟ್ಟ ಹೊಡೆತ ಎಂಬುದಾಗಿ ಕೆಲವು ಪ್ರಗತಿಪರ ಚಿಂತಕರು ಸಾಮಾಜಿಕ ಜಾಲತಾಣಗಳಲ್ಲಿ ಬರೆಯುತ್ತಿರುವುದನ್ನು ನೋಡಿದೆ……

ಮೇಲ್ನೋಟಕ್ಕೆ ಇದು ಸರಿ ಅನಿಸಬಹುದು. ಕೆಲವು ಅಲ್ಲಿನ ಸೋತ ಸ್ಪರ್ಧಿಗಳ ಅಸೂಯೆ ಮತ್ತು ಅವರ ಅಹಂಕಾರದ ಮಾತುಗಳು ಹಾಗು ಬಡವರ ಬಗೆಗಿನ ತಿರಸ್ಕಾರ ಇದನ್ನು ದೃಢಪಡಿಸುತ್ತದೆ. ಆದರೆ ಹನುಮಂತು ಗೆಲುವು ಈ ಕಾರ್ಪೊರೇಟ್ ಸಂಸ್ಕೃತಿ ಇಂತಹ ಮನಸ್ಸುಗಳಿಗೆ ಹಾಕುವ ಬಿಸ್ಕೆಟ್ ರೀತಿಯ ಅಮಲು ಎಂಬುದನ್ನು ಮರೆಯಬಾರದು. ಏಕೆಂದರೆ ಹೀಗೆ ಒಮ್ಮೊಮ್ಮೆ ಗ್ರಾಮೀಣ ಭಾಗದ, ಶೋಷಿತ ಸಮುದಾಯದ ಮುಗ್ಧ ವ್ಯಕ್ತಿಗಳನ್ನು ಉಪಯೋಗಿಸಿಕೊಂಡು ಕಾರ್ಪೊರೇಟ್ ಸಂಸ್ಕೃತಿ ಮುಂದೆ ಭವಿಷ್ಯದಲ್ಲಿ ತನ್ನ ವಿರಾಟ್ ರೂಪವನ್ನು ಪ್ರದರ್ಶಿಸುತ್ತದೆ…..

ಈ ಬಂಡವಾಳಶಾಹಿ ವ್ಯವಸ್ಥೆಯ ಚಿಂತನೆ ಹೇಗಿರುತ್ತದೆ ಎಂದರೆ ಅದು ಎಂದೂ ನೇರ ಘರ್ಷಣೆಗೆ ಇಳಿಯುವುದಿಲ್ಲ. ಜನರ ಮನಸ್ಥಿತಿಯನ್ನು ನೋಡಿಕೊಂಡು, ಅವರದೇ ದಾರಿಯಲ್ಲಿ ಹೆಜ್ಜೆ ಹಾಕುತ್ತಾ, ಅವರ ಮನಸ್ಸುಗಳನ್ನು ನಿಯಂತ್ರಿಸಿ, ಅನಿವಾರ್ಯಗೊಳಿಸಿ, ದೇಹವನ್ನು ನಿರ್ವೀರ್ಯಗೊಳಿಸಿ, ಕೊನೆಗೆ ಭಾವನಾತ್ಮಕವಾಗಿ ತನ್ನ ಗುಲಾಮರನ್ನಾಗಿ ಮಾಡಿಕೊಳ್ಳುವ ವ್ಯವಸ್ಥಿತ ಸಂಚು ಕಾರ್ಪೊರೇಟ್ ಉದ್ಯಮಗಳು ಮಾಡುತ್ತವೆ. ಅದರ ಒಂದು ಭಾಗವೇ ಬಿಗ್ ಬಾಸ್ ಎಂಬ ಕಾರ್ಯಕ್ರಮ ಮತ್ತು ಅದರಲ್ಲಿ ಹನುಮಂತು ಗೆದ್ದಿದ್ದು….

ಅತಿ ಬುದ್ದಿವಂತ ಯುವಕರನ್ನು, ಅತಿಹೆಚ್ಚು ಸಂಬಳ ನೀಡಿ ಉದ್ಯೋಗಿಗಳಾಗಿ ಮಾಡಿಕೊಳ್ಳುವ ಜಗತ್ತಿನ ಈ ಕಾರ್ಪೊರೇಷನ್ ಸಂಸ್ಕೃತಿ ಇಡೀ ವಿಶ್ವದ ಮೇಲೆ ಬಿಗಿಹಿಡಿತ ಸಾಧಿಸುತ್ತಿರುವುದು, ಇದರ ಸಂಕೇತವೇ ಈ ರೀತಿಯ ಕಾರ್ಯಕ್ರಮಗಳು‌. ಇದೊಂದು ಸಾಂಕೇತಿಕತೆ ಮಾತ್ರ. ಇದರ ಒಳಗಡೆ ಇನ್ನೂ ಆಳವಾದ ಸೂಕ್ಷ್ಮತೆ ಅಡಗಿರುತ್ತದೆ…..

ನೀವೇ ಗಮನಿಸಿ, ಬಿಗ್ ಬಾಸ್ ನಲ್ಲಿ ಭಾಗವಹಿಸುವ ಯಾವುದೇ ಸ್ಪರ್ಧಿಗಳು ಅಧ್ಯಯನ ನಿರತರಲ್ಲ, ಬಹುದೊಡ್ಡ ಅನುಭವಿಗಳಲ್ಲ, ಸಮಾಜ ಸುಧಾರಕರಲ್ಲ, ಚಿಂತಕರಲ್ಲ, ದಾರ್ಶನಿಕರಲ್ಲ, ಉದ್ಯಮಿಗಳಲ್ಲ, ಯಾವುದೇ ವೃತ್ತಿಯ ಶ್ರೇಷ್ಠ ಸಾಧಕರು ಅಲ್ಲ, ಚಿಂತನಶೀಲರೂ ಅಲ್ಲ. ಬಹುತೇಕ ಕಿರುತರೆ, ಚಲನಚಿತ್ರ ರಂಗ ಅಥವಾ ಸಾಮಾಜಿಕ ಜಾಲತಾಣದ ಕ್ರೇಜಿ ಬಾಯ್ಸ್ ಅಂಡ್ ಗರ್ಲ್ಸ್ ಗಳೇ ಆಗಿರುತ್ತಾರೆ. ಅವರಿಗೆ ಈ ಸಮಾಜದ ಆಗುಹೋಗುಗಳ ಯಾವ ಸೂಕ್ಷ್ಮತೆಯ ಅರಿವೂ ಇರುವುದಿಲ್ಲ, ಜವಾಬ್ದಾರಿಯೂ ಇರುವುದಿಲ್ಲ. ಕೇವಲ ತಾವು ಬದುಕಿನಲ್ಲಿ ಯಶಸ್ವಿಯಾಗಬೇಕು, ಅದಕ್ಕಾಗಿ ಕೆಲವು ಮನರಂಜನಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂಬ ಮನಸ್ಥಿತಿ ಮಾತ್ರ ಇರುತ್ತದೆ……

ಇದು ಕುರಿಗಾಹಿ ಹನುಮಂತು ಅವರಿಗೂ ಸಹ ಅನ್ವಯಿಸುತ್ತದೆ. ಏಕೆಂದರೆ ಆತ ಒಬ್ಬ ಮುಗ್ಧ ಎನ್ನುವುದರಲ್ಲಿ ಅನುಮಾನವಿಲ್ಲ. ಆದರೆ ಮುಗ್ಧತೆಯಷ್ಟೇ ಮೂರ್ಖತನ ಮತ್ತು ಸ್ವಾರ್ಥವೂ ಅಡಗಿರುತ್ತದೆ‌. ಅದು ವೈಯಕ್ತಿಕ ಮಟ್ಟದಲ್ಲಿದೆ ನಿಜ, ಆದರೆ ಈ ರೀತಿಯ ಕಾರ್ಯಕ್ರಮದಲ್ಲಿ ಅತ್ಯಂತ ಸಣ್ಣತನ, ದ್ವೇಷ, ಅಸೂಯೆ, ಹಿಂಸೆ, ಕ್ರೌರ್ಯ, ಮೌಢ್ಯ, ಅಜ್ಞಾನ ಎಲ್ಲವನ್ನೂ ಕೆರಳಿಸಿ, ಜನರಿಗೆ ಮನರಂಜಿಸಿ, ಅದರಲ್ಲಿ ಹನುಮಂತು ಗೆದ್ದರೂ ಒಂದೇ, ಇತರರು ಗೆದ್ದರೂ ಒಂದೇ. ಇದೆಲ್ಲವೂ ಕಾರ್ಪೊರೇಟ್ ಲಾಭಿಗಳ ವಂಚಕ ಪ್ರಪಂಚದ ವಿವಿಧ ಮುಖಗಳು ಮಾತ್ರ….

ಇವತ್ತು ಹನುಮಂತುವನ್ನು ಗೆಲ್ಲಿಸಿ, ನಾಳೆ ಹುಚ್ಚ ವೆಂಕಟ್ ಅನ್ನು ಗೆಲ್ಲಿಸಿ, ಮತ್ತೊಮ್ಮೆ ಪ್ರಥಮನನ್ನು ಗೆಲ್ಲಿಸಿ, ಇನ್ನೊಮ್ಮೆ ಇನ್ಯಾರನ್ನೋ ಗೆಲ್ಲಿಸಿ ಹೀಗೆ ಆಟ ಮುಂದುವರೆಯುತ್ತಲೇ ಇರುತ್ತದೆ. ಇಡೀ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಭಾರತೀಯ ಮೌಲ್ಯಗಳಾಗಲಿ, ಮಾನವೀಯ ಮೌಲ್ಯಗಳಾಗಲಿ, ಸಾಮಾಜಿಕ ಮೌಲ್ಯಗಳಾಗಲಿ, ವ್ಯಕ್ತಿಗತ ಮೌಲ್ಯಗಳಾಗಲಿ, ಭವಿಷ್ಯದ ಕನಸುಗಳಾಗಲಿ ಎಲ್ಲಿವೆ ಹುಡುಕಿ ನೋಡಿ. ಸಮಾಜದ ಮೇಲೆ ಈ ಕಾರ್ಯಕ್ರಮ ಬೀರುತ್ತಿರುವ ಒಳ್ಳೆಯ ಮತ್ತು ಕೆಟ್ಟ ಅಂಶಗಳನ್ನು ಪಟ್ಟಿ ಮಾಡಿ ನೋಡಿ…..

ಅಷ್ಟೇ ಅಲ್ಲ, ನಿರೂಪಣೆ ಮಾಡುವ ಖ್ಯಾತ ಚಿತ್ರನಟ ಸಹ ಇಡೀ ಕಾರ್ಯಕ್ರಮವನ್ನು ತನ್ನ ಅಹಂಮಿಕೆಯಲ್ಲಿ, ತಾನೊಬ್ಬ ಅತಿಮಾನುಷ ವ್ಯಕ್ತಿಯಂತೆ, ರಿಂಗ್ ಮಾಸ್ಟರ್ ನಂತೆ, ಒಳಗಿರುವ ವ್ಯಕ್ತಿಗಳನ್ನು ಪ್ರಾಣಿಗಳಂತೆ ಹಿಂಸಿಸಿ, ಚಿತ್ರಿಸಿ, ಬುದ್ಧಿ ಹೇಳಿ ಕಲಿಸಿ, ತಾನು ಮಾತ್ರ ದೇವದೂತನಂತೆ, ತನ್ನ ಕುಟುಂಬ ಅತ್ಯಂತ ಶ್ರೇಷ್ಠ ಎಂಬಂತೆ ಬಿಂಬಿಸಿಕೊಂಡು ನಿರೂಪಿಸುತ್ತಾರೆ. ಅದಕ್ಕೆ ವಿವಿಧ ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳು ವಿಚಿತ್ರ ರೀತಿಯಲ್ಲಿ ಸಮರ್ಥನೆ ಅಥವಾ ವಿರೋಧ ವ್ಯಕ್ತಪಡಿಸುತ್ತವೆ…..

ಜೊತೆಗೆ ಅದರಲ್ಲಿ ಭಾಗವಹಿಸಿದ ಸ್ಪರ್ಧಿಗಳು ಹೊರಗೆ ಬಂದ ನಂತರ ಮಹಾನ್ ಸಾಧಕರಂತೆ ಸಮಾಜದ ಕೆಲವರು ಮತ್ತು ಮಾಧ್ಯಮಗಳು ಅವರನ್ನು ಸ್ವಾಗತಿಸುತ್ತಾರೆ, ಪ್ರಶ್ನೆಗಳನ್ನು ಕೇಳುತ್ತಾರೆ. ಒಬ್ಬ ಜಾಡಮಾಲಿ, ಒಬ್ಬ ಕೂಲಿ, ಒಬ್ಬ ರೈತ, ಒಬ್ಬ ಉಪಾಧ್ಯಾಯ, ಒಬ್ಬ ವೈದ್ಯ, ಒಬ್ಬ ಸಾಹಿತಿ, ಒಬ್ಬ ಕಥೆಗಾರ, ಒಬ್ಬ ಪತ್ರಕರ್ತ ಹೀಗೆ ಸಾಮಾನ್ಯ ವ್ಯಕ್ತಿಗಳಿಗಿಂತ ಯಾವುದೇ ರೀತಿಯ ವಿಶೇಷ ವೈಶಿಷ್ಟ್ಯ ವ್ಯಕ್ತಿತ್ವ ಹೊಂದಿಲ್ಲದ ಈ ಸ್ಪರ್ಧಿಗಳನ್ನು ಕೇವಲ ಇಡೀ ರಾಜ್ಯಾದ್ಯಂತ ಜನಪ್ರಿಯರಾಗುತ್ತಾರೆ, ಆ ಕಾರ್ಯಕ್ರಮವನ್ನು ಹೆಚ್ಚು ಜನ ನೋಡುತ್ತಾರೆ ಎನ್ನುವ ಒಂದೇ ಆಧಾರದ ಮೇಲೆ ಅವರನ್ನು ಸಮಾಜ ಬಹಳ ಎತ್ತರಕ್ಕೆ ನೋಡುವುದು ವಿಚಿತ್ರವೆನಿಸುತ್ತದೆ…..

ಅವರುಗಳು ಕೂಡ ಅತ್ಯಂತ ಬಾಲಿಶವಾಗಿ, ಸಣ್ಣ ವಿಷಯಗಳಿಗೂ ಕೆಟ್ಟ ರೀತಿಯ ಪ್ರತಿಕ್ರಿಯೆ ಕೊಡುವುದನ್ನೇ ಚರ್ಚೆಯ ವಿಷಯವಾಗಿಸುವುದು, ಈ ಸಮಾಜದ ದುರಂತ. ಪ್ರಗತಿಪರರೆನಿಸಿಕೊಂಡ ಕೆಲವರು ಸಹ ಈ ಕಾರ್ಯಕ್ರಮದಲ್ಲಿ ಹನುಮಂತು ಗೆದ್ದಿದ್ದು ಒಂದು ದೊಡ್ಡ ಸಾಧನೆ ಎಂಬಂತೆ ಚಿತ್ರಿಸುತ್ತಿರುವುದು ಆಶ್ಚರ್ಯವಾಗುತ್ತದೆ. ಹನುಮಂತು ಸಹ ಒಂದು ದಿನಕ್ಕೂ ಇಲ್ಲಿನ ಭ್ರಷ್ಟಾಚಾರ, ಇಲ್ಲಿನ ಜಾತಿ ವ್ಯವಸ್ಥೆ, ಇಲ್ಲಿನ ಅನ್ಯಾಯ ಅಕ್ರಮಗಳ ಬಗ್ಗೆ ಧ್ವನಿ ಎತ್ತಿಲ್ಲ. ಬಹುಶಃ ಆತನಿಗೆ ಅದರ ಅರಿವೂ ಇಲ್ಲ. ಕೇವಲ ಒಂದು ಮುಗ್ಧತೆ ಮಾತ್ರ ಅವರನ್ನು ಈ ಹಂತಕ್ಕೆ ತೆಗೆದುಕೊಂಡು ಬಂದಿದೆ. ಅದಕ್ಕೆ ಸಂತೋಷಪಡೋಣ…..

ಅನೇಕ ಕೃತಕ ಮುಖವಾಡಗಳ ಮಧ್ಯೆ ಹನುಮಂತ ಗೆದ್ದಿದ್ದು ಉತ್ತಮವೇ ಇರಬಹುದು. ಆದರೆ ಆ ಇಡೀ ಕಾರ್ಯಕ್ರಮದ ವಿನ್ಯಾಸ ಒಂದು ರೀತಿ ಇಡೀ ಸಮಾಜಕ್ಕೆ ಬಿಸ್ಕೆಟ್ ಎಸೆದಂತೆ. ಕಾರ್ಪೊರೇಷನ್ ಸಂಸ್ಕೃತಿ ಒಬ್ಬ ನಟ ಮತ್ತು ಒಂದು ವಾಹಿನಿಯ ಮೂಲಕ ಇಡೀ ಸಮಾಜವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಮತ್ತು ತನ್ನ ಆರ್ಥಿಕ ಅಭಿವೃದ್ಧಿಯನ್ನು ಹೊಂದುವ ಪರೋಕ್ಷ ಉದ್ದೇಶ ಹೊಂದಿರುತ್ತದೆ ಎಂಬುದನ್ನು ಮರೆಯಬಾರದು….

ಈಗಿನ ಸಾಮಾಜಿಕ ವ್ಯವಸ್ಥೆ ಬದುಕನ್ನು ಸಂಕೀರ್ಣಗೊಳಿಸಿ ಬಹುತೇಕ ಜನ ಮನರಂಜನೆಗಾಗಿ ತಹತಹಿಸುವಂತೆ ಮಾಡುತ್ತಿದೆ. ತಾವು ಮಾಡಬೇಕಾದ, ಯೋಚಿಸಬೇಕಾದ ಅನೇಕ ಒಳ್ಳೆಯ ಕೆಲಸಗಳನ್ನು ಮರೆಮಾಚಿಸಿ ಬಸ್ಸು, ರೈಲು, ಪಾರ್ಕು, ವಿಶ್ರಾಂತಿಗೃಹ, ಶಾಲಾ ಕಾಲೇಜು ಎಲ್ಲೆಂದರಲ್ಲಿ ಜೋಕುಗಳು, ರೀಲ್ಸ್ಗಳು, ಮುಂತಾದ ಮನರಂಜನೆಯನ್ನೇ ಹೆಚ್ಚು ಮಾಡಿ ಜನರನ್ನು ಒಂದು ರೀತಿ ಮಾನಸಿಕ ರೋಗಿಗಳನ್ನಾಗಿ ಮಾಡುತ್ತಿದೆ. ಈ ಬಗ್ಗೆ ಜಾಗೃತರಾಗಿ, ಎಚ್ಚರಗೊಳ್ಳಿ. ಇಲ್ಲದಿದ್ದರೆ ಈಗಾಗಲೇ ಕಾರ್ಪೊರೇಟ್ ಸಂಸ್ಕೃತಿ ನಮ್ಮನ್ನು ವಿನಾಶದೆಡೆಗೆ ಕೊಂಡೊಯ್ಯುತ್ತಿದೆ. ನಮ್ಮ ಆಂತರಿಕ ಮತ್ತು ಬಾಹ್ಯ ಶಕ್ತಿಯನ್ನೇ ಕುಗ್ಗಿಸುತ್ತಿದೆ.
ಈ ಬಗ್ಗೆ ಎಚ್ಚರಿಕೆಗೊಳ್ಳದಿದ್ದರೆ ಇಡೀ ಭಾರತೀಯತೆಯೇ ಕುಸಿಯುವ ದಿನಗಳು ದೂರವಿಲ್ಲ, ಎಚ್ಚರ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,  ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ ಅಗತ್ಯ.

ಮೊಬೈಲ್ ವ್ಯಸನ: ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...