HomeಮುಖಪುಟNCPಯ 54 ಮತ್ತು 11 ಸ್ವತಂತ್ರ ಶಾಸಕರ ಬೆಂಬಲವಿದೆ ಎಂದ ಬಿಜೆಪಿ

NCPಯ 54 ಮತ್ತು 11 ಸ್ವತಂತ್ರ ಶಾಸಕರ ಬೆಂಬಲವಿದೆ ಎಂದ ಬಿಜೆಪಿ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಸಿಎಂ ಹುದ್ದೆಗೇರಿರುವ ದೇವೇಂದ್ರ ಫಡ್ನವೀಸ್ ಅವರು ಸರ್ಕಾರ ರಚಿಸುತ್ತಾರೆ. ಎನ್ ಸಿಪಿಯ 54 ಮತ್ತು 11 ಸ್ವತಂತ್ರ ಶಾಸಕರು ಮತ್ತು ಬಿಜೆಪಿಯ 105 ಶಾಸಕರ ಬಲದೊಂದಿಗೆ ಬಿಜೆಪಿ ನೇತೃತ್ವದ ಸರ್ಕಾರ ರಚಿಸುವುದಾಗಿ ಬಿಜೆಪಿ ಹೇಳಿದೆ.

ನವೆಂಬರ್ 30ರವರೆಗೂ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಬಿಜೆಪಿಗೆ ಅವಕಾಶವಿದೆ. 288 ಬಲ ಹೊಂದಿರುವ ಮಹಾರಾಷ್ಟ್ರದಲ್ಲಿ ಬಹುಮತ ಸಾಬೀತಿಗೆ 145 ಸ್ಥಾನ ಬೇಕು. ಈಗಾಗಲೇ ಬಿಜೆಪಿ ತನ್ನ ಬಳಿ 170 ಸ್ಥಾನಗಳ ಬಲವಿದೆ ಎಂದು ಹೇಳಿದೆ.

ಇನ್ನು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಸೋದರಳಿಯ ಮತ್ತು ಹಿರಿಯ ನಾಯಕ ಅಜಿತ್ ಪವಾರ್ ಅವರು ಬಿಜೆಪಿ ಜತೆಗೆ ಮಾಡಿಕೊಂಡಿರುವ ಮೈತ್ರಿಗೆ ಪಕ್ಷದ ಬೆಂಬಲವಿಲ್ಲ ಎಂದು ಹೇಳಿದ್ದಾರೆ. ಅಕ್ಟೋಬರ್ 30 ರಂದು ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯಲ್ಲಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ತಮ್ಮ ಪಕ್ಷದ ಎಲ್ಲ ಶಾಸಕರ ಬೆಂಬಲ ಪತ್ರವನ್ನು ಅಜಿತ್ ಹೊಂದಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

ಇದನ್ನೂ ಓದಿ: ನಗರ ಭಾಗದಲ್ಲಿ ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ಪ್ರಮಾಣ ತುಸು ಇಳಿಕೆ…

ಬಿಜೆಪಿಯ ಹಿರಿಯ ಮುಖಂಡರೊಬ್ಬರು ಮಾತನಾಡಿ, ಪಕ್ಷದ 105 ಸದಸ್ಯರು ಹಾಗೂ ಎನ್ ಸಿಪಿಯ 54 ಮತ್ತು 11 ಸ್ವತಂತ್ರ ಶಾಸಕರಿರುವ ಬೆಂಬಲ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಒಂದು ವೇಳೆ ಎನ್ ಸಿಪಿ ವಿಭಜನೆಯಾದರೆ 30ಕ್ಕಿಂತ ಹೆಚ್ಚು ಶಾಸಕರು ನಮ್ಮನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ನಮಗಿದೆ. ಅಲ್ಲದೇ ಬದಲಾಗುತ್ತಿರುವ ಸನ್ನಿವೇಶದಲ್ಲಿ ಸ್ವತಂತ್ರ ಶಾಸಕರ ಬೆಂಬಲವನ್ನೇ ಹೆಚ್ಚೆಚ್ಚು ಪಡೆಯುತ್ತೇವೆ ಎಂದು ಹೇಳಿದರು. ಇನ್ನು ಅಗತ್ಯವಿರುವ ಶಾಸಕರ ಬೆಂಬಲ ಪಡೆಯಲು ಒಂದು ವಾರ ಸಾಕು ಎಂದು ಬಿಜೆಪಿ ತಿಳಿಸಿದೆ.

ಈ ಮಧ್ಯೆ ಎನ್ ಸಿಪಿಯ ಎಲ್ಲಾ ಶಾಸಕರನ್ನು ಶರದ್ ಪವಾರ್ ತಮ್ಮ ಸಿಲ್ವರ್ ಓಕ್ ನಿವಾಸಕ್ಕೆ ಬರುವಂತೆ ತಿಳಿಸಿದ್ದಾರೆ. ಮುಂಬೈನಲ್ಲಿ ಇಲ್ಲದ ಶಾಸಕರು ಸಂಜೆ 4:30ರೊಳಗೆ ಹಾಜರಿರಬೇಕು ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...

ಆಟೋ ಪರ್ಮಿಟ್‌ಗಳಿಗೆ ಮರಾಠಿ ಭಾಷೆ ಕಡ್ಡಾಯ ನಿಯಮ; ಆರ್‌ಟಿಒ ಅಧಿಕಾರಿಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಕಳವಳಕಾರಿ ಬೆಳವಣಿಗೆಯಲ್ಲಿ, ಆಟೋ-ರಿಕ್ಷಾ ಪರ್ಮಿಟ್ ಪರಿಶೀಲನೆಗೆ ಮರಾಠಿ ಜ್ಞಾನವನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಆದೇಶಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರಲ್ಲಿ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದೆ ಎಂದು ಆರೋಪಿಸಲಾಗಿದೆ. ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ) ಅಧಿಕಾರಿ...

‘ನಾನು ಪ್ರೀತಿಯಲ್ಲಿ ನಂಬಿಕೆ ಇಡುತ್ತೇನೆ, ಬುಲ್ಡೋಜರ್‌ ರಾಜಕೀಯದಲ್ಲಿ ಅಲ್ಲ’: ಯುಪಿ ಮಾದರಿ ವಿವಾದದ ನಡುವೆ ಯೋಗಿ ವಿರುದ್ಧ ಮಮತಾ ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ದಾಳಿ ನಡೆಸಿದ್ದಾರೆ. ಅವರು ಬುಲ್ಡೋಜರ್ ರಾಜಕೀಯದಲ್ಲಿ ನಂಬಿಕೆ ಇಡುವುದಿಲ್ಲ ಎಂದು ಹೇಳಿದ್ದಾರೆ ಮತ್ತು ಉತ್ತರ ಪ್ರದೇಶದಲ್ಲಿ...