Homeಕರ್ನಾಟಕಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಸಾಧ್ಯವಿಲ್ಲ: ಬೊಮ್ಮಾಯಿ

ಪಶ್ಚಿಮ ಘಟ್ಟವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸಲು ಸಾಧ್ಯವಿಲ್ಲ: ಬೊಮ್ಮಾಯಿ

- Advertisement -
- Advertisement -

ಪಶ್ಚಿಮ ಘಟ್ಟವನ್ನು ಸೂಕ್ಷ್ಮ ಪರಿಸರ ವಲಯ ಎಂದು ಘೋಷಿಸುವುದರಿಂದ ಈ ಭಾಗದಲ್ಲಿ ವಾಸಿಸುವ ಜನರ ಜೀವನೋಪಾಯಕ್ಕೆ ಧಕ್ಕೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿಗೆ ರಾಜ್ಯ ಸರ್ಕಾರ ಹಾಗೂ ಈ ಭಾಗದ ಜನತೆಯ ಒಕ್ಕೊರಲಿನ ವಿರೋಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಪಶ್ಚಿಮ ಘಟ್ಟದ ಸಂರಕ್ಷಣೆಗೆ ಸಂಬಂಧಿಸಿದ ಕಸ್ತೂರಿ ರಂಗನ್ ವರದಿ ಜಾರಿ ಕುರಿತಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಕಾರ್ಮಿಕ ಸಚಿವ ಭೂಪೇಂದರ್ ಯಾದವ್ ಅವರು ಶನಿವಾರ ನಡೆಸಿದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ರಾಜ್ಯ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಪಶ್ಚಿಮ ಘಟ್ಟ ಪ್ರದೇಶದ ನಿವಾಸಿಗಳು, ಅಧಿಕಾರಿಗಳು ಮತ್ತು ಸಂಬಂಧಪಟ್ಟ ಎಲ್ಲರೊಂದಿಗೆ ಕೂಲಂಕಷವಾಗಿ ಸಮಾಲೋಚನೆ ನಡೆಸಿ ಕಸ್ತೂರಿ ರಂಗನ್ ವರದಿ ಜಾರಿಯನ್ನು ವಿರೋಧಿಸಿ ರಾಜ್ಯ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಸಭೆಯ ಗಮನಕ್ಕೆ ತಂದಿದ್ದಾರೆ.

ಕರ್ನಾಟಕ ರಾಜ್ಯ ಅತಿ ಹೆಚ್ಚು ಅರಣ್ಯ ಪ್ರದೇಶಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದು ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ನಮ್ಮ ಸರ್ಕಾರ ಹಾಗೂ ಜನತೆ ಪಶ್ಚಿಮ ಘಟ್ಟದ ಜೀವ ವೈವಿಧ್ಯದ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ತೋರಿದ್ದೇವೆ. ಯಾವುದೇ ಕಾಯ್ದೆ ಕಾನೂನು ಜಾರಿಯಾಗುವ ಮುನ್ನವೂ ಈ ಭಾಗದ ಜನರು ಇಲ್ಲಿನ ಪ್ರಕೃತಿಗೆ ಸಹಜವಾದ ಕೃಷಿ, ತೋಟಗಾರಿಕೆ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದು, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಂಡಿದ್ದಾರೆ; ಪಶ್ಚಿಮ ಘಟ್ಟದ ಸಂರಕ್ಷಣೆಗೆ ಆದ್ಯತೆ ನೀಡುತ್ತಲೇ ಬಂದಿದ್ದಾರೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ಈಗಾಗಲೇ ಜೀವ ವೈವಿಧ್ಯ ಸಂರಕ್ಷಣೆ ಕಾಯ್ದೆ, ಅರಣ್ಯ ಸಂರಕ್ಷಣೆ ಕಾಯ್ದೆ ಮೊದಲಾದ ಹಲವಾರು ಕಾನೂನುಗಳಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಕಾನೂನು ಜಾರಿಗೆ ತರುವ ಮೂಲಕ ಈ ಭಾಗದ ಜನರ ಜೀವನೋಪಾಯಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಮುಖ್ಯಮಂತ್ರಿಯವರು ಅಭಿಪ್ರಾಯಪಟ್ಟಿದ್ದಾರೆ.

ಉಪಗ್ರಹ ಸಮೀಕ್ಷೆಯ ಆಧಾರದಲ್ಲಿ ಕಸ್ತೂರಿ ರಂಗನ್ ವರದಿ ರೂಪಿಸಲಾಗಿದೆ. ಆದರೆ ವಸ್ತುಸ್ಥಿತಿ ಇದಕ್ಕಿಂತ ಭಿನ್ನವಾಗಿದೆ. ಪ್ರತಿ ಎಕರೆಯನ್ನು ಪ್ರತ್ಯಕ್ಷವಾಗಿ ಸಮೀಕ್ಷೆ ನಡೆಸುವುದರಿಂದ ಜನರ ಪರಿಸರ ಸ್ನೇಹಿ ಜೀವನಶೈಲಿಯನ್ನು ಗಮನಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಪ್ರತಿಕ್ರಿಯಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವರಾದ ಅರಗ ಜ್ನಾನೇಂದ್ರ , ಆನಂದ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ ಸೇರಿದಂತೆ ಇತರರು ಸಭೆಯಲ್ಲಿ ಹಾಜರಿದ್ದರು.

ಕಸ್ತೂರಿ ರಂಗನ್‌ ವರದಿ ಹೇಳುವುದೇನು?

ಗುಜರಾತ್‌ನ ತಪತಿ ನದಿಯಿಂದ ಹಿಡಿದು, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡಿನ ಕನ್ಯಾಕುಮಾರಿವರೆಗೂ 1,64,280 ಚದರ ಕಿಲೋ ಮೀಟರ್ ಪ್ರದೇಶವನ್ನು ಪಶ್ಚಿಮ ಘಟ್ಟ ಎಂದು ಗುರ್ತಿಸಲಾಗಿದೆ. ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳ ಹಲವು ಭೂಭಾಗ ಪಶ್ಚಿಮ ಘಟ್ಟಕ್ಕೆ ಸೇರಿದೆ.

ಈ ಪ್ರದೇಶದಲ್ಲಿ ಗಣಿಗಾರಿಕೆ, ಕ್ವಾರಿ, ಮರಳು ಗಣಿಗಾರಿಕೆ, ಕೈಗಾರಿಕೆಗಳು, ಜಲ ವಿದ್ಯುತ್ ಯೋಜನೆ, ಪವನ ವಿದ್ಯುತ್ ಯೋಜನೆ ಸೇರಿದಂತೆ ಎಲ್ಲ ರೀತಿಯ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ಕಸ್ತೂರಿ ರಂಗನ್‌ ವರದಿ ಶಿಫಾರಸ್ಸು ಮಾಡಿದೆ. 20 ಸಾವಿರ ಚದರ ಮೀಟರ್‌ಗಿಂತಲೂ ದೊಡ್ಡ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಹೇಳಿದೆ. ಈ ಪ್ರದೇಶದಲ್ಲಿ ಸಿಮೆಂಟ್, ಕಲ್ಲು, ರಾಸಾಯನಿಕ ಬಳಕೆ ಹಾಗೂ ಜನವಸತಿ ಪ್ರದೇಶ ನಿರ್ಮಾಣಕ್ಕೂ ನಿಷೇಧ ವಿಧಿಸಬೇಕೆಂದು ಶಿಫಾರಸ್ಸು ಮಾಡಿದೆ. ಹಲವು ವರ್ಷಗಳಿಂದ ಕಸ್ತೂರಿ ರಂಗನ್ ವರದಿ ಹಾಗೂ ಇದಕ್ಕೆ ಮುಂಚೆ ಬಂದ ಮಾಧವ ಗಾಡ್ಗಿಲ್‌ ವರದಿ ಎರಡೂ ಕೂಡ ಸರ್ಕಾರಗಳಿಗೆ ಅಪಥ್ಯವಾಗಿವೆ. ಮಾಧವ್ ಗಾಡ್ಗಿಲ್ ವರದಿ ಜಾರಿ ಸಾಧ್ಯವಿಲ್ಲವೆಂದು ಕಸ್ತೂರಿ ರಂಗನ್ ಸಮಿತಿಯನ್ನು ರಚಿಸಲಾಗಿತ್ತು.

ಕಸ್ತೂರಿ ರಂಗನ್ ಅವರ ವರದಿ ಅನುಷ್ಠಾನವಾದರೆ ಪಶ್ಚಿಮ ಘಟ್ಟ ಹಾಗೂ ಮಲೆನಾಡು ಅತಿ ಸೂಕ್ಷ್ಮ ಪರಿಸರ ವಲಯವಾಗಿ ಘೋಷಣೆಯಾಗುತ್ತದೆ. ಇಲ್ಲಿ ಮಾನವ ಹಸ್ತಕ್ಷೇಪವನ್ನು ನಿಲ್ಲಿಸಬೇಕಾಗುತ್ತದೆ. ವಿದ್ಯುತ್, ನೀರಾವತಿ ಸೇರಿದಂತೆ ಯಾವುದೇ ಕೈಗಾರಿಕೆ ನಡೆಸಲು ಕಷ್ಟ ಸಾಧ್ಯವಾಗಲಿದೆ.


ಇದನ್ನೂ ಓದಿರಿ: ಪಶ್ಚಿಮಘಟ್ಟಗಳು: ಗಾಡ್ಗೀಳ್ ವರದಿ ಕಂಡಂತೆ


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...