Homeಅಂತರಾಷ್ಟ್ರೀಯಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

- Advertisement -
- Advertisement -

ಅಮೆರಿಕದ ಶ್ವೇತಭವನವು ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡಿದ ಸುಮಾರು ಮೂರು ವಾರಗಳ ನಂತರ ಶ್ವೇತಭವನದ ಅಧಿಕೃತ ಟ್ವಿಟರ್ ಹ್ಯಾಂಡಲ್ ಈಗ ಅವರೆಲ್ಲರನ್ನೂ ಅನ್‌ಫಾಲೋ ಮಾಡಿದೆ. ಶ್ವೇತಭವನವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರ ಅಧಿಕೃತ ನಿವಾಸವಾಗಿದೆ.

ಏಪ್ರಿಲ್ 10 ರ ಸುಮಾರಿಗೆ ಶ್ವೇತಭವನವು ಪಿಎಂ ಮೋದಿ, ಅವರ ಕಚೇರಿ (ಪಿಎಂಒ) ಮತ್ತು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ವೈಯಕ್ತಿಕ ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸಿತು. ಇದರೊಂದಿಗೆ, ಪಿಎಂ ಮೋದಿ ಮತ್ತು ಅಧ್ಯಕ್ಷ ಕೋವಿಂದ್ ಅವರು ಟ್ವಿಟ್ಟರ್‌ನಲ್ಲಿ ಶ್ವೇತಭವನವು ಅನುಸರಿಸಿದ ಏಕೈಕ ವಿಶ್ವ ನಾಯಕರಾಗಿದ್ದರು. ಶ್ವೇತಭವನವು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ನವದೆಹಲಿಯ ಯುಎಸ್ ರಾಯಭಾರ ಕಚೇರಿಯನ್ನು ಸಹ ಅನುಸರಿಸಿತ್ತು.

ಭಾರತದಲ್ಲಿ ಈ ಸುದ್ದಿ ಮಿಂಚಿನ ವೇಗದಲ್ಲಿ ಹರಡಿ ನರೇಂದ್ರ ಮೋದಿಯವರು ವಿಶ್ವನಾಯಕರು ಎಂದೆಲ್ಲಾ ಕೊಂಡಾಡಲಾಗಿತ್ತು.

ಇದರೊಂದಿಗೆ, ಶ್ವೇತಭವನವು 19 ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸುತ್ತಿತ್ತು ಮತ್ತು ಸುಮಾರು 21.5 ಮಿಲಿಯನ್ ಅನುಯಾಯಿಗಳನ್ನು ಹೊಂದಿತ್ತು. ಆದರೆ ಈಗ ಅದು ಕೇವಲ 13 ಖಾತೆಗಳನ್ನು ಅನುಸರಿಸುತ್ತಿದೆ ಭಾರತೀಯ ಮೂಲದ ಎಲ್ಲವನ್ನು ಅನ್‌ಫಾಲೋ ಮಾಡಿದೆ.

ಕೇವಲ ಮೂರು ವಾರಗಳ ಅವಧಿಯಲ್ಲಿ ಫಾಲೋ ಮತ್ತು ಅನ್‌ಫಾಲೋ ಮಾಡಲು ಕಾರಣವೇನೆಂದು ಸಮರ್ಪಕವಾಗಿ ತಿಳಿದುಬಂದಿಲ್ಲ. ಏಪ್ರಿಲ್‌ 7 ರಂದು ಅಮೆರಿಕಾದ ಅಧ್ಯಕ್ಷರಾದ ಡೊನಾಲ್ಡ್‌ ಟ್ರಂಪ್‌ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧಿಸುವ ಭಾರತದ ನಿರ್ಧಾರದ ಕುರಿತು ಪ್ರತಿಕಾರದ ಮಾತುಗಳನ್ನಾಡಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅಂದೇ ಭಾರತದ ಪ್ರಧಾನಿ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧವನ್ನು ಹಿಂತೆಗೆದುಕೊಂಡಿದ್ದರು. ಆಗ ಅಮೆರಿಕಾ ಭಾರತದೊಂದಿಗೆ ನಮಗೆ ಆತ್ಮೀಯ ಸಂಬಂಧವಿದೆ ಎಂದು ಕೊಂಡಾಡಿದ್ದರು.

“ಅಸಾಧಾರಣ ಸಮಯಗಳಲ್ಲಿ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರ ಬೇಕಾಗುತ್ತದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕುರಿತ ನಿರ್ಧಾರಕ್ಕೆ ಭಾರತ ಮತ್ತು ಭಾರತೀಯ ಜನರಿಗೆ ಧನ್ಯವಾದಗಳು. ಇದನ್ನು ಮರೆಯಲಾಗುವುದಿಲ್ಲ! ಈ ಹೋರಾಟದಲ್ಲಿ ಭಾರತಕ್ಕೆ ಮಾತ್ರವಲ್ಲ, ಮಾನವೀಯತೆಗೂ ಸಹಾಯ ಮಾಡುವಲ್ಲಿ ನಿಮ್ಮ ಪ್ರಬಲ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು!”ಎಂದು ಏಪ್ರಿಲ್ 8 ರಂದು ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಅಲ್ಲದೇ ಏಪ್ರಿಲ್‌ 10ರಂದು ವೈಟ್‌ ಹೌಸ್‌ ಟ್ವಿಟ್ಟರ್‌ ಖಾತೆಯಿಂದ ಭಾರತದ ಐದು ಟ್ವಿಟ್ಟರ್‌ ಅಕೌಂಟ್‌ಗಳನ್ನು ಫಾಲೋ ಮಾಡಲಾಗಿತ್ತು. ಈಗ ಹೈಡ್ರಾಕ್ಸಿಕ್ಲೋರೋಕ್ವಿನ್ ಪೂರೈಸಿದ ನಂತರ ಅನ್‌ಫಾಲೋ ಮಾಡಲಾಗಿದೆ. ಅಂದರೆ ಕೆಲಸ ಮಗಿದ ಮೇಲೆ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: 50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...