Homeಅಂತರಾಷ್ಟ್ರೀಯಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

- Advertisement -
- Advertisement -

ಅಮೆರಿಕದ ಶ್ವೇತಭವನವು ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡಿದ ಸುಮಾರು ಮೂರು ವಾರಗಳ ನಂತರ ಶ್ವೇತಭವನದ ಅಧಿಕೃತ ಟ್ವಿಟರ್ ಹ್ಯಾಂಡಲ್ ಈಗ ಅವರೆಲ್ಲರನ್ನೂ ಅನ್‌ಫಾಲೋ ಮಾಡಿದೆ. ಶ್ವೇತಭವನವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರ ಅಧಿಕೃತ ನಿವಾಸವಾಗಿದೆ.

ಏಪ್ರಿಲ್ 10 ರ ಸುಮಾರಿಗೆ ಶ್ವೇತಭವನವು ಪಿಎಂ ಮೋದಿ, ಅವರ ಕಚೇರಿ (ಪಿಎಂಒ) ಮತ್ತು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ವೈಯಕ್ತಿಕ ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸಿತು. ಇದರೊಂದಿಗೆ, ಪಿಎಂ ಮೋದಿ ಮತ್ತು ಅಧ್ಯಕ್ಷ ಕೋವಿಂದ್ ಅವರು ಟ್ವಿಟ್ಟರ್‌ನಲ್ಲಿ ಶ್ವೇತಭವನವು ಅನುಸರಿಸಿದ ಏಕೈಕ ವಿಶ್ವ ನಾಯಕರಾಗಿದ್ದರು. ಶ್ವೇತಭವನವು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ನವದೆಹಲಿಯ ಯುಎಸ್ ರಾಯಭಾರ ಕಚೇರಿಯನ್ನು ಸಹ ಅನುಸರಿಸಿತ್ತು.

ಭಾರತದಲ್ಲಿ ಈ ಸುದ್ದಿ ಮಿಂಚಿನ ವೇಗದಲ್ಲಿ ಹರಡಿ ನರೇಂದ್ರ ಮೋದಿಯವರು ವಿಶ್ವನಾಯಕರು ಎಂದೆಲ್ಲಾ ಕೊಂಡಾಡಲಾಗಿತ್ತು.

ಇದರೊಂದಿಗೆ, ಶ್ವೇತಭವನವು 19 ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸುತ್ತಿತ್ತು ಮತ್ತು ಸುಮಾರು 21.5 ಮಿಲಿಯನ್ ಅನುಯಾಯಿಗಳನ್ನು ಹೊಂದಿತ್ತು. ಆದರೆ ಈಗ ಅದು ಕೇವಲ 13 ಖಾತೆಗಳನ್ನು ಅನುಸರಿಸುತ್ತಿದೆ ಭಾರತೀಯ ಮೂಲದ ಎಲ್ಲವನ್ನು ಅನ್‌ಫಾಲೋ ಮಾಡಿದೆ.

ಕೇವಲ ಮೂರು ವಾರಗಳ ಅವಧಿಯಲ್ಲಿ ಫಾಲೋ ಮತ್ತು ಅನ್‌ಫಾಲೋ ಮಾಡಲು ಕಾರಣವೇನೆಂದು ಸಮರ್ಪಕವಾಗಿ ತಿಳಿದುಬಂದಿಲ್ಲ. ಏಪ್ರಿಲ್‌ 7 ರಂದು ಅಮೆರಿಕಾದ ಅಧ್ಯಕ್ಷರಾದ ಡೊನಾಲ್ಡ್‌ ಟ್ರಂಪ್‌ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧಿಸುವ ಭಾರತದ ನಿರ್ಧಾರದ ಕುರಿತು ಪ್ರತಿಕಾರದ ಮಾತುಗಳನ್ನಾಡಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅಂದೇ ಭಾರತದ ಪ್ರಧಾನಿ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧವನ್ನು ಹಿಂತೆಗೆದುಕೊಂಡಿದ್ದರು. ಆಗ ಅಮೆರಿಕಾ ಭಾರತದೊಂದಿಗೆ ನಮಗೆ ಆತ್ಮೀಯ ಸಂಬಂಧವಿದೆ ಎಂದು ಕೊಂಡಾಡಿದ್ದರು.

“ಅಸಾಧಾರಣ ಸಮಯಗಳಲ್ಲಿ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರ ಬೇಕಾಗುತ್ತದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕುರಿತ ನಿರ್ಧಾರಕ್ಕೆ ಭಾರತ ಮತ್ತು ಭಾರತೀಯ ಜನರಿಗೆ ಧನ್ಯವಾದಗಳು. ಇದನ್ನು ಮರೆಯಲಾಗುವುದಿಲ್ಲ! ಈ ಹೋರಾಟದಲ್ಲಿ ಭಾರತಕ್ಕೆ ಮಾತ್ರವಲ್ಲ, ಮಾನವೀಯತೆಗೂ ಸಹಾಯ ಮಾಡುವಲ್ಲಿ ನಿಮ್ಮ ಪ್ರಬಲ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು!”ಎಂದು ಏಪ್ರಿಲ್ 8 ರಂದು ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಅಲ್ಲದೇ ಏಪ್ರಿಲ್‌ 10ರಂದು ವೈಟ್‌ ಹೌಸ್‌ ಟ್ವಿಟ್ಟರ್‌ ಖಾತೆಯಿಂದ ಭಾರತದ ಐದು ಟ್ವಿಟ್ಟರ್‌ ಅಕೌಂಟ್‌ಗಳನ್ನು ಫಾಲೋ ಮಾಡಲಾಗಿತ್ತು. ಈಗ ಹೈಡ್ರಾಕ್ಸಿಕ್ಲೋರೋಕ್ವಿನ್ ಪೂರೈಸಿದ ನಂತರ ಅನ್‌ಫಾಲೋ ಮಾಡಲಾಗಿದೆ. ಅಂದರೆ ಕೆಲಸ ಮಗಿದ ಮೇಲೆ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: 50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...