Homeಅಂತರಾಷ್ಟ್ರೀಯಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

ಮೂರೇ ವಾರಗಳಲ್ಲಿ ಟ್ವಿಟ್ಟರ್‌ನಲ್ಲಿ ಮೋದಿಯನ್ನು ಅನ್‌ಫಾಲೋ ಮಾಡಿದ ವೈಟ್‌ಹೌಸ್‌!

- Advertisement -
- Advertisement -

ಅಮೆರಿಕದ ಶ್ವೇತಭವನವು ಪ್ರಧಾನಿ ನರೇಂದ್ರ ಮೋದಿ, ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಮತ್ತು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಅನ್ನು ಟ್ವಿಟ್ಟರ್‌ನಲ್ಲಿ ಫಾಲೋ ಮಾಡಿದ ಸುಮಾರು ಮೂರು ವಾರಗಳ ನಂತರ ಶ್ವೇತಭವನದ ಅಧಿಕೃತ ಟ್ವಿಟರ್ ಹ್ಯಾಂಡಲ್ ಈಗ ಅವರೆಲ್ಲರನ್ನೂ ಅನ್‌ಫಾಲೋ ಮಾಡಿದೆ. ಶ್ವೇತಭವನವು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ ಅಧ್ಯಕ್ಷರ ಅಧಿಕೃತ ನಿವಾಸವಾಗಿದೆ.

ಏಪ್ರಿಲ್ 10 ರ ಸುಮಾರಿಗೆ ಶ್ವೇತಭವನವು ಪಿಎಂ ಮೋದಿ, ಅವರ ಕಚೇರಿ (ಪಿಎಂಒ) ಮತ್ತು ಅಧ್ಯಕ್ಷ ರಾಮ್ ನಾಥ್ ಕೋವಿಂದ್ ಅವರನ್ನು ವೈಯಕ್ತಿಕ ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸಿತು. ಇದರೊಂದಿಗೆ, ಪಿಎಂ ಮೋದಿ ಮತ್ತು ಅಧ್ಯಕ್ಷ ಕೋವಿಂದ್ ಅವರು ಟ್ವಿಟ್ಟರ್‌ನಲ್ಲಿ ಶ್ವೇತಭವನವು ಅನುಸರಿಸಿದ ಏಕೈಕ ವಿಶ್ವ ನಾಯಕರಾಗಿದ್ದರು. ಶ್ವೇತಭವನವು ವಾಷಿಂಗ್ಟನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ನವದೆಹಲಿಯ ಯುಎಸ್ ರಾಯಭಾರ ಕಚೇರಿಯನ್ನು ಸಹ ಅನುಸರಿಸಿತ್ತು.

ಭಾರತದಲ್ಲಿ ಈ ಸುದ್ದಿ ಮಿಂಚಿನ ವೇಗದಲ್ಲಿ ಹರಡಿ ನರೇಂದ್ರ ಮೋದಿಯವರು ವಿಶ್ವನಾಯಕರು ಎಂದೆಲ್ಲಾ ಕೊಂಡಾಡಲಾಗಿತ್ತು.

ಇದರೊಂದಿಗೆ, ಶ್ವೇತಭವನವು 19 ಟ್ವಿಟ್ಟರ್ ಹ್ಯಾಂಡಲ್‌ಗಳನ್ನು ಅನುಸರಿಸುತ್ತಿತ್ತು ಮತ್ತು ಸುಮಾರು 21.5 ಮಿಲಿಯನ್ ಅನುಯಾಯಿಗಳನ್ನು ಹೊಂದಿತ್ತು. ಆದರೆ ಈಗ ಅದು ಕೇವಲ 13 ಖಾತೆಗಳನ್ನು ಅನುಸರಿಸುತ್ತಿದೆ ಭಾರತೀಯ ಮೂಲದ ಎಲ್ಲವನ್ನು ಅನ್‌ಫಾಲೋ ಮಾಡಿದೆ.

ಕೇವಲ ಮೂರು ವಾರಗಳ ಅವಧಿಯಲ್ಲಿ ಫಾಲೋ ಮತ್ತು ಅನ್‌ಫಾಲೋ ಮಾಡಲು ಕಾರಣವೇನೆಂದು ಸಮರ್ಪಕವಾಗಿ ತಿಳಿದುಬಂದಿಲ್ಲ. ಏಪ್ರಿಲ್‌ 7 ರಂದು ಅಮೆರಿಕಾದ ಅಧ್ಯಕ್ಷರಾದ ಡೊನಾಲ್ಡ್‌ ಟ್ರಂಪ್‌ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧಿಸುವ ಭಾರತದ ನಿರ್ಧಾರದ ಕುರಿತು ಪ್ರತಿಕಾರದ ಮಾತುಗಳನ್ನಾಡಿ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಅಂದೇ ಭಾರತದ ಪ್ರಧಾನಿ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತು ನಿಷೇಧವನ್ನು ಹಿಂತೆಗೆದುಕೊಂಡಿದ್ದರು. ಆಗ ಅಮೆರಿಕಾ ಭಾರತದೊಂದಿಗೆ ನಮಗೆ ಆತ್ಮೀಯ ಸಂಬಂಧವಿದೆ ಎಂದು ಕೊಂಡಾಡಿದ್ದರು.

“ಅಸಾಧಾರಣ ಸಮಯಗಳಲ್ಲಿ ಸ್ನೇಹಿತರ ನಡುವೆ ಇನ್ನೂ ಹೆಚ್ಚಿನ ಸಹಕಾರ ಬೇಕಾಗುತ್ತದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಕುರಿತ ನಿರ್ಧಾರಕ್ಕೆ ಭಾರತ ಮತ್ತು ಭಾರತೀಯ ಜನರಿಗೆ ಧನ್ಯವಾದಗಳು. ಇದನ್ನು ಮರೆಯಲಾಗುವುದಿಲ್ಲ! ಈ ಹೋರಾಟದಲ್ಲಿ ಭಾರತಕ್ಕೆ ಮಾತ್ರವಲ್ಲ, ಮಾನವೀಯತೆಗೂ ಸಹಾಯ ಮಾಡುವಲ್ಲಿ ನಿಮ್ಮ ಪ್ರಬಲ ನಾಯಕತ್ವಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು!”ಎಂದು ಏಪ್ರಿಲ್ 8 ರಂದು ಟ್ರಂಪ್‌ ಟ್ವೀಟ್‌ ಮಾಡಿದ್ದರು.

ಅಲ್ಲದೇ ಏಪ್ರಿಲ್‌ 10ರಂದು ವೈಟ್‌ ಹೌಸ್‌ ಟ್ವಿಟ್ಟರ್‌ ಖಾತೆಯಿಂದ ಭಾರತದ ಐದು ಟ್ವಿಟ್ಟರ್‌ ಅಕೌಂಟ್‌ಗಳನ್ನು ಫಾಲೋ ಮಾಡಲಾಗಿತ್ತು. ಈಗ ಹೈಡ್ರಾಕ್ಸಿಕ್ಲೋರೋಕ್ವಿನ್ ಪೂರೈಸಿದ ನಂತರ ಅನ್‌ಫಾಲೋ ಮಾಡಲಾಗಿದೆ. ಅಂದರೆ ಕೆಲಸ ಮಗಿದ ಮೇಲೆ ನಿರ್ಲಕ್ಷ್ಯ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.


ಇದನ್ನೂ ಓದಿ: 50 ಬಂಡವಾಳಿಗರ ಸಾಲ Write Off: ರಾಹುಲ್‌ ದಾಳಿಗೆ ಉತ್ತರವಾಗಿ ನಿರ್ಮಲ ಸೀತಾರಾಮನ್‌ರವರ 13 ಟ್ವೀಟ್‌ಗಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...