Homeಮುಖಪುಟಕೇಂದ್ರದಿಂದ ನಿರ್ಬಂಧ ಆರೋಪ: 'ದಿ ವೈರ್' ಸಂಪಾದಕರು ಹೇಳಿದ್ದೇನು?

ಕೇಂದ್ರದಿಂದ ನಿರ್ಬಂಧ ಆರೋಪ: ‘ದಿ ವೈರ್’ ಸಂಪಾದಕರು ಹೇಳಿದ್ದೇನು?

- Advertisement -
- Advertisement -

‘ರಫೇಲ್ ಜೆಟ್’ ಕುರಿತ ವರದಿಯ ಬಗ್ಗೆ ದೂರು ಬಂದ ಹಿನ್ನೆಲೆ, ತಾಂತ್ರಿಕ ಮಿತಿಯ ಕಾರಣ ಭಾರತದಲ್ಲಿ ನಮ್ಮ ವೆಬ್‌ಸೈಟ್ ನಿರ್ಬಂಧಿಸಲಾಗಿತ್ತು ಎಂಬುವುದಾಗಿ ಕೇಂದ್ರ ಸರ್ಕಾರ ಮೇ 9, ಶುಕ್ರವಾರ ಹೇಳಿದೆ ಎಂದು ಸ್ವತಂತ್ರ ಸುದ್ದಿ ಸಂಸ್ಥೆ ‘ದಿ ವೈರ್’ನ ಸಂಪಾದಕರು ತಿಳಿಸಿದ್ದಾರೆ.

ವೆಬ್‌ಸೈಟ್‌ ನಿರ್ಬಂಧಕ್ಕೆ ಕಾರಣವಾದ ವರದಿಯನ್ನು ಪ್ರಸ್ತುತ ತೆಗೆದು ಹಾಕಿದ್ದೇವೆ. ಆದರೂ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಈ ಅಸಂವಿಧಾನಿಕ ದಾಳಿಗೆ ಪರಿಹಾರಗಳನ್ನು ಹುಡುಕುತ್ತೇವೆ ಎಂದು ದಿ ವೈರ್‌ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಮೇ 9, ಶುಕ್ರವಾರದಂದು ಭಾರತದಲ್ಲಿ ದಿ ವೈರ್ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿದ್ಧಾರ್ಥ್ ವರದರಾಜನ್ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (ಎಂಇಐಟಿವೈ) ಪತ್ರ ಬರೆದು ವೆಬ್‌ಸೈಟ್ ಅನ್ನು ಏಕೆ ನಿರ್ಬಂಧಿಸಲಾಗಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದರು.

ಅದಕ್ಕೆ ಉತ್ತರಿಸಿದ್ದ ಎಂಐಬಿ, ತಾಂತ್ರಿಕ ಮಿತಿಗಳಿಂದಾಗಿ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿದೆ. http ವೆಬ್‌ಸೈಟ್‌ಗಳಲ್ಲಿ ನಿರ್ದಿಷ್ಟ ಉಪ-ಪುಟಗಳನ್ನು ಅಲ್ಲ, ಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು. ನಿರ್ಬಂಧಕ್ಕೆ ಕಾರಣವಾದ ಕಂಟೆಂಟ್ ಬಗ್ಗೆ ಕೈಗೊಂಡ ಕ್ರಮಗಳನ್ನು ತಿಳಿಸಿ, ಅದು ನಮಗೆ ನಿರ್ಬಂಧ ತೆಗೆದು ಹಾಕಲು ಸಹಕಾರಿಯಾಗುತ್ತದೆ ಎಂಬುವುದಾಗಿ ಹೇಳಿದೆ ಎಂದು ಸಿದ್ದಾರ್ಥ್ ತಿಳಿಸಿದ್ದಾರೆ.

ವೆಬ್‌ಸೈಟ್‌ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವುದು ನಮ್ಮ ಆದ್ಯತೆಯಾಗಿತ್ತು. ಹಾಗಾಗಿ, ಸರ್ಕಾರದ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಹಾಗಾಗಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗೆ ಭಾರತದ ಸಂವಿಧಾನದ ಅಡಿಯಲ್ಲಿ ಪರಿಹಾರ ಕಂಡುಕೊಳ್ಳುವ ಹಕ್ಕನ್ನು ನಮ್ಮಲ್ಲೇ ಉಳಿಸಿಕೊಂಡು, ಮೇ 9, ಶುಕ್ರವಾರ ರಾತ್ರಿ 10.40ಕ್ಕೆ ನಮ್ಮ ವರದಿಯನ್ನು ಸಾರ್ವಜನಿಕರಿಗೆ ಕಾಣದಂತೆ ತೆಗೆದು ಹಾಕಿರುವುದಾಗಿ ಸರ್ಕಾರಕ್ಕೆ ತಿಳಿಸಿದೆವು ಎಂದಿದ್ದಾರೆ.

ಕೇಂದ್ರ ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನಾವು ಎಂಐಬಿಗೆ ತಿಳಿಸಿದ್ದೇವೆ. ಏಕೆಂದರೆ ಎಂಐಬಿ ಮೊದಲು ನಮಗೆ ನೋಟಿಸ್ ನೀಡಿ, ನಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಬೇಕಾಗಿತ್ತು. ವರದಿಯನ್ನು ತೆಗೆದು ಹಾಕುವಂತೆ ಸರ್ಕಾರದ ನೀಡಿದ್ದ ಸೂಚನೆಯನ್ನು ಪಾಲಿಸಲು ನಾವು ನಿರಾಕರಿಸಿದ್ದರೆ ಮಾತ್ರ ನಮ್ಮ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಬಹುದಿತ್ತು ಎಂದು ಸಿದ್ದಾರ್ಥ್‌ ಹೇಳಿದ್ದಾರೆ.

ಮೇ 8ರಂದು ನಾವು ರಫೆಲ್ ಕುರಿತ ವರದಿ ಪ್ರಕಟಿಸಿದ್ದೆವು. ಅದಕ್ಕೂ ಕನಿಷ್ಠ 12 ಗಂಟೆಗಳ ಮೊದಲು ಸಿಎನ್‌ಎನ್‌ ಈ ಬಗ್ಗೆ ವರದಿ ಮಾಡಿತ್ತು. ಅದು ಈಗಲೂ ಇದೆ. ಭಾರತದಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಮ್ಮ ಸುದ್ದಿಯನ್ನು ಮಾತ್ರ ಅಳಿಸಿಹಾಕಲು ಮತ್ತು ಪ್ರಕಟಗೊಂಡ 24 ಗಂಟೆಗಳ ನಂತರವೂ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಸರ್ಕಾರ ಏಕೆ ಬಯಸಿತ್ತು ಎಂಬುವುದು ನನಗೆ ಅರ್ಥವಾಗುತ್ತಿಲ್ಲ. ನಿರ್ಬಂಧ ವಿಧಿಸುವ ಮುನ್ನ ನಮಗೆ ಯಾವುದೇ ಸೂಚನೆ ನೀಡಿರಲಿಲ್ಲ. ಅಲ್ಲದೆ, ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿತ್ತು ಎಂದು ಸಿದ್ದಾರ್ಥ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲೂ ಕೂಡ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿತ್ತು. ತುರ್ತು ಅಧಿಕಾರಗಳನ್ನು ಚಲಾಯಿಸುವಾಗಲೂ ಕೂಡ ಮೊದಲ ಹೆಜ್ಜೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಸಂಬಂಧಪಟ್ಟ ಪಕ್ಷಕ್ಕೆ ನಿರ್ದೇಶನ ನೀಡುವುದಾಗಿದೆ. ನಾವು ಪತ್ರ ಬರೆದ ನಂತರವೂ ಏಳು ಗಂಟೆಗಳ ಕಾಲ ಎಂಐಬಿಉತ್ತರಿಸಿರಲಿಲ್ಲ ಎಂದು ಸಿದ್ದಾರ್ಥ್ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021ರ ಅಡಿಯಲ್ಲಿ ರಚಿಸಲಾದ ಅಂತರ-ಇಲಾಖೆಯ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮತ್ತು ಸ್ಪಷ್ಟೀಕರಣಗಳನ್ನು ನೀಡಲು ದಿ ವೈರ್‌ಗೆ ಅವಕಾಶ ನೀಡಲಾಗುವುದು ಎಂದು ಎಂಐಬಿ ಪತ್ರದಲ್ಲಿ ತಿಳಿಸಿದೆ ಎಂದು ಸಿದ್ದಾರ್ಥ್ ಮಾಹಿತಿ ನೀಡಿದ್ದಾರೆ.

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...