Homeಮುಖಪುಟಕೇಂದ್ರದಿಂದ ನಿರ್ಬಂಧ ಆರೋಪ: 'ದಿ ವೈರ್' ಸಂಪಾದಕರು ಹೇಳಿದ್ದೇನು?

ಕೇಂದ್ರದಿಂದ ನಿರ್ಬಂಧ ಆರೋಪ: ‘ದಿ ವೈರ್’ ಸಂಪಾದಕರು ಹೇಳಿದ್ದೇನು?

- Advertisement -
- Advertisement -

‘ರಫೇಲ್ ಜೆಟ್’ ಕುರಿತ ವರದಿಯ ಬಗ್ಗೆ ದೂರು ಬಂದ ಹಿನ್ನೆಲೆ, ತಾಂತ್ರಿಕ ಮಿತಿಯ ಕಾರಣ ಭಾರತದಲ್ಲಿ ನಮ್ಮ ವೆಬ್‌ಸೈಟ್ ನಿರ್ಬಂಧಿಸಲಾಗಿತ್ತು ಎಂಬುವುದಾಗಿ ಕೇಂದ್ರ ಸರ್ಕಾರ ಮೇ 9, ಶುಕ್ರವಾರ ಹೇಳಿದೆ ಎಂದು ಸ್ವತಂತ್ರ ಸುದ್ದಿ ಸಂಸ್ಥೆ ‘ದಿ ವೈರ್’ನ ಸಂಪಾದಕರು ತಿಳಿಸಿದ್ದಾರೆ.

ವೆಬ್‌ಸೈಟ್‌ ನಿರ್ಬಂಧಕ್ಕೆ ಕಾರಣವಾದ ವರದಿಯನ್ನು ಪ್ರಸ್ತುತ ತೆಗೆದು ಹಾಕಿದ್ದೇವೆ. ಆದರೂ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಈ ಅಸಂವಿಧಾನಿಕ ದಾಳಿಗೆ ಪರಿಹಾರಗಳನ್ನು ಹುಡುಕುತ್ತೇವೆ ಎಂದು ದಿ ವೈರ್‌ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಮೇ 9, ಶುಕ್ರವಾರದಂದು ಭಾರತದಲ್ಲಿ ದಿ ವೈರ್ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿದ್ಧಾರ್ಥ್ ವರದರಾಜನ್ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (ಎಂಇಐಟಿವೈ) ಪತ್ರ ಬರೆದು ವೆಬ್‌ಸೈಟ್ ಅನ್ನು ಏಕೆ ನಿರ್ಬಂಧಿಸಲಾಗಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದರು.

ಅದಕ್ಕೆ ಉತ್ತರಿಸಿದ್ದ ಎಂಐಬಿ, ತಾಂತ್ರಿಕ ಮಿತಿಗಳಿಂದಾಗಿ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿದೆ. http ವೆಬ್‌ಸೈಟ್‌ಗಳಲ್ಲಿ ನಿರ್ದಿಷ್ಟ ಉಪ-ಪುಟಗಳನ್ನು ಅಲ್ಲ, ಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು. ನಿರ್ಬಂಧಕ್ಕೆ ಕಾರಣವಾದ ಕಂಟೆಂಟ್ ಬಗ್ಗೆ ಕೈಗೊಂಡ ಕ್ರಮಗಳನ್ನು ತಿಳಿಸಿ, ಅದು ನಮಗೆ ನಿರ್ಬಂಧ ತೆಗೆದು ಹಾಕಲು ಸಹಕಾರಿಯಾಗುತ್ತದೆ ಎಂಬುವುದಾಗಿ ಹೇಳಿದೆ ಎಂದು ಸಿದ್ದಾರ್ಥ್ ತಿಳಿಸಿದ್ದಾರೆ.

ವೆಬ್‌ಸೈಟ್‌ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವುದು ನಮ್ಮ ಆದ್ಯತೆಯಾಗಿತ್ತು. ಹಾಗಾಗಿ, ಸರ್ಕಾರದ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಹಾಗಾಗಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗೆ ಭಾರತದ ಸಂವಿಧಾನದ ಅಡಿಯಲ್ಲಿ ಪರಿಹಾರ ಕಂಡುಕೊಳ್ಳುವ ಹಕ್ಕನ್ನು ನಮ್ಮಲ್ಲೇ ಉಳಿಸಿಕೊಂಡು, ಮೇ 9, ಶುಕ್ರವಾರ ರಾತ್ರಿ 10.40ಕ್ಕೆ ನಮ್ಮ ವರದಿಯನ್ನು ಸಾರ್ವಜನಿಕರಿಗೆ ಕಾಣದಂತೆ ತೆಗೆದು ಹಾಕಿರುವುದಾಗಿ ಸರ್ಕಾರಕ್ಕೆ ತಿಳಿಸಿದೆವು ಎಂದಿದ್ದಾರೆ.

ಕೇಂದ್ರ ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನಾವು ಎಂಐಬಿಗೆ ತಿಳಿಸಿದ್ದೇವೆ. ಏಕೆಂದರೆ ಎಂಐಬಿ ಮೊದಲು ನಮಗೆ ನೋಟಿಸ್ ನೀಡಿ, ನಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಬೇಕಾಗಿತ್ತು. ವರದಿಯನ್ನು ತೆಗೆದು ಹಾಕುವಂತೆ ಸರ್ಕಾರದ ನೀಡಿದ್ದ ಸೂಚನೆಯನ್ನು ಪಾಲಿಸಲು ನಾವು ನಿರಾಕರಿಸಿದ್ದರೆ ಮಾತ್ರ ನಮ್ಮ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಬಹುದಿತ್ತು ಎಂದು ಸಿದ್ದಾರ್ಥ್‌ ಹೇಳಿದ್ದಾರೆ.

ಮೇ 8ರಂದು ನಾವು ರಫೆಲ್ ಕುರಿತ ವರದಿ ಪ್ರಕಟಿಸಿದ್ದೆವು. ಅದಕ್ಕೂ ಕನಿಷ್ಠ 12 ಗಂಟೆಗಳ ಮೊದಲು ಸಿಎನ್‌ಎನ್‌ ಈ ಬಗ್ಗೆ ವರದಿ ಮಾಡಿತ್ತು. ಅದು ಈಗಲೂ ಇದೆ. ಭಾರತದಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಮ್ಮ ಸುದ್ದಿಯನ್ನು ಮಾತ್ರ ಅಳಿಸಿಹಾಕಲು ಮತ್ತು ಪ್ರಕಟಗೊಂಡ 24 ಗಂಟೆಗಳ ನಂತರವೂ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಸರ್ಕಾರ ಏಕೆ ಬಯಸಿತ್ತು ಎಂಬುವುದು ನನಗೆ ಅರ್ಥವಾಗುತ್ತಿಲ್ಲ. ನಿರ್ಬಂಧ ವಿಧಿಸುವ ಮುನ್ನ ನಮಗೆ ಯಾವುದೇ ಸೂಚನೆ ನೀಡಿರಲಿಲ್ಲ. ಅಲ್ಲದೆ, ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿತ್ತು ಎಂದು ಸಿದ್ದಾರ್ಥ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲೂ ಕೂಡ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿತ್ತು. ತುರ್ತು ಅಧಿಕಾರಗಳನ್ನು ಚಲಾಯಿಸುವಾಗಲೂ ಕೂಡ ಮೊದಲ ಹೆಜ್ಜೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಸಂಬಂಧಪಟ್ಟ ಪಕ್ಷಕ್ಕೆ ನಿರ್ದೇಶನ ನೀಡುವುದಾಗಿದೆ. ನಾವು ಪತ್ರ ಬರೆದ ನಂತರವೂ ಏಳು ಗಂಟೆಗಳ ಕಾಲ ಎಂಐಬಿಉತ್ತರಿಸಿರಲಿಲ್ಲ ಎಂದು ಸಿದ್ದಾರ್ಥ್ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021ರ ಅಡಿಯಲ್ಲಿ ರಚಿಸಲಾದ ಅಂತರ-ಇಲಾಖೆಯ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮತ್ತು ಸ್ಪಷ್ಟೀಕರಣಗಳನ್ನು ನೀಡಲು ದಿ ವೈರ್‌ಗೆ ಅವಕಾಶ ನೀಡಲಾಗುವುದು ಎಂದು ಎಂಐಬಿ ಪತ್ರದಲ್ಲಿ ತಿಳಿಸಿದೆ ಎಂದು ಸಿದ್ದಾರ್ಥ್ ಮಾಹಿತಿ ನೀಡಿದ್ದಾರೆ.

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...