Homeಮುಖಪುಟಕೇಂದ್ರದಿಂದ ನಿರ್ಬಂಧ ಆರೋಪ: 'ದಿ ವೈರ್' ಸಂಪಾದಕರು ಹೇಳಿದ್ದೇನು?

ಕೇಂದ್ರದಿಂದ ನಿರ್ಬಂಧ ಆರೋಪ: ‘ದಿ ವೈರ್’ ಸಂಪಾದಕರು ಹೇಳಿದ್ದೇನು?

- Advertisement -
- Advertisement -

‘ರಫೇಲ್ ಜೆಟ್’ ಕುರಿತ ವರದಿಯ ಬಗ್ಗೆ ದೂರು ಬಂದ ಹಿನ್ನೆಲೆ, ತಾಂತ್ರಿಕ ಮಿತಿಯ ಕಾರಣ ಭಾರತದಲ್ಲಿ ನಮ್ಮ ವೆಬ್‌ಸೈಟ್ ನಿರ್ಬಂಧಿಸಲಾಗಿತ್ತು ಎಂಬುವುದಾಗಿ ಕೇಂದ್ರ ಸರ್ಕಾರ ಮೇ 9, ಶುಕ್ರವಾರ ಹೇಳಿದೆ ಎಂದು ಸ್ವತಂತ್ರ ಸುದ್ದಿ ಸಂಸ್ಥೆ ‘ದಿ ವೈರ್’ನ ಸಂಪಾದಕರು ತಿಳಿಸಿದ್ದಾರೆ.

ವೆಬ್‌ಸೈಟ್‌ ನಿರ್ಬಂಧಕ್ಕೆ ಕಾರಣವಾದ ವರದಿಯನ್ನು ಪ್ರಸ್ತುತ ತೆಗೆದು ಹಾಕಿದ್ದೇವೆ. ಆದರೂ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಈ ಅಸಂವಿಧಾನಿಕ ದಾಳಿಗೆ ಪರಿಹಾರಗಳನ್ನು ಹುಡುಕುತ್ತೇವೆ ಎಂದು ದಿ ವೈರ್‌ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಮೇ 9, ಶುಕ್ರವಾರದಂದು ಭಾರತದಲ್ಲಿ ದಿ ವೈರ್ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿದ್ಧಾರ್ಥ್ ವರದರಾಜನ್ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (ಎಂಇಐಟಿವೈ) ಪತ್ರ ಬರೆದು ವೆಬ್‌ಸೈಟ್ ಅನ್ನು ಏಕೆ ನಿರ್ಬಂಧಿಸಲಾಗಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದರು.

ಅದಕ್ಕೆ ಉತ್ತರಿಸಿದ್ದ ಎಂಐಬಿ, ತಾಂತ್ರಿಕ ಮಿತಿಗಳಿಂದಾಗಿ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿದೆ. http ವೆಬ್‌ಸೈಟ್‌ಗಳಲ್ಲಿ ನಿರ್ದಿಷ್ಟ ಉಪ-ಪುಟಗಳನ್ನು ಅಲ್ಲ, ಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು. ನಿರ್ಬಂಧಕ್ಕೆ ಕಾರಣವಾದ ಕಂಟೆಂಟ್ ಬಗ್ಗೆ ಕೈಗೊಂಡ ಕ್ರಮಗಳನ್ನು ತಿಳಿಸಿ, ಅದು ನಮಗೆ ನಿರ್ಬಂಧ ತೆಗೆದು ಹಾಕಲು ಸಹಕಾರಿಯಾಗುತ್ತದೆ ಎಂಬುವುದಾಗಿ ಹೇಳಿದೆ ಎಂದು ಸಿದ್ದಾರ್ಥ್ ತಿಳಿಸಿದ್ದಾರೆ.

ವೆಬ್‌ಸೈಟ್‌ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವುದು ನಮ್ಮ ಆದ್ಯತೆಯಾಗಿತ್ತು. ಹಾಗಾಗಿ, ಸರ್ಕಾರದ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಹಾಗಾಗಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗೆ ಭಾರತದ ಸಂವಿಧಾನದ ಅಡಿಯಲ್ಲಿ ಪರಿಹಾರ ಕಂಡುಕೊಳ್ಳುವ ಹಕ್ಕನ್ನು ನಮ್ಮಲ್ಲೇ ಉಳಿಸಿಕೊಂಡು, ಮೇ 9, ಶುಕ್ರವಾರ ರಾತ್ರಿ 10.40ಕ್ಕೆ ನಮ್ಮ ವರದಿಯನ್ನು ಸಾರ್ವಜನಿಕರಿಗೆ ಕಾಣದಂತೆ ತೆಗೆದು ಹಾಕಿರುವುದಾಗಿ ಸರ್ಕಾರಕ್ಕೆ ತಿಳಿಸಿದೆವು ಎಂದಿದ್ದಾರೆ.

ಕೇಂದ್ರ ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನಾವು ಎಂಐಬಿಗೆ ತಿಳಿಸಿದ್ದೇವೆ. ಏಕೆಂದರೆ ಎಂಐಬಿ ಮೊದಲು ನಮಗೆ ನೋಟಿಸ್ ನೀಡಿ, ನಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಬೇಕಾಗಿತ್ತು. ವರದಿಯನ್ನು ತೆಗೆದು ಹಾಕುವಂತೆ ಸರ್ಕಾರದ ನೀಡಿದ್ದ ಸೂಚನೆಯನ್ನು ಪಾಲಿಸಲು ನಾವು ನಿರಾಕರಿಸಿದ್ದರೆ ಮಾತ್ರ ನಮ್ಮ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಬಹುದಿತ್ತು ಎಂದು ಸಿದ್ದಾರ್ಥ್‌ ಹೇಳಿದ್ದಾರೆ.

ಮೇ 8ರಂದು ನಾವು ರಫೆಲ್ ಕುರಿತ ವರದಿ ಪ್ರಕಟಿಸಿದ್ದೆವು. ಅದಕ್ಕೂ ಕನಿಷ್ಠ 12 ಗಂಟೆಗಳ ಮೊದಲು ಸಿಎನ್‌ಎನ್‌ ಈ ಬಗ್ಗೆ ವರದಿ ಮಾಡಿತ್ತು. ಅದು ಈಗಲೂ ಇದೆ. ಭಾರತದಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಮ್ಮ ಸುದ್ದಿಯನ್ನು ಮಾತ್ರ ಅಳಿಸಿಹಾಕಲು ಮತ್ತು ಪ್ರಕಟಗೊಂಡ 24 ಗಂಟೆಗಳ ನಂತರವೂ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಸರ್ಕಾರ ಏಕೆ ಬಯಸಿತ್ತು ಎಂಬುವುದು ನನಗೆ ಅರ್ಥವಾಗುತ್ತಿಲ್ಲ. ನಿರ್ಬಂಧ ವಿಧಿಸುವ ಮುನ್ನ ನಮಗೆ ಯಾವುದೇ ಸೂಚನೆ ನೀಡಿರಲಿಲ್ಲ. ಅಲ್ಲದೆ, ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿತ್ತು ಎಂದು ಸಿದ್ದಾರ್ಥ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲೂ ಕೂಡ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿತ್ತು. ತುರ್ತು ಅಧಿಕಾರಗಳನ್ನು ಚಲಾಯಿಸುವಾಗಲೂ ಕೂಡ ಮೊದಲ ಹೆಜ್ಜೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಸಂಬಂಧಪಟ್ಟ ಪಕ್ಷಕ್ಕೆ ನಿರ್ದೇಶನ ನೀಡುವುದಾಗಿದೆ. ನಾವು ಪತ್ರ ಬರೆದ ನಂತರವೂ ಏಳು ಗಂಟೆಗಳ ಕಾಲ ಎಂಐಬಿಉತ್ತರಿಸಿರಲಿಲ್ಲ ಎಂದು ಸಿದ್ದಾರ್ಥ್ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021ರ ಅಡಿಯಲ್ಲಿ ರಚಿಸಲಾದ ಅಂತರ-ಇಲಾಖೆಯ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮತ್ತು ಸ್ಪಷ್ಟೀಕರಣಗಳನ್ನು ನೀಡಲು ದಿ ವೈರ್‌ಗೆ ಅವಕಾಶ ನೀಡಲಾಗುವುದು ಎಂದು ಎಂಐಬಿ ಪತ್ರದಲ್ಲಿ ತಿಳಿಸಿದೆ ಎಂದು ಸಿದ್ದಾರ್ಥ್ ಮಾಹಿತಿ ನೀಡಿದ್ದಾರೆ.

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...