Homeಮುಖಪುಟಕೇಂದ್ರದಿಂದ ನಿರ್ಬಂಧ ಆರೋಪ: 'ದಿ ವೈರ್' ಸಂಪಾದಕರು ಹೇಳಿದ್ದೇನು?

ಕೇಂದ್ರದಿಂದ ನಿರ್ಬಂಧ ಆರೋಪ: ‘ದಿ ವೈರ್’ ಸಂಪಾದಕರು ಹೇಳಿದ್ದೇನು?

- Advertisement -
- Advertisement -

‘ರಫೇಲ್ ಜೆಟ್’ ಕುರಿತ ವರದಿಯ ಬಗ್ಗೆ ದೂರು ಬಂದ ಹಿನ್ನೆಲೆ, ತಾಂತ್ರಿಕ ಮಿತಿಯ ಕಾರಣ ಭಾರತದಲ್ಲಿ ನಮ್ಮ ವೆಬ್‌ಸೈಟ್ ನಿರ್ಬಂಧಿಸಲಾಗಿತ್ತು ಎಂಬುವುದಾಗಿ ಕೇಂದ್ರ ಸರ್ಕಾರ ಮೇ 9, ಶುಕ್ರವಾರ ಹೇಳಿದೆ ಎಂದು ಸ್ವತಂತ್ರ ಸುದ್ದಿ ಸಂಸ್ಥೆ ‘ದಿ ವೈರ್’ನ ಸಂಪಾದಕರು ತಿಳಿಸಿದ್ದಾರೆ.

ವೆಬ್‌ಸೈಟ್‌ ನಿರ್ಬಂಧಕ್ಕೆ ಕಾರಣವಾದ ವರದಿಯನ್ನು ಪ್ರಸ್ತುತ ತೆಗೆದು ಹಾಕಿದ್ದೇವೆ. ಆದರೂ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಈ ಅಸಂವಿಧಾನಿಕ ದಾಳಿಗೆ ಪರಿಹಾರಗಳನ್ನು ಹುಡುಕುತ್ತೇವೆ ಎಂದು ದಿ ವೈರ್‌ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಮೇ 9, ಶುಕ್ರವಾರದಂದು ಭಾರತದಲ್ಲಿ ದಿ ವೈರ್ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸಿದ್ಧಾರ್ಥ್ ವರದರಾಜನ್ ಅವರು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ (ಎಂಇಐಟಿವೈ) ಪತ್ರ ಬರೆದು ವೆಬ್‌ಸೈಟ್ ಅನ್ನು ಏಕೆ ನಿರ್ಬಂಧಿಸಲಾಗಿದೆ ಎಂಬುದರ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದರು.

ಅದಕ್ಕೆ ಉತ್ತರಿಸಿದ್ದ ಎಂಐಬಿ, ತಾಂತ್ರಿಕ ಮಿತಿಗಳಿಂದಾಗಿ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿದೆ. http ವೆಬ್‌ಸೈಟ್‌ಗಳಲ್ಲಿ ನಿರ್ದಿಷ್ಟ ಉಪ-ಪುಟಗಳನ್ನು ಅಲ್ಲ, ಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು. ನಿರ್ಬಂಧಕ್ಕೆ ಕಾರಣವಾದ ಕಂಟೆಂಟ್ ಬಗ್ಗೆ ಕೈಗೊಂಡ ಕ್ರಮಗಳನ್ನು ತಿಳಿಸಿ, ಅದು ನಮಗೆ ನಿರ್ಬಂಧ ತೆಗೆದು ಹಾಕಲು ಸಹಕಾರಿಯಾಗುತ್ತದೆ ಎಂಬುವುದಾಗಿ ಹೇಳಿದೆ ಎಂದು ಸಿದ್ದಾರ್ಥ್ ತಿಳಿಸಿದ್ದಾರೆ.

ವೆಬ್‌ಸೈಟ್‌ ಮೇಲಿನ ನಿರ್ಬಂಧವನ್ನು ತೆರವುಗೊಳಿಸುವುದು ನಮ್ಮ ಆದ್ಯತೆಯಾಗಿತ್ತು. ಹಾಗಾಗಿ, ಸರ್ಕಾರದ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದು ಬಿಟ್ಟು ನಮಗೆ ಬೇರೆ ದಾರಿ ಇರಲಿಲ್ಲ. ಹಾಗಾಗಿ, ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿಗೆ ಭಾರತದ ಸಂವಿಧಾನದ ಅಡಿಯಲ್ಲಿ ಪರಿಹಾರ ಕಂಡುಕೊಳ್ಳುವ ಹಕ್ಕನ್ನು ನಮ್ಮಲ್ಲೇ ಉಳಿಸಿಕೊಂಡು, ಮೇ 9, ಶುಕ್ರವಾರ ರಾತ್ರಿ 10.40ಕ್ಕೆ ನಮ್ಮ ವರದಿಯನ್ನು ಸಾರ್ವಜನಿಕರಿಗೆ ಕಾಣದಂತೆ ತೆಗೆದು ಹಾಕಿರುವುದಾಗಿ ಸರ್ಕಾರಕ್ಕೆ ತಿಳಿಸಿದೆವು ಎಂದಿದ್ದಾರೆ.

ಕೇಂದ್ರ ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ನಾವು ಎಂಐಬಿಗೆ ತಿಳಿಸಿದ್ದೇವೆ. ಏಕೆಂದರೆ ಎಂಐಬಿ ಮೊದಲು ನಮಗೆ ನೋಟಿಸ್ ನೀಡಿ, ನಮ್ಮ ಅಭಿಪ್ರಾಯಗಳನ್ನು ಮಂಡಿಸಲು ಅವಕಾಶ ನೀಡಬೇಕಾಗಿತ್ತು. ವರದಿಯನ್ನು ತೆಗೆದು ಹಾಕುವಂತೆ ಸರ್ಕಾರದ ನೀಡಿದ್ದ ಸೂಚನೆಯನ್ನು ಪಾಲಿಸಲು ನಾವು ನಿರಾಕರಿಸಿದ್ದರೆ ಮಾತ್ರ ನಮ್ಮ ವೆಬ್‌ಸೈಟ್‌ಗೆ ನಿರ್ಬಂಧ ವಿಧಿಸಬಹುದಿತ್ತು ಎಂದು ಸಿದ್ದಾರ್ಥ್‌ ಹೇಳಿದ್ದಾರೆ.

ಮೇ 8ರಂದು ನಾವು ರಫೆಲ್ ಕುರಿತ ವರದಿ ಪ್ರಕಟಿಸಿದ್ದೆವು. ಅದಕ್ಕೂ ಕನಿಷ್ಠ 12 ಗಂಟೆಗಳ ಮೊದಲು ಸಿಎನ್‌ಎನ್‌ ಈ ಬಗ್ಗೆ ವರದಿ ಮಾಡಿತ್ತು. ಅದು ಈಗಲೂ ಇದೆ. ಭಾರತದಲ್ಲಿ ವ್ಯಾಪಕವಾಗಿ ಲಭ್ಯವಿದೆ. ನಮ್ಮ ಸುದ್ದಿಯನ್ನು ಮಾತ್ರ ಅಳಿಸಿಹಾಕಲು ಮತ್ತು ಪ್ರಕಟಗೊಂಡ 24 ಗಂಟೆಗಳ ನಂತರವೂ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಸರ್ಕಾರ ಏಕೆ ಬಯಸಿತ್ತು ಎಂಬುವುದು ನನಗೆ ಅರ್ಥವಾಗುತ್ತಿಲ್ಲ. ನಿರ್ಬಂಧ ವಿಧಿಸುವ ಮುನ್ನ ನಮಗೆ ಯಾವುದೇ ಸೂಚನೆ ನೀಡಿರಲಿಲ್ಲ. ಅಲ್ಲದೆ, ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿತ್ತು ಎಂದು ಸಿದ್ದಾರ್ಥ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತುರ್ತು ಪರಿಸ್ಥಿತಿಯಲ್ಲೂ ಕೂಡ ಕಾರ್ಯವಿಧಾನಗಳನ್ನು ಅನುಸರಿಸಬೇಕಾಗಿತ್ತು. ತುರ್ತು ಅಧಿಕಾರಗಳನ್ನು ಚಲಾಯಿಸುವಾಗಲೂ ಕೂಡ ಮೊದಲ ಹೆಜ್ಜೆ ಸಂಬಂಧಿತ ನಿಯಮಗಳ ಅಡಿಯಲ್ಲಿ ಸಂಬಂಧಪಟ್ಟ ಪಕ್ಷಕ್ಕೆ ನಿರ್ದೇಶನ ನೀಡುವುದಾಗಿದೆ. ನಾವು ಪತ್ರ ಬರೆದ ನಂತರವೂ ಏಳು ಗಂಟೆಗಳ ಕಾಲ ಎಂಐಬಿಉತ್ತರಿಸಿರಲಿಲ್ಲ ಎಂದು ಸಿದ್ದಾರ್ಥ್ ಹೇಳಿದ್ದಾರೆ.

ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021ರ ಅಡಿಯಲ್ಲಿ ರಚಿಸಲಾದ ಅಂತರ-ಇಲಾಖೆಯ ಸಮಿತಿಯ ಮುಂದೆ ತನ್ನ ಅಭಿಪ್ರಾಯ ಮತ್ತು ಸ್ಪಷ್ಟೀಕರಣಗಳನ್ನು ನೀಡಲು ದಿ ವೈರ್‌ಗೆ ಅವಕಾಶ ನೀಡಲಾಗುವುದು ಎಂದು ಎಂಐಬಿ ಪತ್ರದಲ್ಲಿ ತಿಳಿಸಿದೆ ಎಂದು ಸಿದ್ದಾರ್ಥ್ ಮಾಹಿತಿ ನೀಡಿದ್ದಾರೆ.

ಭಾರತದ 26 ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿಗೆ ಯತ್ನಿಸಿದ ಪಾಕಿಸ್ತಾನ: ಮಾಹಿತಿ ನೀಡಿದ ಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...