Homeಮುಖಪುಟರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; 'ದಿ ವೈರ್' ಸ್ಪಷ್ಟನೆ

ರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; ‘ದಿ ವೈರ್’ ಸ್ಪಷ್ಟನೆ

- Advertisement -
- Advertisement -

ಸೆನ್ಸಾರ್‌ಶಿಪ್ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಸಂಪರ್ಕಿಸಿದ ಸ್ವಲ್ಪ ಸಮಯದ ನಂತರ ತನ್ನ ವೆಬ್‌ಸೈಟ್ ಅನ್ನು ಅನ್‌ಬ್ಲಾಕ್ ಮಾಡಲಾಗಿದೆ ಎಂದು ದಿ ವೈರ್ ನ್ಯೂಸ್ ವೆಬ್‌ಸೈಟ್ ಶನಿವಾರ ತಿಳಿಸಿದೆ. ಸುದ್ದಿ ಪೋರ್ಟಲ್ ಪ್ರಕಾರ, ಬ್ಲಾಕ್ ಅನ್ನು ತೆರವುಗೊಳಿಸಲು ಷರತ್ತಿನಂತೆ ಸಿಎನ್‌ಎನ್ ವರದಿಯನ್ನು ಆಧರಿಸಿದ ಮಾಡಿದ್ದ ಲೇಖನವನ್ನು ತೆಗೆದುಹಾಕುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ತಿಳಿಸಿದೆ.

ರಫೇಲ್ ಜೆಟ್ ಬಗ್ಗೆ ಪ್ರಕಟಿಸಿದ ವರದಿಗೆ ಸಂಬಂಧಿಸಿದ ದೂರಿನ ನಂತರ ತಾಂತ್ರಿಕ ಮಿತಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಮೇ 9, ಶುಕ್ರವಾರ ದೇಶಾದ್ಯಂತ ದಿ ವೈರ್‌ನ ವೆಬ್‌ಸೈಟ್‌ ನಿರ್ಬಂಧಿಸಿದೆ.

ವೆಬ್‌ಸೈಟ್‌ ಬ್ಲಾಕ್ ಬಳಿಕ ವಿವಾದಿತ ತನಿಖಾ ವರದಿಯನ್ನು ಅಳಿಸಿದ ಬಳಿಕ ಅನ್‌ಬ್ಲಾಕ್ ತೆರವುಗೊಳಸಿಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ದಾಳಿ ಎಂದು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಖಂಡಿಸಿದ್ದಾರೆ.

ದಿ ವೈರ್ ಸೈಟ್ ಆಫ್‌ಲೈನ್‌ಗೆ ಹೋದ ನಂತರ, ಹಠಾತ್ ಬ್ಲಾಕ್‌ನ ಹಿಂದಿನ ಕಾರಣಗಳ ಬಗ್ಗೆ ವಿಚಾರಿಸಲು ವರದರಾಜನ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡನ್ನೂ ಸಂಪರ್ಕಿಸಿದರು.

ವೆಬ್‌ಸೈಟ್ ಈಗ ಮತ್ತೆ ಲಭ್ಯವಿದ್ದರೂ, ದೇಶದ ವಿವಿಧ ಭಾಗಗಳಿಂದ ಮತ್ತು ವಿವಿಧ ನೆಟ್‌ವರ್ಕ್‌ಗಳಾದ್ಯಂತ ಬಳಕೆದಾರರು ಸೈಟ್ ಅನ್ನು ಪ್ರವೇಶಿಸುವುದಕ್ಕೆ ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದಿ ವೈರ್ ಶನಿವಾರ, ಮೇ 10 ರಂದು ಹೇಳಿದೆ.

ದಿ ವೈರ್‌ನ ಹೇಳಿಕೆಯ ಪ್ರಕಾರ, ಎಂಐಬಿ ಮೇ 9 ರಂದು ಪ್ರತಿಕ್ರಿಯಿಸಿ, ತಾಂತ್ರಿಕ ಮಿತಿಗಳು ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಒತ್ತಾಯಿಸಿವೆ ಎಂದು ಹೇಳಿಕೊಂಡಿದೆ.

ಎಚ್‌ಟಿಟಿಪಿಎಸ್‌ (HTTPS) ಪ್ರೋಟೋಕಾಲ್‌ಗಳ ಸ್ವರೂಪದಿಂದಾಗಿ, ಅವರು ಪ್ರತ್ಯೇಕ ವೆಬ್ ಪುಟಗಳನ್ನು ನಿರ್ಬಂಧಿಸಲು ಅಸಮರ್ಥರಾಗಿದ್ದಾರೆ. ಸಂಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು ಎಂದು ಸಚಿವಾಲಯ ವಿವರಿಸಿದೆ. “ಆ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸ ಬೇಕು” ಎಂದು ಎಂಐಬಿಯು ದಿ ವೈರ್ ಅನ್ನು ವಿನಂತಿಸಿತು, ಇದು ಸಚಿವಾಲಯವು ವೆಬ್‌ಸೈಟ್ ಅನ್ನು ಅನಿರ್ಬಂಧಿಸಲು ಅನುವು ಮಾಡಿಕೊಡುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದಿ ವೈರ್ ಮೇ 9 ರಂದು ರಾತ್ರಿ 10:40 ಕ್ಕೆ ವಿವಾದಾತ್ಮಕ ವರದಿಯನ್ನು ತೆಗೆದುಹಾಕಿರುವುದಾಗಿ ಅಧಿಕಾರಿಗಳಿಗೆ ತಿಳಿಸಿತು. ತನ್ನ ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸುವುದು ತನ್ನ ಆದ್ಯತೆ ಎಂದು ಒತ್ತಿ ಹೇಳಿತು. ಈ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ; ಸೂಕ್ತ ಪರಿಹಾರಗಳನ್ನು ಪಡೆಯಲು ಭಾರತದ ಸಂವಿಧಾನದ ಅಡಿಯಲ್ಲಿ ನಮ್ಮ ಹಕ್ಕುಗಳನ್ನು ಕಾಯ್ದಿರಿಸಿದೆ ಎಂದು ಒತ್ತಿ ಹೇಳಿದರು.

ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ದಿ ವೈರಸ್ ವಾದಿಸಿತು. ಏಕೆಂದರೆ, ಎಂಐಬಿ ಪೂರ್ವ ಸೂಚನೆ ನೀಡಲು ಅಥವಾ ದಿ ವೈರ್‌ಗೆ ತನ್ನ ನಿಲುವನ್ನು ಮಂಡಿಸಲು ಅವಕಾಶವನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.

ದಿ ವೈರ್ ವರದಿಯನ್ನು ತೆಗೆದುಹಾಕುವಂತೆ ಅಂತರ-ಇಲಾಖೆಯ ಸಮಿತಿಯ ವಿನಂತಿಯನ್ನು ಅನುಸರಿಸಲು ನಿರಾಕರಿಸಿದ್ದರೆ ಮಾತ್ರ ನಿರ್ಬಂಧಿಸುವುದನ್ನು ಸಮರ್ಥಿಸಬಹುದಿತ್ತು ಎಂದು ಸಿದ್ಧಾರ್ಥ್ ವರದರಾಜನ್ ಗಮನಸೆಳೆದರು.

ವರದಿಯನ್ನು ಮೇ 8 ರಂದು ಪ್ರಕಟಿಸಲಾಗಿದೆ, ಅದರಲ್ಲಿರುವ ಮಾಹಿತಿಯು ಈಗಾಗಲೇ 12 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಅವರು ಒತ್ತಿ ಹೇಳಿದರು. ಅದರಲ್ಲಿ ಭಾರತದಲ್ಲಿ ಇನ್ನೂ ಲಭ್ಯವಿರುವ ಸಿಎನ್‌ಎನ್‌ ವರದಿಯೂ ಸೇರಿದೆ. “ಸರ್ಕಾರವು ನಮ್ಮ ಸುದ್ದಿಯನ್ನು ಅಳಿಸಲು ಮತ್ತು ಪ್ರಕಟಣೆಯ ನಂತರ 24 ಗಂಟೆಗಳಿಗಿಂತ ಹೆಚ್ಚು ಕಾಲ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಏಕೆ ಬಯಸುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ, ನಮಗೆ ಯಾವುದೇ ಸೂಚನೆ ನೀಡಲಾಗಿಲ್ಲ, ನಮ್ಮ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿಲ್ಲ” ಎಂದು ಅವರು ಹೇಳಿದರು.

 ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...