Homeಮುಖಪುಟರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; 'ದಿ ವೈರ್' ಸ್ಪಷ್ಟನೆ

ರಫೇಲ್ ಸುದ್ದಿ ಅಳಿಸಿದ ಬಳಿಕ ಕೇಂದ್ರ ಸರ್ಕಾರದಿಂದ ವೆಬ್‌ಸೈಟ್ ಅನ್‌ಬ್ಲಾಕ್; ‘ದಿ ವೈರ್’ ಸ್ಪಷ್ಟನೆ

- Advertisement -
- Advertisement -

ಸೆನ್ಸಾರ್‌ಶಿಪ್ ಕುರಿತು ಮಾಹಿತಿ ಮತ್ತು ಪ್ರಸಾರ ಸಚಿವಾಲಯವನ್ನು ಸಂಪರ್ಕಿಸಿದ ಸ್ವಲ್ಪ ಸಮಯದ ನಂತರ ತನ್ನ ವೆಬ್‌ಸೈಟ್ ಅನ್ನು ಅನ್‌ಬ್ಲಾಕ್ ಮಾಡಲಾಗಿದೆ ಎಂದು ದಿ ವೈರ್ ನ್ಯೂಸ್ ವೆಬ್‌ಸೈಟ್ ಶನಿವಾರ ತಿಳಿಸಿದೆ. ಸುದ್ದಿ ಪೋರ್ಟಲ್ ಪ್ರಕಾರ, ಬ್ಲಾಕ್ ಅನ್ನು ತೆರವುಗೊಳಿಸಲು ಷರತ್ತಿನಂತೆ ಸಿಎನ್‌ಎನ್ ವರದಿಯನ್ನು ಆಧರಿಸಿದ ಮಾಡಿದ್ದ ಲೇಖನವನ್ನು ತೆಗೆದುಹಾಕುವಂತೆ ಸರ್ಕಾರ ಕೇಳಿಕೊಂಡಿದೆ ಎಂದು ತಿಳಿಸಿದೆ.

ರಫೇಲ್ ಜೆಟ್ ಬಗ್ಗೆ ಪ್ರಕಟಿಸಿದ ವರದಿಗೆ ಸಂಬಂಧಿಸಿದ ದೂರಿನ ನಂತರ ತಾಂತ್ರಿಕ ಮಿತಿಗಳನ್ನು ಉಲ್ಲೇಖಿಸಿ, ಕೇಂದ್ರ ಸರ್ಕಾರವು ಮೇ 9, ಶುಕ್ರವಾರ ದೇಶಾದ್ಯಂತ ದಿ ವೈರ್‌ನ ವೆಬ್‌ಸೈಟ್‌ ನಿರ್ಬಂಧಿಸಿದೆ.

ವೆಬ್‌ಸೈಟ್‌ ಬ್ಲಾಕ್ ಬಳಿಕ ವಿವಾದಿತ ತನಿಖಾ ವರದಿಯನ್ನು ಅಳಿಸಿದ ಬಳಿಕ ಅನ್‌ಬ್ಲಾಕ್ ತೆರವುಗೊಳಸಿಲಾಗಿದೆ. ಈ ಕ್ರಮವನ್ನು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ದಾಳಿ ಎಂದು ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಖಂಡಿಸಿದ್ದಾರೆ.

ದಿ ವೈರ್ ಸೈಟ್ ಆಫ್‌ಲೈನ್‌ಗೆ ಹೋದ ನಂತರ, ಹಠಾತ್ ಬ್ಲಾಕ್‌ನ ಹಿಂದಿನ ಕಾರಣಗಳ ಬಗ್ಗೆ ವಿಚಾರಿಸಲು ವರದರಾಜನ್ ಮಾಹಿತಿ ಮತ್ತು ಪ್ರಸಾರ ಸಚಿವಾಲಯ (ಎಂಐಬಿ) ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಎರಡನ್ನೂ ಸಂಪರ್ಕಿಸಿದರು.

ವೆಬ್‌ಸೈಟ್ ಈಗ ಮತ್ತೆ ಲಭ್ಯವಿದ್ದರೂ, ದೇಶದ ವಿವಿಧ ಭಾಗಗಳಿಂದ ಮತ್ತು ವಿವಿಧ ನೆಟ್‌ವರ್ಕ್‌ಗಳಾದ್ಯಂತ ಬಳಕೆದಾರರು ಸೈಟ್ ಅನ್ನು ಪ್ರವೇಶಿಸುವುದಕ್ಕೆ ಇನ್ನೂ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ದಿ ವೈರ್ ಶನಿವಾರ, ಮೇ 10 ರಂದು ಹೇಳಿದೆ.

ದಿ ವೈರ್‌ನ ಹೇಳಿಕೆಯ ಪ್ರಕಾರ, ಎಂಐಬಿ ಮೇ 9 ರಂದು ಪ್ರತಿಕ್ರಿಯಿಸಿ, ತಾಂತ್ರಿಕ ಮಿತಿಗಳು ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸುವಂತೆ ಒತ್ತಾಯಿಸಿವೆ ಎಂದು ಹೇಳಿಕೊಂಡಿದೆ.

ಎಚ್‌ಟಿಟಿಪಿಎಸ್‌ (HTTPS) ಪ್ರೋಟೋಕಾಲ್‌ಗಳ ಸ್ವರೂಪದಿಂದಾಗಿ, ಅವರು ಪ್ರತ್ಯೇಕ ವೆಬ್ ಪುಟಗಳನ್ನು ನಿರ್ಬಂಧಿಸಲು ಅಸಮರ್ಥರಾಗಿದ್ದಾರೆ. ಸಂಪೂರ್ಣ ಡೊಮೇನ್‌ಗಳನ್ನು ಮಾತ್ರ ನಿರ್ಬಂಧಿಸಬಹುದು ಎಂದು ಸಚಿವಾಲಯ ವಿವರಿಸಿದೆ. “ಆ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ತೆಗೆದುಕೊಂಡ ಕ್ರಮದ ಬಗ್ಗೆ ತಿಳಿಸ ಬೇಕು” ಎಂದು ಎಂಐಬಿಯು ದಿ ವೈರ್ ಅನ್ನು ವಿನಂತಿಸಿತು, ಇದು ಸಚಿವಾಲಯವು ವೆಬ್‌ಸೈಟ್ ಅನ್ನು ಅನಿರ್ಬಂಧಿಸಲು ಅನುವು ಮಾಡಿಕೊಡುತ್ತದೆ.

ಇದಕ್ಕೆ ಪ್ರತಿಕ್ರಿಯೆಯಾಗಿ, ದಿ ವೈರ್ ಮೇ 9 ರಂದು ರಾತ್ರಿ 10:40 ಕ್ಕೆ ವಿವಾದಾತ್ಮಕ ವರದಿಯನ್ನು ತೆಗೆದುಹಾಕಿರುವುದಾಗಿ ಅಧಿಕಾರಿಗಳಿಗೆ ತಿಳಿಸಿತು. ತನ್ನ ವೆಬ್‌ಸೈಟ್‌ಗೆ ಪ್ರವೇಶವನ್ನು ಪುನಃಸ್ಥಾಪಿಸುವುದು ತನ್ನ ಆದ್ಯತೆ ಎಂದು ಒತ್ತಿ ಹೇಳಿತು. ಈ ಅನ್ಯಾಯದ ಬೇಡಿಕೆಯನ್ನು ಅನುಸರಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ; ಸೂಕ್ತ ಪರಿಹಾರಗಳನ್ನು ಪಡೆಯಲು ಭಾರತದ ಸಂವಿಧಾನದ ಅಡಿಯಲ್ಲಿ ನಮ್ಮ ಹಕ್ಕುಗಳನ್ನು ಕಾಯ್ದಿರಿಸಿದೆ ಎಂದು ಒತ್ತಿ ಹೇಳಿದರು.

ಸರ್ಕಾರದ ಕ್ರಮವು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸಿದೆ ಎಂದು ದಿ ವೈರಸ್ ವಾದಿಸಿತು. ಏಕೆಂದರೆ, ಎಂಐಬಿ ಪೂರ್ವ ಸೂಚನೆ ನೀಡಲು ಅಥವಾ ದಿ ವೈರ್‌ಗೆ ತನ್ನ ನಿಲುವನ್ನು ಮಂಡಿಸಲು ಅವಕಾಶವನ್ನು ನೀಡಲು ವಿಫಲವಾಗಿದೆ ಎಂದು ಆರೋಪಿಸಿದರು.

ದಿ ವೈರ್ ವರದಿಯನ್ನು ತೆಗೆದುಹಾಕುವಂತೆ ಅಂತರ-ಇಲಾಖೆಯ ಸಮಿತಿಯ ವಿನಂತಿಯನ್ನು ಅನುಸರಿಸಲು ನಿರಾಕರಿಸಿದ್ದರೆ ಮಾತ್ರ ನಿರ್ಬಂಧಿಸುವುದನ್ನು ಸಮರ್ಥಿಸಬಹುದಿತ್ತು ಎಂದು ಸಿದ್ಧಾರ್ಥ್ ವರದರಾಜನ್ ಗಮನಸೆಳೆದರು.

ವರದಿಯನ್ನು ಮೇ 8 ರಂದು ಪ್ರಕಟಿಸಲಾಗಿದೆ, ಅದರಲ್ಲಿರುವ ಮಾಹಿತಿಯು ಈಗಾಗಲೇ 12 ಗಂಟೆಗಳಿಗೂ ಹೆಚ್ಚು ಕಾಲ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಅವರು ಒತ್ತಿ ಹೇಳಿದರು. ಅದರಲ್ಲಿ ಭಾರತದಲ್ಲಿ ಇನ್ನೂ ಲಭ್ಯವಿರುವ ಸಿಎನ್‌ಎನ್‌ ವರದಿಯೂ ಸೇರಿದೆ. “ಸರ್ಕಾರವು ನಮ್ಮ ಸುದ್ದಿಯನ್ನು ಅಳಿಸಲು ಮತ್ತು ಪ್ರಕಟಣೆಯ ನಂತರ 24 ಗಂಟೆಗಳಿಗಿಂತ ಹೆಚ್ಚು ಕಾಲ ಅದನ್ನು ತುರ್ತು ವಿಷಯವಾಗಿ ಪರಿಗಣಿಸಲು ಏಕೆ ಬಯಸುತ್ತದೆ ಎಂದು ನನಗೆ ಅರ್ಥವಾಗುತ್ತಿಲ್ಲ, ನಮಗೆ ಯಾವುದೇ ಸೂಚನೆ ನೀಡಲಾಗಿಲ್ಲ, ನಮ್ಮ ಸಂಪೂರ್ಣ ವೆಬ್‌ಸೈಟ್ ಅನ್ನು ನಿರ್ಬಂಧಿಸಲಾಗಿಲ್ಲ” ಎಂದು ಅವರು ಹೇಳಿದರು.

 ಕದನ ವಿರಾಮವನ್ನು ಪಾಕಿಸ್ತಾನ ಉಲ್ಲಂಘಿಸಿದೆ, ನಮ್ಮ ಸಶಸ್ತ್ರ ಪಡೆಗಳು ಪ್ರತಿಕ್ರಿಯಿಸಿವೆ: ಮಧ್ಯರಾತ್ರಿಯ ಪತ್ರಿಕಾಗೋಷ್ಠಿಯಲ್ಲಿ ವಿಕ್ರಮ್ ಮಿಶ್ರಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...